ದಿನದ ಸುದ್ದಿ
ದಾವಣಗೆರೆ | ಗ್ರಾಹಕರ ಮೇಳ : ಮೇಳದಲ್ಲಿ 21 ಕೋಟಿವರೆಗು ಜನತೆಗೆ ಸಾಲ ನೀಡುವ ಗುರಿ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಗ್ರಾಹಕರು ಬ್ಯಾಂಕ್ಗಳಲ್ಲಿ ವಿವಿಧ ಬಗೆಯ ಸಾಲಗಳನ್ನು ಪಡೆದು ಅದನ್ನು ಉದ್ದೇಶಿತ ಕಾರ್ಯಗಳಿಗೆ ಬಳಸಿ ಸಕಾಲದಲ್ಲಿ ಸಾಲ ಮರುಪಾವತಿ ಮಾಡವ ಮೂಲಕ ಬ್ಯಾಂಕ್ಗಳೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.
ಕೆನರಾ ಬ್ಯಾಂಕ್, ಲೀಡ್ ಬ್ಯಾಂಕ್ ಕಚೇರಿ ದಾವಣಗೆರೆ ಇವರ ವತಿಯಿಂದ ತೋಗಟವೀರ ಸಮುದಾಯ ಭವನದಲ್ಲಿ ಅ.4 ರಂದು ಏರ್ಪಡಿಸಲಾಗಿದ್ದ ಗ್ರಾಹಕರೆಡೆಗೆ ಒಂದು ಹೆಜ್ಜೆ…‘ಗ್ರಾಹಕರ ಮೇಳ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೇಳದಲ್ಲಿ 1400 ಕ್ಕೂ ಹೆಚ್ಚು ಜನರಿಗೆ ರೂ. 21 ಕೋಟಿವರೆಗೂ ಸಾಲ ನೀಡುವ ಗುರಿ ಹೊಂದಲಾಗಿದೆ. ಗ್ರಾಹಕರು ಪಡೆದ ಸಾಲಗಳನ್ನು ಸದ್ಬಳಕೆ ಮಾಡಿಕೊಂಡು ಸರಿಯಾದ ರೀತಿಯಲ್ಲಿ ಮರುಪಾವತಿ ಮಾಡಿ ಬ್ಯಾಂಕ್ನೊಂದಿಗೆ ಉತ್ತಮ ವ್ಯವಹಾರದೊಂದಿಗೆ ಬಾಂಧವ್ಯ ಕಾಪಾಡಿಕೊಳ್ಳಬೇಕು ಎಂದರು.
ಆರ್ಥಿಕ ಸೇರ್ಪಡೆಯಿಂದಾಗಿ ಕಳೆದ ಹತ್ತು ವರ್ಷಗಳಲ್ಲಿ ಬ್ಯಾಂಕ್ ವಹಿವಾಟು ಹೆಚಾಗುತ್ತಿದೆ. ಬ್ಯಾಂಕುಗಳು ವಿವಿಧ ಯೋಜನೆಗಳಡಿ ಮಹಿಳೆಯರೂ ಸೇರಿದಂತೆ ಎಲ್ಲ ವರ್ಗದವರಿಗೆ ಹಲವಾರು ಉದ್ದೇಶಗಳಿಗೆ ಸಾಲಗಳನ್ನು ನಿಡುತ್ತಿದ್ದು, ಗ್ರಾಹಕರ ಉತ್ತಮ ಪ್ರತಿಕ್ರಿಯೆ ಹಾಗೂ ಬ್ಯಾಂಕುಗಳಿಂದ ಹೆಚ್ಚಿನ ಸೇವೆಗಳನ್ನು ನಿರಿಕ್ಷಿಸುತ್ತೇನೆ ಎಂದು ಹೇಳಿದರು.
ಜಿಲ್ಲಾ ಕೆನರಾ ಬ್ಯಾಂಕ್ ಕ್ಷೇತ್ರೀಯ ಕಚೇರಿಯ ಸಹಾಯಕ ಮಹಾ ಪ್ರಬಂಧಕ ಹೆಚ್.ರಘುರಾಜ ಮಾತನಾಡಿ, ಬ್ಯಾಂಕುಗಳು ಸಾಲ ನೀಡಲು ಸಿದ್ದವಾಗಿವೆ ಎಂಬುದನ್ನು ಗ್ರಾಹಕರಿಗೆ ತಿಳಿಸಲು ಕೇಂದ್ರ ಸರ್ಕಾರವು ಎಲ್ಲಾ ಜಿಲ್ಲೆಗಳಲ್ಲಿಯೂ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಗ್ರಾಹಕರು ಈ ಮೇಳಗಳ ಮೂಲಕ ವಿವಿಧ ಸಾಲಗಳ ಕುರಿತು ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ನಬಾರ್ಡ್ ಜಿಲ್ಲಾ ಮುಖ್ಯ ವ್ಯವಸ್ಥಾಪಕ ರವೀಂದ್ರ.ವಿ ಮಾತನಾಡಿ, ಗ್ರಾಹಕ ಮೇಳ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದಕ್ಕಾಗಿ ಕೆನರಾ ಬ್ಯಾಂಕ್ ವ್ಯವಸ್ಥಾಪಕರಿಗೆ ವಿಶೇಷ ವಂದನೆಗಳು. ಗ್ರಾಹಕರು ಈ ಅವಕಾಶವನ್ನು ಬಳಸಿಕೊಂಡು ಸಾಲವನ್ನು ಪಡೆದು ಸದುಪಯೋಗ ಪಡೆದುಕೊಳ್ಳಬೇಕು. ನಬಾರ್ಡ್ ವತಿಯಿಂದ ಸಾಮಾನ್ಯ ವರ್ಗದರಿಗೆ ಶೇ.25, ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಶೇ.33 ಸಬ್ಸಿಡಿ ಹಾಗೂ ಕುರಿ-ಮೇಕೆ ಸಾಕಲು ಎಲ್ಲಾ ವರ್ಗದವರಿಗೆ ಶೇ.25 ಸಬ್ಸಿಡಿ ನೀಡಲಾಗುತ್ತಿದೆ. ಆಹಾರ ಸಾಮಗ್ರಿಗಳನ್ನು ಶೇಕರಣೆ ಮಾಡಲು ಗೊದಾಮುಗಳನ್ನು ಕಟ್ಟಲು ರೂ. 3 ಕೋಟಿ ವರೆಗೆ ಸಾಲ ನೀಡುತ್ತಿದ್ದು, ಮಹಿಳೆಯರು, ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ರೂ.1 ಕೋಟಿವರೆಗೂ ಸಬ್ಸಿಡಿ ಸಿಗಲಿದೆ. ಸಾಮಾನ್ಯ ವರ್ಗದವರಿಗೆ ರೂ.75 ಲಕ್ಷದವರೆಗೆ ಸಬ್ಸಿಡಿ ಸಿಗಲಿದೆ ಎಂದು ಮಾಹಿತಿ ನೀಡಿದರು.
ಎಸ್.ಬಿ.ಐ ರೀಜನಲ್ ಮ್ಯಾನೇಜರ್ ರಾಜೇಶ್.ಡಿ ಮಾತನಾಡಿ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಎಸ್ಬಿಐ ಶಾಖೆಗಳು ಹೆಚ್ಚಾಗಿದ್ದು, ಅವುಗಳಲ್ಲಿ ಯಾವ ರೀತಿಯ ಸಾಲಗಳು ಸಿಗುತ್ತವೆ ಎಂಬುದನ್ನು ಈ ಮೇಳದಲ್ಲಿ ಮಾಹಿತಿ ನೀಡಲಾಗುತ್ತಿದೆ. ನಮ್ಮಲ್ಲಿ ಗ್ರಾಹಕರಿಗೆ ಸಾಲ ನೀಡಲು ಯಾವುದೇ ನಿರ್ಬಂಧಗಳಿಲ್ಲ. ತಮ್ಮ ಹತ್ತಿರದ ಶಾಖೆಗಳಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸಾಲ ಪಡೆಯಬಹುದು ಎಂದ ಅವರು ಗ್ರಾಹಕರು ಈ ಮೂರು ದಿನಗಳ ಗ್ರಾಹಕರ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕರ್ನಾಟಕ ಗ್ರಾಮೀಣ ಬ್ಯಾಂಕ್ ರೀಜನಲ್ ಮ್ಯಾನೇಜರ್ ಶಂಕರ್ ಕನವಳ್ಳಿ ಮಾತನಾಡಿ, ಬ್ಯಾಂಕುಗಳಲ್ಲಿನ ಸಾಲಗಳ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕಿನ 65 ಶಾಖೆಗಳಿವೆ ಹಾಗೂ ನಗರದಲ್ಲಿ 07 ಪ್ರಮುಖ ಶಾಖೆಗಳಿವೆ. ಗ್ರಾಹಕರು ತಮಗೆ ಹತ್ತಿರವಾಗುವ ಶಾಖೆಗಳಲ್ಲಿ ಕೃಷಿ, ಸ್ವ-ಸಹಾಯ ಸಂಘಗಳು ಸೇರಿದಂತೆ ಇನ್ನಿತರೆ ಚಟುವಟಿಕೆಗಳಿಗೆ ಸಾಲ ಪಡೆಯಬಹುದಾಗಿದೆ ಎಂದರು.
ಸಿಂಡಿಕೇಟ್ ಬ್ಯಾಂಕ್ ರೀಜನಲ್ ಮ್ಯಾನೇಜರ್ ನವೀನ್ಕುಮಾರ್. ಎನ್ ಮಾತನಾಡಿ, ಪ್ರತಿಯೊಂದು ಬ್ಯಾಂಕ್ಗಳಲ್ಲಿ ಗ್ರಾಹಕರಿಗೆ ಹೊಂದುವಂತೆ ರೂ. 5 ಸಾವಿರದಿಂದ ರೂ. 1 ಕೋಟಿಯವರೆಗೆ ಸಾಲವನ್ನು ನೀಡಲಾಗುತ್ತದೆ. ಮನೆ, ಶೈಕ್ಷಣಿಕ, ಕೃಷಿ, ಉದ್ಯಮ, ಸಣ್ಣ, ಅತಿ ಸಣ್ಣ ಕೈಗಾರಿಕೆ ಸೇರಿದಂತೆ ಪ್ರತಿಯೊಂದು ಉದ್ಯಮಕ್ಕೂ ಬ್ಯಾಂಕ್ಗಳು ಸಾಲ ನೀಡುತ್ತಿವೆ. ಗ್ರಾಹಕರು ಈ ಸೌಲಭ್ಯಗಳ ಸದುಪಯೋಗಪಡೆದುಕೊಳ್ಳಬೇಕು ಎಂದರು.
ಬೆಂಗಳೂರು ಕೆನರಾ ಬ್ಯಾಂಕ್ ವೃತ್ತ ಕಚೇರಿಯ ಮಹಾ ಪ್ರಬಂಧಕ ಎನ್. ಲಕ್ಷ್ಮೀನಾರಾಯಣ ಮಾತನಾಡಿ, ವಿವಿಧ ಬ್ಯಾಂಕ್ಗಳಲ್ಲಿ ವಿವಿಧ ರೀತಿ ಸಾಲ ಸೌಲಭ್ಯಗಳಿವೆ. ಈ ಸಾಲ ಸೌಲಭ್ಯಗಳ ಬಗ್ಗೆ, ಅದಕ್ಕೆ ಬೇಕಾಗುವ ಅಗತ್ಯ ದಾಖಲಾತಿಗಳ ಕುರಿತು ಜನರಿಗೆ ಮಾಹಿತಿ ನೀಡುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಬ್ಯಾಂಕ್ನ ಸಬ್ಸಿಡಿ, ವಿಮೆಗಳ ಕುರಿತು ಸುದೀರ್ಘವಾಗಿ ಮೂರು ದಿನಗಳ ಕಾಲ ಗ್ರಾಹಕರಿಗೆ ಮಾಹಿತಿ ನೀಡಲಾಗುತ್ತಿದೆ. ಮಾಹಿತಿ ಪಡೆದು ಸಾಲ ಪಡೆದು ನಿರ್ದಿಷ್ಟ ಉದ್ದೇಶಗಳಿಗೆ ಬಳಸುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಸಲಹೆ ನೀಡಿದರು.
ಮೇಳದಲ್ಲಿ ಆಧಾರ್ ಸೇವೆಗಳ ಕೌಂಟರ್ನ್ನು ಸಹ ತೆರೆಯಲಾಗಿದ್ದು, ಸಾರ್ವಜನಿಕರು ಆಧಾರ್ಗೆ ಸಂಬಂಧಿಸಿದ ತಿದ್ದುಪಡಿ ಇತರೆ ಬದಲಾವಣೆ ಇದ್ದಲ್ಲಿ ಇಲ್ಲಿ ಮಾಡಿಸಿಕೊಳ್ಳಬಹುದು. ಇದೇ ಸಂದರ್ಭದಲ್ಲಿ ಅರ್ಹ ಗ್ರಾಹಕರಿಗೆ ವೇದಿಕೆ ಮೇಲಿದ್ದ ಗಣ್ಯರು ಸಾಂಕೇತಿಕವಾಗಿ ಸಾಲಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕ ಸುಶೃತ ಡಿ. ಶಾಸ್ತ್ರಿ ಸೇರಿದಂತೆ ವಿವಿಧ ಬ್ಯಾಂಕ್ ಸಿಬ್ಬಂದಿ ವರ್ಗದವರು ಗ್ರಾಹಕರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ3 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ಅಂಕಣ3 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ3 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ3 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ5 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ
-
ದಿನದ ಸುದ್ದಿ3 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್

