Connect with us

ದಿನದ ಸುದ್ದಿ

ಇಂಡಿಯಾ ಲಾಕ್ ಡೌನ್ : ಇದರ ಸೈಡ್ ಎಫೆಕ್ಟ್ ನಿಯಂತ್ರಣ ಹೇಗೆ..?

Published

on

  • ವಿವೇಕಾನಂದ. ಹೆಚ್.ಕೆ.

ವಿಶ್ವದಲ್ಲಿ ನಾಗರಿಕತೆಯ ಉಗಮ ದಾಖಲಾಗಿರುವ ದಿನದಿಂದ ಇಂದಿನವರೆಗೂ ಆಗಾಗ ಅನೇಕ ಆಘಾತಗಳನ್ನು ಅನುಭವಿಸುತ್ತಾ ಬಂದಿದೆ.

ಕಾಡಿನ ಕ್ರೂರ ಮೃಗಗಳಿಂದ, ಪ್ರಾಕೃತಿಕ ಅವಘಡಗಳಿಂದ, ರಾಜರುಗಳು ಆಕ್ರಮಣಗಳಿಂದ, ಭಯಂಕರ ಯುದ್ದಗಳಿಂದ, ಹುಚ್ಚು ಸರ್ವಾಧಿಕಾರಿಗಳಿಂದ ಬರಗಾಲದಿಂದ, ಅನೇಕ ರೋಗ ರುಜಿನಗಳಿಂದ ಎಲ್ಲಾ ಶತಮಾನಗಳಲ್ಲೂ ಆತಂಕ ಎದುರಿಸಿದೆ.

ಇದೀಗ ಕೊರೋನಾ ವೈರಸ್ ಆ ರೀತಿಯ ಒಂದು ಆತಂಕವಷ್ಟೆ. ಆಯಾ ಕಾಲಕ್ಕೆ ಅದೇ ಭಯಾನಕ. ಯಾವುದೂ ಹೆಚ್ಚು ಅಲ್ಲ ಕಡಿಮೆಯೂ ಅಲ್ಲ. ಕೆಲವು ಇಂಗ್ಲೀಷ್ ಸಿನಿಮಾಗಳಲ್ಲಿ ಬೇರೆ ಲೋಕದಿಂದ ದಾಳಿ ಇಡುವ ಏಲಿಯನ್ ಗಳ ವಿರುದ್ಧ ಹೋರಾಡುವ ದೃಶ್ಯಗಳನ್ನು ನೋಡಿರಬಹುದು. ಅವು ಮಾಡುವ ಅನಾಹುತಗಳು ಮತ್ತು ಕೊನೆಗೆ ಅವುಗಳ ವಿರುದ್ಧ ಜಯ. ಇದೂ ಸಹ ಅದೇ ರೀತಿ. ಆದರೆ ಅದು ಸಿನಿಮಾ ಇದು ವಾಸ್ತವ.

ಡಾರ್ವಿನ್‌ನ ಸಾರ್ವಕಾಲಿಕ ಸಿದ್ದಾಂತದಂತೆ ಬಲಿಷ್ಠವಾದದ್ದು ಮಾತ್ರ ಉಳಿಯುತ್ತದೆ. ಕೊರೋನಾ ವೈರಸ್ ಎಂಬ ಜೀವಾಣು ಮನುಷ್ಯನ ಮೇಲೆ ಯುದ್ಧ ಸಾರಿದೆ. ಸದ್ಯಕ್ಕೆ ಅದು ವಿಜಯದ ರಣಕೇಕೆ ಹಾಕುತ್ತಿದೆ. ಅದರ ವಿರುದ್ಧ ಮನುಷ್ಯ ಉಳಿವಿಗಾಗಿ ಹೋರಾಡುತ್ತಿದ್ದಾನೆ.

ಇದೀಗ ಅದರ ಹೋರಾಟದ ಭಾಗವಾಗಿ ಇಡೀ ಭಾರತವನ್ನು ಬಹುತೇಕ ಬಂದ್ ಮಾಡಲಾಗಿದೆ. ಆಧುನಿಕ ಕಾಲದ ಸುಮಾರು 50 ವಯಸ್ಸು ಆಸುಪಾಸಿನ ಜನರಿಗೆ ಇದರ ನೇರ ಅನುಭವ ಇರಲೇ ಇಲ್ಲ. ಅವರಿಗೆ ಇದೊಂದು ಅನಿರೀಕ್ಷಿತ ಆಘಾತ.

ಇರಲಿ ಈಗ ಮನೆಯಲ್ಲಿ ನಾಲ್ಕು ಗೋಡೆಗಳ ಮಧ್ಯೆ ಸಮಯ ಕಳೆಯುವ ಅನಿವಾರ್ಯತೆಗೆ ಸಿಲುಕಿದ್ದೇವೆ. ಈ ಸಮಯದಲ್ಲಿ ನಿಜವಾಗಲೂ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯ ಬಹಳಷ್ಟು ಅಗ್ನಿ ಪರೀಕ್ಷೆಗೆ ಒಳಪಡುತ್ತದೆ. ಇಂದು ನಾಳೆ ನಾಡಿದ್ದು ಹಬ್ಬ, ಅದರ ಆಚರಣೆ,
ಸಾವಿನ ಭಯ ಆತಂಕ ಹೊಸ ಜೀವನ ಶೈಲಿಯ ಒತ್ತಡದಲ್ಲಿ ಅಷ್ಟಾಗಿ ಗೊತ್ತಾಗುವುದಿಲ್ಲ. ಆದರೆ ‌ನಂತರ ದಿನಗಳು ಕಷ್ಟವಾಗುತ್ತದೆ. ಮಾನಸಿಕ ಕಿರಿಕಿರಿ ಉಂಟುಮಾಡುತ್ತದೆ. ಅದಕ್ಕಾಗಿ ಸ್ವಲ್ಪ ಅನುಕೂಲಕರ ಪರಿಸ್ಥಿತಿಯ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರು ಈ ಕೆಲವು ವಿಧಾನಗಳನ್ನು ಅನುಸರಿಸಬಹುದು.

ಯೋಗ ಪ್ರಾಣಾಯಾಮ ಧ್ಯಾನ ವ್ಯಾಯಾಮ ನೃತ್ಯಗಳ ಮೊರೆ ಹೋಗಬಹುದು. ದೈಹಿಕವಾಗಿ ದುರ್ಬಲರಾದವರು ಧ್ಯಾನ ಮತ್ತು ಪ್ರಾಣಾಯಾಮದಿಂದ ಸಾಕಷ್ಟು ಮಾನಸಿಕ ಲಾಭ ಪಡೆಯಬಹುದು.

ಇಲ್ಲಿಯವರೆಗೂ ಓದಲು ಸಾಧ್ಯವಾಗದ ಯಾವುದಾದರೂ ಆಸಕ್ತಿಯ ಪುಸ್ತಕಗಳನ್ನು ಓದಲು ಪ್ರಾರಂಭಿಸಬೇಕು. ಖಂಡಿತ ಓದು ನಿಮ್ಮನ್ನು ಮಾನಸಿಕ ಖಿನ್ನತೆಯಿಂದ ಪಾರು ಮಾಡುತ್ತದೆ.

ನಿಮ್ಮ ಆಸಕ್ತಿಯ ಏನನ್ನಾದರೂ ಬರೆಯಲು ಪ್ರಾರಂಭಿಸಿ. ಕನಿಷ್ಠ ದಿನಚರಿ ಅಥವಾ ಬದುಕಿನ ನೆನಪ ಪುಟಗಳಾದರೂ ದಾಖಲಿಸಿರಿ. ಇದು ಓದಿಗಿಂತ ಹೆಚ್ಚು ಸಮಾಧಾನಕರ ಪರಿಣಾಮ ನಿಮ್ಮ ಮನಸ್ಸಿನ ಮೇಲೆ ಬೀರುತ್ತದೆ.

ಹಳೆಯ ಗೆಳೆಯರನ್ನು ದೂರವಾಣಿಯಲ್ಲಿ ಸಂಪರ್ಕಿಸಿ ತೃಪ್ತಿಯಾಗುವಷ್ಟು ಮಾತನಾಡಿ. ಅದನ್ನು ಈ ವಿರಾಮದ ಎಲ್ಲಾ ದಿನಗಳಲ್ಲಿಯೂ ಮುಂದುವರಿಸಿ. ಅಕ್ಷರದ ಚಾಟ್ ಗಳಿಗಿಂತ ನೇರ ಮಾತುಗಳು ನಿಮ್ಮನ್ನು ‌ಉಲ್ಲಸಿತರಾಗಿಡುತ್ತದೆ.

ಮಕ್ಕಳು ಮನೆಯವರೊಂದಿಗೆ ಚೆಸ್ ಕೇರಂ ಹಾವು ಏಣಿಯಾಟ ಚೌಕಾಬಾರ ಮುಂತಾದ ಆಟಗಳನ್ನು ಹಾಡಬಹುದು. ಇದು ನಿಮ್ಮ ಬಹುತೇಕ ಸಮಯ ಆಕ್ರಮಿಸುತ್ತದೆ. ಸಮಯ ಕಳೆಯುವುದೇ ತಿಳಿಯುವುದಿಲ್ಲ.

ಕುಟುಂಬ ಸ್ವಲ್ಪ ದೊಡ್ಡದಿದ್ದರೆ ಚೀಟಿ ಬರೆದು ಕಳ್ಳ ಪೋಲೀಸ್ ಆಟ, ಅಂತ್ಯಾಕ್ಷರಿ, ಖಾಲಿ ಹಾಳೆಯ ಮೇಲೆ ಚುಕ್ಕಿಯಿಟ್ಟು ಜೋಡಿಸುವುದು, ಕಣ್ಣಾ ಮುಚ್ಚಾಲೆ, ಯಾವುದಾದರೂ ವಸ್ತುಗಳನ್ನು ಮನೆಯಲ್ಲಿ ಮುಚ್ಚಿಟ್ಟು ಹುಡುಕುವುದು ಮುಂತಾದ ಆಟಗಳನ್ನು ಆಡಬಹುದು. ಇದು ಸ್ವಲ್ಪ ಖುಷಿ ಕೊಡುತ್ತದೆ.

ಸರಳ ರೀತಿಯ ಅಡುಗೆಗಳ ಪ್ರಯೋಗ ಮಾಡಬಹುದು. ಇಲ್ಲಿಯವರೆಗೂ ಮನೆಯಲ್ಲಿ ಯಾರು ಅಡುಗೆ ಮಾಡುತ್ತಿದ್ದರೋ ಅದನ್ನು ಬದಲಾಯಿಸಿ ಮತ್ತೊಬ್ಬರು ಒಂದಷ್ಟು ಪ್ರಯತ್ನಿಸಬಹುದು. ಆದರೆ ಮಿತ ಆಹಾರ ಒಳ್ಳೆಯದು.

ಆರೋಗ್ಯದ ಕಾರಣಕ್ಕಾಗಿ ಉಪವಾಸ ವೃತಗಳನ್ನು ಸಹ ಮಾಡಬಹುದು. ಹೌದು ಏಕತಾನತೆ ಮುರಿಯಲು ವೈದ್ಯರ ಸಲಹೆ ಮೇರೆಗೆ ಉಪವಾಸ ದೇಹ ಮತ್ತು ಮನಸ್ಸಿನ ನಿಯಂತ್ರಣಕ್ಕೆ ಒಳ್ಳೆಯ ಮದ್ದು.
ಅದು ಅವರವರ ಆರೋಗ್ಯ ಸ್ಥಿತಿ ಅವಲಂಬಿಸಿರುತ್ತದೆ.

ಅನುಕೂಲ ಇದ್ದರೆ ಅತ್ಯುತ್ತಮ ಸಿನಿಮಾ ನೋಡಬಹುದು ಮತ್ತು ಸಂಗೀತ ಆಲಿಸಬಹುದು. ಇವು ಖಂಡಿತವಾಗಿ ನಿಮ್ಮನ್ನು ಮತ್ತೊಂದು ಲೋಕಕ್ಕೆ ಕೊಂಡೊಯ್ಯುತ್ತದೆ. ಕೆಲವೊಮ್ಮೆ ಆಳವಾಗಿ ಯೋಚಿಸುವಂತೆ ಪ್ರೇರೇಪಿಸುತ್ತದೆ.

ಮೊಬೈಲ್ ನಲ್ಲಿರುವ ಅನೇಕ ಹೊಸ ಹೊಸ ತಾಂತ್ರಿಕ ಸಾಧ್ಯತೆಗಳನ್ನು ಕಲಿಯಲು ಪ್ರಯತ್ನಿಸಬಹುದು. ಸದಾ ವೇಗದ ಜೀವನದಲ್ಲಿ ನಾವು ಕನಿಷ್ಠ ಉಪಯೋಗ ಮಾತ್ರ ತಿಳಿದಿರುತ್ತೇವೆ. ಆದರೆ ಇಂದಿನ ಸ್ಮಾರ್ಟ್ ಫೋನ್ ಗಳಲ್ಲಿ ವಿಶ್ವ ರೂಪ ದರ್ಶನ ಪಡೆಯಬಹುದು.

ಮಾತಿನ ಸಂತೆಯಲ್ಲಿ ಮರೆಯಾಗಿದ್ದ ಮೌನದ ದಿವ್ಯತೆಯನ್ನು ಹಿಡಿದಿಡಲು ಪ್ರಯತ್ನಿಸಬಹುದು. ಮೌನ ತುಂಬಾ ಕಠಿಣ. ಆದರೆ ‌ ಅದು ಒಮ್ಮೆ ಅನುಭವಕ್ಕೆ ಸಿಕ್ಕರೆ ತುಂಬಾ ಪರಿಣಾಮಕಾರಿ. ಅದೊಂದು ಅನುಭಾವ. ಸಾಧ್ಯವಾದರೆ ಪ್ರಯತ್ನಿಸಿ.

ಇದು ನನಗೆ ಹೊಳೆದ ಕೆಲವು ವಿಷಯಗಳು ಮಾತ್ರ. ಇದರ ಜೊತೆಗೆ ನಿಮಗೂ ಹಲವಾರು ವಿಧಾನಗಳು ತಿಳಿದಿರುತ್ತದೆ. ನಾನು ಈ ಮೂಲಕ ಮತ್ತೊಮ್ಮೆ ನೆನಪಿಸುತ್ತಿದ್ದೇನೆ ಅಷ್ಟೆ.

ಇದರ ಜೊತೆ ಖಂಡಿತವಾಗಿಯೂ ಬಡಜನರನ್ನು ಜ್ಞಾಪಿಸಿಕೊಳ್ಳಲೇ ಬೇಕು. ಕರೋನ ವಿರುದ್ಧ ಈ ಕರ್ಪ್ಯೂ ಹೋರಾಟದ ಬಹುದೊಡ್ಡ ಸೈಡ್ ಎಪೆಕ್ಟ್ ಎಂದರೆ ಬೀದಿ ಬದಿಯ ಮನೆ ಇಲ್ಲದ ಸುಮಾರು 10 ಕೋಟಿ ಕಡುಬಡವರ ಬಹುತೇಕ ಸರ್ವನಾಶ.

ಸರ್ಕಾರಗಳು ಏನೇ ಹೇಳಿದರು ಈ‌ ಸಂದರ್ಭದಲ್ಲಿ ಆಡಳಿತ ಯಂತ್ರ ಅವರನ್ನು ಮುಟ್ಟುವುದು ತುಂಬಾ ಕಷ್ಟವಿದೆ. ಅವರು ಯಾವುದೇ ದಾಖಲೆ ಹೊಂದಿರದೆ ಲೆಕ್ಕಕ್ಕೇ ಸಿಗುವುದಿಲ್ಲ. ಉಳ್ಳವರು ಮತ್ತು ದಾನ ಮಾಡುವ ಮನಸ್ಸಿರುವವರು ಕೂಡ ಅವರಿಗೆ ಕೈಲಾದ ಸಹಾಯ ಮಾಡಲಾಗದ ಅಸಹಾಯಕ ಸ್ಥಿತಿ ಏರ್ಪಟ್ಟಿದೆ. ಹೊರಗೆ ಹೋಗುವಂತಿಲ್ಲ.

ಮುಖ್ಯವಾಗಿ ರಾಜ್ಯ ರಾಜಧಾನಿಗಳ, ದೊಡ್ಡ ನಗರಗಳ ಬಸ್ ನಿಲ್ದಾಣ, ರೈಲು ನಿಲ್ದಾಣ, ಫ್ಲೈ ಓವರ್ ಗಳ ಬಳಿ ಮಲಗುವವರ ಸ್ಥಿತಿ ನಾಯಿಗಿಂತ ಕಡೆಯಾಗಿರುತ್ತದೆ. ಇಲ್ಲ ಬೀದಿ ನಾಯಿಗಳು ಇನ್ನೂ ದುಸ್ಥಿತಿಗೆ ಹೋಗಿ ಜೀವ ಕಳೆದುಕೊಳ್ಳುತ್ತವೆ.

ನಾವು ಎಷ್ಟು ಸಾಧ್ಯವೋ ಎಲ್ಲಿ ಸಾಧ್ಯವೋ ಎಷ್ಟು ಅನುಕೂಲವೋ ಅದನ್ನು ಬಳಸಿಕೊಂಡು ಇಂತಹವರಿಗೆ ಸಹಾಯ ಮಾಡಲು ಪ್ರಯತ್ನಿಸೋಣ. ಅದು ಉಪಕಾರವಲ್ಲ ಕರ್ತವ್ಯ ಎಂದು ಭಾವಿಸೋಣ. ದಿನಗೂಲಿ ನೌಕರರು ಸಹ ಇದೇ ವ್ಯಾಪ್ತಿಯಲ್ಲಿ ಬರುತ್ತಾರೆ.

ಇಷ್ಟೆಲ್ಲದರ ನಡುವೆಯೂ ಈ ಸಿನೆಮಾ ಹಾಡು ಗುನುಗುನಿಸುತ್ತಿರಿ…ನಗುನಗುತಾ ನಲಿ ನಲಿ,
ಏನೇ ಆಗಲಿ..

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending