ದಿನದ ಸುದ್ದಿ
ದಾವಣಗೆರೆ | ಗ್ರಾಹಕರ ಮೇಳ : ಮೇಳದಲ್ಲಿ 21 ಕೋಟಿವರೆಗು ಜನತೆಗೆ ಸಾಲ ನೀಡುವ ಗುರಿ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಗ್ರಾಹಕರು ಬ್ಯಾಂಕ್ಗಳಲ್ಲಿ ವಿವಿಧ ಬಗೆಯ ಸಾಲಗಳನ್ನು ಪಡೆದು ಅದನ್ನು ಉದ್ದೇಶಿತ ಕಾರ್ಯಗಳಿಗೆ ಬಳಸಿ ಸಕಾಲದಲ್ಲಿ ಸಾಲ ಮರುಪಾವತಿ ಮಾಡವ ಮೂಲಕ ಬ್ಯಾಂಕ್ಗಳೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.
ಕೆನರಾ ಬ್ಯಾಂಕ್, ಲೀಡ್ ಬ್ಯಾಂಕ್ ಕಚೇರಿ ದಾವಣಗೆರೆ ಇವರ ವತಿಯಿಂದ ತೋಗಟವೀರ ಸಮುದಾಯ ಭವನದಲ್ಲಿ ಅ.4 ರಂದು ಏರ್ಪಡಿಸಲಾಗಿದ್ದ ಗ್ರಾಹಕರೆಡೆಗೆ ಒಂದು ಹೆಜ್ಜೆ…‘ಗ್ರಾಹಕರ ಮೇಳ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೇಳದಲ್ಲಿ 1400 ಕ್ಕೂ ಹೆಚ್ಚು ಜನರಿಗೆ ರೂ. 21 ಕೋಟಿವರೆಗೂ ಸಾಲ ನೀಡುವ ಗುರಿ ಹೊಂದಲಾಗಿದೆ. ಗ್ರಾಹಕರು ಪಡೆದ ಸಾಲಗಳನ್ನು ಸದ್ಬಳಕೆ ಮಾಡಿಕೊಂಡು ಸರಿಯಾದ ರೀತಿಯಲ್ಲಿ ಮರುಪಾವತಿ ಮಾಡಿ ಬ್ಯಾಂಕ್ನೊಂದಿಗೆ ಉತ್ತಮ ವ್ಯವಹಾರದೊಂದಿಗೆ ಬಾಂಧವ್ಯ ಕಾಪಾಡಿಕೊಳ್ಳಬೇಕು ಎಂದರು.
ಆರ್ಥಿಕ ಸೇರ್ಪಡೆಯಿಂದಾಗಿ ಕಳೆದ ಹತ್ತು ವರ್ಷಗಳಲ್ಲಿ ಬ್ಯಾಂಕ್ ವಹಿವಾಟು ಹೆಚಾಗುತ್ತಿದೆ. ಬ್ಯಾಂಕುಗಳು ವಿವಿಧ ಯೋಜನೆಗಳಡಿ ಮಹಿಳೆಯರೂ ಸೇರಿದಂತೆ ಎಲ್ಲ ವರ್ಗದವರಿಗೆ ಹಲವಾರು ಉದ್ದೇಶಗಳಿಗೆ ಸಾಲಗಳನ್ನು ನಿಡುತ್ತಿದ್ದು, ಗ್ರಾಹಕರ ಉತ್ತಮ ಪ್ರತಿಕ್ರಿಯೆ ಹಾಗೂ ಬ್ಯಾಂಕುಗಳಿಂದ ಹೆಚ್ಚಿನ ಸೇವೆಗಳನ್ನು ನಿರಿಕ್ಷಿಸುತ್ತೇನೆ ಎಂದು ಹೇಳಿದರು.
ಜಿಲ್ಲಾ ಕೆನರಾ ಬ್ಯಾಂಕ್ ಕ್ಷೇತ್ರೀಯ ಕಚೇರಿಯ ಸಹಾಯಕ ಮಹಾ ಪ್ರಬಂಧಕ ಹೆಚ್.ರಘುರಾಜ ಮಾತನಾಡಿ, ಬ್ಯಾಂಕುಗಳು ಸಾಲ ನೀಡಲು ಸಿದ್ದವಾಗಿವೆ ಎಂಬುದನ್ನು ಗ್ರಾಹಕರಿಗೆ ತಿಳಿಸಲು ಕೇಂದ್ರ ಸರ್ಕಾರವು ಎಲ್ಲಾ ಜಿಲ್ಲೆಗಳಲ್ಲಿಯೂ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಗ್ರಾಹಕರು ಈ ಮೇಳಗಳ ಮೂಲಕ ವಿವಿಧ ಸಾಲಗಳ ಕುರಿತು ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ನಬಾರ್ಡ್ ಜಿಲ್ಲಾ ಮುಖ್ಯ ವ್ಯವಸ್ಥಾಪಕ ರವೀಂದ್ರ.ವಿ ಮಾತನಾಡಿ, ಗ್ರಾಹಕ ಮೇಳ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದಕ್ಕಾಗಿ ಕೆನರಾ ಬ್ಯಾಂಕ್ ವ್ಯವಸ್ಥಾಪಕರಿಗೆ ವಿಶೇಷ ವಂದನೆಗಳು. ಗ್ರಾಹಕರು ಈ ಅವಕಾಶವನ್ನು ಬಳಸಿಕೊಂಡು ಸಾಲವನ್ನು ಪಡೆದು ಸದುಪಯೋಗ ಪಡೆದುಕೊಳ್ಳಬೇಕು. ನಬಾರ್ಡ್ ವತಿಯಿಂದ ಸಾಮಾನ್ಯ ವರ್ಗದರಿಗೆ ಶೇ.25, ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಶೇ.33 ಸಬ್ಸಿಡಿ ಹಾಗೂ ಕುರಿ-ಮೇಕೆ ಸಾಕಲು ಎಲ್ಲಾ ವರ್ಗದವರಿಗೆ ಶೇ.25 ಸಬ್ಸಿಡಿ ನೀಡಲಾಗುತ್ತಿದೆ. ಆಹಾರ ಸಾಮಗ್ರಿಗಳನ್ನು ಶೇಕರಣೆ ಮಾಡಲು ಗೊದಾಮುಗಳನ್ನು ಕಟ್ಟಲು ರೂ. 3 ಕೋಟಿ ವರೆಗೆ ಸಾಲ ನೀಡುತ್ತಿದ್ದು, ಮಹಿಳೆಯರು, ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ರೂ.1 ಕೋಟಿವರೆಗೂ ಸಬ್ಸಿಡಿ ಸಿಗಲಿದೆ. ಸಾಮಾನ್ಯ ವರ್ಗದವರಿಗೆ ರೂ.75 ಲಕ್ಷದವರೆಗೆ ಸಬ್ಸಿಡಿ ಸಿಗಲಿದೆ ಎಂದು ಮಾಹಿತಿ ನೀಡಿದರು.
ಎಸ್.ಬಿ.ಐ ರೀಜನಲ್ ಮ್ಯಾನೇಜರ್ ರಾಜೇಶ್.ಡಿ ಮಾತನಾಡಿ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಎಸ್ಬಿಐ ಶಾಖೆಗಳು ಹೆಚ್ಚಾಗಿದ್ದು, ಅವುಗಳಲ್ಲಿ ಯಾವ ರೀತಿಯ ಸಾಲಗಳು ಸಿಗುತ್ತವೆ ಎಂಬುದನ್ನು ಈ ಮೇಳದಲ್ಲಿ ಮಾಹಿತಿ ನೀಡಲಾಗುತ್ತಿದೆ. ನಮ್ಮಲ್ಲಿ ಗ್ರಾಹಕರಿಗೆ ಸಾಲ ನೀಡಲು ಯಾವುದೇ ನಿರ್ಬಂಧಗಳಿಲ್ಲ. ತಮ್ಮ ಹತ್ತಿರದ ಶಾಖೆಗಳಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸಾಲ ಪಡೆಯಬಹುದು ಎಂದ ಅವರು ಗ್ರಾಹಕರು ಈ ಮೂರು ದಿನಗಳ ಗ್ರಾಹಕರ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕರ್ನಾಟಕ ಗ್ರಾಮೀಣ ಬ್ಯಾಂಕ್ ರೀಜನಲ್ ಮ್ಯಾನೇಜರ್ ಶಂಕರ್ ಕನವಳ್ಳಿ ಮಾತನಾಡಿ, ಬ್ಯಾಂಕುಗಳಲ್ಲಿನ ಸಾಲಗಳ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕಿನ 65 ಶಾಖೆಗಳಿವೆ ಹಾಗೂ ನಗರದಲ್ಲಿ 07 ಪ್ರಮುಖ ಶಾಖೆಗಳಿವೆ. ಗ್ರಾಹಕರು ತಮಗೆ ಹತ್ತಿರವಾಗುವ ಶಾಖೆಗಳಲ್ಲಿ ಕೃಷಿ, ಸ್ವ-ಸಹಾಯ ಸಂಘಗಳು ಸೇರಿದಂತೆ ಇನ್ನಿತರೆ ಚಟುವಟಿಕೆಗಳಿಗೆ ಸಾಲ ಪಡೆಯಬಹುದಾಗಿದೆ ಎಂದರು.
ಸಿಂಡಿಕೇಟ್ ಬ್ಯಾಂಕ್ ರೀಜನಲ್ ಮ್ಯಾನೇಜರ್ ನವೀನ್ಕುಮಾರ್. ಎನ್ ಮಾತನಾಡಿ, ಪ್ರತಿಯೊಂದು ಬ್ಯಾಂಕ್ಗಳಲ್ಲಿ ಗ್ರಾಹಕರಿಗೆ ಹೊಂದುವಂತೆ ರೂ. 5 ಸಾವಿರದಿಂದ ರೂ. 1 ಕೋಟಿಯವರೆಗೆ ಸಾಲವನ್ನು ನೀಡಲಾಗುತ್ತದೆ. ಮನೆ, ಶೈಕ್ಷಣಿಕ, ಕೃಷಿ, ಉದ್ಯಮ, ಸಣ್ಣ, ಅತಿ ಸಣ್ಣ ಕೈಗಾರಿಕೆ ಸೇರಿದಂತೆ ಪ್ರತಿಯೊಂದು ಉದ್ಯಮಕ್ಕೂ ಬ್ಯಾಂಕ್ಗಳು ಸಾಲ ನೀಡುತ್ತಿವೆ. ಗ್ರಾಹಕರು ಈ ಸೌಲಭ್ಯಗಳ ಸದುಪಯೋಗಪಡೆದುಕೊಳ್ಳಬೇಕು ಎಂದರು.
ಬೆಂಗಳೂರು ಕೆನರಾ ಬ್ಯಾಂಕ್ ವೃತ್ತ ಕಚೇರಿಯ ಮಹಾ ಪ್ರಬಂಧಕ ಎನ್. ಲಕ್ಷ್ಮೀನಾರಾಯಣ ಮಾತನಾಡಿ, ವಿವಿಧ ಬ್ಯಾಂಕ್ಗಳಲ್ಲಿ ವಿವಿಧ ರೀತಿ ಸಾಲ ಸೌಲಭ್ಯಗಳಿವೆ. ಈ ಸಾಲ ಸೌಲಭ್ಯಗಳ ಬಗ್ಗೆ, ಅದಕ್ಕೆ ಬೇಕಾಗುವ ಅಗತ್ಯ ದಾಖಲಾತಿಗಳ ಕುರಿತು ಜನರಿಗೆ ಮಾಹಿತಿ ನೀಡುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಬ್ಯಾಂಕ್ನ ಸಬ್ಸಿಡಿ, ವಿಮೆಗಳ ಕುರಿತು ಸುದೀರ್ಘವಾಗಿ ಮೂರು ದಿನಗಳ ಕಾಲ ಗ್ರಾಹಕರಿಗೆ ಮಾಹಿತಿ ನೀಡಲಾಗುತ್ತಿದೆ. ಮಾಹಿತಿ ಪಡೆದು ಸಾಲ ಪಡೆದು ನಿರ್ದಿಷ್ಟ ಉದ್ದೇಶಗಳಿಗೆ ಬಳಸುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಸಲಹೆ ನೀಡಿದರು.
ಮೇಳದಲ್ಲಿ ಆಧಾರ್ ಸೇವೆಗಳ ಕೌಂಟರ್ನ್ನು ಸಹ ತೆರೆಯಲಾಗಿದ್ದು, ಸಾರ್ವಜನಿಕರು ಆಧಾರ್ಗೆ ಸಂಬಂಧಿಸಿದ ತಿದ್ದುಪಡಿ ಇತರೆ ಬದಲಾವಣೆ ಇದ್ದಲ್ಲಿ ಇಲ್ಲಿ ಮಾಡಿಸಿಕೊಳ್ಳಬಹುದು. ಇದೇ ಸಂದರ್ಭದಲ್ಲಿ ಅರ್ಹ ಗ್ರಾಹಕರಿಗೆ ವೇದಿಕೆ ಮೇಲಿದ್ದ ಗಣ್ಯರು ಸಾಂಕೇತಿಕವಾಗಿ ಸಾಲಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕ ಸುಶೃತ ಡಿ. ಶಾಸ್ತ್ರಿ ಸೇರಿದಂತೆ ವಿವಿಧ ಬ್ಯಾಂಕ್ ಸಿಬ್ಬಂದಿ ವರ್ಗದವರು ಗ್ರಾಹಕರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ3 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ2 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

