ದಿನದ ಸುದ್ದಿ
ಬಿಜೆಪಿ ಸರ್ಕಾರದ ಸಾವಿನ ಸುಳ್ಳು ಲೆಕ್ಕ ; ಕೋವಿಡ್ ನಿಂದ ಸತ್ತವರ ಪರಿಹಾರಕ್ಕೆ ಕೊಕ್ಕೆ : ಸಿದ್ದರಾಮಯ್ಯ ಆಕ್ರೋಶ
![](https://suddidina.com/wp-content/uploads/2022/04/siddaramaiah_suddidina-017369.jpg)
ಸುದ್ದಿದಿನ ಡೆಸ್ಕ್ : ಕೋವಿಡ್ ಕಾಯಿಲೆಯಿಂದ ಸತ್ತವರ ಸಂಖ್ಯೆಯನ್ನು ಬಚ್ಚಿಟ್ಟಿರುವ ಕೇಂದ್ರ ಸರ್ಕಾರದ ಸುಳ್ಳುಗಳ ಸರಮಾಲೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಬಯಲುಗೊಳಿಸಿದೆ. ಕೋವಿಡ್ ಸಾವಿನ ಸಂಖ್ಯೆ ಕೇಂದ್ರ ಸರ್ಕಾರದ ಪ್ರಕಾರ 4.81 ಲಕ್ಷ ಮತ್ತು ಡಬ್ಲ್ಯುಎಚ್ಒ ಪ್ರಕಾರ 47.40 ಲಕ್ಷ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕೋವಿಡ್ ಕಾಯಿಲೆಯಿಂದ ಸತ್ತವರಿಗೆ ಪರಿಹಾರ ಕೊಡುವುದನ್ನು ತಪ್ಪಿಸಲು ಬಿಜೆಪಿ ಸರ್ಕಾರ ಸಾವಿನ ಸುಳ್ಳು ಲೆಕ್ಕ ಹೇಳಿ ಮೋಸ ಮಾಡಿದೆ. ಇದರಿಂದ ಕೋವಿಡ್ ನಿಂದ ಸಾವಿಗೀಡಾದ ಲಕ್ಷಾಂತರ ಮಂದಿಯ ಕುಟುಂಬಕ್ಕೆ ಪರಿಹಾರವೇ ಸಿಕ್ಕಿಲ್ಲ. ಕೋವಿಡ್ ಸಾವಿನ ಮರು ಎಣಿಕೆ ಮಾಡಿದರೆ ಮಾತ್ರ ನ್ಯಾಯ ಸಿಗಲು ಸಾಧ್ಯ.
ಕೋವಿಡ್ ಸಾವಿನ ಸಂಖ್ಯೆ ಕೇವಲ 37,603 ಎಂದು ರಾಜ್ಯ ಸರ್ಕಾರ ಹೇಳಿತ್ತು. ಕೆಪಿಸಿಸಿ ಸಮೀಕ್ಷೆ ಪ್ರಕಾರ ಸಾವಿನ ಸಂಖ್ಯೆ 3.17 ಲಕ್ಷ ಆಗಿತ್ತು. ಅರವಿಂದ್ ಸುಬ್ರಹ್ಮಣ್ಯ ಮತ್ತು ಜೇಕಬ್ ಝಾ ಪ್ರಕಾರ ಸಾವಿನ ಸಂಖ್ಯೆ ನಾಲ್ಕು ಲಕ್ಷ. ಕಳೆದ ವರ್ಷದ ಜೂನ್ ತಿಂಗಳಲ್ಲಿಯೇ ನಾನು ಇದನ್ನು ಹೇಳಿದ್ದೆ ಎಂದು ತಿಳಿಸಿದ್ದಾರೆ.
ಕೊರೊನಾ ಕಾಯಿಲೆಯಿಂದ ರಾಜ್ಯದಲ್ಲಿ ಈ ವರೆಗೆ ಐದು ಲಕ್ಷಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿರುವ ಸಾಧ್ಯತೆ ಇದೆ. ಮರು ಸಮೀಕ್ಷೆ ಮೂಲಕ ಮೃತರ ಸಂಖ್ಯೆಯನ್ನು ಖಚಿತವಾಗಿ ತಿಳಿದುಕೊಂಡು ಮೃತರ ಕುಟುಂಬಕ್ಕೆ ಕನಿಷ್ಠ ನಾಲ್ಕು ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಆಗ್ರಹಿಸುತ್ತೇನೆ.
ಜನತೆಗೆ ಉತ್ತರದಾಯಿಯಾಗಿ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಅಧಿಕೃತವಾದ ಮಾಹಿತಿಗಳನ್ನು ಮುಚ್ಚಿಟ್ಟು ದ್ರೋಹ ಎಸಗುತ್ತಿದೆ. ಸತ್ಯ ಸಂಗತಿ ಬಯಲಾದರೆ ತಮ್ಮ ಬಣ್ಣ ಬಯಲಾಗುತ್ತಿದೆ ಎಂಬ ಭಯದಿಂದ ಸುಳ್ಳುಗಳ ಮಾಲೆ ಹೆಣೆಯುತ್ತಿದೆ ಎಂದರು.
ಕೋವಿಡ್ ಕಾಯಿಲೆಯನ್ನು ಔಷಧಿ ಮತ್ತು ಚಿಕಿತ್ಸೆಯ ಮೂಲಕ ಎದುರಿಸಬೇಕಾಗಿದ್ದ ಬಿಜೆಪಿ ಸರ್ಕಾರ ಸುಳ್ಳು ಮತ್ತು ಮೋಸಗಳಿಂದ ಎದುರಿಸಲು ಹೊರಟಿದೆ. ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೆ 39 ಜನ ಸತ್ತಿದ್ದರೂ ರಾಜ್ಯ ಸರ್ಕಾರ ಮಾತ್ರ ಸತ್ತವರು ಮೂರು ಜನ ಎಂದು ಹೇಳಿತ್ತು. 2020ರಲ್ಲಿ ಸಕಾಲದಲ್ಲಿ ಚಿಕಿತ್ಸೆ ಸಿಗದೆ ಒಟ್ಟು 36.5 ಲಕ್ಷ ಜನ ಸತ್ತಿರುವುದನ್ನು ಕೇಂದ್ರ ರಿಜಿಸ್ಟ್ರಾರ್ ಜನರಲ್ ಕಚೇರಿಯ ವರದಿ ಬಹಿರಂಗ ಪಡಿಸಿದೆ. ಆ ವರ್ಷ ಸಾವಿಗೀಡಾದ 81 ಲಕ್ಷ ಜನರಲ್ಲಿ ಶೇಕಡಾ 45ರಷ್ಟು ಜನ ಚಿಕಿತ್ಸೆ ಸಿಗದೆ ಮೃತ ಪಟ್ಟಿರುವುದು ಕಳವಳಕಾರಿ ಬೆಳವಣಿಗೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಕಾಯಿಲೆಯಿಂದ ಸತ್ತವರ ಸಂಖ್ಯೆಯನ್ನು ಬಚ್ಚಿಟ್ಟಿರುವ ಕೇಂದ್ರ @BJP4India ಸರ್ಕಾರದ ಸುಳ್ಳುಗಳ ಸರಮಾಲೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಬಯಲುಗೊಳಿಸಿದೆ. ಕೋವಿಡ್ ಸಾವಿನ ಸಂಖ್ಯೆ ಕೇಂದ್ರ ಸರ್ಕಾರದ ಪ್ರಕಾರ 4.81 ಲಕ್ಷ ಮತ್ತು ಡಬ್ಲ್ಯುಎಚ್ಒ ಪ್ರಕಾರ 47.40 ಲಕ್ಷ. 1/7#COVID19 pic.twitter.com/2jJhZouvO4
— Siddaramaiah (@siddaramaiah) May 7, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ5 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!