Connect with us

ದಿನದ ಸುದ್ದಿ

ಮೇ ಅಂತ್ಯದೊಳಗೆ ಪ್ರತಿ ಜಿಲ್ಲೆಗೆ ಎರಡು ಕೋವಿಡ್ ಪರೀಕ್ಷಾ ಲ್ಯಾಬ್

Published

on

ಸುದ್ದಿದಿನ,ದಾವಣಗೆರೆ: ಸರ್ಕಾರದ ಕ್ರಮಗಳು ಮತ್ತು ಜನರ ಸಹಕಾರದಿಂದ ಮಾತ್ರ ಕೊರೊನಾ ನಿಗ್ರಹ ಸಾಧ್ಯ. ಜನರ ಜೀವ ಮತ್ತು ಜೀವನವನ್ನು ಸುಸ್ಥಿತಿಗೆ ತರಲು ಸರ್ಕಾರ ಹಗಲಿರುಳು ಶ್ರಮಿಸುತ್ತಿದ್ದು ಜನರು ಸಹಕರಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್ ಮನವಿ ಮಾಡಿದರು.

ಶನಿವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಡೀ ಜಗತ್ತನ್ನು ಕಣ್ಣಿಗೆ ಕಾಣದೊಂದು ವೈರಾಣು ನಡುಗಿಸುತ್ತಿದೆ. ವಿಶ್ವದಲ್ಲಿ ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮ ದೇಶ ಕೊರೊನಾ ನಿಯಂತ್ರಣ ಮಾಡುತ್ತಾ ಇದೆ. ದೇಶದಲ್ಲಿ ಸುಮಾರು 60 ಸಾವಿರ ಪಾಸಿಟಿವ್ ಪ್ರಕರಣಗಳಿದ್ದು, ನಮ್ಮ ರಾಜ್ಯ 13 ನೇ ಸ್ಥಾನದಲ್ಲಿ ಇದೆ.

ಮಾನ್ಯ ಮುಖ್ಯಮಂತ್ರಿಗಳು ಆರಂಭದಲ್ಲಿ ತೆಗೆದುಕೊಂಡ ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಸಾಧ್ಯವಾಗುತ್ತಿದೆ. ಜೀವ ಉಳಿಸುವ ಜೊತೆಗೆ ಜನಜೀವನ ಸುಧಾರಣೆ ಎರಡೂ ಕೆಲಸಗಳನ್ನು ಸಮತೋಲನದಿಂದ ಸರಿದೂಗಿಸಬೇಕಿದೆ. ಕೊರೊನಾ ಕೂಡ ಇರುತ್ತದೆ. ಆದರೆ ನಾವು ಅದರಿಂದ ದೂರ ಇರಬೇಕು.

ನಾಲ್ಕು ಟಿ

ಟ್ರ್ಯಾಕಿಂಗ್, ಟ್ರೇಸಿಂಗ್, ಟೆಸ್ಟಿಂಗ್ ಮತ್ತು ಟ್ರೀಟ್‍ಮೆಂಟ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೊರೊನಾ ನಿಗ್ರಹಿಸಲಾಗುತ್ತಿದೆ. ಕೊರೊನಾ ನಿಯಂತ್ರಣ ಕೇವಲ ಸರ್ಕಾರದ ಕೈಯಲ್ಲಿಲ್ಲ ಬದಲಾಗಿ ಎಲ್ಲ ಜನತೆ ಸಹಕಾರ ಅತ್ಯಗತ್ಯವಾಗಿದೆ ಎಂದರು.

ಕೊರೊನಾ ಸಾಮಾಜಿಕ ಕಳಂಕ ಅಲ್ಲ,ಅನಗತ್ಯ ಆತಂಕ ಬೇಡ

ಕೊರೊನಾ ರೋಗಕ್ಕೆ ನಿಖರವಾದ ಚಿಕಿತ್ಸೆ ಇಲ್ಲ. ಎಷ್ಟೋ ಅಂತೆ-ಕಂತೆಗಳು ಆಗಿ ಹೋಗಿವೆ. ಈ ನಿಟ್ಟಿನಲ್ಲಿ ಸರ್ಕಾರ ಪ್ರತಿದಿನ ಹೊಸ ಮಾರ್ಗಸೂಚಿಗಳನ್ನು ನೀಡುವ ಮೂಲಕ ಕೊರೊನಾ ನಿಯಂತ್ರಣದಲ್ಲಿ ಶ್ರಮ ವಹಿಸುತ್ತಿದೆ.

ಕೊರೊನಾ ಸಾಮಾಜಿಕ ಕಳಂಕ ಅಲ್ಲ. ಯಾರಿಗೆ ಬೇಕಾದರೂ ಬರಬಹುದು. ಸೋಂಕಿನ ಬಗ್ಗೆ ಭಯ ಬೇಡ. ಯಾವ ವೈರಾಣುವೂ ಜನರನ್ನು ಸೋಲಿಸಿಲ್ಲ. ಬದಲಾಗಿ ಜನರು ವೈರಾಣುವನ್ನು ಸೋಲಿಸಿದ್ದಾರೆ. ಕೊರೊನಾವನ್ನೂ ಸೋಲಿಸಲು ಸ್ವಲ್ಪ ಸಮಯ ಬೇಕು. ಆದ ಕಾರಣ ಜನರು ಅಂತರ ಕಾಯ್ದುಕೊಳ್ಳುವ ಮೂಲಕ, ಸ್ವಚ್ಚತೆ, ಮಾಸ್ಕ್ ಧರಿಸುವ ಮೂಲಕ ಹಾಗೂ ಸರ್ಕಾರದ ನಿಯಮ, ಸೂಚನೆಗಳನ್ನು ಪಾಲಿಸುವ ಮೂಲಕ ಕೊರೊನಾ ನಿಗ್ರಹಿಸಲು ಸಹಕರಿಸಬೇಕು.

ಜನರಿಗೆ ಸಮರ್ಪಕ ಮಾಹಿತಿ ಮತ್ತು ಧೈರ್ಯ ತುಂಬಬೇಕು

ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಬಂದ ಪ್ರಕರಣಗಳ ಪೈಕಿ ಈಗಾಗಲೇ ಶೇ.50 ಗುಣಮುಖರಾಗಿದ್ದಾರೆ. ಶೇ 80 ರಷ್ಟು ಜನರು ಚಿಕಿತ್ಸೆ ಇಲ್ಲದೆಯೇ ಗುಣಮುಖರಾಗುತ್ತಾರೆ. ಮರಣ ಪ್ರಮಾಣ ಶೇ.3.1 ರಷ್ಟಿದ್ದು, ಅದರಲ್ಲೂ ಹೃದಯ ತೊಂದರೆ, ಕ್ಯಾನ್ಸರ್, ಡಯಾಬಿಟಿಕ್ ಇತರೆ ತೊಂದರೆಯಿಂದ ಬಳಲುವವರು ಮರಣಕ್ಕೆ ತುತ್ತಾಗುವ ಸಂಭವ ಹೆಚ್ಚಿದೆ. ಆದ್ದರಿಂದ ಜನರಲ್ಲಿ ಭಯ ಬೇಡ. ಆದರೆ ಅಂತರ ಕಾಯ್ದುಕೊಂಡು, ಸ್ವಚ್ಚತೆ ಕಾಪಾಡಿಕೊಂಡು ನಿಯಮಗಳನ್ನು ಪಾಲಿಸಬೇಕು. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಜನರಿಗೆ ಸಮರ್ಪಕ ಮಾಹಿತಿ ಮತ್ತು ಧೈರ್ಯವನ್ನು ತುಂಬಬೇಕೆಂದರು.

ಆರೋಗ್ಯಸೇತು ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಜಿಲ್ಲೆಯ ಎಲ್ಲ ಜನತೆ ಆರೋಗ್ಯಸೇತು ಆ್ಯಪ್ ನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು. ಜನಪ್ರತಿನಿಧಿಗಳು, ಅಧಿಕಾರಿಗಳು ಈ ಆಪ್ ಬಗ್ಗೆ ಸಾಕಷ್ಟು ಪ್ರಚಾರ ನೀಡಬೇಕು. ಈ ಆ್ಯಪ್‍ನ ಸಹಾಯದಿಂದ ತಾವು ಸೋಂಕಿತರಿಂದ ಎಷ್ಟು ಅಂತರದಲ್ಲಿದ್ದೀರಿ ಎಂದು ತಿಳಿಯುತ್ತದೆ. ಹಾಗೂ ಸೋಂಕಿತರು ಹತ್ತಿರ ಬಂದರೆ ಸೂಚನೆ ನೀಡುತ್ತದೆಯಾದ್ದರಿಂದ ಎಲ್ಲರೂ ಈ ಆಪ್‍ನ್ನು ಡೌನ್‍ಲೋಡ್ ಮಾಡಿ ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.

5 ಹೊಸ ಪ್ರಕರಣ

ಶನಿವಾರ ಜಿಲ್ಲೆಯಲ್ಲಿ ಹೊಸದಾಗಿ 5 ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿವೆ. ಆದರೆ ಯಾವುದೂ ಹೊಸ ಪ್ರಕರಣ ಅಲ್ಲ. ಹಿಂದಿನ ಪಾಸಿಟಿವ್ ಪ್ರಕರಣದ ಸಂಪರ್ಕ ಇರುವವರಾಗಿದ್ದಾರೆ ಎಂದರು.

ಸಿ ಜಿ ಆಸ್ಪತ್ರೆ ಕೋವಿಡ್ ಆಸ್ಪತ್ರೆ

ಜಿಲ್ಲೆಯ ಚಿಗಟೇರಿ ಆಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿದ್ದು 300 ಹಾಸಿಗೆಗಳ ವ್ಯವಸ್ಥೆ ಇದೆ. ಇತರೆ ಆರೋಗ್ಯದ ಸಮಸ್ಯೆಗಳಿಗೆ ಬಾಪೂಜಿ, ಎಸ್‍ಎಸ್ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಖಾಸಗಿ ಆಸ್ಪತ್ರೆಗಳು ಈ ವೇಳೆ ತೆರೆದು ಚಿಕಿತ್ಸೆ ನೀಡದಿದ್ದಲ್ಲಿ ಅವರ ಪರವಾನನಿ ರದ್ದುಪಡಿಸಲಾಗುವುದು ಎಂದರು.

ಮೇ 17 ರವರೆಗೆ 60 ವರ್ಷ ಮೇಲ್ಪಟ್ಟವರು, 10 ವರ್ಷದೊಳಗಿನ ಮಕ್ಕಳು ಹೊರ ಹೋಗಬಾರದು. ಹಾಗೂ ನಗರದ ಕೆಲ ಬಡಾವಣೆಗಳ ಹಾಸ್ಟೆಲ್‍ಗಳಲ್ಲಿ ಕ್ವಾರಂಟೈನ್ ಇರಿಸಿರುವ ಬಗ್ಗೆ ಭಯ ಬೇಡ. ಇದರಿಂದ ನಿವಾಸಿಗಳಿಗೆ ಯಾವುದೇ ರೀತಿ ತೊಂದರೆ ಇಲ್ಲ ಎಂದರು.

ಅನೇಕರು ಕೊರೊನಾ ಹಿನ್ನೆಲೆಯ ಮಾನಸಿಕ ಖಿನ್ನತೆಯಂತರ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರೆ 104 ಸಹಾಯವಾಣಿಗೆ ಕರೆ ಮಾಡಿದಲ್ಲಿ ಆಪ್ತ ಸಮಾಲೋಚನೆ ವ್ಯವಸ್ಥೆ ಮಾಡಲಾಗಿದೆ. ಆಪ್ತಮಿತ್ರ ಮತ್ತು ಟೆಲಿ ಐಸಿಯು ವ್ಯವಸ್ಥೆಯನ್ನೂ ರಾಜ್ಯ ಮಟ್ಟದಲ್ಲಿ ಪರಿಣಿತ ತಜ್ಞರಿಂದ ಮಾಡಲಾಗಿದ್ದು, ಸರ್ಕಾರ ಕೊರೊನಾ ನಿಗ್ರಹ ಮತ್ತು ಜನರ ಜೀವ ಉಳಿಸಲು ಮಾಡಬೇಕಾದ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಆನರೂ ಸಹಕರಿಸಬೇಕು. ಶುಚಿತ್ವ, ಅಂತರ, ಮಾಸ್ಕ್ ಬಳಸಬೇಕು. ಎಲ್ಲರಿಗೂ ಎನ್ 95, ಸರ್ಜಿಕಲ್ ಮಾಸ್ಕ್ ಬೇಡ. ಹತ್ತಿಯ ಮರು ಬಳಸಬಹುದಾದ ಮಾಸ್ಕ್ ಧರಿಸಬಹುದು ಎಂದರು.

ವೈದ್ಯರು ಮತ್ತು ಹೌಸ್‍ಸರ್ಜನ್‍ಗಳ ಸೇವೆ ದೊಡ್ಡದಾಗಿದ್ದು, ದಾವಣಗೆರೆಯ ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿರುವ ಹೌಸ್‍ಸರ್ಜನ್ ಮತ್ತು ಪಿಜಿ ವಿದ್ಯಾರ್ಥಿಗಳಿಗೆ 18 ತಿಂಗಳಿಂದ ಶಿಷ್ಯ ಭತ್ಯೆ ಬಂದಿಲ್ಲವೆಂಬ ಮಾಹಿತಿ ಲಭ್ಯವಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದ ಭತ್ಯೆ ಪಾವತಿಯಾದ ಬಗ್ಗೆ ಆಡಿಟ್ ಆಕ್ಷೇಪಣೆ ಹಿನ್ನೆಲೆ ಭತ್ಯೆ ನಿಲ್ಲಿಸಲಾಗಿದೆ. ಈ ಬಗ್ಗೆ ಚರ್ಚಿಸಿ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಜಗಳೂರು ಶಾಸಕ ಎಸ್.ವಿ.ರಾಮಚಂದ್ರ, ಹರಿಹರ ಶಾಸಕರಾದ ರಾಮಪ್ಪ, ವಿಧಾನಪರಿಷತ್ ಶಾಸಕ ನಾರಾಯಣಸ್ವಾಮಿ ಮಾತನಾಡಿದರು. ಶಾಸಕ ಪ್ರೊ.ಲಿಂಗಣ್ಣ, ಜಿ ಪಂ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಪಾಲಿಕೆ ಆಯುಕ್ತ ಬಿ.ಜಿ.ಅಜಯಕುಮಾರ್, ದೂಡಾ ಅಧ್ಯಕ್ಷ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್ ಇತರೆ ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending