ದಿನದ ಸುದ್ದಿ
ಶ್ವಾನಗಳ ಕೌಶಲ್ಯದಿಂದ ಕೋವಿಡ್-19 ರೋಗಿಯ ಪತ್ತೆ : ನಡೆಯುತ್ತಿದೆ ಸಂಶೋಧನೆ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/05/coronavirus_dog_Suddidina.jpg&description=ಶ್ವಾನಗಳ ಕೌಶಲ್ಯದಿಂದ ಕೋವಿಡ್-19 ರೋಗಿಯ ಪತ್ತೆ : ನಡೆಯುತ್ತಿದೆ ಸಂಶೋಧನೆ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/05/coronavirus_dog_Suddidina.jpg&description=ಶ್ವಾನಗಳ ಕೌಶಲ್ಯದಿಂದ ಕೋವಿಡ್-19 ರೋಗಿಯ ಪತ್ತೆ : ನಡೆಯುತ್ತಿದೆ ಸಂಶೋಧನೆ', 'pinterestShare', 'width=750,height=350'); return false;" title="Pin This Post">
- ಡಾ. ಕಮಲೇಶ್ ಕುಮಾರ್ ಕೆ ಎಸ್, ಪಶುವೈದ್ಯಾಧಿಕಾರಿಗಳು, ಶಿವಮೊಗ್ಗ
ನಮ್ಮ ಸಂಚರಣೆಗೆ ನಾವು ದೃಷ್ಟಿಯ ಮೇಲೆ ಹೇಗೆ ಅವಲಂಬಿತರಾಗಿರುತ್ತೇವೆಯೋ ಹಾಗೆಯೇ ಶ್ವಾನಗಳು ದೃಷ್ಟಿಯ ಜೊತೆಗೆ ಮುಖ್ಯವಾಗಿ ಅವುಗಳ ಮೂಗಿನ ಗ್ರಾಹಕಗಳ (receptors) ಮೇಲೆ ಹೆಚ್ಚು ಅವಲಂಬಿತವಾಗಿರುತ್ತವೆ. ಪ್ರಸ್ತುತ ಪ್ರಪಂಚದಾದ್ಯಂತ ಇರುವ ಸಾಕು ನಾಯಿಗಳು ತೋಳದಿಂದ ಉಗಮಗೊಂಡಿವೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.
ಕಾಡು ಪ್ರಾಣಿಗಳಾದ ತೋಳಗಳು ಸಾಮಾನ್ಯವಾಗಿ ತಮ್ಮ ನೈಸರ್ಗಿಕ ವಾಸನೆ ಗ್ರಹಿಕೆ (natural scent detection) ಕೌಶಲ್ಯದಿಂದ ಇನ್ನೊಂದು ಪ್ರಾಣಿಯನ್ನು, ತಮ್ಮ ಪ್ರದೇಶವನ್ನು ಅಥವ ಬೇಟೆಯನ್ನು ಹುಡುಕುತ್ತ ಜೀವನ ಸಾಗಿಸುತ್ತವೆ. ಇದೇ ಸಾಮರ್ಥ್ಯವು ಶ್ವಾನಗಳಿಗು ತಳೀಯವಾಗಿ (genetically) ಬಂದಿದೆ ಹಾಗೂ ನಮ್ಮ ಹಿರಿಯರು ಇದನ್ನೇ ಬಳಸಿಕೊಂಡು ತಮ್ಮ ಸಂರಕ್ಷಣೆ, ಪ್ರಾಣಿ ಬೇಟೆ ಮತ್ತು ಕುರಿಹಿಂಡು ಕಾಯುವ ಕಾವಲಿಗಾಗಿ ಬಳಸಿದ್ದಾರೆ.
ಸಾಮಾನ್ಯವಾಗಿ ಸಾಕುಪ್ರಾಣಿಯನ್ನಾಗಿ ಸಾಕುವ ಶ್ವಾನಗಳು ಬುದ್ಧಿವಂತಿಕೆ, ನೆನಪಿನ ಶಕ್ತಿ, ವಿಧೇಯತೆ, ಆಟವಾಡುವ, ಗಮನಿಸುವ ಹಾಗೂ ಪ್ರೇರಣೆ ನೀಡುವ ನೈಪುಣ್ಯತೆಯನ್ನು ಹೊಂದಿರುವುದು ನಮ್ಮೆಲ್ಲರಿಗು ತಿಳಿದಿರುವ ಸಂಗತಿ. ಇದೆಲ್ಲದಕ್ಕೂ ಮಿಗಿಲಾಗಿ ಶ್ವಾನಗಳಿಗೆ ವಾಸನೆ ಗ್ರಹಿಸುವ ಶಕ್ತಿ ಅತ್ಯಧಿಕವಾಗಿ ಇರುತ್ತದೆ. ಅವು ಮಾನವನಿಗಿಂತ ಸುಮಾರು 10,000 ದಿಂದ 1,00,000 ಪಟ್ಟು ಹೆಚ್ಚು ವಾಸನೆಯನ್ನು ಗ್ರಹಿಸುವ ಶಕ್ತಿ ಹೊಂದಿರುತ್ತವೆ ಎಂದು ವಿಜ್ಞಾನಿಗಳು ನಿರೂಪಿಸಿದ್ದಾರೆ.
ಅದರಲ್ಲೂ ಬೇಟೆಯಾಡುವ ಜಾತಿಗೆ ಸೇರಿದ ಶ್ವಾನಗಳು ಹೆಚ್ಚು ವಾಸನೆಯನ್ನು ಗ್ರಹಿಸುತ್ತವೆ. ಮನುಷ್ಯರಿಗೆ ಹೋಲಿಸಿದರೆ, ನಮಲ್ಲಿ 6 ಮಿಲಿಯನ್ ನಷ್ಟು ಇರುವ ವಾಸನೆ ಕಂಡು ಹಿಡಿಯುವ ಗ್ರಾಹಕಗಳು ಶ್ವಾನಗಳಲ್ಲಿ 300 ಮಿಲಿಯನ್ ನಷ್ಟು ಇರುತ್ತವೆ. ಅವುಗಳ ಮೂಗಿನ ಹಾಗು ಮೆದುಳಿನ (hemispheric specific brain) ರಚನೆಯು ಬಹಳಷ್ಟು ವಿಶೇಷ ಹಾಗು ವೈವಿಧ್ಯವಾಗಿರುತ್ತದೆ.
ಪ್ರಪಂಚದಾದ್ಯಂತ ಅತ್ಯುತ್ತಮವಾದ ವಾಸನೆ ಗ್ರಹಿಕೆ ಕೌಶಲ್ಯ ಹೊಂದಿರುವ ಹತ್ತು ತಳಿಯ ಶ್ವಾನಗಳು ಹೀಗಿವೆ.
- ಬ್ಲಡ್ ಹೌನ್ಡ್ (Blood hound)
- ಬಾಸೆಟ್ ಹೌನ್ಡ್ (Basset hound)
- ಬೀಗಲ್ (Beagle)
- ಜರ್ಮನ್ ಶಫರ್ಡ್ (German Shephered)
- ಲ್ಯಾಬ್ರೆಡರ್ ರಿಟ್ರೆವರ್ (Labrador Retriever
- ಬೆಲ್ಜಿಯನ್ ಮಲಿನೋಯ್ಸ್ (Belgian Malinois)
- ಬ್ಲ್ಯೂಟಿಕ್ ಕೂನ್ ಹೌನ್ಡ್ (Blue tick Coonhound)
- ಬ್ಲಾಕ್ ಅಂಡ್ ಟಾನ್ ಕೂನ್ ಹೌನ್ಡ್ (Black & tan coonhound)
- ಗೋಲ್ಡನ್ ರಿಟ್ರೆವರ್ (Golden Retriever)
- ಡಾಶ್ ಹೌನ್ಡ್ (Dachshund)
ಈ ಬೇಟೆ ತಳಿಗಳೆಲ್ಲವು ನುರಿತ ತರಬೇತುದಾರರಿಂದ ತರಬೇತಿ ಪಡೆದ ನಂತರ ಸೈನ್ಯ, ಪೊಲೀಸ್ ಇಲಾಖೆ ಹಾಗು ಬಾಂಬ್ ನಿಷ್ಕ್ರಿಯ ದಳ ಹಾಗೂ ವಿವಿಧ ಇತ್ಯಾದಿ ಕ್ಷೇತ್ರಗಳಲ್ಲಿ ತಮ್ಮ ಇರುವಿಕೆಯನ್ನು ಸಾವಿರಾರು ಉದಾಹರಣೆಗಳಿಂದ ತೋರಿಸಿವೆ. ಆದರೂ ಇದಕ್ಕೆ ಮಿಗಿಲಾಗಿ ವೈದ್ಯಕೀಯ ಕ್ಷೇತ್ರದಲ್ಲಿ ರೋಗ ಪತ್ತೆ ಹಚ್ಚುವಲ್ಲಿ ನೆರವು ನೀಡುವಲ್ಲಿ ಶ್ವಾನಗಳ ಪಾಲು ಅಪಾರ.
1980 ರಲ್ಲೇ ಕ್ಯಾನ್ಸರ್ ರೋಗವನ್ನು (ಶ್ವಾಶಕೋಶ ಹಾಗು ಸ್ಥನ ಕ್ಯಾನ್ಸರ್) 97% ನಷ್ಟು ನಿಖರತೆಯಿಂದ ಕಂಡುಹಿಡಿಯುವಲ್ಲಿ ಶ್ವಾನಗಳು ಯಶಸ್ವಿಯಾಗಿವೆ. ಮೆದುಳು ಮತ್ತು ನರಮಂಡಲಕ್ಕೆ ಸಂಬಂದಿಸಿದ ರೋಗವಾದ ಪಾರ್ಕಿನ್ಸನ್ (Parkinson) ರೋಗ, ಮಲೇರಿಯಾ (Malaria) ಹಾಗೂ ಇತರೆ ರೋಗಗಳನ್ನು ತಮ್ಮ ಚಾಣಾಕ್ಷತನದಿಂದ ಕಂಡುಹಿಡಿದಿವೆ. ಮುಖ್ಯವಾಗಿ ಶ್ವಾನಗಳು ಸೇವಿಸುವ ಆಹಾರ, ಹೊಟ್ಟೆ ಹಾಗೂ ಕರುಳಿನಲ್ಲಿನ ಸೂಕ್ಷ್ಮಾಣು ಜೀವಿಗಳು, ದೇಹದ ಸ್ಥಿತಿ ಹಾಗೂ ವೈದ್ಯಕೀಯ ಆರೈಕೆ ಅವುಗಳ ಈ ಕೌಶಲ್ಯದ ಮೇಲೆ ಪರಿಣಾಮ ಬೀರುತ್ತವೆ.
ಇಂಗ್ಲೆಂಡಿನಲ್ಲಿ ಈ ಕೌಶಲ್ಯಗಳುಳ್ಳ ಶ್ವಾನಗಳನ್ನು ಯಾವುದೇ ಲಕ್ಷಣಗಳಿಲ್ಲದ ಕೊರೊನ ವೈರಸ್ ಪೀಡಿತ ವ್ಯಕ್ತಿಯನ್ನು ಮೊದಲ ಹಂತದಲ್ಲಿ ಪತ್ತೆಹಚ್ಚುವಲ್ಲಿ ಬಳಸಲು ಸಂಶೋಧನೆ ನಡೆಯುತ್ತಿದೆ. ಉಸಿರಾಟ, ಉಗುಳು, ರಕ್ತ ಹಾಗೂ ಮೂತ್ರದಲ್ಲಿರುವ ಆವಿಯಾಗುವ ಸಾವಯವ ಸಂಯುಕ್ತಗಳನ್ನು (volatile organic compounds) ಬಳಸಿಕೊಂಡು ವಾಸನೆ ಮುದ್ರೆ (odour imprinting) ಮಾಡುತ್ತಿದ್ದಾರೆ. ಈ ರೀತಿ ಮುದ್ರೆಯಾದ ನಂತರ ಶ್ವಾನಗಳು ರೋಗ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಬಹುದು.
ಇನ್ಫಲೂಎಂಜಾ (Influenza) ರೋಗದಲ್ಲಿ ಉಸಿರಾಟದ ವಾಸನೆ ಇರುವ ರೀತಿಯಲ್ಲಿ ಕೊರೊನ ವೈರಸ್ ಪೀಡಿತರಿಗೂ ಇದ್ದಲ್ಲಿ ಅವರನ್ನು ಕಂಡುಹಿಡಿಯುವುದು ಸುಲಭವಾಗಬಹುದು ಎಂಬ ಅಭಿಪ್ರಾಯ ವಿಜ್ಞಾನಿಗಳದು. ಇಷ್ಟೆಲ್ಲಾ ಆದರೆ ಕೇವಲ ಆಸ್ಪತ್ರೆ ಅಲ್ಲದೆ ಸೂಕ್ಷ್ಮ ಪ್ರದೇಶಗಳಾದ ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಶ್ವಾನಗಳು ಕಾರ್ಯನಿರ್ವಹಿಸಬಹುದಾಗಿದೆ. ಇದು ಎಷ್ಟರಮಟ್ಟಿಗೆ ಉಪಯೋಗವಾಗುವುದೊ ಎಂದು ಕಾದು ನೋಡಬೇಕಿದೆ.
(ಡಾ. ಕಮಲೇಶ್ ಕುಮಾರ್ ಕೆ ಎಸ್,
ಪಶುವೈದ್ಯಾಧಿಕಾರಿಗಳು
ಪಶುಚಿಕಿತ್ಸಾಲಯ, ಮತ್ತೂರು,
ಶಿವಮೊಗ್ಗ
ಈ ಮೇಲ್ : kskamalesh93@gmail.com
ಫೋನ್ : 9164282969)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಇಂದು ಅವರು ಮಾತನಾಡಿದರು.
ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.
ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.
ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.
ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.
ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ.
ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ3 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ5 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ4 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ2 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ1 day agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

