Connect with us

ದಿನದ ಸುದ್ದಿ

ಇಂಡಿಯಾ ಲಾಕ್ ಡೌನ್ : ಇದರ ಸೈಡ್ ಎಫೆಕ್ಟ್ ನಿಯಂತ್ರಣ ಹೇಗೆ..?

Published

on

  • ವಿವೇಕಾನಂದ. ಹೆಚ್.ಕೆ.

ವಿಶ್ವದಲ್ಲಿ ನಾಗರಿಕತೆಯ ಉಗಮ ದಾಖಲಾಗಿರುವ ದಿನದಿಂದ ಇಂದಿನವರೆಗೂ ಆಗಾಗ ಅನೇಕ ಆಘಾತಗಳನ್ನು ಅನುಭವಿಸುತ್ತಾ ಬಂದಿದೆ.

ಕಾಡಿನ ಕ್ರೂರ ಮೃಗಗಳಿಂದ, ಪ್ರಾಕೃತಿಕ ಅವಘಡಗಳಿಂದ, ರಾಜರುಗಳು ಆಕ್ರಮಣಗಳಿಂದ, ಭಯಂಕರ ಯುದ್ದಗಳಿಂದ, ಹುಚ್ಚು ಸರ್ವಾಧಿಕಾರಿಗಳಿಂದ ಬರಗಾಲದಿಂದ, ಅನೇಕ ರೋಗ ರುಜಿನಗಳಿಂದ ಎಲ್ಲಾ ಶತಮಾನಗಳಲ್ಲೂ ಆತಂಕ ಎದುರಿಸಿದೆ.

ಇದೀಗ ಕೊರೋನಾ ವೈರಸ್ ಆ ರೀತಿಯ ಒಂದು ಆತಂಕವಷ್ಟೆ. ಆಯಾ ಕಾಲಕ್ಕೆ ಅದೇ ಭಯಾನಕ. ಯಾವುದೂ ಹೆಚ್ಚು ಅಲ್ಲ ಕಡಿಮೆಯೂ ಅಲ್ಲ. ಕೆಲವು ಇಂಗ್ಲೀಷ್ ಸಿನಿಮಾಗಳಲ್ಲಿ ಬೇರೆ ಲೋಕದಿಂದ ದಾಳಿ ಇಡುವ ಏಲಿಯನ್ ಗಳ ವಿರುದ್ಧ ಹೋರಾಡುವ ದೃಶ್ಯಗಳನ್ನು ನೋಡಿರಬಹುದು. ಅವು ಮಾಡುವ ಅನಾಹುತಗಳು ಮತ್ತು ಕೊನೆಗೆ ಅವುಗಳ ವಿರುದ್ಧ ಜಯ. ಇದೂ ಸಹ ಅದೇ ರೀತಿ. ಆದರೆ ಅದು ಸಿನಿಮಾ ಇದು ವಾಸ್ತವ.

ಡಾರ್ವಿನ್‌ನ ಸಾರ್ವಕಾಲಿಕ ಸಿದ್ದಾಂತದಂತೆ ಬಲಿಷ್ಠವಾದದ್ದು ಮಾತ್ರ ಉಳಿಯುತ್ತದೆ. ಕೊರೋನಾ ವೈರಸ್ ಎಂಬ ಜೀವಾಣು ಮನುಷ್ಯನ ಮೇಲೆ ಯುದ್ಧ ಸಾರಿದೆ. ಸದ್ಯಕ್ಕೆ ಅದು ವಿಜಯದ ರಣಕೇಕೆ ಹಾಕುತ್ತಿದೆ. ಅದರ ವಿರುದ್ಧ ಮನುಷ್ಯ ಉಳಿವಿಗಾಗಿ ಹೋರಾಡುತ್ತಿದ್ದಾನೆ.

ಇದೀಗ ಅದರ ಹೋರಾಟದ ಭಾಗವಾಗಿ ಇಡೀ ಭಾರತವನ್ನು ಬಹುತೇಕ ಬಂದ್ ಮಾಡಲಾಗಿದೆ. ಆಧುನಿಕ ಕಾಲದ ಸುಮಾರು 50 ವಯಸ್ಸು ಆಸುಪಾಸಿನ ಜನರಿಗೆ ಇದರ ನೇರ ಅನುಭವ ಇರಲೇ ಇಲ್ಲ. ಅವರಿಗೆ ಇದೊಂದು ಅನಿರೀಕ್ಷಿತ ಆಘಾತ.

ಇರಲಿ ಈಗ ಮನೆಯಲ್ಲಿ ನಾಲ್ಕು ಗೋಡೆಗಳ ಮಧ್ಯೆ ಸಮಯ ಕಳೆಯುವ ಅನಿವಾರ್ಯತೆಗೆ ಸಿಲುಕಿದ್ದೇವೆ. ಈ ಸಮಯದಲ್ಲಿ ನಿಜವಾಗಲೂ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯ ಬಹಳಷ್ಟು ಅಗ್ನಿ ಪರೀಕ್ಷೆಗೆ ಒಳಪಡುತ್ತದೆ. ಇಂದು ನಾಳೆ ನಾಡಿದ್ದು ಹಬ್ಬ, ಅದರ ಆಚರಣೆ,
ಸಾವಿನ ಭಯ ಆತಂಕ ಹೊಸ ಜೀವನ ಶೈಲಿಯ ಒತ್ತಡದಲ್ಲಿ ಅಷ್ಟಾಗಿ ಗೊತ್ತಾಗುವುದಿಲ್ಲ. ಆದರೆ ‌ನಂತರ ದಿನಗಳು ಕಷ್ಟವಾಗುತ್ತದೆ. ಮಾನಸಿಕ ಕಿರಿಕಿರಿ ಉಂಟುಮಾಡುತ್ತದೆ. ಅದಕ್ಕಾಗಿ ಸ್ವಲ್ಪ ಅನುಕೂಲಕರ ಪರಿಸ್ಥಿತಿಯ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರು ಈ ಕೆಲವು ವಿಧಾನಗಳನ್ನು ಅನುಸರಿಸಬಹುದು.

ಯೋಗ ಪ್ರಾಣಾಯಾಮ ಧ್ಯಾನ ವ್ಯಾಯಾಮ ನೃತ್ಯಗಳ ಮೊರೆ ಹೋಗಬಹುದು. ದೈಹಿಕವಾಗಿ ದುರ್ಬಲರಾದವರು ಧ್ಯಾನ ಮತ್ತು ಪ್ರಾಣಾಯಾಮದಿಂದ ಸಾಕಷ್ಟು ಮಾನಸಿಕ ಲಾಭ ಪಡೆಯಬಹುದು.

ಇಲ್ಲಿಯವರೆಗೂ ಓದಲು ಸಾಧ್ಯವಾಗದ ಯಾವುದಾದರೂ ಆಸಕ್ತಿಯ ಪುಸ್ತಕಗಳನ್ನು ಓದಲು ಪ್ರಾರಂಭಿಸಬೇಕು. ಖಂಡಿತ ಓದು ನಿಮ್ಮನ್ನು ಮಾನಸಿಕ ಖಿನ್ನತೆಯಿಂದ ಪಾರು ಮಾಡುತ್ತದೆ.

ನಿಮ್ಮ ಆಸಕ್ತಿಯ ಏನನ್ನಾದರೂ ಬರೆಯಲು ಪ್ರಾರಂಭಿಸಿ. ಕನಿಷ್ಠ ದಿನಚರಿ ಅಥವಾ ಬದುಕಿನ ನೆನಪ ಪುಟಗಳಾದರೂ ದಾಖಲಿಸಿರಿ. ಇದು ಓದಿಗಿಂತ ಹೆಚ್ಚು ಸಮಾಧಾನಕರ ಪರಿಣಾಮ ನಿಮ್ಮ ಮನಸ್ಸಿನ ಮೇಲೆ ಬೀರುತ್ತದೆ.

ಹಳೆಯ ಗೆಳೆಯರನ್ನು ದೂರವಾಣಿಯಲ್ಲಿ ಸಂಪರ್ಕಿಸಿ ತೃಪ್ತಿಯಾಗುವಷ್ಟು ಮಾತನಾಡಿ. ಅದನ್ನು ಈ ವಿರಾಮದ ಎಲ್ಲಾ ದಿನಗಳಲ್ಲಿಯೂ ಮುಂದುವರಿಸಿ. ಅಕ್ಷರದ ಚಾಟ್ ಗಳಿಗಿಂತ ನೇರ ಮಾತುಗಳು ನಿಮ್ಮನ್ನು ‌ಉಲ್ಲಸಿತರಾಗಿಡುತ್ತದೆ.

ಮಕ್ಕಳು ಮನೆಯವರೊಂದಿಗೆ ಚೆಸ್ ಕೇರಂ ಹಾವು ಏಣಿಯಾಟ ಚೌಕಾಬಾರ ಮುಂತಾದ ಆಟಗಳನ್ನು ಹಾಡಬಹುದು. ಇದು ನಿಮ್ಮ ಬಹುತೇಕ ಸಮಯ ಆಕ್ರಮಿಸುತ್ತದೆ. ಸಮಯ ಕಳೆಯುವುದೇ ತಿಳಿಯುವುದಿಲ್ಲ.

ಕುಟುಂಬ ಸ್ವಲ್ಪ ದೊಡ್ಡದಿದ್ದರೆ ಚೀಟಿ ಬರೆದು ಕಳ್ಳ ಪೋಲೀಸ್ ಆಟ, ಅಂತ್ಯಾಕ್ಷರಿ, ಖಾಲಿ ಹಾಳೆಯ ಮೇಲೆ ಚುಕ್ಕಿಯಿಟ್ಟು ಜೋಡಿಸುವುದು, ಕಣ್ಣಾ ಮುಚ್ಚಾಲೆ, ಯಾವುದಾದರೂ ವಸ್ತುಗಳನ್ನು ಮನೆಯಲ್ಲಿ ಮುಚ್ಚಿಟ್ಟು ಹುಡುಕುವುದು ಮುಂತಾದ ಆಟಗಳನ್ನು ಆಡಬಹುದು. ಇದು ಸ್ವಲ್ಪ ಖುಷಿ ಕೊಡುತ್ತದೆ.

ಸರಳ ರೀತಿಯ ಅಡುಗೆಗಳ ಪ್ರಯೋಗ ಮಾಡಬಹುದು. ಇಲ್ಲಿಯವರೆಗೂ ಮನೆಯಲ್ಲಿ ಯಾರು ಅಡುಗೆ ಮಾಡುತ್ತಿದ್ದರೋ ಅದನ್ನು ಬದಲಾಯಿಸಿ ಮತ್ತೊಬ್ಬರು ಒಂದಷ್ಟು ಪ್ರಯತ್ನಿಸಬಹುದು. ಆದರೆ ಮಿತ ಆಹಾರ ಒಳ್ಳೆಯದು.

ಆರೋಗ್ಯದ ಕಾರಣಕ್ಕಾಗಿ ಉಪವಾಸ ವೃತಗಳನ್ನು ಸಹ ಮಾಡಬಹುದು. ಹೌದು ಏಕತಾನತೆ ಮುರಿಯಲು ವೈದ್ಯರ ಸಲಹೆ ಮೇರೆಗೆ ಉಪವಾಸ ದೇಹ ಮತ್ತು ಮನಸ್ಸಿನ ನಿಯಂತ್ರಣಕ್ಕೆ ಒಳ್ಳೆಯ ಮದ್ದು.
ಅದು ಅವರವರ ಆರೋಗ್ಯ ಸ್ಥಿತಿ ಅವಲಂಬಿಸಿರುತ್ತದೆ.

ಅನುಕೂಲ ಇದ್ದರೆ ಅತ್ಯುತ್ತಮ ಸಿನಿಮಾ ನೋಡಬಹುದು ಮತ್ತು ಸಂಗೀತ ಆಲಿಸಬಹುದು. ಇವು ಖಂಡಿತವಾಗಿ ನಿಮ್ಮನ್ನು ಮತ್ತೊಂದು ಲೋಕಕ್ಕೆ ಕೊಂಡೊಯ್ಯುತ್ತದೆ. ಕೆಲವೊಮ್ಮೆ ಆಳವಾಗಿ ಯೋಚಿಸುವಂತೆ ಪ್ರೇರೇಪಿಸುತ್ತದೆ.

ಮೊಬೈಲ್ ನಲ್ಲಿರುವ ಅನೇಕ ಹೊಸ ಹೊಸ ತಾಂತ್ರಿಕ ಸಾಧ್ಯತೆಗಳನ್ನು ಕಲಿಯಲು ಪ್ರಯತ್ನಿಸಬಹುದು. ಸದಾ ವೇಗದ ಜೀವನದಲ್ಲಿ ನಾವು ಕನಿಷ್ಠ ಉಪಯೋಗ ಮಾತ್ರ ತಿಳಿದಿರುತ್ತೇವೆ. ಆದರೆ ಇಂದಿನ ಸ್ಮಾರ್ಟ್ ಫೋನ್ ಗಳಲ್ಲಿ ವಿಶ್ವ ರೂಪ ದರ್ಶನ ಪಡೆಯಬಹುದು.

ಮಾತಿನ ಸಂತೆಯಲ್ಲಿ ಮರೆಯಾಗಿದ್ದ ಮೌನದ ದಿವ್ಯತೆಯನ್ನು ಹಿಡಿದಿಡಲು ಪ್ರಯತ್ನಿಸಬಹುದು. ಮೌನ ತುಂಬಾ ಕಠಿಣ. ಆದರೆ ‌ ಅದು ಒಮ್ಮೆ ಅನುಭವಕ್ಕೆ ಸಿಕ್ಕರೆ ತುಂಬಾ ಪರಿಣಾಮಕಾರಿ. ಅದೊಂದು ಅನುಭಾವ. ಸಾಧ್ಯವಾದರೆ ಪ್ರಯತ್ನಿಸಿ.

ಇದು ನನಗೆ ಹೊಳೆದ ಕೆಲವು ವಿಷಯಗಳು ಮಾತ್ರ. ಇದರ ಜೊತೆಗೆ ನಿಮಗೂ ಹಲವಾರು ವಿಧಾನಗಳು ತಿಳಿದಿರುತ್ತದೆ. ನಾನು ಈ ಮೂಲಕ ಮತ್ತೊಮ್ಮೆ ನೆನಪಿಸುತ್ತಿದ್ದೇನೆ ಅಷ್ಟೆ.

ಇದರ ಜೊತೆ ಖಂಡಿತವಾಗಿಯೂ ಬಡಜನರನ್ನು ಜ್ಞಾಪಿಸಿಕೊಳ್ಳಲೇ ಬೇಕು. ಕರೋನ ವಿರುದ್ಧ ಈ ಕರ್ಪ್ಯೂ ಹೋರಾಟದ ಬಹುದೊಡ್ಡ ಸೈಡ್ ಎಪೆಕ್ಟ್ ಎಂದರೆ ಬೀದಿ ಬದಿಯ ಮನೆ ಇಲ್ಲದ ಸುಮಾರು 10 ಕೋಟಿ ಕಡುಬಡವರ ಬಹುತೇಕ ಸರ್ವನಾಶ.

ಸರ್ಕಾರಗಳು ಏನೇ ಹೇಳಿದರು ಈ‌ ಸಂದರ್ಭದಲ್ಲಿ ಆಡಳಿತ ಯಂತ್ರ ಅವರನ್ನು ಮುಟ್ಟುವುದು ತುಂಬಾ ಕಷ್ಟವಿದೆ. ಅವರು ಯಾವುದೇ ದಾಖಲೆ ಹೊಂದಿರದೆ ಲೆಕ್ಕಕ್ಕೇ ಸಿಗುವುದಿಲ್ಲ. ಉಳ್ಳವರು ಮತ್ತು ದಾನ ಮಾಡುವ ಮನಸ್ಸಿರುವವರು ಕೂಡ ಅವರಿಗೆ ಕೈಲಾದ ಸಹಾಯ ಮಾಡಲಾಗದ ಅಸಹಾಯಕ ಸ್ಥಿತಿ ಏರ್ಪಟ್ಟಿದೆ. ಹೊರಗೆ ಹೋಗುವಂತಿಲ್ಲ.

ಮುಖ್ಯವಾಗಿ ರಾಜ್ಯ ರಾಜಧಾನಿಗಳ, ದೊಡ್ಡ ನಗರಗಳ ಬಸ್ ನಿಲ್ದಾಣ, ರೈಲು ನಿಲ್ದಾಣ, ಫ್ಲೈ ಓವರ್ ಗಳ ಬಳಿ ಮಲಗುವವರ ಸ್ಥಿತಿ ನಾಯಿಗಿಂತ ಕಡೆಯಾಗಿರುತ್ತದೆ. ಇಲ್ಲ ಬೀದಿ ನಾಯಿಗಳು ಇನ್ನೂ ದುಸ್ಥಿತಿಗೆ ಹೋಗಿ ಜೀವ ಕಳೆದುಕೊಳ್ಳುತ್ತವೆ.

ನಾವು ಎಷ್ಟು ಸಾಧ್ಯವೋ ಎಲ್ಲಿ ಸಾಧ್ಯವೋ ಎಷ್ಟು ಅನುಕೂಲವೋ ಅದನ್ನು ಬಳಸಿಕೊಂಡು ಇಂತಹವರಿಗೆ ಸಹಾಯ ಮಾಡಲು ಪ್ರಯತ್ನಿಸೋಣ. ಅದು ಉಪಕಾರವಲ್ಲ ಕರ್ತವ್ಯ ಎಂದು ಭಾವಿಸೋಣ. ದಿನಗೂಲಿ ನೌಕರರು ಸಹ ಇದೇ ವ್ಯಾಪ್ತಿಯಲ್ಲಿ ಬರುತ್ತಾರೆ.

ಇಷ್ಟೆಲ್ಲದರ ನಡುವೆಯೂ ಈ ಸಿನೆಮಾ ಹಾಡು ಗುನುಗುನಿಸುತ್ತಿರಿ…ನಗುನಗುತಾ ನಲಿ ನಲಿ,
ಏನೇ ಆಗಲಿ..

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

Published

on

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.

ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.

ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

Published

on

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.

ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾ‌ನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾ‌ನ‌ ಪೀಠಿಕೆಯನ್ನು ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾ‌ನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.

ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

Published

on

  • ಪುರಂದರ್ ಲೋಕಿಕೆರೆ

ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.

ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.

100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.

ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.

ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.

ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.

ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending