ದಿನದ ಸುದ್ದಿ
ಶ್ವಾನಗಳ ಕೌಶಲ್ಯದಿಂದ ಕೋವಿಡ್-19 ರೋಗಿಯ ಪತ್ತೆ : ನಡೆಯುತ್ತಿದೆ ಸಂಶೋಧನೆ
- ಡಾ. ಕಮಲೇಶ್ ಕುಮಾರ್ ಕೆ ಎಸ್, ಪಶುವೈದ್ಯಾಧಿಕಾರಿಗಳು, ಶಿವಮೊಗ್ಗ
ನಮ್ಮ ಸಂಚರಣೆಗೆ ನಾವು ದೃಷ್ಟಿಯ ಮೇಲೆ ಹೇಗೆ ಅವಲಂಬಿತರಾಗಿರುತ್ತೇವೆಯೋ ಹಾಗೆಯೇ ಶ್ವಾನಗಳು ದೃಷ್ಟಿಯ ಜೊತೆಗೆ ಮುಖ್ಯವಾಗಿ ಅವುಗಳ ಮೂಗಿನ ಗ್ರಾಹಕಗಳ (receptors) ಮೇಲೆ ಹೆಚ್ಚು ಅವಲಂಬಿತವಾಗಿರುತ್ತವೆ. ಪ್ರಸ್ತುತ ಪ್ರಪಂಚದಾದ್ಯಂತ ಇರುವ ಸಾಕು ನಾಯಿಗಳು ತೋಳದಿಂದ ಉಗಮಗೊಂಡಿವೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.
ಕಾಡು ಪ್ರಾಣಿಗಳಾದ ತೋಳಗಳು ಸಾಮಾನ್ಯವಾಗಿ ತಮ್ಮ ನೈಸರ್ಗಿಕ ವಾಸನೆ ಗ್ರಹಿಕೆ (natural scent detection) ಕೌಶಲ್ಯದಿಂದ ಇನ್ನೊಂದು ಪ್ರಾಣಿಯನ್ನು, ತಮ್ಮ ಪ್ರದೇಶವನ್ನು ಅಥವ ಬೇಟೆಯನ್ನು ಹುಡುಕುತ್ತ ಜೀವನ ಸಾಗಿಸುತ್ತವೆ. ಇದೇ ಸಾಮರ್ಥ್ಯವು ಶ್ವಾನಗಳಿಗು ತಳೀಯವಾಗಿ (genetically) ಬಂದಿದೆ ಹಾಗೂ ನಮ್ಮ ಹಿರಿಯರು ಇದನ್ನೇ ಬಳಸಿಕೊಂಡು ತಮ್ಮ ಸಂರಕ್ಷಣೆ, ಪ್ರಾಣಿ ಬೇಟೆ ಮತ್ತು ಕುರಿಹಿಂಡು ಕಾಯುವ ಕಾವಲಿಗಾಗಿ ಬಳಸಿದ್ದಾರೆ.
ಸಾಮಾನ್ಯವಾಗಿ ಸಾಕುಪ್ರಾಣಿಯನ್ನಾಗಿ ಸಾಕುವ ಶ್ವಾನಗಳು ಬುದ್ಧಿವಂತಿಕೆ, ನೆನಪಿನ ಶಕ್ತಿ, ವಿಧೇಯತೆ, ಆಟವಾಡುವ, ಗಮನಿಸುವ ಹಾಗೂ ಪ್ರೇರಣೆ ನೀಡುವ ನೈಪುಣ್ಯತೆಯನ್ನು ಹೊಂದಿರುವುದು ನಮ್ಮೆಲ್ಲರಿಗು ತಿಳಿದಿರುವ ಸಂಗತಿ. ಇದೆಲ್ಲದಕ್ಕೂ ಮಿಗಿಲಾಗಿ ಶ್ವಾನಗಳಿಗೆ ವಾಸನೆ ಗ್ರಹಿಸುವ ಶಕ್ತಿ ಅತ್ಯಧಿಕವಾಗಿ ಇರುತ್ತದೆ. ಅವು ಮಾನವನಿಗಿಂತ ಸುಮಾರು 10,000 ದಿಂದ 1,00,000 ಪಟ್ಟು ಹೆಚ್ಚು ವಾಸನೆಯನ್ನು ಗ್ರಹಿಸುವ ಶಕ್ತಿ ಹೊಂದಿರುತ್ತವೆ ಎಂದು ವಿಜ್ಞಾನಿಗಳು ನಿರೂಪಿಸಿದ್ದಾರೆ.
ಅದರಲ್ಲೂ ಬೇಟೆಯಾಡುವ ಜಾತಿಗೆ ಸೇರಿದ ಶ್ವಾನಗಳು ಹೆಚ್ಚು ವಾಸನೆಯನ್ನು ಗ್ರಹಿಸುತ್ತವೆ. ಮನುಷ್ಯರಿಗೆ ಹೋಲಿಸಿದರೆ, ನಮಲ್ಲಿ 6 ಮಿಲಿಯನ್ ನಷ್ಟು ಇರುವ ವಾಸನೆ ಕಂಡು ಹಿಡಿಯುವ ಗ್ರಾಹಕಗಳು ಶ್ವಾನಗಳಲ್ಲಿ 300 ಮಿಲಿಯನ್ ನಷ್ಟು ಇರುತ್ತವೆ. ಅವುಗಳ ಮೂಗಿನ ಹಾಗು ಮೆದುಳಿನ (hemispheric specific brain) ರಚನೆಯು ಬಹಳಷ್ಟು ವಿಶೇಷ ಹಾಗು ವೈವಿಧ್ಯವಾಗಿರುತ್ತದೆ.
ಪ್ರಪಂಚದಾದ್ಯಂತ ಅತ್ಯುತ್ತಮವಾದ ವಾಸನೆ ಗ್ರಹಿಕೆ ಕೌಶಲ್ಯ ಹೊಂದಿರುವ ಹತ್ತು ತಳಿಯ ಶ್ವಾನಗಳು ಹೀಗಿವೆ.
- ಬ್ಲಡ್ ಹೌನ್ಡ್ (Blood hound)
- ಬಾಸೆಟ್ ಹೌನ್ಡ್ (Basset hound)
- ಬೀಗಲ್ (Beagle)
- ಜರ್ಮನ್ ಶಫರ್ಡ್ (German Shephered)
- ಲ್ಯಾಬ್ರೆಡರ್ ರಿಟ್ರೆವರ್ (Labrador Retriever
- ಬೆಲ್ಜಿಯನ್ ಮಲಿನೋಯ್ಸ್ (Belgian Malinois)
- ಬ್ಲ್ಯೂಟಿಕ್ ಕೂನ್ ಹೌನ್ಡ್ (Blue tick Coonhound)
- ಬ್ಲಾಕ್ ಅಂಡ್ ಟಾನ್ ಕೂನ್ ಹೌನ್ಡ್ (Black & tan coonhound)
- ಗೋಲ್ಡನ್ ರಿಟ್ರೆವರ್ (Golden Retriever)
- ಡಾಶ್ ಹೌನ್ಡ್ (Dachshund)
ಈ ಬೇಟೆ ತಳಿಗಳೆಲ್ಲವು ನುರಿತ ತರಬೇತುದಾರರಿಂದ ತರಬೇತಿ ಪಡೆದ ನಂತರ ಸೈನ್ಯ, ಪೊಲೀಸ್ ಇಲಾಖೆ ಹಾಗು ಬಾಂಬ್ ನಿಷ್ಕ್ರಿಯ ದಳ ಹಾಗೂ ವಿವಿಧ ಇತ್ಯಾದಿ ಕ್ಷೇತ್ರಗಳಲ್ಲಿ ತಮ್ಮ ಇರುವಿಕೆಯನ್ನು ಸಾವಿರಾರು ಉದಾಹರಣೆಗಳಿಂದ ತೋರಿಸಿವೆ. ಆದರೂ ಇದಕ್ಕೆ ಮಿಗಿಲಾಗಿ ವೈದ್ಯಕೀಯ ಕ್ಷೇತ್ರದಲ್ಲಿ ರೋಗ ಪತ್ತೆ ಹಚ್ಚುವಲ್ಲಿ ನೆರವು ನೀಡುವಲ್ಲಿ ಶ್ವಾನಗಳ ಪಾಲು ಅಪಾರ.
1980 ರಲ್ಲೇ ಕ್ಯಾನ್ಸರ್ ರೋಗವನ್ನು (ಶ್ವಾಶಕೋಶ ಹಾಗು ಸ್ಥನ ಕ್ಯಾನ್ಸರ್) 97% ನಷ್ಟು ನಿಖರತೆಯಿಂದ ಕಂಡುಹಿಡಿಯುವಲ್ಲಿ ಶ್ವಾನಗಳು ಯಶಸ್ವಿಯಾಗಿವೆ. ಮೆದುಳು ಮತ್ತು ನರಮಂಡಲಕ್ಕೆ ಸಂಬಂದಿಸಿದ ರೋಗವಾದ ಪಾರ್ಕಿನ್ಸನ್ (Parkinson) ರೋಗ, ಮಲೇರಿಯಾ (Malaria) ಹಾಗೂ ಇತರೆ ರೋಗಗಳನ್ನು ತಮ್ಮ ಚಾಣಾಕ್ಷತನದಿಂದ ಕಂಡುಹಿಡಿದಿವೆ. ಮುಖ್ಯವಾಗಿ ಶ್ವಾನಗಳು ಸೇವಿಸುವ ಆಹಾರ, ಹೊಟ್ಟೆ ಹಾಗೂ ಕರುಳಿನಲ್ಲಿನ ಸೂಕ್ಷ್ಮಾಣು ಜೀವಿಗಳು, ದೇಹದ ಸ್ಥಿತಿ ಹಾಗೂ ವೈದ್ಯಕೀಯ ಆರೈಕೆ ಅವುಗಳ ಈ ಕೌಶಲ್ಯದ ಮೇಲೆ ಪರಿಣಾಮ ಬೀರುತ್ತವೆ.
ಇಂಗ್ಲೆಂಡಿನಲ್ಲಿ ಈ ಕೌಶಲ್ಯಗಳುಳ್ಳ ಶ್ವಾನಗಳನ್ನು ಯಾವುದೇ ಲಕ್ಷಣಗಳಿಲ್ಲದ ಕೊರೊನ ವೈರಸ್ ಪೀಡಿತ ವ್ಯಕ್ತಿಯನ್ನು ಮೊದಲ ಹಂತದಲ್ಲಿ ಪತ್ತೆಹಚ್ಚುವಲ್ಲಿ ಬಳಸಲು ಸಂಶೋಧನೆ ನಡೆಯುತ್ತಿದೆ. ಉಸಿರಾಟ, ಉಗುಳು, ರಕ್ತ ಹಾಗೂ ಮೂತ್ರದಲ್ಲಿರುವ ಆವಿಯಾಗುವ ಸಾವಯವ ಸಂಯುಕ್ತಗಳನ್ನು (volatile organic compounds) ಬಳಸಿಕೊಂಡು ವಾಸನೆ ಮುದ್ರೆ (odour imprinting) ಮಾಡುತ್ತಿದ್ದಾರೆ. ಈ ರೀತಿ ಮುದ್ರೆಯಾದ ನಂತರ ಶ್ವಾನಗಳು ರೋಗ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಬಹುದು.
ಇನ್ಫಲೂಎಂಜಾ (Influenza) ರೋಗದಲ್ಲಿ ಉಸಿರಾಟದ ವಾಸನೆ ಇರುವ ರೀತಿಯಲ್ಲಿ ಕೊರೊನ ವೈರಸ್ ಪೀಡಿತರಿಗೂ ಇದ್ದಲ್ಲಿ ಅವರನ್ನು ಕಂಡುಹಿಡಿಯುವುದು ಸುಲಭವಾಗಬಹುದು ಎಂಬ ಅಭಿಪ್ರಾಯ ವಿಜ್ಞಾನಿಗಳದು. ಇಷ್ಟೆಲ್ಲಾ ಆದರೆ ಕೇವಲ ಆಸ್ಪತ್ರೆ ಅಲ್ಲದೆ ಸೂಕ್ಷ್ಮ ಪ್ರದೇಶಗಳಾದ ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಶ್ವಾನಗಳು ಕಾರ್ಯನಿರ್ವಹಿಸಬಹುದಾಗಿದೆ. ಇದು ಎಷ್ಟರಮಟ್ಟಿಗೆ ಉಪಯೋಗವಾಗುವುದೊ ಎಂದು ಕಾದು ನೋಡಬೇಕಿದೆ.
(ಡಾ. ಕಮಲೇಶ್ ಕುಮಾರ್ ಕೆ ಎಸ್,
ಪಶುವೈದ್ಯಾಧಿಕಾರಿಗಳು
ಪಶುಚಿಕಿತ್ಸಾಲಯ, ಮತ್ತೂರು,
ಶಿವಮೊಗ್ಗ
ಈ ಮೇಲ್ : kskamalesh93@gmail.com
ಫೋನ್ : 9164282969)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.
ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.
ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.
ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ7 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ7 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ4 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ4 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ4 days agoಕವಿತೆ | ದೇವರ ಹೂವು
-
ದಿನದ ಸುದ್ದಿ6 days agoಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
-
ದಿನದ ಸುದ್ದಿ2 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

