ಕ್ರೀಡೆ
ವೆಸ್ಟ್ ಇಂಡೀಸ್ ಪ್ರವಾಸದಿಂದ ಎಂ.ಎಸ್.ಧೋನಿ ಔಟ್ : ಮೂವರು ಕನ್ನಡಿಗರಿಗೆ ಸಿಕ್ತು ಚಾನ್ಸ್..!
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/07/M.s.dhoni-suddidina-54.jpg&description=ವೆಸ್ಟ್ ಇಂಡೀಸ್ ಪ್ರವಾಸದಿಂದ ಎಂ.ಎಸ್.ಧೋನಿ ಔಟ್ : ಮೂವರು ಕನ್ನಡಿಗರಿಗೆ ಸಿಕ್ತು ಚಾನ್ಸ್..!', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/07/M.s.dhoni-suddidina-54.jpg&description=ವೆಸ್ಟ್ ಇಂಡೀಸ್ ಪ್ರವಾಸದಿಂದ ಎಂ.ಎಸ್.ಧೋನಿ ಔಟ್ : ಮೂವರು ಕನ್ನಡಿಗರಿಗೆ ಸಿಕ್ತು ಚಾನ್ಸ್..!', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಮುಂಬೈ : ಆಗಸ್ಟ್ 3ರಿಂದ ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಎರಡು ಟೆಸ್ಟ್, ಮೂರು ಏಕದಿನ ಹಾಗೂ ಮೂರು ಟಿ-20 ಪಂದ್ಯಗಳಿಗಾಗಿ ಭಾರತೀಯ ತಂಡವನ್ನು ಇಂದು ಪ್ರಕಟಿಸಲಾಗಿದೆ.
ವಿರಾಟ್ ಕೊಹ್ಲಿ ಈ ತಂಡವನ್ನು ಮುನ್ನಡೆಸಲಿದ್ದು, ಧೋನಿ ರಜೆಯಲ್ಲಿರುವ ಕಾರಣ ರಿಷಭ್ ಪಂತ್ ಅವರಿಗೆ ವಿಕೆಟ್ ಕೀಪರ್ ಸ್ಥಾನ ನೀಡಲಾಗಿದೆ.
ವೇಗಿ ಜಸ್ಪ್ರೀತ್ ಬೂಮ್ರಾಗೆ ಏಕದಿನ ಹಾಗೂ ಟಿ-20 ಪಂದ್ಯಗಳಿಂದ ವಿಶ್ರಾಂತಿ ನೀಡಲಾಗಿದೆ.
ಟೆಸ್ಟ್ ಮ್ಯಾಚ್
ವಿರಾಟ್ ಕೊಹ್ಲಿ ( ನಾಯಕ) ರಹಾನೆ ( ಉಪನಾಯಕ) ಮಾಯಾಂಕ್ ಅಗರ್ ವಾಲ್, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರೋಹಿತ್ ಶರ್ಮಾ, ರಿಷಬ್ ಪಂತ್ ( ವಿಕೆಟ್ ಕೀಪರ್ ) ವೃದ್ದಿಮನ್ ಸಹಾ ( ವಿಕೆಟ್ ಕೀಪರ್ ) ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪೀತ್ ಬೂಮ್ರಾ, ಉಮೇಶ್ ಯಾದವ್
ಏಕದಿನ ಪಂದ್ಯ
ವಿರಾಟ್ ಕೊಹ್ಲಿ ( ನಾಯಕ ) ರೋಹಿತ್ ಶರ್ಮಾ ( ಉಪನಾಯಕ) ಶಿಖರ್ ಧವನ್, ಕೆಎಲ್ ರಾಹುಲ್, ಶ್ರೇಯಸ್ಸ್ ಅಯ್ಯರ್, ಮನಿಷ್ ಪಾಂಡೆ, ರಿಷಬ್ ಪಂತ್ ( ವಿಕೆಟ್ ಕೀಪರ್ ) ಜಡೇಜಾ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಕೇದಾರ್ ಜಾದವ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್ , ನವದೀಪ್ ಸೈನಿ
ಟಿ-20 ಪಂದ್ಯಗಳಿಗೆ ಟೀಂ ಇಂಡಿಯಾ
ವಿರಾಟ್ ಕೊಹ್ಲಿ ( ನಾಯಕ ) ರೋಹಿತ್ ಶರ್ಮಾ ( ಉಪನಾಯಕ) ಶಿಖರ್ ಧವನ್, ಕೆಎಲ್ ರಾಹುಲ್, ಶ್ರೇಯಸ್ಸ್ ಅಯ್ಯರ್, ಮನಿಷ್ ಪಾಂಡೆ, ರಿಷಬ್ ಪಂತ್ ( ವಿಕೆಟ್ ಕೀಪರ್ ) ಕೃನಾಲ್ ಪಾಂಡೆ, ಜಡೇಜಾ, ವಾಷಿಂಗ್ಟನ್ ಸುಂದರ್, ರಾಹುಲ್ ಚಾಹರ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ದೀಪಕ್ ಚಾಹರ್, ನವದೀಪ್ ಸೈನಿ.
ಕೃಪೆ : ಜಸ್ಟ್ ನ್ಯೂಸ್ ಕನ್ನಡ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
RCB ಗೆ ಹದಿನೆಂಟರ ಇಡಿಗಂಟು | ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ : ವಿರಾಟ್ ಕೊಹ್ಲಿ
ಸುದ್ದಿದಿನಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ – ಐಪಿಎಲ್ ಟಿ-20 ಕ್ರಿಕೆಟ್ನ 18 ನೇ ಆವೃತ್ತಿಯ ಪ್ರಶಸ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಡಿಗೇರಿಸಿಕೊಂಡಿದೆ.
ನಿನ್ನೆ ರಾತ್ರಿ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದ ನಂತರ, ಆರ್ಸಿಬಿ ನಾಯಕ ರಜತ್ ಪಾಟಿದಾರ್, ವಿರಾಟ್ ಕೊಹ್ಲಿ ಮತ್ತು ಎಲ್ಲಾ ಅಭಿಮಾನಿಗಳು ಈ ಗೆಲುವಿಗೆ ಹೆಚ್ಚು ಅರ್ಹರು ಎಂದು ಹೇಳಿದರು. ಪ್ರತಿಯೊಬ್ಬ ಆಟಗಾರನನ್ನು ಬೆಂಬಲಿಸಿದ್ದಕ್ಕಾಗಿ, ತಂಡದ ನಿರ್ವಹಣೆ ಮತ್ತು ತರಬೇತಿ ಸಿಬ್ಬಂದಿಗೆ ಅವರು ಧನ್ಯವಾದ ಅರ್ಪಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ, ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ಗಳಿಗೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ ಗರಿಷ್ಠ 43 ರನ್ ಗಳಿಸಿದರೆ, ನಾಯಕ ಪಾಟಿದಾರ್ 26 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಅರ್ಶ್ದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ತಲಾ 3 ವಿಕೆಟ್ ಪಡೆದರು. 191 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್, ನಿಗದಿತ 20 ಓವರ್ಗಳಲ್ಲಿ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರು.
ಅಸಾಧಾರಣ ಬೌಲಿಂಗ್ಗಾಗಿ, ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಪಂದ್ಯದ ನಂತರದ ಪ್ರಸ್ತುತಿಯಲ್ಲಿ, ಗುಜರಾತ್ ಟೈಟಾನ್ಸ್ನ ಸಾಯಿ ಸುದರ್ಶನ್ ಅತಿ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರೆ. ಅದೇ ತಂಡದ ಸಹ ಆಟಗಾರ ಪ್ರಸಿದ್ಧ್ ಕೃಷ್ಣ ಈ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್ಗಳನ್ನು ಪಡೆದಿದ್ದಕ್ಕಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರು. ಮುಂಬೈ ಇಂಡಿಯನ್ಸ್ನ ಸೂರ್ಯ ಕುಮಾರ್ ಯಾದವ್ ಪಂದ್ಯಾವಳಿಯಾದ್ಯAತ ತಮ್ಮ ಅಸಾಧಾರಣ ಬ್ಯಾಟಿಂಗ್ಗಾಗಿ ಅತ್ಯಂತ ಮೌಲ್ಯಯುತ ಆಟಗಾರ ಎಂಬ ಪ್ರಶಸ್ತಿಯನ್ನು ಪಡೆದರು.
ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ
17 ವರ್ಷಗಳ ನಂತರ ವಿರಾಟ್ ಕೊಹ್ಲಿ ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಎತ್ತಿ ಹಿಡಿದರು. ಫೈನಲ್ನಲ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದ ಕೊಹ್ಲಿ, ಸುಮಾರು ಎರಡು ದಶಕಗಳಿಂದ ಬೆನ್ನಟ್ಟಿದ ಕ್ಷಣ ಅಂತಿಮವಾಗಿ ವಾಸ್ತವವಾದಾಗ ಭಾವುಕರಾದರು “ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ದಿನ ಬರುತ್ತದೆ ಎಂದು ಭಾವಿಸಿರಲಿಲ್ಲ ಎಂದು ಗೆದ್ದು ಭಾವುಕರಾಗಿದ್ದ ವಿರಾಟ್ ಕೊಹ್ಲಿ ಪಂದ್ಯದ ನಂತರದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಆರ್ಸಿಬಿ ಗೆಲುವಿನ ಸಂಭ್ರಮದಲ್ಲಿ ಕರ್ನಾಟಕ, ವಿಶೇಷವಾಗಿ ರಾಜಧಾನಿ ಬೆಂಗಳೂರು, ನಿನ್ನೆ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಿದ ನಂತರ ಸಂತೋಷದಿAದ ತುಂಬಿ ತುಳುಕುತ್ತಿತ್ತು. ಅಭಿಮಾನಿಗಳು ಇಂದು ಬೆಳಗಿನ ಜಾವದವರೆಗೆ ಪಟಾಕಿ ಸಿಡಿಸಿ ಬೀದಿಗಳಲ್ಲಿ ಜಮಾಯಿಸಿ ಸಂಭ್ರಮಿಸಿದರು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್ಸಿಬಿಯನ್ನು ಶ್ಲಾಘಿಸುತ್ತಾ, “ಐಪಿಎಲ್ ಐತಿಹಾಸಿಕ ವಿಜಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿನಂದನೆ. ಕನಸು ಕೊನೆಗೂ ನನಸಾಗಿದೆ.
ಈ ಸಲಾ ಕಪ್ ನಮ್ದೆ. ಅಚಲವಾದ ಚೈತನ್ಯದಿಂದ, ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ಹೆಚ್ಚಿಸಿದೆ. ಪ್ರಪಂಚದಾದ್ಯAತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ ಎಂದು ಹೇಳಿದ್ದಾರೆ. ಐಪಿಎಲ್ ಪ್ರಶಸ್ತಿ ಗೆದ್ದ ಆರ್ಸಿಬಿ ತಂಡಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಆರ್ಸಿಬಿ ತಂಡ ಪಡೆದ ರೋಮಾಂಚಕ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲಕ್ಷಾಂತರ ಅಭಿಮಾನಿಗಳ ಕನಸುಗಳು ನನಸಾಗಿದೆ. ಇಡೀ ಆರ್ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಏ.10 ರಿಂದ ಬೇಸಿಗೆ ಕಬಡ್ಡಿ ತರಬೇತಿ ಶಿಬಿರ
ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೃಷ್ಟಿ ಕಬಡಿ ಅಕಾಡೆಮಿ(ರಿ), ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಕಬಡ್ಡಿ ತರಬೇತಿ ಶಿಬಿರವನ್ನು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ 30 ರವರೆಗೆ ಬೆಳಿಗ್ಗೆ 6.30 ರಿಂದ 8 ಗಂಟೆಯ ವರೆಗೆ ಹಾಗೂ ಸಾಯಂಕಾಲ ಸಂಜೆ 5 ರಿಂದ 6.30 ರ ವರೆಗೆ ಆಯೋಜಿಸಲಾಗಿದೆ.
ಆಸಕ್ತ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೇಸಿಗೆ ಕಬಡ್ಡಿ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಶ್ರೀಶೈಲ ಎಸ್-ಮೊ.ನಂ: 9448667255 ಹಾಗೂ ನೂರುಲ್ಲ ಮೊ.ನಂ: 9740107364, ಶಿವಯೋಗಿ ಮೊ.ನಂ: 9019619900, ರಾಕೇಶ್ ಮೊನಂ:9448835907 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ3 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ2 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ12 hours agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

