ದಿನದ ಸುದ್ದಿ
ಕಳೆದೆರಡು ವರ್ಷಗಳಲ್ಲಿ ಹಾರ್ಟ್ ಅಟ್ಯಾಕ್ ಆಗಿ ತೀರಿಕೊಂಡವರೆಷ್ಟು ಮಂದಿ..?
- ರಾಜಾರಾಂ ತಲ್ಲೂರು
ಈ ಹಿಂದೆ ಹೃದಯದ ರಕ್ತನಾಳಗಳಲ್ಲಿ ಯಾವುದೇ ತೊಂದರೆಯ ಹಿನ್ನೆಲೆ ಇಲ್ಲದ, 20-45ವರ್ಷಗಳ ನಡುವಿನ ಪೀಕ್ ಉತ್ಪಾದಕ ಪ್ರಾಯವರ್ಗದ, ದೈಹಿಕವಾಗಿ ಸದೃಢರೂ-ಚಟುವಟಿಕೆ ಭರಿತರೂ ಆಗಿರುವ ಎಷ್ಟು ಮಂದಿ ನಿಮ್ಮ ಕುಟುಂಬ-ಪರಿಚಿತ ವರ್ಗದಲ್ಲಿ ಕಳೆದ ಎರಡು ವರ್ಷಗಳಲ್ಲಿ ಹಠಾತ್ “ಹೃದಯಾಘಾತ/ಹೃದಯ ಸ್ಥಂಭನ/ಸ್ಟ್ರೋಕ್ (ಲಕ್ವಾ)” ಆಗಿ ಅಗಲಿಹೋಗಿದ್ದಾರೆ? ನನಗೆ ನನ್ನ ಕುಟುಂಬ-ಪರಿಚಯವರ್ಗದಲ್ಲಿ ಕನಿಷ್ಠ 15-20 ಇಂತಹ ಪ್ರಕರಣಗಳು ಗಮನಕ್ಕೆ ಬಂದಿವೆ. ಫೇಸ್ಬುಕ್/ಟ್ವಿಟ್ಟರ್ನಂತಹ ಸೋಷಿಯಲ್ ಮೀಡಿಯಾಗಳಲ್ಲಿ ಪ್ರತೀ ವಾರ ಇಂತಹ ಕನಿಷ್ಠ ಎರಡು ಪೋಸ್ಟ್ಗಳನ್ನು ಗಮನಿಸುತ್ತಿದ್ದೇನೆ.
ನಮ್ಮ ಆರೋಗ್ಯ ವ್ಯವಸ್ಥೆಗೆ ಇದು ಇನ್ನೂ ಯಾಕೆ ಗಂಭೀರ ಸಂಗತಿ ಅನ್ನಿಸುತ್ತಿಲ್ಲ?
ಭಾರತದ ಹೃದ್ರೋಗಗಳ ಸೊಸೈಟಿ (CSI) ಪ್ರಕಾರ ಹತ್ತು ವರ್ಷಗಳ ಹಿಂದೆ ದೇಶದಲ್ಲಿ ಹೃದಯದ ರಕ್ತನಾಳಗಳ ತೊಂದರೆ (CVD)ಇರುವವರ ಸಂಖ್ಯೆ 3.6ಕೋಟಿ ಇದ್ದದ್ದು, ಕೋವಿಡ್ ಬರುವ ಮುನ್ನವೇ 6.2ಕೋಟಿಗೆ ಏರಿದೆ. ಈಗ ಕೋವಿಡ್ ಕಾಲದ ಲೆಕ್ಕಾಚಾರಗಳು ಇನ್ನೂ ಲಭ್ಯವಿಲ್ಲ. ಆದರೆ, ಕೋವಿಡ್ ಮೊದಲ ಅಲೆಯ ಕಾಲದಲ್ಲಿ ಲಾಕ್ಡೌನ್ ಕಾರಣದಿಂದಾಗಿ, ಆಸ್ಪತ್ರೆಗಳು ಕೋವಿಡ್ ಗದ್ದಲದಲ್ಲಿ ಮೈಮರೆತಿದ್ದ ಕಾರಣದಿಂದಾಗಿ ಹೃದ್ರೋಗಗಳು ವರದಿಯಾಗುವ ಪ್ರಮಾಣ ಬಹಳ ಕಡಿಮೆಯಾಗಿತ್ತು. ಇದರಿಂದಾಗಿ ಬಹಳ ಮಂದಿ ಸಕಾಲದಲ್ಲಿ ಚಿಕಿತ್ಸೆ ಸಿಗದೆ ತೊಂದರೆಗೀಡಾಗಿರಬಹುದು, ಅವರ ರೋಗ ಉಲ್ಭಣಗೊಂಡಿರಬಹುದು ಎಂದು ಅಧ್ಯಯನಗಳು ಶಂಕೆ ವ್ಯಕ್ತಪಡಿಸಿದ್ದಿದೆ.
ಕೋವಿಡ್ ರೋಗ ಬಂದವರಲ್ಲಿ ರಕ್ತ ಹೆಪ್ಪುಗಟ್ಟುವ ಸಾಧ್ಯತೆಗಳು ಇದ್ದು, ಅದರಿಂದ ಹೃದಯಾಘಾತ, ಮೆದುಳಿನ ಆಘಾತ (ಲಕ್ವಾ) ಆಗುವ ಸಾಧ್ಯತೆಗಳನ್ನು ಈಗಾಗಲೇ ಗುರುತಿಸಲಾಗಿದೆ. ಹೃದಯ-ಮೆದುಳು ಮಾತ್ರವಲ್ಲದೇ ಶ್ವಾಸಕೋಶ, ಕಾಲುಗಳು, ಪಿತ್ತಜನಕಾಂಗ, ಮೂತ್ರಪಿಂಡಗಳ ಮೇಲೂ ರಕ್ತ ಹೆಪ್ಪುಗಟ್ಟುವಿಕೆ ಪರಿಣಾಮ ಬೀರಬಹುದು ಎಂಬುದು ಖಚಿತವಾಗಿದೆ. ಇದೆಲ್ಲ ವೈಜ್ಞಾನಿಕವಾಗಿಯೇ ಖಚಿತವಾಗಿರುವಾಗ, ಭಾರತದಲ್ಲಿ ಈ ಬಗ್ಗೆ ಆರೋಗ್ಯ ವ್ಯವಸ್ಥೆ ಏನು ಕ್ರಮಗಳನ್ನು ಕೈಗೊಂಡಿದೆ?
1. ದೊಡ್ಡ ಪ್ರಮಾಣದಲ್ಲಿ “ಅಸಿಂಪ್ಟಮ್ಯಾಟಿಕ್” ಕೋವಿಡ್ ಬಂದುಹೋದವರು ದೇಶದಲ್ಲಿದ್ದಾರೆ (ಸರ್ಕಾರದ್ದೇ ಸೀರೊಸರ್ವೇ ಪ್ರಕಾರ ದೇಶದ ಪ್ರತೀ ಮೂವರಲ್ಲಿ ಇಬ್ಬರು ಈಗ ಸೋಂಕು ತಗುಲಿಸಿಕೊಂಡಾಗಿದೆ). ಇವರಲ್ಲಿ ರಕ್ತ ಹೆಪ್ಪುಗಟ್ಟುವ ಮತ್ತು ಅದರ ಪರಿಣಾಮಗಳುಂಟಾಗುವ ಸಾಧ್ಯತೆಗಳ ಬಗ್ಗೆ ಅಧ್ಯಯನ ನಡೆದಿದೆಯೆ?
2. ಈಗಾಗಲೇ ದೊಡ್ಡ ಸಂಖ್ಯೆಯಲ್ಲಿ ಆಗಿರುವ ಅಕಾಲಿಕ ಹೃದಯಾಘಾತ-ಸ್ಟ್ರೋಕ್ ಸಾವುಗಳಲ್ಲಿ ರೋಗಿಗಳ ವಿವರವಾದ ಅಟಾಪ್ಸಿ ನಡೆದಿದೆಯೆ? ಸಾವಿಗೆ ಕಾರಣ ಏನು ಎಂಬುದನ್ನು ಪತ್ತೆಹಚ್ಚುವ ಮತ್ತು ಉಳಿಸಬಹುದಾದ ಜೀವಗಳನ್ನು ಉಳಿಸುವ ಪ್ರಯತ್ನಗಳು ನಡೆದಿವೆಯೆ?
3. ಅಮೆರಿಕದಲ್ಲಿ ಜಾನ್ಸನ್ ಅಂಡ್ ಜಾನ್ಸನ್ ಲಸಿಕೆ ಪ್ರಾಯೋಗಿಕ ಹಂತದಲ್ಲಿ ರಕ್ತ ಹೆಪ್ಪುಗಟ್ಟಿಸಿದ ಕಾರಣಕ್ಕೆ ಒಂದೆರಡು ದಿನ ಅಧ್ಯಯನವನ್ನು ಸ್ಥಗಿತಗೊಳಿಸಲಾಗಿತ್ತು. ಈಗಲೂ ಮಕ್ಕಳ ಮೇಲೆ ಲಸಿಕೆ ಪ್ರಯೋಗದ ವೇಳೆ ಹೆಪ್ಪುಗಟ್ಟುವಿಕೆ ದೂರುಗಳ ಹಿನ್ನೆಲೆಯಲ್ಲಿ ಅಧ್ಯಯನಗಳನ್ನು ಸ್ಥಗಿತಗೊಳಿಸಿರುವ ವರದಿಗಳು ಯುರೋಪಿನಲ್ಲಿ ಕೇಳಿಬರುತ್ತಿವೆ. ಲಸಿಕೆಗಳಿಂದ ಈ ರೀತಿಯ ಅಡ್ಡಪರಿಣಾಮಗಳ ಸಾಧ್ಯತೆಯೇನಾದರೂ ಇದೆಯೇ ಎಂಬುದನ್ನು ಭಾರತದಲ್ಲಿ ಔಷಧಿ ಸುರಕ್ಷಾ ವ್ಯವಸ್ಥೆಗಳು ಖಚಿತಪಡಿಸಿಕೊಂಡಿವೆಯೆ?
4. ಅಕಾಲಿಕವಾಗಿ, ಹಠಾತ್ ಹೃದಯಾಘಾತ-ಸ್ಟ್ರೋಕ್ ಆದವರ ಲಸಿಕೆ ಹಿನ್ನೆಲೆ, ಕೋವಿಡ್ ಸೋಂಕಿನ ಹಿನ್ನೆಲೆಗಳ ಡೇಟಾ ಏನಾದರೂ ಗ್ರಾಮ/ನಗರ ಮಟ್ಟದಲ್ಲಿ ಸಂಗ್ರಹಿಸಿಡಲಾಗಿದೆಯೆ? ಇಂತಹ ದಾಖಲೆಗಳು ಮುಂದೊಂದು ದಿನ ಹಿಂತಿರುಗಿ ನೋಡಿ ವಿಶ್ಲೇಷಿಸುವುದಕ್ಕೆ ಮಹತ್ವದವು ಎಂದು ಆರೋಗ್ಯ ವ್ಯವಸ್ಥೆಗೆ ಅನ್ನಿಸಿಲ್ಲವೆ?
ಅಕಾಲಿಕವಾದ CVD ಸಾವುಗಳೆಲ್ಲವೂ ಅನ್ಯಾಯದ ಸಾವುಗಳು. ಆರೋಗ್ಯ ವ್ಯವಸ್ಥೆ ಪರಿಣಾಮಕಾರಿಯಾಗಿದ್ದರೆ, ಉಳಿಸಿಕೊಳ್ಳಬಹುದಾಗಿದ್ದ ಜೀವಗಳವು. ಜನರ ಜೀವಕ್ಕಿಂತ ದುಡ್ಡು ಮುಖ್ಯವಾದಾಗ ಮಾತ್ರ ಇಂತಹ “ದಿವ್ಯ ನಿರ್ಲಕ್ಷ್ಯ” ಕಾಣಿಸಿಕೊಳ್ಳಲು ಸಾಧ್ಯ. ನಾಳೆ ಜನರೇ ಇಲ್ಲದಿದ್ದರೆ ದುಡ್ಡು ಹಿಡ್ಕೊಂಡು ಏನು ಮಾಡ್ತೀರಿ ಸಾರ್?
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ4 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ3 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

