ದಿನದ ಸುದ್ದಿ
ದಾವಣಗೆರೆಯಲ್ಲೊಂದು ಅಮಾನವೀಯ ನಡೆ | ಕೊರೋನಾದಿಂದ ಸಾವನ್ನಪ್ಪಿದ ವ್ಯಕ್ತಿಯನ್ನು ಜೆಸಿಬಿ ಬಳಸಿ ಶವಸಂಸ್ಕಾರ : ಡಿಸಿ ನೋಟಿಸ್

ಸುದ್ದಿದಿನ,ದಾವಣಗೆರೆ :ಸತ್ತ ಮೇಲೆ ನೂರಾರು ಜನ ಮೆರವಣಿಗೆ ಮಾಡಿ ಕಳುಹಿಸಿಕೊಡಬೇಕು ಎಂದು ಪ್ರತಿಯೊಬ್ಬರದ್ದು ಕೊನೆ ಆಸೆಯಾಗಿರುತ್ತೆ ಆದರೆ ಈ ಕೋವಿಡ್ ಬಂದು ಸಾವನ್ನಪ್ಪಿದರೆ ಮಾತ್ರ ಯಾರು ಕೂಡ ಊಹಿಸಲಾಗದಷ್ಟೆ ಮಟ್ಟಿಗೆ ನಮ್ಮ ಶವಸಂಸ್ಕಾರ ಇರುತ್ತೆ.
ಇದಕ್ಕೆ ಸತ್ಯವಾದ ನಿದರ್ಶನ ಇಲ್ಲಿ ಲಭ್ಯವಾಗಿದ್ದು, ದಾವಣಗೆರೆಯ ಚನ್ನಗಿರಿ ತಾಲ್ಲೂಕಿನ 56 ವರ್ಷದ ವೃದ್ದೆ ಕಳೆದ 17 ರಂದು ಉಸಿರಾಟದ ತೊಂದರೆಯಿಂದ ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.ಅವರಿಗೆ ಸೋಂಕು ಇರುವುದು ಕೂಡ ಅಂದೇ ದೃಡಪಟ್ಟಿತ್ತು, ಈ ಹಿನ್ನಲೆ ಅವರನ್ನು ಚನ್ನಗಿರಿ ಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರವನ್ನು ಮಾಡಿಲಾಗಿತ್ತು.
ಆದರೆ ಅಂತ್ಯ ಸಂಸ್ಕಾರಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅನುಸರಿಸಿದ ಕ್ರಮವನ್ನು ನೋಡಿದ್ರೆ ಯಾರು ಕೂಡ ಕೋವಿಡ್ ನಿಂದ ಸಾಯಬಾರದು ಎನ್ನುವಂತಹ ಭಯ ಹುಟ್ಟುತ್ತದೆ. ಯಾಕಂದ್ರೆ ಜೆಸಿಬಿ ಮೂಲಕ ಮೃತ ದೇಹವನ್ನು ಎತ್ತಿಕೊಂಡು ಹೋಗಿ ಕಸವನ್ನು ಬಿಸಾಕುವ ಹಾಕಿ ಬಿಸಾಕಿ ಮಣ್ಣುಮುಚ್ವಿರುವ ಹೀನಾಯ ದೃಶ್ಯ ನೋಡಿದ್ರೆ ಎಂಥವರ ಎದೆಯಲ್ಲಿ ಭಯ ಶುರುವಾಗುವುದು ಕಾಮನ್.
ಅಲ್ಲದೆ ಈ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಮದ ವಾಗಿದೆ. ಅಲ್ಲದೆ ವೃದ್ದೆಯ ಮೃತದೇಹವನ್ನು ದಪನ್ ಮಾಡುವಾಗ ಸಿಪಿಐ ಆರ್ ಆರ್ ಪಾಟೀಲ್, ಹಾಗೂ ತಹಶಿಲ್ದಾರ್ ಪುಟ್ಟರಾಜು ಗೌಡ ಸೇರಿದಂತೆ ಹಲವು ತಾಲ್ಲೂಕಮಟ್ಟದ ಆರೋಗ್ಯ ಅಧಿಕಾರಿಗಳು ಇದ್ದರು. ಅವರ ಎದುರೇ ಈ ರೀತಿಯಾದ ಹೀನಾಯವಾಗಿ ವೃದ್ದೆಯ ಮೃತದೇಹವನ್ನು ದಪನ್ ಮಾಡಿದ್ದಾರೆ.
ಇದಕ್ಕೆ ಸ್ಪಷ್ಡನೆ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಇದುವರೆಗೂ ಸಾವನ್ನಪ್ಪಿದ ಸೋಂಕಿತರು ಅಂತ್ಯಕ್ರಿಯೆಯನ್ನು ಸರ್ಕಾರದ ಅದೇಶದಂತೆ, ಕೋವಿಡ್ ನಿಯಮಾವಳಿ ಗಳ ಪ್ರಕಾರವೇ ಮಾಡಲಾಗಿದೆ. ಏನಾದ್ರು ಲೋಪದೋಷ ಕಂಡು ಬಂದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಅಲ್ಲದೆ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ತಾಹಶೀಲ್ದಾರ್, ತಾಲ್ಲೂಕು ಅರೋಗ್ಯಧಿಕಾರಿ, ಸೇರಿದಂತೆ ನಾಲ್ಕು ಜನರಿಗೆ ಈಗಾಗಲೇ ನೋಟೀಸ್ ನೀಡಲಾಗಿದೆ ಎಂದರುಏನೇ ಆಗಲಿ ಈ ರೀತಿ ಕೋವಿಡ್ ಸೋಂಕು ಬಂದು ಸಾವನ್ನಪ್ಪಿದವರನ್ನು ಹೀಗೆ ಕಸದ ರೀತಿ ಹಾಕಿ ಅಂತ್ಯಕ್ರಿಯೆ ಮಾಡುವುದು ಮಾತ್ರ ಇಡೀ ಸಮಾಜವೇ ತಲೆತಗ್ಗಿಸುವ ಕೆಲಸವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆಂಗಾಪುರ | ಮಾ.12 ರಂದು ಶ್ರೀ ರಾಮಲಿಂಗೇಶ್ವರ ಮಹಾ ಸ್ವಾಮಿಯವರ 45 ನೇ ಮುಳ್ಳುಗದ್ದಿಗೆ ; ಉಚಿತ ಸಾಮೂಹಿಕ ವಿವಾಹ ಮಹೋತ್ಸವ

ಸುದ್ದಿದಿನ, ಚನ್ನಗಿರಿ : ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ರಾಮಲಿಂಗೇಶ್ವರ ಮಹಾ ಸ್ವಾಮಿಯವರ 45 ನೇ ಮುಳ್ಳು ಗದ್ದಿಗೆ ಮಹೋತ್ಸವವು ಸುಕ್ಷೇತ್ರ ಚನ್ನಗಿರಿ ತಾಲೂಕಿನ ಕೆಂಗಾಪುರ ಗ್ರಾಮದಲ್ಲಿ ಮಾ.12 ರಂದು ನಡೆಯಲಿದೆ.
ಇದನ್ನೂ ಓದಿ | ದಾವಣಗೆರೆ | ಶ್ರೀ ಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಸೇವಾಸಮಿತಿಯಿಂದ ಪಾದಯಾತ್ರೆ ಆರಂಭ
ಈ ಮಹೋತ್ಸವದಲ್ಲಿ ಕುಂಭಾಭಿಷೇಕ ಮತ್ತು 101 ಉಚಿತ ಸಾಮೂಹಿಕ ವಿವಾಹವು ಜರುಗಲಿದ್ದು ವಧು-ವರರಿಗೆ ತಾಳಿ-ಬಟ್ಟೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಶ್ರೀ ಮಠದ ಆಡಳಿತ ಮಂಡಳಿಯವರು ಹಾಗೂ ಶ್ರೀಮಠದ ವಿದ್ಯಾಸಂಸ್ಥೆಯ ಪಿಯು ವಿಭಾಗದ ಪ್ರಾಂಶುಪಾಲರಾದ ಟಿ.ಎಂ.ದಾದಾಪೀರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಶ್ರೀ ಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಸೇವಾಸಮಿತಿಯಿಂದ ಪಾದಯಾತ್ರೆ ಆರಂಭ

ಸುದ್ದಿದಿನ,ದಾವಣಗೆರೆ: ನಗರದ ಮಟ್ಟಿಕಲ್ಲು ಬಸವೇಶ್ವರ ದೇವಸ್ಥಾನದಿಂದ ಮಂಗಳವಾರ ಬೆಳಗ್ಗೆ 7.30 ಕ್ಕೆ 80 ಭಕ್ತಾದಿಗಳು ಪಾದಯಾತ್ರೆ ಆರಂಭಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಸೇವಾ ಸಮಿತಿವತಿಯಿಂದ ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ 9ನೇವರ್ಷದ ಪಾದಯಾತ್ರೆಯನ್ನು ಮಟ್ಟಿಕಲ್ಲು ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ದಾವಣಗೆರೆ ನಗರಪಾಲಿಕೆ ಮಾಜಿ ಸದಸ್ಯರಾದ ಶ್ರೀ ರಮೇಶ್ ನಾಯ್ಕರವರು ಚಾಲನೆ ನೀಡಿದರು.
ಚನ್ನಗಿರಿ | ಕುಡಿಯುವ ನೀರಿಗೆ ರೂ.5.47 ಕೋಟಿ ಹಣ ಮಂಜೂರು: ಸಚಿವ ಭೈರತಿ ಬಸವರಾಜ್
ಪಾದಯಾತ್ರಿಗಳು ಬಾಡ, ಸಂತೇಬೆನ್ನೂರು, ಚನ್ನಗಿರಿ, ಅಜ್ಜಂಪುರ, ಕಡೂರು, ಕೊಟ್ಟಿಗೆಹಾರ, ಉಜಿರೆ ಮಾರ್ಗವಾಗಿ ಮಾರ್ಚ್ 10ನೆ ತಾರೀಖಿನಂದು ಧರ್ಮಸ್ಥಳ ತಲುಪುವರು ಈ ಪಾದಯಾತ್ರೆಗೆ ದಾವಣಗೆರೆ ಮತ್ತು ಹರಿಹರದ ಸುಮಾರು 80 ಜನ ಭಕ್ತಾದಿಗಳು ಪಾದಯಾತ್ರಿ ಸೇವಾ ಸಮಿತಿಯ ರಾಜನಾಯ್ಕ, ಶಿವಾಜಿ, ಎ.ಬಿ.ಚಂದ್ರಪ್ಪ, ವೇಣುಗೋಪಾಲ್, ಕೃಷ್ಣ, ಅರುಣ್ ಹಿರೇಮಠ ಮುಂತಾದವರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಇಂದು ಬಿಐಎಸ್ ನಿಂದ ಕಾರ್ಯಾಗಾರ

ಸುದ್ದಿದಿನ,ದಾವಣಗೆರೆ : ಮಾ.02 ರಂದು ಬೆಳಿಗ್ಗೆ 10.30 ಕ್ಕೆ ಪೂಜಾ ಇಂಟರ್ ನ್ಯಾಷನಲ್ ಹೋಟೆಲ್, ಪಿ.ಬಿ.ರೋಡ್ ದಾವಣಗೆರೆ ಇಲ್ಲಿ ಭಾರತೀಯ ಗುಣಮಟ್ಟ ಮಾನದಂಡ ಸಂಸ್ಥೆ(ಬಿಐಎಸ್), ಕೇಂದ್ರ ಸರ್ಕಾರದ ಕಚೇರಿ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ, ದಾವಣಗೆರೆ ಇವರ ಸಂಯೋಜನೆಯೊಂದಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ | ಚನ್ನಗಿರಿ | ಕುಡಿಯುವ ನೀರಿಗೆ ರೂ.5.47 ಕೋಟಿ ಹಣ ಮಂಜೂರು: ಸಚಿವ ಭೈರತಿ ಬಸವರಾಜ್
ಕಾರ್ಯಕ್ರಮದ ಉದ್ಘಾಟನೆಯನ್ನು ಲೋಕಸಭಾ ಸದಸ್ಯರು ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರುಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಜಯಪ್ರಕಾಶ ನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ರಾಜಕೀಯ6 days ago
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
-
ರಾಜಕೀಯ5 days ago
ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್
-
ರಾಜಕೀಯ6 days ago
ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ : ಮೇಯರ್ ಆಗಿ ಎಸ್.ಟಿ.ವೀರೇಶ್, ಉಪಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್
-
ಲೈಫ್ ಸ್ಟೈಲ್7 days ago
ನರದೌರ್ಬಲ್ಯ ನಿವಾರಣೆಗೆ ಬೆಳ್ಳುಳ್ಳಿ ಬಳಸಿ
-
ರಾಜಕೀಯ6 days ago
ಗುಜರಾತ್ | ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು
-
ಬಹಿರಂಗ5 days ago
ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದೇ ಮೊದಲ ತಪ್ಪು..!
-
ಸಿನಿ ಸುದ್ದಿ6 days ago
ಪೊಗರು ವಿವಾದ ಅಂತ್ಯ | ಸೀನ್ ಕಟ್ ; ಶುಭಹಾರೈಸಿದ ಬ್ರಾಹ್ಮಣ ಸಮುದಾಯ
-
ಕ್ರೀಡೆ5 days ago
ಅತಿ ಕಡಿಮೆ ಪಂದ್ಯ ; 400 ವಿಕೆಟ್ : ದಾಖಲೆ ಬರೆದ ಸ್ಪಿನ್ನರ್ ಆರ್ ಅಶ್ವಿನ್