ದಿನದ ಸುದ್ದಿ
ದಾವಣಗೆರೆ | ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಕ್ವಾರಂಟೈನ್ನಲ್ಲಿದ್ದ ವ್ಯಕ್ತಿಯು ಆಸ್ಪತ್ರೆಯ ಶೌಚಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಲೂಕಿನ ಆನೆಕೊಂಡ ಕಂಟೇನ್ಮೆಂಟ್ ಪ್ರದೇಶದ ನಿವಾಸಿ ಮಂಜುನಾಥ (34) ಆತ್ಮಹತ್ಯೆ ಮಾಡಿಕೊಂಡಾತ. ಮಂಜುನಾಥ ಅವರನ್ನು ಭಾನುವಾರ ಕ್ವಾರಂಟೈನ್ ಮಾಡಲಾಗಿತ್ತು. ನಂತರ ಸ್ವಾಬ್ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243