ದಿನದ ಸುದ್ದಿ
ಕೋವಿಡ್-19 ವ್ಯಾಕ್ಸಿನೇಷನ್ ; ರಾಜ್ಯಪಾಲರಿಂದ ಮೊಬೈಲ್ ವ್ಯಾನ್ ಅಭಿಯಾನ ಉದ್ಘಾಟನೆ
ಸುದ್ದಿದಿನ,ಬೆಂಗಳೂರು : ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ. ಥಾವರ್ಚಂದ್ ಗೆಹೋಟ್ ಅವರು COVID 19 ವ್ಯಾಕ್ಸಿನೇಷನ್ ಕುರಿತು ಮೊಬೈಲ್ ವ್ಯಾನ್ ಅಭಿಯಾನವನ್ನು ಪ್ರಾರಂಭಿಸಿದರು ಮತ್ತು ಸೇವ್ ದಿ ಚಿಲ್ಮನ್ ಮತ್ತು BBC ಮೀಡಿಯಾ ಆಕ್ಷನ್, ಇಂಡಿಯಾ ಸಹಯೋಗದೊಂದಿಗೆ ‘ಲಸಿಕ ವಿಶ್ವಾಸ’ ಚಲನಚಿತ್ರವನ್ನು ಬಿಡುಗಡೆ ಮಾಡಿದರು.
ಬಿಡುಗಡ ಸಮಾರಂಭವು ಡಿಸೆಂಬರ್ 21 ರಂದು ಬೆಂಗಳೂರಿನ ರಾಜಭವನದಲ್ಲಿ ನಾಲ್ಕು ಮಕ್ಕಳ ಉಪಸ್ಥಿತಿಯಲ್ಲಿ ನಡೆಯಿತು – ವಿಷು (12), ಸಂಗೀತ (14), ಉಮಾಬಾಯಿ (14) ಮತ್ತು ಸತೀಶ್ (13) – ತ್ಯಾಜ್ಯ ಆರಿಸುವ ಸಮುದಾಯದಿಂದ:ಶ್ರೀ. ಜತಿನ್ ಮೊಂದಾರ್, ಉಪ ನಿರ್ದೇಶಕ ಸತ್ ಹಬ್, ಸೇವ್ ದಿ ಚಿಲ್ಮನ್, ಶ್ರೀಮತಿ, ಲಕ್ಷ್ಮಿ ಪಟ್ನಾಬಿ ರಾಮನ್, ಕಾರ್ಯನಿರ್ವಾಹಕ ನಿರ್ದೇಶಕರು, ಸಾಮೂಹಿಕ ಶಕ್ತಿ ದಿ/ನಡ್ ಫೌಂಡೇಶನ್: ಶ್ರೀ ಕುಮಾರ್ ನಿಶಾಂತ್, ಪ್ರಾಜೆಕ್ಟ್ ಮುಖ್ಯಸ – ಪ್ರೈಡ್, ಬಿಬಿಸಿ ಮೀಡಿಯಾ ಆಕ್ಷನ್, ಇಂಡಿಯಾ ಮತ್ತು ಶ್ರೀ. ಎನ್.ಎಂ.ಚಂದ್ರಶೇಖರ, ಸೀನಿಯರ್ ಮ್ಯಾನೇಜರ್ – ಕರ್ನಾಟಕ ಮತ್ತು ತಮಿಳುನಾಡು, ಸೇವ್ ದಿ ಚಿಲ್ಡ್ರನ್
ಈ ಚಲನಚಿತ್ರವು ಸೇವ್ ದಿ ಚಿಲ್ಮನ್ ಮತ್ತು BBC ಮೀಡಿಯಾ ಆಕ್ಷನ್, ಇಂಡಿಯಾ ನಡುವಿನ ಸಹಯೋಗವಾಗಿದೆ. BBC ಮೀಡಿಯಾ ಆಕ್ಷನ್ನಿಂದ ರಚಿಸಲ್ಪಟ್ಟ ಈ ಚಲನಚಿತ್ರವು ಸಮುದಾಯದಲ್ಲಿ ಕಂಡುಬರುವ ತಪ್ಪು ಗ್ರಹಿಕೆಗಳು ಮತ್ತು ಭಯಗಳನ್ನು ಹೋಗಲಾಡಿಸುವ ಗುರಿಯನ್ನು ಹೊಂದಿದೆ ಮತ್ತು ಅಂತಿಮವಾಗಿ, COVID-19 ಲಸಿಕೆಗಳ ಮೇಲೆ ಅವರ ವಿಶ್ವಾಸವನ್ನು ನಿರ್ಮಿಸುತ್ತದೆ. ಚಿತ್ರದಲ್ಲಿ, ಮಕ್ಕಳು COVID 19 ಲಸಿಕೆ ಬಗ್ಗೆ ವದಂತಿಗಳಿಗೆ ಗಮನ ಕೊಡಬೇಡಿ, ಬದಲಿಗೆ ವೈದ್ಯರಿಗೆ ಕಿವಿಗೊಡುವಂತೆ ವಯಸ್ಕರಿಗೆ ಭಾವೋದ್ರಿಕ ಮನವಿಯನ್ನು ಮಾಡುತ್ತಾರೆ.
ಸೇವ್ ದಿ ಚಿಲ್ಮನ್, ಸಮಗ್ರ ಶಿಕ್ಷಣ-ಕರ್ನಾಟಕ, ಕರ್ನಾಟಕ ಸರ್ಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಬೆಂಗಳೂರು ನಗರದ ತ್ಯಾಜ್ಯ ಆರಿಸುವ ಕುಟುಂಬಗಳು ಮತ್ತು ನೆರೆಯ ಸಮುದಾಯಗಳ ಮಕ್ಕಳ ಕಲಿಕೆಯ ಅಗತ್ಯತೆಗಳು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಪರಿಹರಿಸಲು ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. H&M ಫೌಂಡೇಶನ್ನಿಂದ ಧನಸಹಾಯ ಪಡೆದಿರುವ ಈ ಯೋಜನೆಯು ಸಾಮೂಹಿಕ ಶಕ್ತಿ ಉಪಕ್ರಮದ ಭಾಗವಾಗಿದೆ.
ಸೇವ್ ಡಿ ಚಿಲ್ಟನ್ ಸಂಸ್ಥೆ ಮತ್ತು 8 ಜ ಸಿ ಮೀಡಿಯಾ ಆಕ್ಷನ್ ಜೊತೆಗೆ ಸಮೂಹಿಕ ಶಕ್ತಿ ಯೋಜನೆಯಡಿಯಲ್ಲಿ ಇತರೇ ಪಾಲುದಾರ ಸಂಸ್ಥೆಗಳಾದ ಕೇರ್ ಇಂಡಿಯಾ, ಹಸಿರು ದಳ, ಲೇಬರ್ ನೆಟ್ ಮೂಲಕ ಸಂಭವ್, ಸೋಶಿಯಲ್ ಆಲ್ಫಾ, ದಿ ನಡ್ ಪೌಂಡೇಶನ್ ಮತ್ತು ವಾಟರ್ ಎಡ್ ಇಂಡಿಯಾ ಸಂಸ್ಥೆಗಳು ಬೆಂಗಳೂಲನಲ್ಲಿ ತ್ಯಾಜ್ಯ ಆಯುವ ಸಮುದಾಯವು ಸುರಕ್ಷಿತ ಮತ್ತು ಗೌರವಯುತ ಜೀವನವನ್ನು ನಡೆಸಲು ಈ ಸಂಸ್ಥೆಗಳ ಕಾರ್ಯಗಳು/ ಸಹಯೋಗವು ಒಂದು ಸಮಗ್ರ ವಿಧಾನವಾಣದೆ.
ಸೇವ್ ದಿ ಚಿಲ್ಮನ್ 9300+ ಹೆಚ್ಚು ಅಂಚಿನಲ್ಲಿರುವ ಮಕ್ಕಳಿಗೆ (3-18 ವರ್ಷಗಳು ಅನುಕೂಲಕರ ಕಲಿಕೆಯ ವಾತಾವರಣವನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯು ಸಮಗ್ರ ಮಕ್ಕಳ ಸ್ನೇಹಿಹಿ ನೈರ್ಮಲ, ಕೈ ತೊಳೆಯುವುದು ಮತ್ತು ಸುರಕ್ಷಿತ ಕುಡಿಯುವ ನೀರಿನೊಂದಿಗೆ ಗುಣಮಟ್ಟದ ಮೂಲಭೂತ ಶಿಕ್ಷಣದ ಪುವೇಶವನ್ನು ಖಚಿತಪಡಿಸುತ್ತದೆ. ಈ ರೀತಿ ಒಟ್ಟು 30 ಘಂ ಗಳ ಕಾರ್ಯ ನಿರ್ವಹಿಸಲಾಗುತ್ತಿದೆ.
ಮುಂದಿನ 30 ದಿನಗಳಲ್ಲಿ, 50,000 ಸಮುದಾಯದ ಸದಸ್ಯರಲ್ಲಿ ಜಾಗೃತಿ ಮೂಡಿಸುವ ಗುರಿಯೊಂದಿಗೆ 12,000 ಮನೆಗಳಿಗೆ ಮೊಬೈಲ್ ವ್ಯಾನ್ ತಲುವಲಿದೆ. ಅಭಿಯಾನದ ಅವಧಿಯಲ್ಲಿ ಲಸಿಕೆ ಶಿಬಿರಗಳನ್ನು ಆಯೋಜಿಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಹಭಾಲದೊಂಬಿಗೆ ಅನುಷ್ಠಾನಗೊಲಸುವ ತಂತ್ರ ಇದಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ತಾವರಚಂದ್ ಗೆಹೋಟ್, ಬೆಂಗಳೂರಿನ 3 ಕಂ ಗಳು ತಲುಪಲು ಕಷ್ಟಕರವಾದ ಸ್ಥಳಗಳಲ್ಲಿ ವ್ಯಾನ್ ಓಡಲಿದೆ ಮತ್ತು ಸಮುದಾಯ ಮಟ್ಟದಲ್ಲಿ COVID-19 ಲಸಿಕೆ ಶಿಬಿರಗಳನ್ನು ಆಯೋಜಿಸಲು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದೊಂದಿಗೆ ಸಹಕರಿಸಿರುವುದು ನನಗೆ ಖುಷಿ ತಂದಿದೆ. ಸಾಮೂಹಿಕ ಕ್ರಿಯೆಯು ನಮ್ಮ ಅಂತಿಮ ಗುರಿಯನ್ನು ತಲುಪುವ ಮಾರ್ಗವಾಗಿದೆ. ಮಕ್ಕಳೊಂದ ಲಸಿಕೆ ವಿಶ್ವಾಸ’ ಕಿರುಚಿತ್ರವನ್ನು ರಚಿಸಿದ್ದಕ್ಕಾಗಿ ಮತ್ತು ಅವರನ್ನು ಚಿತ್ರೀಕರಣ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ನಾನು BBC ಮೀಡಿಯಾ ಆಕ್ಷನ್ಗೆ ಧನ್ಯವಾದ ಹೇಳುತ್ತೇನೆ.
ಸೇವ್ ದಿ ಚಿಲ್ಮನ್ನ ಸೌತ್ ಹಬ್ನ ಉಪನಿರ್ದೇಶಕ ಶ್ರೀ ಜತಿನ್ ಮೊಂದಾರ್ ಮಾತನಾಡಿ, ”ತಾಜ್ಯ ಆಯುವ ಕುಟುಂಬಗಳು ಮತ್ತು ಅವರ ಮಕ್ಕಳು ಎದುರಿಸುತ್ತಿರುವ ಸವಾಲುಗಳು ವಿಭಿನ್ನವಾಗಿದ್ದು, ಸೇವ್ ದಿ ಚಿಲ್ಮನ್ನಲ್ಲಿ ನಾವು ಯಾವಾಗಲೂ ಪರಿಹಾರದ ಭಾಗವಾಗಿರಲು ಆಯ್ಕೆ ಮಾಡಿದ್ದೇವೆ ಮತ್ತು ಸಹ-ಬದ್ಧತೆ ಮತ್ತು ದೃಢೀಕರಣದ ಕ್ರಮಕ್ಕಾಗಿ ಒಟ್ಟಾಗಿ ಬರಲು ಎಲ್ಲಾ ಇತರ ಮಧ್ಯಸಗಾರರಿಗೆ ಕರೆ ನೀಡುತ್ತೇವೆ. ಶ್ರೀಗಳು ಪುಚಾರದ ಪ್ರಾರಂಭದಲ್ಲಿ ಭಾಗವಹಿಸಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ತಾವರ್ಚಂದ್ ಗೆಹೋಟ್, ಗೌರವಾನ್ವಿತ ಕರ್ನಾಟಕ ರಾಜ್ಯಪಾಲರು ಮತ್ತು ಬಿಬಿಸಿ ಮೀಡಿಯಾ ಆಕ್ಷನ್, BBC ಮೀಡಿಯಾ ಆಕ್ಷನ್ ರಚಿಸಿದ ಚಲನಚಿತ್ರವು 2 ಡೋಸ್ COVID-19 ವ್ಯಾಕ್ಸಿನೇಷನ್ ಅನ್ನು ಪಡೆಯಲು ಪ್ರತಿಯೊಬ್ಬ ಪೋಷಕರು ಮತ್ತು ಸಮುದಾಯದ ಸದಸ್ಯರನ್ನು ಪ್ರೇರೇಪಿಸುತ್ತದೆ ಎಂದು ನನಗೆ ಖಾತ್ರಿಯಿದ
ಚಿತ್ರದ ಕುರಿತು ಮಾತನಾಡಿದ ಬಿಬಿಸಿ ಮೀಡಿಯಾ ಆಕ್ಷನ್ನ ಗೋಬಲ್ ಕ್ರಿಯೇಟಿವ್ ಅಪ್ರೈಸರ್ ರಾಧಾರಾಣಿ ಮಿತಾ, ‘ಬಿಬಿಸಿ ಮೀಡಿಯಾ ಆಕ್ಷನ್ನಲ್ಲಿ ನಾವು ಈ ಚಿತ್ರವನ್ನು ರಚಿಸುವ ಮೂಲಕ ಮಧ್ಯಸ್ಥಿಕೆಯನ್ನು ಬಲಪಡಿಸಲು ಸೇವ್ ದಿ ಚಿಲ್ಮನ್ನೊಂದಿಗೆ ಸಹಕರಿಸಿದ್ದಕ್ಕಾಗಿ ನಿಜವಾಗಿಯೂ ಸಂತೋಷವಾಗಿದೆ. ವಯಸ್ಕರು ವೈದ್ಯರ ಸಲಹೆಯನ್ನು ಆಲಿಸಬೇಕು ಮತ್ತು COVTD-19 ಲಸಿಕೆಯನ್ನು ವಿಳಂಬ ಮಾಡಬಾರದು ಎಂಬ ಪ್ರಮುಖ ಸಂದೇಶವನ್ನು ಮಕ್ಕಳು ಉತ್ತಮವಾಗಿ ತಲುಪಿಸುತ್ತಾರೆ, ಏಕೆಂದರೆ ಅವರು ತಮ್ಮ ಪೋಷಕರು ಮತ್ತು ಹಿರಿಯರ ಮೇಲೆ ಪ್ರಭಾವ ಬೀರುವ ಸಾಮಾರ್ಗವನ್ನು ಹೊಂದಿದ್ದಾರೆ – ಮತ್ತು ಇದು ಚಲನಚಿತ್ರ ಕಲ್ಪನೆಯ ಹಿಂದಿನ ವಿಮರ್ಶಾತ್ಮಕ ಒಳನೋಟವಾ ಗಿದ್ದು, ಚಿತ್ರದಲ್ಲಿ ನಾವು ಸಮುದಾಯದ ಮಕ್ಕಳನ್ನು ಹೊಂದಿದ್ದೇವ ಎಂಬುದಕ್ಕೆ ನನಗೆ ವಿಶೇಷವಾಗಿ ಸಂತೋಷವಾಗಿದೆ ಅವರ ನಂಬಿಕೆ, ಶಕ್ತಿ ಮತ್ತು ಅವರು ಏನು ಮಾಡುತ್ತಿದ್ದಾರೆ ಎಂಬ ಉತ್ಸಾಹವು ನಿಜವಾಗಿಯೂ ನಮಗೆ ಸ್ಫೂರ್ತಿದಾಯಕವಾಗಿದೆ. ಬೆಂಗಳೂರಿನ ತ್ಯಾಜ್ಯ ಆಯುವ ರಾಯದ ಜನರಿಗೆ ಲಸಿಕೆ ಹಾಕಲು ಚಲನಚಿತ್ರವು ಪ್ರೇರ ಪಿಸುತ್ತದೆ ಎಂದ ನಾವು ಭಾವಿಸುತ್ತೇವೆ.
ನಾವು ಸ್ವಚ್ಛ ಮತ್ತು ಆರೋಗ್ಯಕರ ಪರಿಸರದಲ್ಲಿ ವಾಸಿಸುತ್ತೇವೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ಅನೌಪಚಾರಿಕ ತ್ಯಾಜ್ಯವನ್ನು ಆಯುವವರು ಪ್ರಮುಖ ಪಾತ್ರ ವಹಿಸುತ್ತಾರೆ. ಆದ್ದರಿಂದ, ಈ ಸವಾಲಿನ ಸಮಯದಲ್ಲಿ ಅವರು ಸುರಕ್ಷಿತವಾಗಿರುವುದು ಮುಖ್ಯವಾಗಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.




