ದಿನದ ಸುದ್ದಿ
ಮನಕಲಕುವ ಘಟನೆ | ಪತಿ – ಪತ್ನಿ ಕೊರೋನಾದಿಂದ ಸಾವು : ಒಬ್ಬ ಪುತ್ರ ಕೂಡಾ ಕೊರೋನಾದಿಂದ ಆಸ್ಪತ್ರೆಗೆ ದಾಖಲು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/09/suddidina_corona_death543.jpg&description=ಮನಕಲಕುವ ಘಟನೆ | ಪತಿ – ಪತ್ನಿ ಕೊರೋನಾದಿಂದ ಸಾವು : ಒಬ್ಬ ಪುತ್ರ ಕೂಡಾ ಕೊರೋನಾದಿಂದ ಆಸ್ಪತ್ರೆಗೆ ದಾಖಲು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/09/suddidina_corona_death543.jpg&description=ಮನಕಲಕುವ ಘಟನೆ | ಪತಿ – ಪತ್ನಿ ಕೊರೋನಾದಿಂದ ಸಾವು : ಒಬ್ಬ ಪುತ್ರ ಕೂಡಾ ಕೊರೋನಾದಿಂದ ಆಸ್ಪತ್ರೆಗೆ ದಾಖಲು', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಹಾಸನ: ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪತಿಯು ಕೊರೋನಾದಿಂದ ಸತ್ತ ಮರುದಿನವೇ ಪತ್ನಿಯೂ ಕೂಡಾ ಕೂರೋನಾ ಸೋಂಕಿನಿಂದ ಸಾವನ್ನಪ್ಪಿರುವರುವ ಘಟನೆ ಹಾಸನದಲ್ಲಿ ನಡೆದಿದೆ.
ಅಷ್ಟೇ ಅಲ್ಲದೇ ಈ ದಂಪತಿಗಳಿಗೆ ಒಬ್ಬನೇ ಮಗನಿದ್ದು, ಈಗ ಆತನೂ ಕೂಡ ಕೊರೋನಾದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಇಡೀ ಕುಟುಂಬವು ಕೊರೋನಾ ಸೋಂಕಿಗೆ ಕಂಗೆಟ್ಟು ಹೋಗಿದೆ. ಮೃತ ವ್ಯಕ್ತಿ ಮಂಜುನಾಥ ಎಂಬುವವರು ದೇವಾಲಯವೊಂದರ ಅರ್ಚರಾಗಿದ್ದರು. ಮತ್ತು ಅವರ ಪತ್ನಿ ಸ್ವರ್ಣ ಎಂಬುವವರು ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎಪ್ರಿಲ್ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೆರವಣಿಗೆ ಮಾರ್ಗ
ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆಎಸ್ಟಿಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಇಂದು ಅವರು ಮಾತನಾಡಿದರು.
ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.
ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.
ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.
ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.
ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ.
ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ4 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ5 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

