Connect with us

ದಿನದ ಸುದ್ದಿ

ಮೇ ಅಂತ್ಯದೊಳಗೆ ಪ್ರತಿ ಜಿಲ್ಲೆಗೆ ಎರಡು ಕೋವಿಡ್ ಪರೀಕ್ಷಾ ಲ್ಯಾಬ್

Published

on

ಸುದ್ದಿದಿನ,ದಾವಣಗೆರೆ: ಸರ್ಕಾರದ ಕ್ರಮಗಳು ಮತ್ತು ಜನರ ಸಹಕಾರದಿಂದ ಮಾತ್ರ ಕೊರೊನಾ ನಿಗ್ರಹ ಸಾಧ್ಯ. ಜನರ ಜೀವ ಮತ್ತು ಜೀವನವನ್ನು ಸುಸ್ಥಿತಿಗೆ ತರಲು ಸರ್ಕಾರ ಹಗಲಿರುಳು ಶ್ರಮಿಸುತ್ತಿದ್ದು ಜನರು ಸಹಕರಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್ ಮನವಿ ಮಾಡಿದರು.

ಶನಿವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಡೀ ಜಗತ್ತನ್ನು ಕಣ್ಣಿಗೆ ಕಾಣದೊಂದು ವೈರಾಣು ನಡುಗಿಸುತ್ತಿದೆ. ವಿಶ್ವದಲ್ಲಿ ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮ ದೇಶ ಕೊರೊನಾ ನಿಯಂತ್ರಣ ಮಾಡುತ್ತಾ ಇದೆ. ದೇಶದಲ್ಲಿ ಸುಮಾರು 60 ಸಾವಿರ ಪಾಸಿಟಿವ್ ಪ್ರಕರಣಗಳಿದ್ದು, ನಮ್ಮ ರಾಜ್ಯ 13 ನೇ ಸ್ಥಾನದಲ್ಲಿ ಇದೆ.

ಮಾನ್ಯ ಮುಖ್ಯಮಂತ್ರಿಗಳು ಆರಂಭದಲ್ಲಿ ತೆಗೆದುಕೊಂಡ ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಸಾಧ್ಯವಾಗುತ್ತಿದೆ. ಜೀವ ಉಳಿಸುವ ಜೊತೆಗೆ ಜನಜೀವನ ಸುಧಾರಣೆ ಎರಡೂ ಕೆಲಸಗಳನ್ನು ಸಮತೋಲನದಿಂದ ಸರಿದೂಗಿಸಬೇಕಿದೆ. ಕೊರೊನಾ ಕೂಡ ಇರುತ್ತದೆ. ಆದರೆ ನಾವು ಅದರಿಂದ ದೂರ ಇರಬೇಕು.

ನಾಲ್ಕು ಟಿ

ಟ್ರ್ಯಾಕಿಂಗ್, ಟ್ರೇಸಿಂಗ್, ಟೆಸ್ಟಿಂಗ್ ಮತ್ತು ಟ್ರೀಟ್‍ಮೆಂಟ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೊರೊನಾ ನಿಗ್ರಹಿಸಲಾಗುತ್ತಿದೆ. ಕೊರೊನಾ ನಿಯಂತ್ರಣ ಕೇವಲ ಸರ್ಕಾರದ ಕೈಯಲ್ಲಿಲ್ಲ ಬದಲಾಗಿ ಎಲ್ಲ ಜನತೆ ಸಹಕಾರ ಅತ್ಯಗತ್ಯವಾಗಿದೆ ಎಂದರು.

ಕೊರೊನಾ ಸಾಮಾಜಿಕ ಕಳಂಕ ಅಲ್ಲ,ಅನಗತ್ಯ ಆತಂಕ ಬೇಡ

ಕೊರೊನಾ ರೋಗಕ್ಕೆ ನಿಖರವಾದ ಚಿಕಿತ್ಸೆ ಇಲ್ಲ. ಎಷ್ಟೋ ಅಂತೆ-ಕಂತೆಗಳು ಆಗಿ ಹೋಗಿವೆ. ಈ ನಿಟ್ಟಿನಲ್ಲಿ ಸರ್ಕಾರ ಪ್ರತಿದಿನ ಹೊಸ ಮಾರ್ಗಸೂಚಿಗಳನ್ನು ನೀಡುವ ಮೂಲಕ ಕೊರೊನಾ ನಿಯಂತ್ರಣದಲ್ಲಿ ಶ್ರಮ ವಹಿಸುತ್ತಿದೆ.

ಕೊರೊನಾ ಸಾಮಾಜಿಕ ಕಳಂಕ ಅಲ್ಲ. ಯಾರಿಗೆ ಬೇಕಾದರೂ ಬರಬಹುದು. ಸೋಂಕಿನ ಬಗ್ಗೆ ಭಯ ಬೇಡ. ಯಾವ ವೈರಾಣುವೂ ಜನರನ್ನು ಸೋಲಿಸಿಲ್ಲ. ಬದಲಾಗಿ ಜನರು ವೈರಾಣುವನ್ನು ಸೋಲಿಸಿದ್ದಾರೆ. ಕೊರೊನಾವನ್ನೂ ಸೋಲಿಸಲು ಸ್ವಲ್ಪ ಸಮಯ ಬೇಕು. ಆದ ಕಾರಣ ಜನರು ಅಂತರ ಕಾಯ್ದುಕೊಳ್ಳುವ ಮೂಲಕ, ಸ್ವಚ್ಚತೆ, ಮಾಸ್ಕ್ ಧರಿಸುವ ಮೂಲಕ ಹಾಗೂ ಸರ್ಕಾರದ ನಿಯಮ, ಸೂಚನೆಗಳನ್ನು ಪಾಲಿಸುವ ಮೂಲಕ ಕೊರೊನಾ ನಿಗ್ರಹಿಸಲು ಸಹಕರಿಸಬೇಕು.

ಜನರಿಗೆ ಸಮರ್ಪಕ ಮಾಹಿತಿ ಮತ್ತು ಧೈರ್ಯ ತುಂಬಬೇಕು

ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಬಂದ ಪ್ರಕರಣಗಳ ಪೈಕಿ ಈಗಾಗಲೇ ಶೇ.50 ಗುಣಮುಖರಾಗಿದ್ದಾರೆ. ಶೇ 80 ರಷ್ಟು ಜನರು ಚಿಕಿತ್ಸೆ ಇಲ್ಲದೆಯೇ ಗುಣಮುಖರಾಗುತ್ತಾರೆ. ಮರಣ ಪ್ರಮಾಣ ಶೇ.3.1 ರಷ್ಟಿದ್ದು, ಅದರಲ್ಲೂ ಹೃದಯ ತೊಂದರೆ, ಕ್ಯಾನ್ಸರ್, ಡಯಾಬಿಟಿಕ್ ಇತರೆ ತೊಂದರೆಯಿಂದ ಬಳಲುವವರು ಮರಣಕ್ಕೆ ತುತ್ತಾಗುವ ಸಂಭವ ಹೆಚ್ಚಿದೆ. ಆದ್ದರಿಂದ ಜನರಲ್ಲಿ ಭಯ ಬೇಡ. ಆದರೆ ಅಂತರ ಕಾಯ್ದುಕೊಂಡು, ಸ್ವಚ್ಚತೆ ಕಾಪಾಡಿಕೊಂಡು ನಿಯಮಗಳನ್ನು ಪಾಲಿಸಬೇಕು. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಜನರಿಗೆ ಸಮರ್ಪಕ ಮಾಹಿತಿ ಮತ್ತು ಧೈರ್ಯವನ್ನು ತುಂಬಬೇಕೆಂದರು.

ಆರೋಗ್ಯಸೇತು ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಜಿಲ್ಲೆಯ ಎಲ್ಲ ಜನತೆ ಆರೋಗ್ಯಸೇತು ಆ್ಯಪ್ ನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು. ಜನಪ್ರತಿನಿಧಿಗಳು, ಅಧಿಕಾರಿಗಳು ಈ ಆಪ್ ಬಗ್ಗೆ ಸಾಕಷ್ಟು ಪ್ರಚಾರ ನೀಡಬೇಕು. ಈ ಆ್ಯಪ್‍ನ ಸಹಾಯದಿಂದ ತಾವು ಸೋಂಕಿತರಿಂದ ಎಷ್ಟು ಅಂತರದಲ್ಲಿದ್ದೀರಿ ಎಂದು ತಿಳಿಯುತ್ತದೆ. ಹಾಗೂ ಸೋಂಕಿತರು ಹತ್ತಿರ ಬಂದರೆ ಸೂಚನೆ ನೀಡುತ್ತದೆಯಾದ್ದರಿಂದ ಎಲ್ಲರೂ ಈ ಆಪ್‍ನ್ನು ಡೌನ್‍ಲೋಡ್ ಮಾಡಿ ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.

5 ಹೊಸ ಪ್ರಕರಣ

ಶನಿವಾರ ಜಿಲ್ಲೆಯಲ್ಲಿ ಹೊಸದಾಗಿ 5 ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿವೆ. ಆದರೆ ಯಾವುದೂ ಹೊಸ ಪ್ರಕರಣ ಅಲ್ಲ. ಹಿಂದಿನ ಪಾಸಿಟಿವ್ ಪ್ರಕರಣದ ಸಂಪರ್ಕ ಇರುವವರಾಗಿದ್ದಾರೆ ಎಂದರು.

ಸಿ ಜಿ ಆಸ್ಪತ್ರೆ ಕೋವಿಡ್ ಆಸ್ಪತ್ರೆ

ಜಿಲ್ಲೆಯ ಚಿಗಟೇರಿ ಆಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿದ್ದು 300 ಹಾಸಿಗೆಗಳ ವ್ಯವಸ್ಥೆ ಇದೆ. ಇತರೆ ಆರೋಗ್ಯದ ಸಮಸ್ಯೆಗಳಿಗೆ ಬಾಪೂಜಿ, ಎಸ್‍ಎಸ್ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಖಾಸಗಿ ಆಸ್ಪತ್ರೆಗಳು ಈ ವೇಳೆ ತೆರೆದು ಚಿಕಿತ್ಸೆ ನೀಡದಿದ್ದಲ್ಲಿ ಅವರ ಪರವಾನನಿ ರದ್ದುಪಡಿಸಲಾಗುವುದು ಎಂದರು.

ಮೇ 17 ರವರೆಗೆ 60 ವರ್ಷ ಮೇಲ್ಪಟ್ಟವರು, 10 ವರ್ಷದೊಳಗಿನ ಮಕ್ಕಳು ಹೊರ ಹೋಗಬಾರದು. ಹಾಗೂ ನಗರದ ಕೆಲ ಬಡಾವಣೆಗಳ ಹಾಸ್ಟೆಲ್‍ಗಳಲ್ಲಿ ಕ್ವಾರಂಟೈನ್ ಇರಿಸಿರುವ ಬಗ್ಗೆ ಭಯ ಬೇಡ. ಇದರಿಂದ ನಿವಾಸಿಗಳಿಗೆ ಯಾವುದೇ ರೀತಿ ತೊಂದರೆ ಇಲ್ಲ ಎಂದರು.

ಅನೇಕರು ಕೊರೊನಾ ಹಿನ್ನೆಲೆಯ ಮಾನಸಿಕ ಖಿನ್ನತೆಯಂತರ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರೆ 104 ಸಹಾಯವಾಣಿಗೆ ಕರೆ ಮಾಡಿದಲ್ಲಿ ಆಪ್ತ ಸಮಾಲೋಚನೆ ವ್ಯವಸ್ಥೆ ಮಾಡಲಾಗಿದೆ. ಆಪ್ತಮಿತ್ರ ಮತ್ತು ಟೆಲಿ ಐಸಿಯು ವ್ಯವಸ್ಥೆಯನ್ನೂ ರಾಜ್ಯ ಮಟ್ಟದಲ್ಲಿ ಪರಿಣಿತ ತಜ್ಞರಿಂದ ಮಾಡಲಾಗಿದ್ದು, ಸರ್ಕಾರ ಕೊರೊನಾ ನಿಗ್ರಹ ಮತ್ತು ಜನರ ಜೀವ ಉಳಿಸಲು ಮಾಡಬೇಕಾದ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಆನರೂ ಸಹಕರಿಸಬೇಕು. ಶುಚಿತ್ವ, ಅಂತರ, ಮಾಸ್ಕ್ ಬಳಸಬೇಕು. ಎಲ್ಲರಿಗೂ ಎನ್ 95, ಸರ್ಜಿಕಲ್ ಮಾಸ್ಕ್ ಬೇಡ. ಹತ್ತಿಯ ಮರು ಬಳಸಬಹುದಾದ ಮಾಸ್ಕ್ ಧರಿಸಬಹುದು ಎಂದರು.

ವೈದ್ಯರು ಮತ್ತು ಹೌಸ್‍ಸರ್ಜನ್‍ಗಳ ಸೇವೆ ದೊಡ್ಡದಾಗಿದ್ದು, ದಾವಣಗೆರೆಯ ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿರುವ ಹೌಸ್‍ಸರ್ಜನ್ ಮತ್ತು ಪಿಜಿ ವಿದ್ಯಾರ್ಥಿಗಳಿಗೆ 18 ತಿಂಗಳಿಂದ ಶಿಷ್ಯ ಭತ್ಯೆ ಬಂದಿಲ್ಲವೆಂಬ ಮಾಹಿತಿ ಲಭ್ಯವಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದ ಭತ್ಯೆ ಪಾವತಿಯಾದ ಬಗ್ಗೆ ಆಡಿಟ್ ಆಕ್ಷೇಪಣೆ ಹಿನ್ನೆಲೆ ಭತ್ಯೆ ನಿಲ್ಲಿಸಲಾಗಿದೆ. ಈ ಬಗ್ಗೆ ಚರ್ಚಿಸಿ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಜಗಳೂರು ಶಾಸಕ ಎಸ್.ವಿ.ರಾಮಚಂದ್ರ, ಹರಿಹರ ಶಾಸಕರಾದ ರಾಮಪ್ಪ, ವಿಧಾನಪರಿಷತ್ ಶಾಸಕ ನಾರಾಯಣಸ್ವಾಮಿ ಮಾತನಾಡಿದರು. ಶಾಸಕ ಪ್ರೊ.ಲಿಂಗಣ್ಣ, ಜಿ ಪಂ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಪಾಲಿಕೆ ಆಯುಕ್ತ ಬಿ.ಜಿ.ಅಜಯಕುಮಾರ್, ದೂಡಾ ಅಧ್ಯಕ್ಷ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್ ಇತರೆ ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending