ದಿನದ ಸುದ್ದಿ
ಮಂಡ್ಯ : ಬೆಳೆ ಸಮೀಕ್ಷೆ ಕಾರ್ಯ ಆರಂಭ
ಸುದ್ದಿದಿನ, ಮಂಡ್ಯ : ಸರ್ಕಾರದ ನಿರ್ದೇಶನದಂತೆ ಮಂಡ್ಯ ಜಿಲ್ಲೆಯ ಎಲ್ಲಾ ಏಳು ತಾಲ್ಲೂಕುಗಳಲ್ಲಿ ಮುಂಗಾರು ಬೆಳೆ ಸಮೀಕ್ಷೆ ಕಾರ್ಯ ಆರಂಭಗೊಂಡಿದ್ದು, ಸಮೀಕ್ಷೆಗೆ ಬರುವ ಸಮೀಕ್ಷೆದಾರರು ಹಾಗೂ ಅಧಿಕಾರಿಗಳಿಗೆ ರೈತರು ಸಹಕರಿಸುವ ಮೂಲಕ ರೈತಪರ ಯೋಜನೆಯನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ಮನವಿ ಮಾಡಿದ್ದಾರೆ.
ಬೆಳೆ ಸಮೀಕ್ಷೆಯು ರೈತಪರ ಯೋಜನೆಯಾಗಿದ್ದು, ರೈತರು ಬೆಳೆದಿರುವ ಬೆಳೆಗಳ ಮಾಹಿತಿಯನ್ನು ಸರ್ಕಾರದ ದಾಖಲೆಯಲ್ಲಿ ನಿಖರವಾಗಿ ದಾಖಲಿಸುವುದರಿಂದ ಸರ್ಕಾರಕ್ಕೆ ಖಚಿತವಾಗಿ ಯಾವ ಬೆಳೆ ಎಷ್ಟು ವಿಸ್ತೀರ್ಣದಲ್ಲಿ ಬೆಳೆದಿದೆ ಎಂಬುದನ್ನು ತಿಳಿಯಲು ಅನುಕೂಲವಾಗುತ್ತದೆ. ಯಾವುದೇ ಪ್ರದೇಶದಲ್ಲಿ ಪ್ರಕೃತಿ ವಿಕೋಪದಿಂದ ನಷ್ಟವಾದಲ್ಲಿ ಯಾವ ಪ್ರದೇಶದಲ್ಲಿ ಯಾವ ಬೆಳೆ ಎಷ್ಟು ನಷ್ಟವಾಗಿದೆ ಎಂದು ಅಂದಾಜಿಸಬಹುದಾಗಿದೆ. ಅಲ್ಲದೇ ಯಾವ ಬೆಳೆಗಳಿಗೆ ಬೆಂಬಲಿತ ಬೆಲೆ ನೀಡಬೇಕು ಎಂಬ ನಿರ್ಧಾರ ಕೈಗೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಗ್ರಾಮಗಳಲ್ಲಿ ಲಭ್ಯವಿರುವ ಮಾಹಿತಿ ತಂತ್ರಜ್ಞಾನದ ಬಗ್ಗೆ ತಿಳುವಳಿಕೆ ಇರುವ ಯುವಕರನ್ನು ( ಖಾಸಗಿ ನಿವಾಸಿಗಳು) ಗುರುತಿಸಿ ಬೆಳೆ ಸಮೀಕ್ಷೆ ಕಾರ್ಯಕ್ಕೆ ತೊಡಗಿಸಿಕೊಂಡಿದ್ದು, ಮಂಡ್ಯ ಜಿಲ್ಲೆ ಎಲ್ಲಾ ಎಳು ತಾಲ್ಲೂಕುಗಳಲ್ಲಿ ಬೆಳೆ ಸಮೀಕ್ಷೆ ಕಾರ್ಯವು ಸೆಪ್ಟೆಂಬರ್ 28 ರಂದು ಆರಂಭಗೊಂಡಿದೆ. ಬೆಳೆ ಸಮೀಕ್ಷೆಗೆ 1281 ಖಾಸಗಿ ನಿವಾಸಿಗಳು ಬಳಸಿಕೊಳ್ಳಲಾಗುತ್ತಿದ್ದು, ಇವರುಗಳಿಗೆ ಈಗಾಗಗಲೇ ಎರಡು ಸುತ್ತು ತರಬೇತಿಯನ್ನು ನುರಿತ ತರಬೇತುದಾರರಿಂದ ನೀಡಲಾಗಿದೆ. ಸಮೀಕ್ಷೆಯು ಪ್ರತ್ಯೇಕಾ ಮೊಬೈಲ್ ಆ್ಯಪ್ ಮೂಲಕ ಮಾಡಲಾಗುತ್ತಿದ್ದು, ಇರದ ಬಳಕೆ ಕುರಿತು ಸಹ ಖಾಸಗಿ ನಿವಾಸಿಗಳಿಗೆ ತರಬೇತಿ ನೀಡಲಾಗಿದೆ.
ಬೆಳೆ ಸಮೀಕ್ಷೆಯನ್ನು ಮಂಡ್ಯ ಜಿಲ್ಲೆ 1485 ಗ್ರಾಮಗಳಲ್ಲಿ ಕೈಗೊಳ್ಳಲಾಗುತ್ತಿದ್ದು, 16,95,821 ಪ್ಲಾಟ್ಗಳನ್ನು ಗುರು ಗುರುತಿಸಲಾಗಿದೆ. ಪ್ರತಿ ಪ್ಲಾಟಿನ ಬೆಳೆ ಸಂಗ್ರಹಣೆಗೆ ರೂ 10 ಗೌರವಧನವನ್ನು ನೀಡಲಾಗುತ್ತಿದ್ದು, ಬೆಳೆ ಸಮೀಕ್ಷೆ ಕಾರ್ಯದಲ್ಲಿ ತೊಡಗಿಕೊಳ್ಳಲು ಆಸಕ್ತಿ ಇರುವ ಮಾಹಿತಿ ತಂತ್ರಜ್ಞಾನದ ಬಗ್ಗೆ ತಿಳುವಳಿಕೆ ಇರುವ ಯುವಕರು ಸಂಬಂಧಪಟ್ಟ ತಹಶೀಲ್ದಾರ್ ಕಚೇರಿಯನ್ನು ಸಂಪರ್ಕಿಬಹುದು.
ಬೆಳೆ ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿರುವ ಖಾಸಗಿ ನಿವಾಸಿಗಳ ಮೊಬೈಲ್ ಹಾಗೂ ಆಧಾರ್ ಸಂಖ್ಯೆಯನ್ನು ಪಡೆಯಲಾಗಿದ್ದು, ಸಮೀಕ್ಷೆ ವೇಳೆ ಸಹಕಾರಿಯಾಗಲು ಅವರುಗಳಿಗೆ ಗುರುತಿನ ಚೀಟಿಯನ್ನು ನೀಡಲಾಗಿದೆ. 80 ಗ್ರಾಮ ಸಹಾಯಕರು ಸಮೀಕ್ಷೆ ಕಾರ್ಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸಮೀಕ್ಷೆಯ ಮೇಲ್ವಿಚಾರಣೆಯನ್ನು ಗ್ರಾಮ ಲೆಕ್ಕಿಗರು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಮಾಡುತ್ತಿದ್ದಾರೆ. ಸಮೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಹಾಗೂ ಪರಿಣಾಮಕಾರಿಯಾಗಿ ಮಾಡಲು ಪ್ರತಿ ತಾಲ್ಲೂಕಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


