ದಿನದ ಸುದ್ದಿ
ಟಿ.ನರಸೀಪುರ | ಕೋವಿಡ್ ರೋಗಿಗಳಿಗೆ ಪೌಷ್ಟಿಕ ಆಹಾರ ನೀಡುತ್ತಿಲ್ಲ : ತಾ.ಪಂ. ಸದಸ್ಯರ ಆರೋಪ
ಸುದ್ದಿದಿನ,ಟಿ. ನರಸೀಪುರ: ಕೋವಿಡ್ ಉಪಕೇಂದ್ರದಲ್ಲಿ ರೋಗಿಗಳಿಗೆ ಒಳ್ಳೆಯ ಆಹಾರ ನೀಡುತ್ತಿಲ್ಲವಾದ್ದರಿಂದ ಇದರ ಹೊಣೆಯನ್ನು ತಾಲ್ಲೂಕು ಆಡಳಿತ ಹೊರಬೇಕೆಂದು ತಾ.ಪಂ. ಸದಸ್ಯರುಗಳಾದ ರಾಮಲಿಂಗಯ್ಯ ಹಾಗೂ ಕುಕ್ಕೂರು ಗಣೇಶ್ ಆಕ್ರೋಶ ವ್ಯಕ್ತಪಡಿಸಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರೆದಿದ್ದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ತಾಲ್ಲೂಕು ಆಡಳಿತ ವರ್ಗ ಕೂಡ್ಲೂರು ಗ್ರಾಮದಲ್ಲಿರುವ ಕೋವಿಡ್ ಉಪಕೇಂದ್ರದಲ್ಲಿ ಕೊರೊನಾ ಸೋಂಕಿತರಿಗೆ ಬಿಸಿಯಿಂದ ಕೂಡಿದ ಒಳ್ಳೆಯ ಊಟ ಉಪಚಾರ ನೀಡದೆ ತಾತ್ಸಾರ ಮನೋಭಾವನೆಯಿಂದ ಕಾಣಲಾಗುತ್ತಿದ್ದು, ಸೇವೆ ಮಾಡಲು ಇಷ್ಟವಿಲ್ಲದಿದ್ದರೆ ಅಧಿಕಾರಿಗಳು ಹೊರ ನಡೆಯಬೇಕೆಂದು ಆಕ್ರೋಶದ ನುಡಿಗಳನ್ನಾಡಿ, ಇದಕ್ಕೆ ತಹಶಿಲ್ದಾರ್ರವರು ಉತ್ತರ ನೀಡಬೇಕೆಂದರು.
ತಹಶಿಲ್ದಾರ್ ಡಿ. ನಾಗೇಶ್ ಮಾತನಾಡಿ, ಊಟ-ತಿಂಡಿಯ ಲೋಪದೋಷದ ಬಗ್ಗೆ ಸಭೆಯ ಗಮನಕ್ಕೆ ತಂದಿರುವುದರಿಂದ ಈಗಾಗಲೆ ನೀಡುತ್ತಿದ್ದ ಕೇಟರಿಂಗ್ರವರನ್ನು ಬಸಲಾಯಿಸಿ ತತಕ್ಷಣದಿಂದಲೇ ಬೇರೆಯವರಿಗೆ ಗುತ್ತಿಗೆ ನೀಡಲಾಗುವುದು. ಇನ್ನು ಮುಂದೆ ಈ ವಿಷಯವಾಗಿ ದೂರುಗಳು ಬಾರದ ಹಾಗೆ ಕ್ರಮ ವಹಿಸುವುದಾಗಿ ಸಭೆಯಲ್ಲಿ ಸ್ಪಷ್ಟಪಡಿಸಿದಾಗ ಆ ವಿಷಯವನ್ನು ಅಂತ್ಯಗೊಳಿಸಲಾಯಿತು.
ವಿಶೇಷ ಕಾರ್ಯಾಗಾರ: ಕಳೆದ 2 ವರ್ಷಗಳಿಂದ ಎಸ್ಎಸ್ಎಲ್ಸಿಯಲ್ಲಿ ಮೈಸೂರು ಜಿಲ್ಲೆಯಲ್ಲೇ ಅತ್ಯಂತ ಕಡಿಮೆ ಫಲಿತಾಂಶ ಟಿ. ನರಸೀಪುರ ತಾಲ್ಲೂಕಿನದ್ದಾಗಿದ್ದು, ಇದು ತಲೆ ತಗ್ಗಿಸುವ ವಿಚಾರವಾಗಿದೆ. 2020-21ನೇ ಸಾಲಿನಲ್ಲಿ ಉತ್ತಮ ಫಲಿತಾಂಶ ಬರಲು ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರಿಗೆ ಕಾರ್ಯಾಗಾರವನ್ನು ಏರ್ಪಡಿಸಿ ಉತ್ತಮಗೊಳಿಸಲು ಸಜ್ಜಾಗುತ್ತಿದ್ದೇವೆಂದು ಬಿಇಒ ಮರಿಸ್ವಾಮಿ ಸಭೆಯ ಗಮನಕ್ಕೆ ತಂದರು.
ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಖಾಸಗಿ ಶಾಲೆಗಳಿಂದ 619 ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದು, ಕೆಲವು ಕಡೆ ಕೆಲವು ವರ್ಷಗಳಿಂದ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬರುತ್ತಿರುವುದು ಸಹ ಕಾರಣವಾಗಿರಬಹುದೆಂದು ತಿಳಿಸಿದರು.
ರಾಜಕಾರಣಿಗಳಾಗಿ: ಕೆಲವು ಸರ್ಕಾರಿ ಶಾಲಾ ಶಿಕ್ಷಕರು ಬೋಧನೆ ಮಾಡುವ ಬದಲು ರಾಜಕಾರಣದ ಕಡೆ ಹೆಚ್ಚು ಒಲವನ್ನು ತೋರುತ್ತಿದ್ದು, ಶಾಲಾ ಅವಧಿಯಲ್ಲಿ ಖಾಸಗಿ ದರ್ಬಾರ್ ನಡೆಸುತ್ತಿದ್ದಾರೆ.
ಇವರು ಸಂಪೂರ್ಣವಾಗಿ ಶಿಕ್ಷಕ ವೃತ್ತಿಯನ್ನು ಮಾಡದೆ ಇತ್ತ ರಾಜಕಾರಣದಲ್ಲೂ ತೊಡಗಿಸಿಕೊಳ್ಳದೆ ಎರಡು ದೋಣಿಯ ಮೇಲೆ ಕಾಲಿಟ್ಟು ಸಾಗುತ್ತಿದ್ದು, ಮಕ್ಕಳಿಗೆ ಅವರು ತೆಗೆದುಕೊಳ್ಳುವ ವಿಷಯದ ಬಗ್ಗೆ ಒಳ್ಳೆಯ ಶಿಕ್ಷಣ ದೊರೆಯುತ್ತಿಲ್ಲ. ಹಾಗಾಗಿ ಸಂಪೂರ್ಣವಾಗಿ ರಾಜಕಾರಣದಲ್ಲಿ ತೊಡಗಿಸಿಕೊಳ್ಳುವಂತೆ ಸದಸ್ಯ ಕುಕ್ಕೂರು ಗಣೇಶ್ ವ್ಯಂಗ್ಯವಾಡಿದರು.
ಗುಂಪುಗಾರಿಕೆ: ಶಿಕ್ಷಕರು ಸದಾಕಾಲ ಮಕ್ಕಳು ಸೇರಿದಂತೆ ಸಾರ್ವಜನಿಕರಿಗೂ ಸಹ ಮಾದರಿಯಾಗುವಂತಹ ಗುಣಲಕ್ಷಣಗಳನ್ನ ಅಳವಡಿಸಿಕೊಳ್ಳಬೇಕು. ಅದು ಬಿಟ್ಟು ಶಾಲೆಯಲ್ಲಿಯೇ ಕೆಲವು ಶಿಕ್ಷಕರುಗಳು ಗುಂಪುಗಾರಿಕೆಯನ್ನು ಮಾಡುತ್ತಾ, ಇದು ಮಕ್ಕಳ ಮೇಲೆ ಪರಿಣಾಮ ಬೀರುವಂತೆ ಮಾಡುತ್ತಿದೆ. ಇವರೇ ಹೀಗಾದರೆ ಮಕ್ಕಳಲ್ಲಿ ಗುಂಪುಗಾರಿಕೆಗಳು ಕಂಡುಬಂದಾಗ ಇವರು ಯಾವ ಮಾದದಂಡದಲ್ಲಿ ಅವರಿಗೆ ಬುದ್ಧಿ ಹೇಳುತ್ತಾರೆಂದು ಪ್ರಶ್ನೆಯೂ ಸಹ ಕುಕ್ಕೂರು ಗಣೇಶ್ ಮುಂದಿಟ್ಟರು.
ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ರಮೇಶ್ ಮಾತನಾಡಿ, ಇಂದಿನ ಸಭೆಯಲ್ಲಿ ಇಲಾಖಾವಾರು ಆಗಬೇಕಿರುವ ಕೆಲಸ ಕಾರ್ಯಗಳನ್ನು ಮುಂದಿನ ಸಾಮಾನ್ಯ ಸಭೆಯಲ್ಲಿ ಕಾರ್ಯಗತ ಮಾಡಿರಬೇಕು. ಹಾಗೂ ಅದರ ಸಾದಕ ಬಾದಕಗಳನ್ನ ಪುರಾವೆ ಸಹಿತಿ ಸಭೆಗೆ ಒಪ್ಪಿಸಬೇಕೆಂದು ಅಧಿಕಾರಿಗಳಿಗೆ ತಾಖೀತು ಮಾಡಿದರು.
ಸಭೆಯಲ್ಲಿ ಉಪಾಧ್ಯಕ್ಷೆ ಸುಂದ್ರಮ್ಮ, ತಾ.ಪಂ. ಇಒ ಜೆರಾಲ್ಡ್ರಾಜೇಶ್, ಸದಸ್ಯರುಗಳಾದ ನಾಗಮಣಿ, ಸಾಜಿದ್ಅಹಮದ್, ಚಂದ್ರಶೇಖರ್, ರಂಗಸ್ವಾಮಿ, ಶಿವಮ್ಮ, ಚಿನ್ನಮ್ಮಸಿದ್ದರಾಜು, ಲೋಲಾಕ್ಷಿ, ಜವರಯ್ಯ, ರತ್ನರಾಜು ಇತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

