ದಿನದ ಸುದ್ದಿ
ಲಸಿಕೆ ಪಡೆಯಲು ಹೈಡ್ರಾಮ, ತಂತ್ರಗಾರಿಕೆ ಅನುಸರಿಸಿ ಲಸಿಕೆ ನೀಡಿಕೆ ; ಶುಕ್ರವಾರದೊಳಗೆ ಶೇ 100 ರಷ್ಟು ಲಸಿಕಾ ಗುರಿ ಸಾಧನೆ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಹಳೇ ದಾವಣಗೆರೆ ಭಾಗದಲ್ಲಿ ಕೊರೋನ ಲಸಿಕೆ ಪಡೆಯಲು ವಿವಿಧ ಕಾರಣಗಳನ್ನು ನೀಡಿ ಬಚಾವಾಗಲು ಪ್ರಯತ್ನಿಸುತ್ತಿದ್ದವರಿಗೆ ಅವರದೇ ಧಾಟಿಯಲ್ಲಿ ಉತ್ತರ ನೀಡುವ ಮೂಲಕ ಲಸಿಕೆ ನೀಡಲಾಯಿತು ಹಾಗೂ ಲಸಿಕೆ ಪಡೆಯಲು ಪ್ರತಿರೋಧ ತೋರುತ್ತಿದ್ದವರಿಗೆ ಒತ್ತಡ ತಂತ್ರದ ಮೂಲಕವೂ ಲಸಿಕೆ ನೀಡಲಾಯಿತು.
ಬುಧವಾರ ಹಳೆ ದಾವಣಗೆರೆ ಭಾಗದ ಭಾಷಾನಗರ, ಮುಸ್ತಫಾ ನಗರ, ಶಿವ ನಗರಗಳಲ್ಲಿ ಮನೆ ಮನೆಗಳಿಗೆ ತೆರಳಿ ಲಸಿಕೆ ಹಾಕಲಾಯಿತು. ಶಿವ ನಗರದಲ್ಲಿ ಸಾಕಷ್ಟು ಮನೆಗಳವರು ಲಸಿಕಾ ತಂಡ ನೋಡುತ್ತಿದ್ದಂತೆ ಓಡಿಹೋಗಿ ಬಾಗಿಲುಗಳನ್ನು ಬಂದ್ ಮಾಡಿಕೊಂಡರು, ಹಲವರು ಮೈಗೆ ಹುಷಾರಿಲ್ಲ, ಆಧಾರ್ ಕಾರ್ಡ್ ಇಲ್ಲ, ಎಂಬಿತ್ಯಾದಿ ಕಾರಣಗಳನ್ನು ಹೇಳಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಬಿಡದೆ ಲಸಿಕೆ ನೀಡಲಾಯಿತು.
ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ‘ಹರ್ ಘರ್ ದಸ್ತಕ್’ ಘೋಷಣೆಯಂತೆ ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತಿದೆ, ಪ್ರಮುಖವಾಗಿ ದಾವಣಗೆರೆ ಹಳೇ ಭಾಗದಲ್ಲಿ ಲಸಿಕಾಕರಣ ಕಡಿಮೆಯಿದ್ದು ಕಳೆದ ಮೂರು ದಿನಗಳಿಂದ ವೇಗ ಪಡೆದುಕೊಂಡಿದೆ.
ಜಿಲ್ಲೆಯಲ್ಲಿ ಪ್ರತಿದಿನ 30 ರಿಂದ 35 ಸಾವಿರದಷ್ಟು ಜನರಿಗೆ ಲಸಿಕೆ ಹಾಕಲಾಗುತ್ತಿದೆ. ಶುಕ್ರವಾರ(ಡಿ,3)ದೊಳಗೆ ಶೇಕಡಾ ನೂರರಷ್ಟು ಲಸಿಕೆ ಹಾಕುವ ಗುರಿ ಇದ್ದು ಯಶಸ್ವಿಯಾಗುವ ವಿಶ್ವಾಸವಿದೆ. ಲಸಿಕೆ ಬಗೆಗಿನ ಸುಳ್ಳು ವದಂತಿಗಳಿಗೆ ಕಿವಿಗೊಟ್ಟ ಜನ, ತಪ್ಪು ಕಲ್ಪನೆಯಿಂದ ಲಸಿಕೆ ಹಾಕಿಸಿಕೊಳ್ಳುವುದರಿಂದ ತಪ್ಪಿಸಿಕೊಳ್ಳುತ್ತಿರುವುದು ಕಂಡುಬಂದಿದೆ.
ಸ್ಥಳೀಯ ಮುಖಂಡರು, ಆರೋಗ್ಯ ಇಲಾಖೆ ಸಿಬ್ಬಂದಿ ಸಹಕಾರದೊಂದಿಗೆ ವಿವಿಧ ಪ್ರಕಾರದ ಮನವೊಲಿಕೆ ಮೂಲಕ ಮತ್ತು ಒತ್ತಡ ಹಾಕುವ ಮೂಲಕ ಲಸಿಕೆ ಹಾಕಿಸಿಕೊಳ್ಳಲು ಪ್ರೇರೇಪಿಸಲಾಗುತ್ತಿದೆ ಎಂದರು.
ಲಸಿಕೆ ಹಾಕಿಸಿಕೊಳ್ಳದವರಿಗೆ ಸರ್ಕಾರಿ ಸೌಲಭ್ಯ ಕಡಿತದ ಬಗೆಗೆ ನಿರ್ದೇಶನವಿಲ್ಲ, ಆದರೂ ಹೊಸದಾಗಿ ಬರುತ್ತಿರುವ ಓಮಿಕ್ರಾನ್ನಿಂದ ಬಚಾವಾಗಲು ಲಸಿಕೆ ಅನಿವಾರ್ಯ ಎಂಬುದನ್ನು ಮನದಟ್ಟು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಲಸಿಕಾ ಅಭಿಯಾನದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಡಿಹೆಚ್ಓ ಡಾ.ನಾಗರಾಜು, ಆರ್ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ ಸರ್ವೇಕ್ಷಣಾ ಅಧಿಕಾರಿ ಡಾ.ರಾಘವನ್, ಪೊಲೀಸ್ ಇಲಾಖಾ ಸಿಬ್ಬಂದಿ ಅಂಗನವಾಡಿ ಆಶಾ ಕಾರ್ಯಕರ್ತರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243