Connect with us

ಲೈಫ್ ಸ್ಟೈಲ್

ಕಾಡಿನ ರಾಣಿ ‘ಗುಲಗಂಜಿ’ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಹತ್ವದ ಮಾಹಿತಿ..!

Published

on

  • ಸೌಮ್ಯ ಅಶೋಕ್, ಬೆಂಗಳೂರು

ಗುಲಗಂಜಿ ಎಂದರೆ, ಎಲ್ಲರಿಗೂ ನೆನಪಾಗುವುದು ಕೆಂಪು ಮೈ ಹಾಗೂ ಕಪ್ಪು ತುದಿಯುಳ್ಳ ಬೀಜ ಹಾಗೂ ಹಿಂದೇ ಹೇಳುತ್ತಿದ್ದ ಮಾತು “ಗುಲಗಂಜಿ ಪೂರ್ಣ ಕೆಂಪಾದರೆ ಪ್ರಳಯವಾಗುತ್ತದೆ” ಎಂಬುದು. ಇದನ್ನು “ಕಾಡಿನ ರಾಣಿ” ಎಂದು ಕೂಡ ಕರೆಯುತ್ತಾರೆ. ಇಷ್ಟು ಮಾತ್ರವಲ್ಲದೆ ಇದರಲ್ಲಿ ವಿವಿಧ ಬಣ್ಣದ ಗುಲಗಂಜಿ ಇರುವುದು ಹಾಗೂ ಆಯುರ್ವೇದದಲ್ಲಿ ಕೂಡ ಉಪಯೋಗಿಸುತ್ತಾರೆ ಎಂಬುದು ಸಹ ಹಲವರಿಗೆ ತಿಳಿದಿಲ್ಲ.

ಇದು ಎಷ್ಟು ಉಪಯೋಗ ಇದೆಯೋ ಅಷ್ಟೇ ಅಪಾಯಕಾರಿಯು ಹೌದು. ಇಂಗ್ಲೀಷ್‌ನಲ್ಲಿ ಇದನ್ನು ಕ್ರ್ಯಾಬ್ಸ್ ಐ, ಇಂಡಿಯನ್ ಲಿಕರಿಸ್, ಜೆಕ್ವೈರಿಟಿ ಎಂದು ಕರೆಯುತ್ತಾರೆ. ಇದು ಲೆಗ್ಯೂಮಿನೋಸೀ ಕುಟುಂಬ, ಪ್ಯಾಪಿಲಿಯೋನೇಸೀ ಎಂಬ ಉಪಕುಟುಂಬಕ್ಕೆ ಸೇರಿದ ಒಂದು ಬಳ್ಳಿ. ಇದನ್ನು ಮೊದಲು ಬಂಗಾರದ ಅಂಗಡಿಗಳಲ್ಲಿ ಬಂಗಾರವನ್ನು ತೂಕ ಮಾಡಲು ಬಳಸುತ್ತಿದ್ದರು. ಗುಲಗಂಜಿ ತುಂಬಾ ಮನಮೋಹಕ ಬಣ್ಣವುಳ್ಳದ್ದಾಗಿದ್ದು, ಇದರ ಗಾತ್ರ ತೊಗರಿ/ಅಲಸಂದೆ ಕಾಳಿನಷ್ಟಾಗಿರುತ್ತದೆ.

ಗುಲಗಂಜಿಯ ಬಗ್ಗೆ ಒಂದು ಗಾದೆ ಮಾತು ಕೂಡ ಉಂಟು “ಕೋತಿ ಕೈಗೆ ಗುಲಗಂಜಿ ಕೊಟ್ಟಂಗೆ” ಬೆಲೆ ಗೊತ್ತಿಲ್ಲದವರ ಕೈಯಲ್ಲಿ ಬೆಲೆಬಾಳುವ ವಸ್ತುವೊಂದನ್ನು ಕೊಟ್ಟರೆ ಏನಾಗಬಹುದು ಎನ್ನುವುದಕ್ಕೆ ಈ ಗಾದೆಯನ್ನು ಬಳಸುತ್ತಾರೆ. ಈಗ ಗುಲಗಂಜಿ ಎಲ್ಲಿ ಬೆಳೆಯುತ್ತದೆ, ವಿವಿಧ ಬಣ್ಣಗಳು , ಉಪಯೋಗ ಮತ್ತು ಅಪಾಯಗಳ ಕುರಿತು ಸಂಕ್ಷಿಪ್ತವಾಗಿ ತಿಳಿಯೋಣ.

ಗುಲಗಂಜಿಯ ವ್ಯಾಪ್ತಿ ಹಾಗೂ ವಿಧಗಳು

ಭಾರತಾದ್ಯಂತ ಗುಲಗಂಜಿಯ ವ್ಯಾಪ್ತಿ ಉಂಟು, ಬಯಲು ಸೀಮೆಗಳಲ್ಲಿ ಇದು ಹೇರಳವಾಗಿದೆ. ಹಿಮಾಲಯದಲ್ಲಿ 1,100ಮೀ.ಎತ್ತರದ ಪ್ರದೇಶದಲ್ಲಿಯೂ ಚನ್ನಾಗಿ ಬೆಳೆಯುತ್ತದೆ. ಇತರ ಆಸರೆ ಸಸ್ಯಗಳನ್ನು ಆಶ್ರಯಿಸಿ ಬೆಳೆಯುವ ಬಳ್ಳಿಯಾದ ಇದು ಸುಮಾರು 8-10 ಮೀಟರ್ ಎತ್ತರಕ್ಕೆ ಬೆಳೆಯುತ್ತದೆ.

ಗುಲಗಂಜಿಯ ಗಿಡವು ಹಳದಿ ಬಣ್ಣದ್ದಾಗಿದ್ದು, ಕೆಂಪು ಬಣ್ಣದ ಹೂವುಗಳನ್ನು ಹೊಂದಿರುತ್ತದೆ. ಹೂವುಗಳು ಗಾತ್ರದಲ್ಲಿ ಚಿಕ್ಕವು. ಸಾಮಾನ್ಯವಾಗಿ ಅನೇಕ ಫಲಗಳು ಒಂದು ಗೊಂಚಲಿನಲ್ಲಿರುತ್ತವೆ. ಬಲಿತು ಒಣಗಿದ ಅನಂತರ ಕಾಯಿಗಳು ಬಿರಿಯುವುದರಿಂದ ಒಳಗಿನ ಬೀಜಗಳು ಕಾಣಿಸುತ್ತದೆ.

ಗುಲಗಂಜಿಯ ಬೀಜಗಳು 4-5 ಬಣ್ಣಗಳಲ್ಲಿ ಲಭ್ಯವಿದೆ ಕೆಂಪು, ಬಿಳಿ, ನೀಲಿ, ಹಸಿರು ಹಾಗೂ ಕಪ್ಪು. ಹಸಿರು ಹಾಗು ಕಪ್ಪು ಗುಲಗಂಜಿಗಳು ಸಿಗುವುದು ತುಂಬ ವಿರಳ.

ಉಪಯೋಗಗಳು

  1. ಗುಲಗಂಜಿಯನ್ನು ಬಂಗಾರದ ಅಂಗಡಿಯಲ್ಲಿ ಹಾರಗಳು ಮತ್ತು ಜಪಮಾಲೆಗಳನ್ನು ತಯಾರಿಸಲು ಹಾಗು ಮೊದಲು ಚಿನ್ನವನ್ನು ತೂಕ ಮಾಡಲು (ತೂಕದ ಯಂತ್ರ ಬರುವ ಮೊದಲು) ಬಳಸುತ್ತಿದ್ದರು.
  2. ಗುಲಗಂಜಿಯ ಬೇರನ್ನು ಮತ್ತು ಬೀಜವನ್ನು ಚೂರ್ಣ ಮಾಡಿಕೊಂಡು, ಎಮ್ಮೆ ಹಾಲಿಗೆ ಹಾಕಿ ಕಲಸಿ ಮೊಸರು ಮಾಡಿ ಬೆಣ್ಣೆ ತೆಗೆದು ನಿತ್ಯವು ಒಳಕಿವಿಗೆ ಲೇಪಿಸುವುದರಿಂದ ಕಿವಿಯ ತೊಂದರೆ ವಾಸಿಯಾಗುತ್ತದೆ.
  3. ಗುಲಗಂಜಿಯ ಬೇರನ್ನು ಬಾಯಿಯಲ್ಲಿ ಜಗಿದು ರಸವಿಟ್ಟು ಕೊಳ್ಳುವುದರಿಂದ, ಹುಳುಕು ಹಲ್ಲಿನ ತೊಂದರೆ ನಿವಾರಣೆಯಾಗುತ್ತದೆ.
  4. ಗುಲಗಂಜಿ ಎಲೆಯ ರಸ ಅಥವಾ ಬೇರನ್ನು ಅರೆದು ಸೇವಿಸುವುದರಿಂದ ರಕ್ತ ಶುದ್ಧಿಯಾಗುತ್ತದೆ. ಹಾಗೆ ಗಂಟಲು ನೋವು ಮತ್ತು ಒಣಕೆಮ್ಮು ಕಡಿಮೆಯಾಗುತ್ತದೆ.
  5. ಗುಲಗಂಜಿ ಎಲೆಯ ರಸವನ್ನು, ಚರ್ಮದ ಮೇಲಿನ ಕಲೆಗಳಿರುವ ಕಡೆ ಲೇಪಿಸುವುದರಿಂದ ಕಲೆಗಳ ನಿವಾರಣೆಯಾಗುತ್ತದೆ.
  6. ನಾಯಿ ಕಡಿದವರಿಗೆ ಸೊಪ್ಪನ್ನು ಅರೆದು ಎಳ್ಳೆಣೆಯೊಡನೆ ಕುಡಿಸುತ್ತಾರೆ.
  7. ತಲೆ,ಹುಬ್ಬು,ಮೀಸೆಯ ಕೂದಲು ಉದುರುತ್ತಿದ್ದರೆ, ಗುಲಗಂಜಿಯ ಬೇರನ್ನು ನೀರಿನಲ್ಲಿ ತೇದು ಕೂದಲು ಉದುರಿದ ಕಡೆ ಮಂದವಾಗಿ ಲೇಪಿಸುವುದರಿಂದ ಕ್ರಮೇಣ ಕೂದಲು ಬೆಳೆಯುತ್ತದೆ.
  8. ಕಾಲು, ಸೊಂಟ ಮತ್ತು ಯಾವುದೇ ಗಂಟು ನೋವು ಇದ್ದರೆ, ಗುಲಗಂಜಿಯ ಬೀಜದ ಪುಡಿಯನ್ನು ಬಿಸಿನೀರಿನಲ್ಲಿ ಕಲಸಿ ಹಚ್ಚುವುದರಿಂದ ನೋವು ಗಂಟು ಕಡಿಮೆಯಾಗುತ್ತದೆ.
  9. ಬಿಳಿ ಗುಲಗಂಜಿ ಬೇರಿನ ಪುಡಿಯನ್ನು ಸೇವಿಸುವುದರಿಂದ ಬುದ್ಧಿಶಕ್ತಿ ಹೆಚ್ಚುತ್ತದೆ.
  10. ಗುಲಗಂಜಿಯ ಎಲೆ ತುಂಬಾ ಸಿಹಿ ಇರುತ್ತದೆ. ಅದರೇ ಗುಲಗಂಜಿಯು ಉಷ್ಣಕಾರಕ, ಇದನ್ನು ಗೊಗ್ಗರು ಧ್ವನಿಯನ್ನು ಸರಿಪಡಿಸಿಕೊಳ್ಳಲು ಬಳಸುತ್ತಾರೆ.
  11. ಅತಿ ಮಧುರ ಎಂಬ ಸಸ್ಯದ ಬೇರಿನಲ್ಲಿರುವ ಲಿಕರಿಸ್ ಎಂಬ ವಸ್ತುವಿನ ಮುಖ್ಯ ಸತ್ತ್ವವಾದ ಗ್ಲೈಸಿರೈಸಿನ್ ಎಂಬುದು ಗುಲಗಂಜಿಯ ಬೇರು ಹಾಗೂ ಎಲೆಗಳಿಂದ ತಯಾರಿಸಿದ ಕಷಾಯವನ್ನು ನೆಗಡಿ,ಕೆಮ್ಮು ಮತ್ತು ಹೊಟ್ಟೆ ನುಲಿತಗಳಿಗೆ ಔಷಧಿಯಾಗಿ ಉಪಯೋಗಿಸುತ್ತಾರೆ.
  12. ಬೇಯಿಸಿದ ಗುಲಗಂಜಿ ಈಜಿಪ್ಟಿನಲ್ಲಿ ಆಹಾರವಾಗಿ ಬಳಸಲ್ಪಡುತ್ತದೆ.

ಸೂಚನೆ

ನಾವು ಗುಲಗಂಜಿಯ ಉಪಯೋಗ ತಿಳಿದ ಕೂಡಲೆ ನಾವೇ ಖುದ್ದಾಗಿ ಅದನ್ನು ಬಳಸಬಾರದು, ಅದನ್ನು ಸರಿಯಾದ ವೈದ್ಯರ ಸಲಹೆ ಪಡೆದು ನಂತರ ಅದನ್ನು ಉಪಯೋಗ ಮಾಡುವುದು ಉತ್ತಮ. ವೈದ್ಯರಿಗೆ ಅದರ ಸರಿಯಾದ ಪ್ರಮಾಣ ತಿಳಿದಿರುತ್ತದೆ.

ಅಪಾಯಗಳು

ಈ ಗುಲಗಂಜಿಯು ಎಷ್ಟು ಉಪಯೋಗವೋ ಅಷ್ಟೇ ಅಪಾಯಕಾರಿಯು ಹೌದು. ಇದು ಮನುಷ್ಯ ಹಾಗೂ ಪ್ರಾಣಿಗಳಿಗೆ ಅಪಾಯಕಾರಿ.

ಗುಲಗಂಜಿಯ ಬೀಜಗಳನ್ನು ‘ ಏಬ್ರಿನ್’ ಎಂಬ ಟಾಕ್ಯಾಲ್ಬ್ಯುಮಿನ್ ಇದೆ. ಇದೊಂದು ಕಟು ವಿಷ. ಈ ವಿಷ ಕಣ್ಣಿನ ರೆಪ್ಪೆಗಳ ಒಳಭಾಗಕ್ಕೆ ಲೇಪಿಸಿದರೆ ರಕ್ತಕ್ಕೆ ಏಬ್ರಿನ್ ಸೇರುವುದರಿಂದ ಪ್ರಾಣಹಾನಿಯಾಗುತ್ತದೆ. ಆದರೆ ಬಾಯಿ,ಅನ್ನನಾಳ ಮತ್ತು ಹೊಟ್ಟೆಯಲ್ಲಿ ಏಬ್ರಿನ್ ಯಾವ ದುಷ್ಪರಿಣಾಮವನ್ನು ಮಾಡುವುದಿಲ್ಲ.

ಗುಲಗಂಜಿ ಸಸ್ಯದ ಬೇರು, ಕಾಂಡ, ಎಲೆ ಎಲ್ಲವೂ ಉಪಯೋಗಕಾರಿ, ಅದರೇ ಬೀಜ ಮಾತ್ರ ನಾಗರಹಾವಿನ ವಿಷಕ್ಕಿಂತಲು ಅಪಾಯ.

ಕಿವಿಮಾತು

  • ಇಂದಿನ ದಿನಗಳಲ್ಲಿ ನಗರದ ಎಷ್ಟೋ ಜನಗಳಿಗೆ, ಗುಲಗಂಜಿ ಎಂದರೆ ಏನು ಎಂಬುದು ಗೊತ್ತಿಲ್ಲ ಹಾಗೂ ನೋಡಿಯೂ ಇರುವುದಿಲ್ಲ.
  • ರೈತರು ಇತ್ತೀಚಿನ ದಿನಗಳಲ್ಲಿ ಇದನ್ನು ತಮ್ಮ ತಮ್ಮ ಹೊಲದಲ್ಲಿ ಬೆಳೆಯನ್ನಾಗಿ . ಬೆಳೆದು ಒಳ್ಳೆಯ ಹಣ ಕೂಡ ಸಂಪಾದಿಸುತ್ತಿದಾರೆ. ಈ ಬಳ್ಳಿಯ ಆಯಸ್ಸು 50 ವರ್ಷ.
  • ಇದನ್ನು ನೀವು ಆರೋಗ್ಯ ದೃಷ್ಟಿಯಿಂದ ಬಳಸದಿದ್ದರೂ, ಸುಂದರವಾಗಿ ಕಾಣಿಸುತ್ತದೆ ಎಂದಾದರೂ ಹೊರಗೆ ಸಿಕ್ಕಾಗ ಶೇಖರಿಸಿಟ್ರಿಟುಕೊಳ್ಳಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

ದಿನದ ಸುದ್ದಿ

ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ

Published

on

ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.

ಗೃಹ ಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.

ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending