ದಿನದ ಸುದ್ದಿ
ಇಂಡಿಯಾ ಲಾಕ್ ಡೌನ್ : ಇದರ ಸೈಡ್ ಎಫೆಕ್ಟ್ ನಿಯಂತ್ರಣ ಹೇಗೆ..?
- ವಿವೇಕಾನಂದ. ಹೆಚ್.ಕೆ.
ವಿಶ್ವದಲ್ಲಿ ನಾಗರಿಕತೆಯ ಉಗಮ ದಾಖಲಾಗಿರುವ ದಿನದಿಂದ ಇಂದಿನವರೆಗೂ ಆಗಾಗ ಅನೇಕ ಆಘಾತಗಳನ್ನು ಅನುಭವಿಸುತ್ತಾ ಬಂದಿದೆ.
ಕಾಡಿನ ಕ್ರೂರ ಮೃಗಗಳಿಂದ, ಪ್ರಾಕೃತಿಕ ಅವಘಡಗಳಿಂದ, ರಾಜರುಗಳು ಆಕ್ರಮಣಗಳಿಂದ, ಭಯಂಕರ ಯುದ್ದಗಳಿಂದ, ಹುಚ್ಚು ಸರ್ವಾಧಿಕಾರಿಗಳಿಂದ ಬರಗಾಲದಿಂದ, ಅನೇಕ ರೋಗ ರುಜಿನಗಳಿಂದ ಎಲ್ಲಾ ಶತಮಾನಗಳಲ್ಲೂ ಆತಂಕ ಎದುರಿಸಿದೆ.
ಇದೀಗ ಕೊರೋನಾ ವೈರಸ್ ಆ ರೀತಿಯ ಒಂದು ಆತಂಕವಷ್ಟೆ. ಆಯಾ ಕಾಲಕ್ಕೆ ಅದೇ ಭಯಾನಕ. ಯಾವುದೂ ಹೆಚ್ಚು ಅಲ್ಲ ಕಡಿಮೆಯೂ ಅಲ್ಲ. ಕೆಲವು ಇಂಗ್ಲೀಷ್ ಸಿನಿಮಾಗಳಲ್ಲಿ ಬೇರೆ ಲೋಕದಿಂದ ದಾಳಿ ಇಡುವ ಏಲಿಯನ್ ಗಳ ವಿರುದ್ಧ ಹೋರಾಡುವ ದೃಶ್ಯಗಳನ್ನು ನೋಡಿರಬಹುದು. ಅವು ಮಾಡುವ ಅನಾಹುತಗಳು ಮತ್ತು ಕೊನೆಗೆ ಅವುಗಳ ವಿರುದ್ಧ ಜಯ. ಇದೂ ಸಹ ಅದೇ ರೀತಿ. ಆದರೆ ಅದು ಸಿನಿಮಾ ಇದು ವಾಸ್ತವ.
ಡಾರ್ವಿನ್ನ ಸಾರ್ವಕಾಲಿಕ ಸಿದ್ದಾಂತದಂತೆ ಬಲಿಷ್ಠವಾದದ್ದು ಮಾತ್ರ ಉಳಿಯುತ್ತದೆ. ಕೊರೋನಾ ವೈರಸ್ ಎಂಬ ಜೀವಾಣು ಮನುಷ್ಯನ ಮೇಲೆ ಯುದ್ಧ ಸಾರಿದೆ. ಸದ್ಯಕ್ಕೆ ಅದು ವಿಜಯದ ರಣಕೇಕೆ ಹಾಕುತ್ತಿದೆ. ಅದರ ವಿರುದ್ಧ ಮನುಷ್ಯ ಉಳಿವಿಗಾಗಿ ಹೋರಾಡುತ್ತಿದ್ದಾನೆ.
ಇದೀಗ ಅದರ ಹೋರಾಟದ ಭಾಗವಾಗಿ ಇಡೀ ಭಾರತವನ್ನು ಬಹುತೇಕ ಬಂದ್ ಮಾಡಲಾಗಿದೆ. ಆಧುನಿಕ ಕಾಲದ ಸುಮಾರು 50 ವಯಸ್ಸು ಆಸುಪಾಸಿನ ಜನರಿಗೆ ಇದರ ನೇರ ಅನುಭವ ಇರಲೇ ಇಲ್ಲ. ಅವರಿಗೆ ಇದೊಂದು ಅನಿರೀಕ್ಷಿತ ಆಘಾತ.
ಇರಲಿ ಈಗ ಮನೆಯಲ್ಲಿ ನಾಲ್ಕು ಗೋಡೆಗಳ ಮಧ್ಯೆ ಸಮಯ ಕಳೆಯುವ ಅನಿವಾರ್ಯತೆಗೆ ಸಿಲುಕಿದ್ದೇವೆ. ಈ ಸಮಯದಲ್ಲಿ ನಿಜವಾಗಲೂ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯ ಬಹಳಷ್ಟು ಅಗ್ನಿ ಪರೀಕ್ಷೆಗೆ ಒಳಪಡುತ್ತದೆ. ಇಂದು ನಾಳೆ ನಾಡಿದ್ದು ಹಬ್ಬ, ಅದರ ಆಚರಣೆ,
ಸಾವಿನ ಭಯ ಆತಂಕ ಹೊಸ ಜೀವನ ಶೈಲಿಯ ಒತ್ತಡದಲ್ಲಿ ಅಷ್ಟಾಗಿ ಗೊತ್ತಾಗುವುದಿಲ್ಲ. ಆದರೆ ನಂತರ ದಿನಗಳು ಕಷ್ಟವಾಗುತ್ತದೆ. ಮಾನಸಿಕ ಕಿರಿಕಿರಿ ಉಂಟುಮಾಡುತ್ತದೆ. ಅದಕ್ಕಾಗಿ ಸ್ವಲ್ಪ ಅನುಕೂಲಕರ ಪರಿಸ್ಥಿತಿಯ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರು ಈ ಕೆಲವು ವಿಧಾನಗಳನ್ನು ಅನುಸರಿಸಬಹುದು.
ಯೋಗ ಪ್ರಾಣಾಯಾಮ ಧ್ಯಾನ ವ್ಯಾಯಾಮ ನೃತ್ಯಗಳ ಮೊರೆ ಹೋಗಬಹುದು. ದೈಹಿಕವಾಗಿ ದುರ್ಬಲರಾದವರು ಧ್ಯಾನ ಮತ್ತು ಪ್ರಾಣಾಯಾಮದಿಂದ ಸಾಕಷ್ಟು ಮಾನಸಿಕ ಲಾಭ ಪಡೆಯಬಹುದು.
ಇಲ್ಲಿಯವರೆಗೂ ಓದಲು ಸಾಧ್ಯವಾಗದ ಯಾವುದಾದರೂ ಆಸಕ್ತಿಯ ಪುಸ್ತಕಗಳನ್ನು ಓದಲು ಪ್ರಾರಂಭಿಸಬೇಕು. ಖಂಡಿತ ಓದು ನಿಮ್ಮನ್ನು ಮಾನಸಿಕ ಖಿನ್ನತೆಯಿಂದ ಪಾರು ಮಾಡುತ್ತದೆ.
ನಿಮ್ಮ ಆಸಕ್ತಿಯ ಏನನ್ನಾದರೂ ಬರೆಯಲು ಪ್ರಾರಂಭಿಸಿ. ಕನಿಷ್ಠ ದಿನಚರಿ ಅಥವಾ ಬದುಕಿನ ನೆನಪ ಪುಟಗಳಾದರೂ ದಾಖಲಿಸಿರಿ. ಇದು ಓದಿಗಿಂತ ಹೆಚ್ಚು ಸಮಾಧಾನಕರ ಪರಿಣಾಮ ನಿಮ್ಮ ಮನಸ್ಸಿನ ಮೇಲೆ ಬೀರುತ್ತದೆ.
ಹಳೆಯ ಗೆಳೆಯರನ್ನು ದೂರವಾಣಿಯಲ್ಲಿ ಸಂಪರ್ಕಿಸಿ ತೃಪ್ತಿಯಾಗುವಷ್ಟು ಮಾತನಾಡಿ. ಅದನ್ನು ಈ ವಿರಾಮದ ಎಲ್ಲಾ ದಿನಗಳಲ್ಲಿಯೂ ಮುಂದುವರಿಸಿ. ಅಕ್ಷರದ ಚಾಟ್ ಗಳಿಗಿಂತ ನೇರ ಮಾತುಗಳು ನಿಮ್ಮನ್ನು ಉಲ್ಲಸಿತರಾಗಿಡುತ್ತದೆ.
ಮಕ್ಕಳು ಮನೆಯವರೊಂದಿಗೆ ಚೆಸ್ ಕೇರಂ ಹಾವು ಏಣಿಯಾಟ ಚೌಕಾಬಾರ ಮುಂತಾದ ಆಟಗಳನ್ನು ಹಾಡಬಹುದು. ಇದು ನಿಮ್ಮ ಬಹುತೇಕ ಸಮಯ ಆಕ್ರಮಿಸುತ್ತದೆ. ಸಮಯ ಕಳೆಯುವುದೇ ತಿಳಿಯುವುದಿಲ್ಲ.
ಕುಟುಂಬ ಸ್ವಲ್ಪ ದೊಡ್ಡದಿದ್ದರೆ ಚೀಟಿ ಬರೆದು ಕಳ್ಳ ಪೋಲೀಸ್ ಆಟ, ಅಂತ್ಯಾಕ್ಷರಿ, ಖಾಲಿ ಹಾಳೆಯ ಮೇಲೆ ಚುಕ್ಕಿಯಿಟ್ಟು ಜೋಡಿಸುವುದು, ಕಣ್ಣಾ ಮುಚ್ಚಾಲೆ, ಯಾವುದಾದರೂ ವಸ್ತುಗಳನ್ನು ಮನೆಯಲ್ಲಿ ಮುಚ್ಚಿಟ್ಟು ಹುಡುಕುವುದು ಮುಂತಾದ ಆಟಗಳನ್ನು ಆಡಬಹುದು. ಇದು ಸ್ವಲ್ಪ ಖುಷಿ ಕೊಡುತ್ತದೆ.
ಸರಳ ರೀತಿಯ ಅಡುಗೆಗಳ ಪ್ರಯೋಗ ಮಾಡಬಹುದು. ಇಲ್ಲಿಯವರೆಗೂ ಮನೆಯಲ್ಲಿ ಯಾರು ಅಡುಗೆ ಮಾಡುತ್ತಿದ್ದರೋ ಅದನ್ನು ಬದಲಾಯಿಸಿ ಮತ್ತೊಬ್ಬರು ಒಂದಷ್ಟು ಪ್ರಯತ್ನಿಸಬಹುದು. ಆದರೆ ಮಿತ ಆಹಾರ ಒಳ್ಳೆಯದು.
ಆರೋಗ್ಯದ ಕಾರಣಕ್ಕಾಗಿ ಉಪವಾಸ ವೃತಗಳನ್ನು ಸಹ ಮಾಡಬಹುದು. ಹೌದು ಏಕತಾನತೆ ಮುರಿಯಲು ವೈದ್ಯರ ಸಲಹೆ ಮೇರೆಗೆ ಉಪವಾಸ ದೇಹ ಮತ್ತು ಮನಸ್ಸಿನ ನಿಯಂತ್ರಣಕ್ಕೆ ಒಳ್ಳೆಯ ಮದ್ದು.
ಅದು ಅವರವರ ಆರೋಗ್ಯ ಸ್ಥಿತಿ ಅವಲಂಬಿಸಿರುತ್ತದೆ.
ಅನುಕೂಲ ಇದ್ದರೆ ಅತ್ಯುತ್ತಮ ಸಿನಿಮಾ ನೋಡಬಹುದು ಮತ್ತು ಸಂಗೀತ ಆಲಿಸಬಹುದು. ಇವು ಖಂಡಿತವಾಗಿ ನಿಮ್ಮನ್ನು ಮತ್ತೊಂದು ಲೋಕಕ್ಕೆ ಕೊಂಡೊಯ್ಯುತ್ತದೆ. ಕೆಲವೊಮ್ಮೆ ಆಳವಾಗಿ ಯೋಚಿಸುವಂತೆ ಪ್ರೇರೇಪಿಸುತ್ತದೆ.
ಮೊಬೈಲ್ ನಲ್ಲಿರುವ ಅನೇಕ ಹೊಸ ಹೊಸ ತಾಂತ್ರಿಕ ಸಾಧ್ಯತೆಗಳನ್ನು ಕಲಿಯಲು ಪ್ರಯತ್ನಿಸಬಹುದು. ಸದಾ ವೇಗದ ಜೀವನದಲ್ಲಿ ನಾವು ಕನಿಷ್ಠ ಉಪಯೋಗ ಮಾತ್ರ ತಿಳಿದಿರುತ್ತೇವೆ. ಆದರೆ ಇಂದಿನ ಸ್ಮಾರ್ಟ್ ಫೋನ್ ಗಳಲ್ಲಿ ವಿಶ್ವ ರೂಪ ದರ್ಶನ ಪಡೆಯಬಹುದು.
ಮಾತಿನ ಸಂತೆಯಲ್ಲಿ ಮರೆಯಾಗಿದ್ದ ಮೌನದ ದಿವ್ಯತೆಯನ್ನು ಹಿಡಿದಿಡಲು ಪ್ರಯತ್ನಿಸಬಹುದು. ಮೌನ ತುಂಬಾ ಕಠಿಣ. ಆದರೆ ಅದು ಒಮ್ಮೆ ಅನುಭವಕ್ಕೆ ಸಿಕ್ಕರೆ ತುಂಬಾ ಪರಿಣಾಮಕಾರಿ. ಅದೊಂದು ಅನುಭಾವ. ಸಾಧ್ಯವಾದರೆ ಪ್ರಯತ್ನಿಸಿ.
ಇದು ನನಗೆ ಹೊಳೆದ ಕೆಲವು ವಿಷಯಗಳು ಮಾತ್ರ. ಇದರ ಜೊತೆಗೆ ನಿಮಗೂ ಹಲವಾರು ವಿಧಾನಗಳು ತಿಳಿದಿರುತ್ತದೆ. ನಾನು ಈ ಮೂಲಕ ಮತ್ತೊಮ್ಮೆ ನೆನಪಿಸುತ್ತಿದ್ದೇನೆ ಅಷ್ಟೆ.
ಇದರ ಜೊತೆ ಖಂಡಿತವಾಗಿಯೂ ಬಡಜನರನ್ನು ಜ್ಞಾಪಿಸಿಕೊಳ್ಳಲೇ ಬೇಕು. ಕರೋನ ವಿರುದ್ಧ ಈ ಕರ್ಪ್ಯೂ ಹೋರಾಟದ ಬಹುದೊಡ್ಡ ಸೈಡ್ ಎಪೆಕ್ಟ್ ಎಂದರೆ ಬೀದಿ ಬದಿಯ ಮನೆ ಇಲ್ಲದ ಸುಮಾರು 10 ಕೋಟಿ ಕಡುಬಡವರ ಬಹುತೇಕ ಸರ್ವನಾಶ.
ಸರ್ಕಾರಗಳು ಏನೇ ಹೇಳಿದರು ಈ ಸಂದರ್ಭದಲ್ಲಿ ಆಡಳಿತ ಯಂತ್ರ ಅವರನ್ನು ಮುಟ್ಟುವುದು ತುಂಬಾ ಕಷ್ಟವಿದೆ. ಅವರು ಯಾವುದೇ ದಾಖಲೆ ಹೊಂದಿರದೆ ಲೆಕ್ಕಕ್ಕೇ ಸಿಗುವುದಿಲ್ಲ. ಉಳ್ಳವರು ಮತ್ತು ದಾನ ಮಾಡುವ ಮನಸ್ಸಿರುವವರು ಕೂಡ ಅವರಿಗೆ ಕೈಲಾದ ಸಹಾಯ ಮಾಡಲಾಗದ ಅಸಹಾಯಕ ಸ್ಥಿತಿ ಏರ್ಪಟ್ಟಿದೆ. ಹೊರಗೆ ಹೋಗುವಂತಿಲ್ಲ.
ಮುಖ್ಯವಾಗಿ ರಾಜ್ಯ ರಾಜಧಾನಿಗಳ, ದೊಡ್ಡ ನಗರಗಳ ಬಸ್ ನಿಲ್ದಾಣ, ರೈಲು ನಿಲ್ದಾಣ, ಫ್ಲೈ ಓವರ್ ಗಳ ಬಳಿ ಮಲಗುವವರ ಸ್ಥಿತಿ ನಾಯಿಗಿಂತ ಕಡೆಯಾಗಿರುತ್ತದೆ. ಇಲ್ಲ ಬೀದಿ ನಾಯಿಗಳು ಇನ್ನೂ ದುಸ್ಥಿತಿಗೆ ಹೋಗಿ ಜೀವ ಕಳೆದುಕೊಳ್ಳುತ್ತವೆ.
ನಾವು ಎಷ್ಟು ಸಾಧ್ಯವೋ ಎಲ್ಲಿ ಸಾಧ್ಯವೋ ಎಷ್ಟು ಅನುಕೂಲವೋ ಅದನ್ನು ಬಳಸಿಕೊಂಡು ಇಂತಹವರಿಗೆ ಸಹಾಯ ಮಾಡಲು ಪ್ರಯತ್ನಿಸೋಣ. ಅದು ಉಪಕಾರವಲ್ಲ ಕರ್ತವ್ಯ ಎಂದು ಭಾವಿಸೋಣ. ದಿನಗೂಲಿ ನೌಕರರು ಸಹ ಇದೇ ವ್ಯಾಪ್ತಿಯಲ್ಲಿ ಬರುತ್ತಾರೆ.
ಇಷ್ಟೆಲ್ಲದರ ನಡುವೆಯೂ ಈ ಸಿನೆಮಾ ಹಾಡು ಗುನುಗುನಿಸುತ್ತಿರಿ…ನಗುನಗುತಾ ನಲಿ ನಲಿ,
ಏನೇ ಆಗಲಿ..
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?