ದಿನದ ಸುದ್ದಿ
ಕೋವಿಡ್ ಜಿಲ್ಲಾ ತಜ್ಞ ವೈದ್ಯರ ಸಲಹಾ ಸಮಿತಿ ಸಭೆ ಶೀಘ್ರ ರೋಗ ಪತ್ತೆಯಿಂದ ಮರಣ ಸಂಭವ ಕಡಿಮೆ ; ಹೆಚ್ಚುವರಿ ಆಂಬುಲೆನ್ಸ್ ಖರೀದಿಗೆ ಆದೇಶ
ಸುದ್ದಿದಿನ,ದಾವಣಗೆರೆ : ಕೋವಿಡ್ ರೋಗವನ್ನು ಬೇಗ ಪತ್ತೆ ಹಚ್ಚಿದಲ್ಲಿ, ರೋಗಿಯ ಮರಣ ಸಾಧ್ಯತೆಯನ್ನು ಕಡಿಮೆಗೊಳಿಸಬಹುದು. ತಡವಾಗಿ ಆಸ್ಪತ್ರೆಗೆ ದಾಖಲಾಗುವವರಲ್ಲಿಯೇ ಹೆಚ್ಚಿನ ಮರಣ ಪ್ರಕರಣಗಳು ವರದಿಯಾಗಿದ್ದು, ಹೀಗಾಗಿ ರೋಗ ಲಕ್ಷಣ ಕಂಡುಬಂದಲ್ಲಿ ಕೂಡಲೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ತಜ್ಞ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಪಡೆಯಲು ಮುಂದಾಗಬೇಕು ಎಂದು ಬಹುತೇಕ ತಜ್ಞ ವೈದ್ಯರು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಣಗಳದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಕೋವಿಡ್ ಜಿಲ್ಲಾ ತಜ್ಞ ವೈದ್ಯರ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ತಜ್ಞ ವೈದ್ಯರು, ಜಿಲ್ಲೆಯಲ್ಲಿ ಕೋವಿಡ್ನಿಂದ ಸಂಭವಿಸುವ ಮರಣ ಪ್ರಕರಣಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಬರುವ 15 ದಿನಗಳಲ್ಲಿ ಕೋವಿಡ್ ಪ್ರಕರಣಗಳು ಎಷ್ಟಾಗಬಹುದು. ಇದಕ್ಕಾಗಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ತಜ್ಞ ವೈದ್ಯರ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಕೋವಿಡ್ 2ನೇ ಅಲೆಯಲ್ಲಿ ರೋಗಲಕ್ಷಣಗಳೂ ಕೂಡ ಕೆಲವು ರೋಗಿಗಳನ್ನು ಭಿನ್ನವಾಗಿ ಕಂಡುಬಂದಿವೆ. ಸಾಮಾನ್ಯವಾಗಿ ಜ್ವರ, ನೆಗಡಿ, ಕೆಮ್ಮು ಮುಂತಾದ ರೋಗಲಕ್ಷಣಗಳು ಕೋವಿಡ್ನ ಆರಂಭಿಕ ಹಂತದಲ್ಲಿ ಕಂಡುಬಂದಿತ್ತು.
ಇದನ್ನೂ ಓದಿ | ಮಂಗಳವಾರದಿಂದ ಲಾಕ್ ಡೌನ್ : ಏನಿರತ್ತೆ..? ಏನಿರಲ್ಲ..?
ಆದರೆ ಇತ್ತೀಚಿನ ಪ್ರಕರಣಗಳನ್ನು ಗಮನಿಸಿದಾಗ, ಜ್ವರ ಇಲ್ಲದಂತಹ ಪ್ರಕರಣಗಳು, ವಾಂತಿಬೇಧಿ, ಕಣ್ಣು ಕೆಂಪಾಗುವುದು, ತಲೆನೋವು, ಮೈಕೈನೋವು ರೋಗ ಲಕ್ಷಣಗಳು ಇರುವುದು ಕಂಡುಬಂದಿದೆ. ಸಾರ್ವಜನಿಕರು ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೆ ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಳ್ಳಬೇಕು, ಸೋಂಕು ದೃಢಪಟ್ಟಲ್ಲಿ ಆತಂಕಕ್ಕೆ ಒಳಗಾಗದೆ ತಜ್ಞ ವೈದ್ಯರ ಶಿಫಾರಸ್ಸಿನಂತೆ ಚಿಕಿತ್ಸೆ ಪಡೆದುಕೊಳ್ಳಬೇಕು.
ಬೇಗ ರೋಗ ಪತ್ತೆಯಾದಲ್ಲಿ, ಚಿಕಿತ್ಸೆ ಪಡೆದು ಬೇಗ ಗುಣಮುಖರಾಗಬಹುದು. ಆದರೆ ರೋಗ ಪತ್ತೆ ಮಾಡಿಸಿಕೊಳ್ಳದೆ, ಸೋಂಕು ಉಲ್ಬಣಗೊಂಡು, ಶ್ವಾಸಕೋಶದಲ್ಲಿ ಸೋಂಕು ತೀವ್ರಗೊಂಡು, ತಡವಾಗಿ ಆಸ್ಪತ್ರೆಗೆ ಬರುವುದು ರೋಗಿಗಳ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಸಾಮಾನ್ಯವಾಗಿ ಕೋವಿಡ್ನಿಂದ ಮರಣ ಪ್ರಕರಣಗಳನ್ನು ವಿಶ್ಲೇಷಿಸಿದಾಗ, ತಡವಾಗಿ ಆಸ್ಪತ್ರೆಗೆ ಬಂದವರಲ್ಲೇ ಹೆಚ್ಚಿನ ಮರಣ ಸಂಭವಿಸಿದೆ ಎಂದು ತಜ್ಞ ವೈದ್ಯರು ಹೇಳಿದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರತಿಕ್ರಿಯಿಸಿ, ಸಾರ್ವಜನಿಕರು ತಪ್ಪದೆ ಮಾಸ್ಕ್ ಧರಿಸಬೇಕು. ಅನಗತ್ಯವಾಗಿ ಹೊರಗಡೆ ತಿರುಗಾಡುವುದನ್ನು ಬಿಡಬೇಕು. ರೋಗ ಲಕ್ಷಣಗಳು ಕಂಡುಬಂದಲ್ಲಿ, ಸ್ವಯಂ ಚಿಕಿತ್ಸೆ ಪಡೆಯದೆ, ಸಿಕ್ಕ ಸಿಕ್ಕ ಗುಳಿಗೆಗಳನ್ನು ನುಂಗದೆ, ಓಣಿಗಳಲ್ಲಿನ ಸಣ್ಣಪುಟ್ಟ ವೈದ್ಯರಲ್ಲಿ ಸಾಮಾನ್ಯ ಚಿಕಿತ್ಸೆಗೆ ಒಳಗಾಗುವ ದುಸ್ಸಾಹಸಕ್ಕೆ ಕೈಹಾಕದೆ, ಕೂಡಲೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು.
ಇತ್ತೀಚೆಗೆ ಆರ್ಟಿಪಿಸಿಆರ್ ಟೆಸ್ಟ್ ನೆಗೆಟೀವ್ ಇದ್ದರೂ ಕೂಡ, ಶ್ವಾಸಕೋಶದಲ್ಲಿ ಸೋಂಕು ಇರುವ ಸಾಧ್ಯತೆಗಳಿರುತ್ತದೆ. ಸಾಮಾನ್ಯ ಕಫ ಎಂದು ಯಾರೂ ನಿರ್ಲಕ್ಷ್ಯ ಮಾಡಬಾರದು ಎಂದು ಮನವಿ ಮಾಡಿಕೊಂಡರು.
ವಿದೇಶಿ ಪ್ರಯಾಣಿಕರಿಗೆ ಖಾಸಗಿಯಲ್ಲಿ ಟೆಸ್ಟ್
ವಿದೇಶಕ್ಕೆ ತೆರಳಬಯಸುವವರು ಅಥವಾ ಬೇರೆ ಬೇರೆ ರಾಜ್ಯಗಳಿಗೆ ಪ್ರಯಾಣ ಬೆಳೆಸುವವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಬಯಸಿದಲ್ಲಿ, ಅಂತಹವರಿಗೆ ಸರ್ಕಾರಿ ಆಸ್ಪತ್ರೆ, ಸಂಸ್ಥೆಗಳಲ್ಲಿ ಕೋವಿಡ್ ಟೆಸ್ಟ್ ಮಾಡಬಾರದು. ಅಂತಹವರು ಅಗತ್ಯವೆನಿಸಿದಲ್ಲಿ ನಿಗದಿತ ಖಾಸಗಿ ಆಸ್ಪತ್ರೆ, ಪ್ರಯೋಗಾಲಯಗಳಲ್ಲಿ ಟೆಸ್ಟ್ ಮಾಡಿಸಿಕೊಳ್ಳಲಿ.
ಕೋವಿಡ್ ಟೆಸ್ಟ್ ಅನ್ನು ಅನಗತ್ಯವಾಗಿ ಎಲ್ಲರಿಗೂ ಮಾಡಬಾರದು. ರೋಗ ಲಕ್ಷಣಗಳು ಕಂಡುಬಂದವರಿಗೆ, ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಹಾಗೂ ತಜ್ಞ ವೈದ್ಯರು ಶಿಫಾರಸು ಮಾಡುವವರಿಗೆ ಮಾತ್ರ ಕೋವಿಡ್ ಟೆಸ್ಟ್ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೆಚ್ಚುವರಿ ಆಂಬುಲೆನ್ಸ್ ಖರೀದಿಗೆ ಆದೇಶ
ಜಿಲ್ಲೆಯಲ್ಲಿ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಆಂಬುಲೆನ್ಸ್ಗಳನ್ನು ಬೇಕಾಬಿಟ್ಟಿಯಾಗಿ ಬಳಸಬಾರದು. ತಜ್ಞ ವೈದ್ಯರ ಸಲಹಾ ಸಮಿತಿಯ ಶಿಫಾರಸಿನಂತೆ, ಮುಂಬರುವ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಸಮರ್ಪಕ ನಿರ್ವಹಣೆಗಾಗಿ ಜಿಲ್ಲೆಗೆ 01 ಅಡ್ವಾನ್ಸ್ಡ್ ಲೈಫ್ ಸಪೋರ್ಟ್ ಕೇರ್ ಸಿಸ್ಟಂ ಹೊಂದಿರುವ ಆಂಬುಲೆನ್ಸ್, 02- ಬೇಸಿಕ್ ಲೈಫ್ ಸಪೋರ್ಟ್ ಸಿಸ್ಟಂ ಇರುವ ಆಂಬುಲೆನ್ಸ್ ಹಾಗೂ ಪ್ರತಿ ತಾಲ್ಲೂಕಿಗೆ ಒಂದು ಲೈಫ್ ಸಪೋರ್ಟ್ ಸಿಸ್ಟಂ ಆಂಬುಲೆನ್ಸ್ ಖರೀದಿಸಲು ಆದೇಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ರೆಮ್ಡೆಸಿವರ್ ಔಷಧ ದುರ್ಬಳಕೆಗೆ ಕಡಿವಾಣ
ಜಿಲ್ಲೆಯಲ್ಲಿ ರೆಮ್ಡೆಸಿವರ್ ಚುಚ್ಚುಮದ್ದು ಅಕ್ರಮ ಬಳಕೆಗೆ ಕಡಿವಾಣ ಹಾಕಲಾಗುತ್ತಿದ್ದು, ಈಗಾಗಲೆ ಅಕ್ರಮ ಎಸಗಿದ 02 ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ರೆಮ್ಡೆಸಿವರ್ ಸೇರಿದಂತೆ ತುರ್ತು ಸಂದರ್ಭಕ್ಕೆ ಬಳಸುವ ಔಷಧಿಯನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ದಾಸ್ತಾನಿಗೆ ಆಗಮಿಸಿದ ವಿವರ, ನೀಡಲಾದ ರೋಗಿ ಹಾಗೂ ಔಷಧದ ಎಸ್ಎಫ್ಆರ್-ಐಡಿಯನ್ನು ನಮೂದಿಸಬೇಕು.
ಈ ಐಡಿ ಇಲ್ಲದೆ ಯಾರಿಗೂ ಔಷಧಿಯನ್ನು ಕೊಡುವಂತಿಲ್ಲ.
ಜಿಲ್ಲೆಯಲ್ಲಿ ಇದಕ್ಕಾಗಿ ಫ್ಲೈಯಿಂಗ್ ಸ್ಕ್ವಾಡ್ ತಂಡವನ್ನು ರಚಿಸಲಾಗಿದ್ದು, ಈ ಅಧಿಕಾರಿಗಳು, ವಿವಿಧೆಡೆ ಪರಿಶೀಲಿಸಿ ವರದಿ ಸಲ್ಲಿಸಬೇಕು. ರೆಮ್ಡೆಸಿವರ್ ಚುಚ್ಚುಮದ್ದನ್ನು ಕೋವಿಡ್ ನಿಗದಿತ ಆಸ್ಪತ್ರೆಯಲ್ಲಿ, ಅಗತ್ಯವಿರುವ ರೋಗಿಗೆ ಮಾತ್ರ ನೀಡಬೇಕು.
ಕೋವಿಡ್ ಸೋಂಕಿತ ಎಲ್ಲ ರೋಗಿಗಳಿಗೂ ನೀಡಬಾರದು. ರೆಮ್ಡೆಸಿವರ್ ಔಷಧಿಯನ್ನು ಬೇಕಾಬಿಟ್ಟಿಯಾಗಿ ಶಿಫಾರಸು ಮಾಡುವವರ ವಿರುದ್ಧ ಕೆಪಿಎಂಇ ಕಾಯ್ದೆ ಅನ್ವಯ ವೈದ್ಯಕೀಯ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.
ಏ. 27 ರಿಂದ ಮೋತಿವೀರಪ್ಪ ಕಾಲೇಜಿನಲ್ಲಿ ಲಸಿಕೆ
ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಇದುವರೆಗೂ ಕೋವಿಡ್ ನಿರೋಧಕ ಲಸಿಕೆ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜನಸಂದಣಿ ತಡೆಯುವ ಉದ್ದೇಶ ಹಾಗೂ ಸ್ಥಳ ಅಭಾವದ ಕಾರಣದಿಂದ ಕೋವಿಡ್ ಸೇರಿದಂತೆ ಎಲ್ಲ ಬಗೆಯ ಲಸಿಕೆಯನ್ನು ಜಿಲ್ಲಾ ಆಸ್ಪತ್ರೆಯ ಬದಲಿಗೆ ಬೇರೆಡೆ ಲಸಿಕೆಯನ್ನು ನೀಡುವಂತೆ ತಜ್ಞ ವೈದ್ಯರ ಸಲಹಾ ಸಮಿತಿ ನೀಡಿದ ಶಿಫಾರಸಿನಂತೆ, ಏ. 27 ರಿಂದ ಜಿಲ್ಲಾ ಆಸ್ಪತ್ರೆ ಸಮೀಪದ ಮೋತಿ ವೀರಪ್ಪ ಕಾಲೇಜಿನಲ್ಲಿ ಕೋವಿಡ್ ಸೇರಿದಂತೆ ಎಲ್ಲ ಬಗೆಯ ಲಸಿಕೆಯನ್ನು ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಹೊರ ಜಿಲ್ಲೆಯ ರೋಗಿಗಳ ಬಗ್ಗೆ ನಿಗಾ ವಹಿಸಿ
ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಬೆಡ್ ದೊರೆಯದ ಕಾರಣದಿಂದ ದಾವಣಗೆರೆ ಜಿಲ್ಲೆಯ ಸರ್ಕಾರಿ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಬೇರೆ ಬೇರೆ ಜಿಲ್ಲೆಯವರು ಬಂದು, ನಮ್ಮ ಜಿಲ್ಲೆಯವರಿಗೆ ತೊಂದರೆಯಾಗಬಾರದು.
ನಮ್ಮವರಿಗೆ ಸಮರ್ಪಕ ವೈದ್ಯಕೀಯ ನೆರವು ದೊರೆಯಬೇಕು ಎನ್ನುವುದು ನಮ್ಮ ಆಶಯವಾಗಿದ್ದು, ಬರುವ ದಿನಗಳಲ್ಲಿ ಉದ್ಭವವಾಗುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಡಿಹೆಚ್ಒ ಹಾಗೂ ಜಿಲ್ಲಾ ಸರ್ಜನ್ ಅವರು ಸಮರ್ಪಕವಾಗಿ ಪರಿಶೀಲಿಸಿ, ನಮ್ಮ ಜಿಲ್ಲೆಯವರಿಗೆ ತೊಂದರೆ ಆಗದ ರೀತಿ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ಶೇ. 75 ಹಾಸಿಗೆಗಳು ಕೋವಿಡ್ಗೆ ಮೀಸಲು
ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳು, ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮಥ್ರ್ಯದಲ್ಲಿ ಶೇ. 75 ರಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುವ ಡಿಹೆಚ್ಒ ಅವರು, ಎಲ್ಲ ಆಸ್ಪತ್ರೆಗಳು ಸರ್ಕಾರದ ಸೂಚನೆ ಹಾಗೂ ಕೋವಿಡ್ನ ಎಲ್ಲ ಪ್ರೋಟೊಕಾಲ್ಅನ್ನು ಪಾಲನೆ ಮಾಡುತ್ತಿರುವ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಡಿಸಿ ಸೂಚನೆ ನೀಡಿದರು.
ಆಕ್ಸಿಜನ್ ಬಳಕೆ ಸಮರ್ಪಕವಾಗಿರಲಿ
ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಬಳಕೆ ಮಾಡಲಾಗುವ ಆಕ್ಸಿಜನ್ ಅನ್ನು ನ್ಯಾಯಯುತವಾಗಿ ಬಳಕೆ ಮಾಡಬೇಕು. ಅವಶ್ಯಕತೆ ಇಲ್ಲದವರಿಗೆಲ್ಲಾ ಆಕ್ಸಿಜನ್ ನೀಡಬಾರದು. ಆಕ್ಸಿಜನ್ ಪಡೆದು ಚೇತರಿಕೆ ಕಂಡುಬರುವ ರೋಗಿಗಳನ್ನು ಸಾಮಾನ್ಯ ವಾರ್ಡ್ಗೆ ಸ್ಥಳಾಂತರಿಸಿ, ಅಗತ್ಯತೆ ಇರುವ ರೋಗಿಗಳಿಗೆ ಆಕ್ಸಿಜನ್ ನೀಡಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಸ್ಪತ್ರೆ ಸರ್ಜನ್ ಡಾ. ಜಯಪ್ರಕಾಶ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಡಿಹೆಚ್ಒ ಡಾ. ನಾಗರಾಜ್, ತಜ್ಞ ವೈದ್ಯರ ಸಮಿತಿ ಸದಸ್ಯರುಗಳಾದ ಡಾ. ರವಿ, ಡಾ. ಬಿ.ಎಸ್. ಪ್ರಸಾದ್, ಡಾ. ಶಿವಕುಮಾರ್, ಡಾ. ಅರುಣ್ಕುಮಾರ್ ಸೇರಿದಂತೆ ವಿವಿಧ ತಜ್ಞ ವೈದ್ಯರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ3 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!