Connect with us

ದಿನದ ಸುದ್ದಿ

18 ವರ್ಷದ ಮೇಲ್ಪಟ್ಟ ಎಲ್ಲಾ ವಿಕಲಚೇತನರಿಗೆ ಕೋವಿಡ್ ಲಸಿಕೆ ಕಡ್ಡಾಯ ; ಕೋವಿಡ್ ಲಸಿಕೆ ಜೀವ ರಕ್ಷಕ, ಲಸಿಕೆ ಪಡೆಯಲು ಹಿಂಜರಿಯಬೇಡಿ : ಪ್ರವೀಣ್ ನಾಯಕ್

Published

on

ಸುದ್ದಿದಿನ,ದಾವಣಗೆರೆ : ಕೋವಿಡ್-19 ಕೊರೋನಾ ಸೋಂಕು ತಡೆಗಟ್ಟಲು ಜಿಲ್ಲೆಯಲ್ಲಿರುವ 18 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರಿಗೆ ಹಾಗೂ ವಿಕಲ ಚೇತನರ ಆರೈಕೆದಾರರಿಗೆ ಆದ್ಯತೆಯ ಮೇರೆಗೆ ಕೋವಿಡ್-19 ಲಸಿಕೆ ನೀಡಲಾಗುತ್ತಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾನೂನು ಸೇವಾ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ್ ತಿಳಿಸಿದರು.

ಬುಧವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ವಿಕಲಚೇತನರಿಗೆ ಲಸಿಕೆ ಜಾಗೃತಿ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದರು.

ಉಚ್ಚನ್ಯಾಯಲದ ನ್ಯಾಯಧೀಶರಾದ ಕೆ.ಎನ್.ಫಣೀಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಅಂಗವಿಲತೆ ಹೊಂದಿರುವವರಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ಸಹಾಯ ಮಾಡುವಂತೆ ನಿರ್ದೇಶನ ನೀಡಲಾಗಿದ್ದು, ಅದರಂತೆ ಎಲ್ಲಾ ವಿಕಲಚೇತನರಿಗೆ ಲಸಿಕೆ ಹಾಕಿಸಿಕೊಳ್ಳಲು ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳುತ್ತಿದ್ದೇವೆ.

ಸಾಮಾನ್ಯ ಜನರಿಗೆ ಕೊರೊನಾ ಸೋಂಕು ತಗುಲಿದರೆ ಬೇಗ ಗುಣಮುಖರಾಗುತ್ತಾರೆ. ಆದರೆ ಅಂಗವಿಕಲರು ಔಷಧಿಗಳನ್ನು ಪಡೆಯುತ್ತಿದ್ದು ಅವರಿಗೆ ಸೋಂಕು ತಗುಲಿದರೆ ಜೀವಕ್ಕೆ ತೀವ್ರ ಹಾನಿ ಉಂಟಾಗುವ ಸಂಭವವಿರುವುದರಿಂದ ವಿಕಲಚೇತನರು ತಡಮಾಡದೇ ಲಸಿಕೆಯನ್ನು ಹಾಕಿಸಿಕೊಳ್ಳಲು ಮುಂದೆ ಬರಬೇಕು ಎಂದು ಕರೆ ನೀಡಿದರು.

ವಿಕಲಚೇತನರ ಆರೈಕೆದಾರರಿಗೂ ಲಸಿಕೆ ನೀಡಲಾಗುತ್ತಿದ್ದು ಲಸಿಕಾ ಕೇಂದ್ರಕ್ಕೆ ಆಗಮಿಸುವಾಗ ಕಡ್ಡಾಯವಾಗಿ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ನ್ನು ತಪ್ಪದೇ ತರಬೇಕು. ಒಂದು ವೇಳೆ ಗುರುತಿನ ಚೀಟಿ ಇಲ್ಲದವರು ಅನುಬಂಧ 4ನೇ ನಮೂನೆಯಡಿಯಲ್ಲಿ ಹೆಸರನ್ನು ನೊಂದಯಿಸಿಕೊಂಡು ಲಸಿಕೆ ಪಡೆಯಬಹುದು ಎಂದು ತಿಳಿಸಿದರು.

ಬುದ್ಧಿಮಾಂದ್ಯ ಮತ್ತು ಮಾನಸಿಕ ಅಸ್ವಸ್ಥರು ಮತ್ತು ಅವರ ಆರೈಕೆದಾರರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು. ಒಂದು ವೇಳೆ ಲಸಿಕಾ ಕೇಂದ್ರಕ್ಕೆ ಆಗಮಿಸಲು ಆಗದೆ ಇರುವಂತಹ ವಿಕಲಚೇತನರಿಗೆ ಮನೆ ಬಾಗಿಲಿಗೆ ಬಂದು ಲಸಿಕೆಯನ್ನು ಹಾಕಲಾಗುವುದು. ಅಂತಹವರು ಅಂಗವಿಕಲರ ಕಲ್ಯಾಣ ಇಲಾಖೆಯ ದೂರವಾಣಿ ಸಂಖ್ಯೆ 263939 ಅಥವಾ 263936 ಕ್ಕೆ ಕರೆ ಮಾಡಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಿ.ಎಸ್. ಶಶಿಧರ್ ಪ್ರಾಸ್ತವಿಕವಾಗಿ ಮಾತನಾಡಿ, ಅಂಗವೈಕಲ್ಯದಿಂದಾಗಿ ಪ್ರಯಾಣಿಸಲು ಸಾಧ್ಯವಾಗದ ವ್ಯಕ್ತಿಗಳ ಪ್ರಕರಣಗಳಲ್ಲಿ ಮನೆ ಬಾಗಿಲಿಗೆ ಲಸಿಕೆ ನೀಡಲಾಗುತ್ತದೆ. ಕೊರೊನಾ ಸೋಂಕು ತಡೆಗಟ್ಟಲು ಹೈಕೋರ್ಟ್ ನಿರ್ದೇಶನದ ಮೆರೆಗೆ ರಾಜ್ಯ ಸರ್ಕಾರವು 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಕೋವಿಡ್-19 ನಿಗ್ರಹ ಲಸಿಕೆಯನ್ನು ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಆವರಣದಲ್ಲಿರುವ ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿದಿನ 100 ಜನರಿಗೆ ಆದ್ಯತೆಯ ಮೇಲೆ ಲಸಿಕೆ ನೀಡಲಾಗುತ್ತಿದ್ದು, ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ವಿಕಲಚೇತನರಿಗೆ ಲಸಿಕೆ ಪಡೆಯುವಲ್ಲಿ ಹಿಂಜರಿಕೆ ಇದ್ದು ಮನೆಗೆ ಹೋಗಿ ತಿಳಿಸಿದರು ಸಹ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಿಲ್ಲ. ಆದ್ದರಿಂದ ಪ್ರಧಾನ ಸತ್ರ ನ್ಯಾಯಧೀಶರ ಆದೇಶದಂತೆ ಲಸಿಕೆ ಹಾಕಿಸಿಕೊಳ್ಳುವ ಬಗ್ಗೆ ಈ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಈ ವೇಳೆ “ಕೋವಿಡ್-19 ಲಸಿಕೆ ಪಡೆದು ಜೀವ ಉಳಿಸಿ, ವಿಕಲಚೇತನರೆ ಲಸಿಕೆ ಪಡೆಯಿರಿ, ವಿಕಲಚೇತನರೆ ಲಸಿಕೆ ಪಡೆಯಲು ಹಿಂಜರಿಯಬೇಡಿ, ಕೋವಿಡ್ ಲಸಿಕೆ ಜೀವ ರಕ್ಷಕ ಲಸಿಕೆ ಪಡೆಯಲು ಹಿಂಜರಿಯಬೇಡಿ” ಎಂಬಂತಹ ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ನಗರದ ಮಹಾನಗರಪಾಲಿಕೆಯ ಮಂಜುನಾಥ್, ನಾಗರತ್ನ, ಸೌಮ್ಯ ಹಾಗೂ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending