Connect with us

ದಿನದ ಸುದ್ದಿ

ದಾವಣಗೆರೆ | ಗ್ರಾಹಕರ ಮೇಳ : ಮೇಳದಲ್ಲಿ 21 ಕೋಟಿವರೆಗು ಜನತೆಗೆ ಸಾಲ ನೀಡುವ ಗುರಿ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ಗ್ರಾಹಕರು ಬ್ಯಾಂಕ್‍ಗಳಲ್ಲಿ ವಿವಿಧ ಬಗೆಯ ಸಾಲಗಳನ್ನು ಪಡೆದು ಅದನ್ನು ಉದ್ದೇಶಿತ ಕಾರ್ಯಗಳಿಗೆ ಬಳಸಿ ಸಕಾಲದಲ್ಲಿ ಸಾಲ ಮರುಪಾವತಿ ಮಾಡವ ಮೂಲಕ ಬ್ಯಾಂಕ್‍ಗಳೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಕೆನರಾ ಬ್ಯಾಂಕ್, ಲೀಡ್ ಬ್ಯಾಂಕ್ ಕಚೇರಿ ದಾವಣಗೆರೆ ಇವರ ವತಿಯಿಂದ ತೋಗಟವೀರ ಸಮುದಾಯ ಭವನದಲ್ಲಿ ಅ.4 ರಂದು ಏರ್ಪಡಿಸಲಾಗಿದ್ದ ಗ್ರಾಹಕರೆಡೆಗೆ ಒಂದು ಹೆಜ್ಜೆ…‘ಗ್ರಾಹಕರ ಮೇಳ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೇಳದಲ್ಲಿ 1400 ಕ್ಕೂ ಹೆಚ್ಚು ಜನರಿಗೆ ರೂ. 21 ಕೋಟಿವರೆಗೂ ಸಾಲ ನೀಡುವ ಗುರಿ ಹೊಂದಲಾಗಿದೆ. ಗ್ರಾಹಕರು ಪಡೆದ ಸಾಲಗಳನ್ನು ಸದ್ಬಳಕೆ ಮಾಡಿಕೊಂಡು ಸರಿಯಾದ ರೀತಿಯಲ್ಲಿ ಮರುಪಾವತಿ ಮಾಡಿ ಬ್ಯಾಂಕ್‍ನೊಂದಿಗೆ ಉತ್ತಮ ವ್ಯವಹಾರದೊಂದಿಗೆ ಬಾಂಧವ್ಯ ಕಾಪಾಡಿಕೊಳ್ಳಬೇಕು ಎಂದರು.

ಆರ್ಥಿಕ ಸೇರ್ಪಡೆಯಿಂದಾಗಿ ಕಳೆದ ಹತ್ತು ವರ್ಷಗಳಲ್ಲಿ ಬ್ಯಾಂಕ್ ವಹಿವಾಟು ಹೆಚಾಗುತ್ತಿದೆ. ಬ್ಯಾಂಕುಗಳು ವಿವಿಧ ಯೋಜನೆಗಳಡಿ ಮಹಿಳೆಯರೂ ಸೇರಿದಂತೆ ಎಲ್ಲ ವರ್ಗದವರಿಗೆ ಹಲವಾರು ಉದ್ದೇಶಗಳಿಗೆ ಸಾಲಗಳನ್ನು ನಿಡುತ್ತಿದ್ದು, ಗ್ರಾಹಕರ ಉತ್ತಮ ಪ್ರತಿಕ್ರಿಯೆ ಹಾಗೂ ಬ್ಯಾಂಕುಗಳಿಂದ ಹೆಚ್ಚಿನ ಸೇವೆಗಳನ್ನು ನಿರಿಕ್ಷಿಸುತ್ತೇನೆ ಎಂದು ಹೇಳಿದರು.

ಜಿಲ್ಲಾ ಕೆನರಾ ಬ್ಯಾಂಕ್ ಕ್ಷೇತ್ರೀಯ ಕಚೇರಿಯ ಸಹಾಯಕ ಮಹಾ ಪ್ರಬಂಧಕ ಹೆಚ್.ರಘುರಾಜ ಮಾತನಾಡಿ, ಬ್ಯಾಂಕುಗಳು ಸಾಲ ನೀಡಲು ಸಿದ್ದವಾಗಿವೆ ಎಂಬುದನ್ನು ಗ್ರಾಹಕರಿಗೆ ತಿಳಿಸಲು ಕೇಂದ್ರ ಸರ್ಕಾರವು ಎಲ್ಲಾ ಜಿಲ್ಲೆಗಳಲ್ಲಿಯೂ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಗ್ರಾಹಕರು ಈ ಮೇಳಗಳ ಮೂಲಕ ವಿವಿಧ ಸಾಲಗಳ ಕುರಿತು ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ನಬಾರ್ಡ್ ಜಿಲ್ಲಾ ಮುಖ್ಯ ವ್ಯವಸ್ಥಾಪಕ ರವೀಂದ್ರ.ವಿ ಮಾತನಾಡಿ, ಗ್ರಾಹಕ ಮೇಳ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದಕ್ಕಾಗಿ ಕೆನರಾ ಬ್ಯಾಂಕ್ ವ್ಯವಸ್ಥಾಪಕರಿಗೆ ವಿಶೇಷ ವಂದನೆಗಳು. ಗ್ರಾಹಕರು ಈ ಅವಕಾಶವನ್ನು ಬಳಸಿಕೊಂಡು ಸಾಲವನ್ನು ಪಡೆದು ಸದುಪಯೋಗ ಪಡೆದುಕೊಳ್ಳಬೇಕು. ನಬಾರ್ಡ್ ವತಿಯಿಂದ ಸಾಮಾನ್ಯ ವರ್ಗದರಿಗೆ ಶೇ.25, ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಶೇ.33 ಸಬ್ಸಿಡಿ ಹಾಗೂ ಕುರಿ-ಮೇಕೆ ಸಾಕಲು ಎಲ್ಲಾ ವರ್ಗದವರಿಗೆ ಶೇ.25 ಸಬ್ಸಿಡಿ ನೀಡಲಾಗುತ್ತಿದೆ. ಆಹಾರ ಸಾಮಗ್ರಿಗಳನ್ನು ಶೇಕರಣೆ ಮಾಡಲು ಗೊದಾಮುಗಳನ್ನು ಕಟ್ಟಲು ರೂ. 3 ಕೋಟಿ ವರೆಗೆ ಸಾಲ ನೀಡುತ್ತಿದ್ದು, ಮಹಿಳೆಯರು, ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ರೂ.1 ಕೋಟಿವರೆಗೂ ಸಬ್ಸಿಡಿ ಸಿಗಲಿದೆ. ಸಾಮಾನ್ಯ ವರ್ಗದವರಿಗೆ ರೂ.75 ಲಕ್ಷದವರೆಗೆ ಸಬ್ಸಿಡಿ ಸಿಗಲಿದೆ ಎಂದು ಮಾಹಿತಿ ನೀಡಿದರು.

ಎಸ್.ಬಿ.ಐ ರೀಜನಲ್ ಮ್ಯಾನೇಜರ್ ರಾಜೇಶ್.ಡಿ ಮಾತನಾಡಿ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಎಸ್‍ಬಿಐ ಶಾಖೆಗಳು ಹೆಚ್ಚಾಗಿದ್ದು, ಅವುಗಳಲ್ಲಿ ಯಾವ ರೀತಿಯ ಸಾಲಗಳು ಸಿಗುತ್ತವೆ ಎಂಬುದನ್ನು ಈ ಮೇಳದಲ್ಲಿ ಮಾಹಿತಿ ನೀಡಲಾಗುತ್ತಿದೆ. ನಮ್ಮಲ್ಲಿ ಗ್ರಾಹಕರಿಗೆ ಸಾಲ ನೀಡಲು ಯಾವುದೇ ನಿರ್ಬಂಧಗಳಿಲ್ಲ. ತಮ್ಮ ಹತ್ತಿರದ ಶಾಖೆಗಳಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸಾಲ ಪಡೆಯಬಹುದು ಎಂದ ಅವರು ಗ್ರಾಹಕರು ಈ ಮೂರು ದಿನಗಳ ಗ್ರಾಹಕರ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕರ್ನಾಟಕ ಗ್ರಾಮೀಣ ಬ್ಯಾಂಕ್ ರೀಜನಲ್ ಮ್ಯಾನೇಜರ್ ಶಂಕರ್ ಕನವಳ್ಳಿ ಮಾತನಾಡಿ, ಬ್ಯಾಂಕುಗಳಲ್ಲಿನ ಸಾಲಗಳ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕಿನ 65 ಶಾಖೆಗಳಿವೆ ಹಾಗೂ ನಗರದಲ್ಲಿ 07 ಪ್ರಮುಖ ಶಾಖೆಗಳಿವೆ. ಗ್ರಾಹಕರು ತಮಗೆ ಹತ್ತಿರವಾಗುವ ಶಾಖೆಗಳಲ್ಲಿ ಕೃಷಿ, ಸ್ವ-ಸಹಾಯ ಸಂಘಗಳು ಸೇರಿದಂತೆ ಇನ್ನಿತರೆ ಚಟುವಟಿಕೆಗಳಿಗೆ ಸಾಲ ಪಡೆಯಬಹುದಾಗಿದೆ ಎಂದರು.

ಸಿಂಡಿಕೇಟ್ ಬ್ಯಾಂಕ್ ರೀಜನಲ್ ಮ್ಯಾನೇಜರ್ ನವೀನ್‍ಕುಮಾರ್. ಎನ್ ಮಾತನಾಡಿ, ಪ್ರತಿಯೊಂದು ಬ್ಯಾಂಕ್‍ಗಳಲ್ಲಿ ಗ್ರಾಹಕರಿಗೆ ಹೊಂದುವಂತೆ ರೂ. 5 ಸಾವಿರದಿಂದ ರೂ. 1 ಕೋಟಿಯವರೆಗೆ ಸಾಲವನ್ನು ನೀಡಲಾಗುತ್ತದೆ. ಮನೆ, ಶೈಕ್ಷಣಿಕ, ಕೃಷಿ, ಉದ್ಯಮ, ಸಣ್ಣ, ಅತಿ ಸಣ್ಣ ಕೈಗಾರಿಕೆ ಸೇರಿದಂತೆ ಪ್ರತಿಯೊಂದು ಉದ್ಯಮಕ್ಕೂ ಬ್ಯಾಂಕ್‍ಗಳು ಸಾಲ ನೀಡುತ್ತಿವೆ. ಗ್ರಾಹಕರು ಈ ಸೌಲಭ್ಯಗಳ ಸದುಪಯೋಗಪಡೆದುಕೊಳ್ಳಬೇಕು ಎಂದರು.

ಬೆಂಗಳೂರು ಕೆನರಾ ಬ್ಯಾಂಕ್ ವೃತ್ತ ಕಚೇರಿಯ ಮಹಾ ಪ್ರಬಂಧಕ ಎನ್. ಲಕ್ಷ್ಮೀನಾರಾಯಣ ಮಾತನಾಡಿ, ವಿವಿಧ ಬ್ಯಾಂಕ್‍ಗಳಲ್ಲಿ ವಿವಿಧ ರೀತಿ ಸಾಲ ಸೌಲಭ್ಯಗಳಿವೆ. ಈ ಸಾಲ ಸೌಲಭ್ಯಗಳ ಬಗ್ಗೆ, ಅದಕ್ಕೆ ಬೇಕಾಗುವ ಅಗತ್ಯ ದಾಖಲಾತಿಗಳ ಕುರಿತು ಜನರಿಗೆ ಮಾಹಿತಿ ನೀಡುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಬ್ಯಾಂಕ್‍ನ ಸಬ್ಸಿಡಿ, ವಿಮೆಗಳ ಕುರಿತು ಸುದೀರ್ಘವಾಗಿ ಮೂರು ದಿನಗಳ ಕಾಲ ಗ್ರಾಹಕರಿಗೆ ಮಾಹಿತಿ ನೀಡಲಾಗುತ್ತಿದೆ. ಮಾಹಿತಿ ಪಡೆದು ಸಾಲ ಪಡೆದು ನಿರ್ದಿಷ್ಟ ಉದ್ದೇಶಗಳಿಗೆ ಬಳಸುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಸಲಹೆ ನೀಡಿದರು.

ಮೇಳದಲ್ಲಿ ಆಧಾರ್ ಸೇವೆಗಳ ಕೌಂಟರ್‍ನ್ನು ಸಹ ತೆರೆಯಲಾಗಿದ್ದು, ಸಾರ್ವಜನಿಕರು ಆಧಾರ್‍ಗೆ ಸಂಬಂಧಿಸಿದ ತಿದ್ದುಪಡಿ ಇತರೆ ಬದಲಾವಣೆ ಇದ್ದಲ್ಲಿ ಇಲ್ಲಿ ಮಾಡಿಸಿಕೊಳ್ಳಬಹುದು. ಇದೇ ಸಂದರ್ಭದಲ್ಲಿ ಅರ್ಹ ಗ್ರಾಹಕರಿಗೆ ವೇದಿಕೆ ಮೇಲಿದ್ದ ಗಣ್ಯರು ಸಾಂಕೇತಿಕವಾಗಿ ಸಾಲಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕ ಸುಶೃತ ಡಿ. ಶಾಸ್ತ್ರಿ ಸೇರಿದಂತೆ ವಿವಿಧ ಬ್ಯಾಂಕ್ ಸಿಬ್ಬಂದಿ ವರ್ಗದವರು ಗ್ರಾಹಕರು ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನುಡಿದಂತೆ ನಡೆದ ಸರ್ಕಾರಕ್ಕೆ 2 ವರ್ಷ | ಮೇ 20 ರಂದು ಹೊಸಪೇಟೆಯಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ; 1.03 ಲಕ್ಷ ಹಕ್ಕುಪತ್ರ ವಿತರಣೆ : ಸಿಎಂ ಸಿದ್ದರಾಮಯ್ಯ

Published

on

1.03 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರಿಂದ ಸ್ಥಳ ಪರಿಶೀಲನೆ

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಸುದ್ದಿದಿನ,ಬಳ್ಳಾರಿ:ರಾಜ್ಯ ಸರ್ಕಾರವು 2 ವ಼ರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದೇ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕಾರ್ಯಕ್ರಮ ಆಯೋಜನೆ ಕುರಿತಂತೆ, ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

2023 ರ ಮೇ 20 ರಂದು ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದು ಈಗ ಎರಡು ವರ್ಷ ಪೂರೈಸುತ್ತಿದೆ. ಅಂದೇ ಕ್ಯಾಬಿನೆಟ್ ಸಭೆಯಲ್ಲಿ ಪಂಚ ಗ್ಯಾರಂಟಿ ಜಾರಿಗೆ ಕುರಿತಂತೆ ಚರ್ಚಿಸಲಾಗಿತ್ತು. ಪ್ರಥಮವಾಗಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷಿö್ಮ ಮತ್ತು ಯುವನಿಧಿ ಸೇರಿದಂತೆ ಹಂತ-ಹAತವಾಗಿ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಅವರು ಹೇಳಿದರು.

ಕಳೆದ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಯಲ್ಲಿ ಬಹುಮತದಿಂದ ಆರಿಸಿ ಗೆಲ್ಲಿಸಿದಂತಹ ಪ್ರಜಾಪ್ರಭುತ್ವದ ಮತದಾರರಿಗೆ ನಮ್ಮ ಸರ್ಕಾರವು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದರು.

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಹಲವರು ಟೀಕಿಸುತ್ತಿದ್ದಾರೆ. ಈಗಾಗಲೇ ಗ್ಯಾರಂಟಿ ಯೋಜನೆಗಳಿಗೆ 90 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದೆ. 2024-25 ನೇ ಸಾಲಿನಲ್ಲಿ 51 ಸಾವಿರ ಕೋಟಿ ರೂ. ಗಳನ್ನು ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಲಾಗಿದೆ. ಕಳೆದ ವಷÀð ಗ್ಯಾರಂಟಿ ಯೋಜನೆಗಳಿಗಾಗಿಯೇ 52.9 ಸಾವಿರ ಕೋಟಿ ರೂ. ಮೀಸಲಿಡಲಾಗಿತ್ತು. ಈ ವರ್ಷ 50.18 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ, ಅಗತ್ಯಬಿದ್ದಲ್ಲಿ ಇನ್ನು ಹೆಚ್ಚಿನ ಅನುದಾನ ನೀಡಲಾಗುವುದು.

2024-25 ನೇ ಸಾಲಿನಲ್ಲಿ 3,71,000 ಕೋಟಿ ರೂ. ಬಜೆಟ್ ಗಾತ್ರವಿತ್ತು. 2025-26 ನೇ ಸಾಲಿನಲ್ಲಿ ಬಜೆಟ್ ನ ಗಾತ್ರವನ್ನು 4,09,000 ಕೋಟಿ ರೂ. ಗೆ ಹೆಚ್ಚಿಸಲಾಗಿದೆ. ಅಂದರೆ ಸುಮಾರು 38,000 ಕೋಟಿ ರೂ. ಹೆಚ್ಚಳವಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ನುಡಿದಂತೆ ನಡೆದ ಸರ್ಕಾರ ನಮ್ಮದು ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅನುದಾನದ ಕೊರತೆ ಇಲ್ಲ. ನಮ್ಮ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಕೆಆರ್‌ಡಿಬಿ ಗೆ 5 ಸಾವಿರ ಕೋಟಿ ರೂ

ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗೆ ನಮ್ಮ ರಾಜ್ಯ ಸರ್ಕಾರವು 5 ಸಾವಿರ ಕೋಟಿ ರೂ. ನೀಡಿದೆ. ಈ ಭಾಗದ 371 (ಜೆ) ವಿಶೇಷ ಸ್ಥಾನಮಾನವನ್ನು ನಮ್ಮ ಸರ್ಕಾರವೇ ಜಾರಿಗೊಳಿಸಿದ್ದು ಎಂದು ಮನನ ಮಾಡಿದ ಅವರು, ಕೇಂದ್ರ ಸರ್ಕಾರವು ತಿದ್ದುಪಡಿ ಬಳಿಕ ವಿಶೇಷ ಸ್ಥಾನಮಾನ ನೀಡಲು ಪ್ರತಿಬಿಂಬಿಸಿತ್ತು, ಆದರೆ ಈವರೆಗೆ ಒಂದು ರೂ. ಕೂಡ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಸರ್ಕಾರವು ವಸತಿ ಯೋಜನೆಯಡಿ ಒಂದೇ ಒಂದು ಮನೆ ನೀಡಲಾಗಲಿಲ್ಲ, ಈ ಬಾರಿ ವಸತಿ ಯೋಜನೆಯಡಿ ಮನೆ ವಿತರಿಸುವ ಕುರಿತಂತೆ ವಸತಿ ಸಚಿವರು ಪ್ರಸ್ತಾಪಿಸಿದ್ದಾರೆ ಎಂದರು.

1.03 ಲಕ್ಷ ಹಕ್ಕುಪತ್ರ ವಿತರಣೆ

ನಮ್ಮ ಸರ್ಕಾರವು ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದ್ದು, ಇನ್ನುಮುಂದೆಯೂ ನಡೆಯುತ್ತೇವೆ ಎಂದು ಜನರಿಗೆ ತಿಳಿಯಪಡಿಸಲು ಮೇ 20 ರಂದು ನಡೆಯುವ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮದಲ್ಲಿ ಹಾಡಿ, ಹಟ್ಟಿ ಮತ್ತು ತಾಂಡಾ ಪ್ರದೇಶದ ಕನಿಷ್ಠ 1.03 ಲಕ್ಷ ಫಲಾನುಭವಿಗಳಿಗೆ ಕಂದಾಯ ಇಲಾಖೆಯಿಂದ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುತ್ತದೆ. ಇದರಿಂದ ಜನರಿಗೆ ಸೌಲಭ್ಯ ಸಮರ್ಪಿಸುವ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಇದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಕಾರ್ಯಕ್ರಮಕ್ಕೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿರೋಧ ಪಕ್ಷದ ನಾಯಕರು, ಶಾಸಕರುಗಳನ್ನು ಸಹ ಆಹ್ವಾನಿಸಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತರಲಾಗುವುದು. ಕನಿಷ್ಠ 3 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನಸ್ತೋಮ ಸೇರುವ ನಿರೀಕ್ಷೆ ಹೊಂದಲಾಗಿದೆ. ಇದಕ್ಕೆ ಬೇಕಾದ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ. ಝೆಡ್.ಜಮೀರ್ ಅಹ್ಮದ್ ಖಾನ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಡಾ.ಹೆಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಣ್ಣನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು, ಸಂಸದ ಈ.ತುಕಾರಾಮ್, ಶಾಸಕರಾದ ಹೆಚ್.ಆರ್.ಗವಿಯಪ್ಪ, ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಎಂ.ಪಿ.ಲತಾ, ಶ್ರೀನಿವಾಸ ನಾಯ್ಕ ಮತ್ತು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ಮೊಹಮದ್ ನೊಂಗ್ಜಾಯ್ ಅಕ್ರಂ ಅಲಿ ಪಾಷಾ, ಎಸ್ಪಿಗಳಾದ ಡಾ.ಶೋಭರಾಣಿ.ವಿ.ಜೆ., ಶ್ರೀಹರಿಬಾಬು ಸೇರಿದಂತೆ ಅನೇಕರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ಯಾರಂಟಿಗೆ 90 ಸಾವಿರ ಕೋಟಿ ರೂ ಖರ್ಚು, ಗ್ಯಾರಂಟಿಯಿ0ದ ಸರ್ಕಾರ ದಿವಾಳಿಯಾಗಿಲ್ಲ : ಸಿಎಂ ಸಿದ್ದರಾಮಯ್ಯ

Published

on

  • ಗಿರೀಶ್ ಕುಮಾರ್ ಗೌಡ

ಸುದ್ದಿದಿನ,ವಿಜಯನಗರ:ಚುನಾವಣೆ ಸಂದರ್ಭದಲ್ಲಿ ನೀಡಿದ ಪ್ರಣಾಳಿಕೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದು ಕಳೆದೆರಡು ವರ್ಷಗಳಿಂದ 90 ಸಾವಿರ ಕೋಟಿಗೂ ಹೆಚ್ಚು ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಿದೆ. ಇದರಿಂದ ರಾಜ್ಯದ ಆರ್ಥಿಕ ಅಭಿವೃದ್ದಿಯಲ್ಲಿ ಗಣನೀಯ ಸಾಧನೆ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.

ಅವರು ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ, ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಕಾರ್ಯಕ್ರಮವನ್ನು ಮೇ.20 ರಂದು ಸರ್ಕಾರದಿಂದ ಏರ್ಪಡಿಸಲಾಗಿದ್ದು, ಇದರ ಪೂರ್ವಸಿದ್ದತೆ ಪರಿಶೀಲನೆಗೆ ಆಗಮಿಸಿ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು, 2023 ರ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಪಕ್ಷ ಸರ್ಕಾರ ರಚನೆ ಮಾಡಿತು. ಮೊದಲ ಸಂಪುಟ ಸಭೆಯಲ್ಲಿಯೇ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತೀರ್ಮಾನಿಸಲಾಯಿತು. ಆದರೆ ವಿರೋಧ ಪಕ್ಷದವರು ಇದರಿಂದ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಅನೇಕ ಟೀಕೆಯನ್ನು ಮಾಡಿದವು. ಅಂದು ಟೀಕೆ ಮಾಡಿದವರು ನಮ್ಮ ಗ್ಯಾರಂಟಿ ಯೋಜನೆಗಳನ್ನು ಇಂದು ನಕಲು ಮಾಡುವಂತಾಗಿದೆ. ಈಗ ಕರ್ನಾಟಕದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಿದ್ದು, ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಳವಾಗಿದೆ. ಇದಕ್ಕೆ ನಿದರ್ಶನ 2024-25 ರಲ್ಲಿ ಸರ್ಕಾರದ ಬಜೆಟ್ ಗಾತ್ರ ರೂ.3,71,000 ಕೋಟಿ, 2025-26 ರಲ್ಲಿ ಇದು ರೂ.4,09,000 ಕೋಟಿರೂಗಳಿಗೆ ಏರಿಕೆಯಾಗಿರುವುದು ಒಂದು ವರ್ಷದಲ್ಲಿ 38,000 ಸಾವಿರ ಕೋಟಿ ರೂಗಳು ಸರ್ಕಾರದ ಹೆಚ್ಚುವರಿ ಆದಾಯವಾಗಿದೆ. ಬಜೆಟ್ ಮಂಡನೆಯನ್ನು ಸಂಗ್ರಹವಾಗುವ ತೆರಿಗೆ ಮತ್ತು ಆದಾಯವನ್ನು ಆಧರಿಸಿ ಬಜೆಟ್ ಸಿದ್ದಪಡಿಸಲಾಗುತ್ತದೆ. ಆದಾಯ ಇಲ್ಲದೇ ಬಜೆಟ್ ಗಾತ್ರ ಹೆಚ್ಚುತ್ತಿರಲಿಲ್ಲ ಎಂದರು.

ಗ್ಯಾರಂಟಿ ಯೋಜನೆಯಿಂದ ಅಭಿವೃದ್ದಿ ಕೆಲಸಗಳು ಕುಂಠಿತವಾಗಿವೆ ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. ಆದರೆ ಗ್ಯಾರಂಟಿ ಜೊತೆಗೆ ಅಭಿವೃದ್ದಿಗೂ ಅನುದಾನ ನೀಡಿದ್ದು ಅನೇಕ ಕ್ಷೇತ್ರಗಳಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಇನ್ನೂರು, ಮುನ್ನೂರು ಮತ್ತು ಏಳುನೂರು ಕೋಟಿವರೆಗೆ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇಲ್ಲಿಯವರೆಗೆ ಗ್ಯಾರಂಟಿ ಯೋಜನೆಗಳಿಗಾಗಿ ರೂ.90,000 ಕೋಟಿಗಿಂತಲೂ ಹೆಚ್ಚು ಖರ್ಚು ಮಾಡಲಾಗಿದೆ. ವಿರೋಧ ಪಕ್ಷದವರು ಅಭಿವೃದ್ದಿಗೆ ಹಣವಿಲ್ಲ ಎಂದು ಹೇಳುತ್ತಿದ್ದು, 2024-25 ರಲ್ಲಿ ಆಸ್ತಿ ಸೃಜನೆಗಾಗಿ ರೂ.51,000 ಕೋಟಿ ವೆಚ್ಚ ಮಾಡಲಾಗಿದೆ. 2025-26 ರಲ್ಲಿ ಆಸ್ತಿ ಸೃಜನೆಗಾಗಿ ರೂ.83,000 ಕೋಟಿ ವರೆಗೆ ವೆಚ್ಚ ಮಾಡುತ್ತಿದ್ದು ಗ್ಯಾರಂಟಿಗೆ ರೂ.50,018 ಕೋಟಿ ಮೀಸಲಿರಿಸಲಾಗಿದೆ. ಇನ್ನೂ ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನವನ್ನೂ ಸಹ ಪೂರಕ ಬಜೆಟ್‌ಲ್ಲಿ ನೀಡಲಾಗುತ್ತದೆ. ಆದರೆ ನುಡಿದಂತೆ ನಡೆಯುವ ಸರ್ಕಾರ ನಮ್ಮದಾಗಿದೆ ಎಂದರು.

ಹೈದರಾಬಾದ್ ಕರ್ನಾಟಕ ಅಭಿವೃದ್ದಿಗೆ ಬದ್ದ

ಹೈದರಾಬಾದ್ ಕರ್ನಾಟಕ ಅಭಿವೃದ್ದಿಗೆ ಕೆಕೆಆರ್‌ಡಿಬಿಗೆ ಕಳೆದ ಬಜೆಟ್‌ನಲ್ಲಿ ರೂ.5,000 ಕೋಟಿ ರೂಗಳು ನೀಡಿದ್ದು, ಈ ವರ್ಷವೂ ಅಷ್ಟೇ ಅನುದಾನ ನೀಡಲಾಗಿದೆ. ಆದರೆ ಹಿಂದಿನ ಸರ್ಕಾರ ಕೊನೆ ವರ್ಷ ರೂ.3,000 ಕೋಟಿ ರೂಗಳನ್ನು ಕೆಕೆಆರ್‌ಡಿಬಿಗೆ ನೀಡಿತ್ತು. 371ಜೆ ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು ಇದರ ಅಭಿವೃದ್ದಿಗೆ ಕೇಂದ್ರ ಅನುದಾನ ನೀಡಬೇಕಿತ್ತು. ಆದರೆ ಒಂದು ಬಿಡಿಗಾಸು, ಒಂದೇ ಒಂದು ರೂಪಾಯಿಯನ್ನು ನೀಡಿಲ್ಲ ಎಂದರು. ಮೇ.20 ರಂದು ಹೊಸಪೇಟೆಯಲ್ಲಿ ನಡೆಯುವ ಸಮಾರಂಭದಲ್ಲಿ 1,03,000 ಜನರಿಗೆ ಕಂದಾಯ ಇಲಾಖೆಯಿಂದ ಆಸ್ತಿಯ ಹಕ್ಕುಪತ್ರಗಳನ್ನು ನೀಡಲಾಗುತ್ತದೆ. ಕಳೆದೆರಡು ವರ್ಷಗಳಲ್ಲಿ ಸರ್ಕಾರ ಜನರಿಗಾಗಿ ಮಾಡಿದ ಕೆಲಸಗಳನ್ನು ಜನರಿಗೆ ಸಮರ್ಪಣೆ ಮಾಡಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಜನರು ಬರಲಿದ್ದಾರೆ. ಅಂದಾಜು ಮೂರು ಲಕ್ಷಕ್ಕಿಂತ ಹೆಚ್ಚಿನ ಜನರು ಈ ಸಮಾರಂಭದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.
ಕಾರ್ಯಕ್ರಮದಲ್ಲಿ ವಿಶೇಷವಾಗಿ ಲೋಕಸಭಾ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭಾ ವಿರೋಧ ಪಕ್ಷದ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಂಪುಟದ ಸಚಿವರು, ಶಾಸಕರು ಭಾಗವಹಿಸುತ್ತಿದ್ದಾರೆ. ಇದು ಸರ್ಕಾರದ ಕಾರ್ಯಕ್ರಮವಾಗಿದ್ದು ವಿರೋಧ ಪಕ್ಷದ ನಾಯಕರನ್ನು ಸಹ ಅಹ್ವಾನಿಸಲಾಗಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳ ಸಮನ್ವಯತೆಯಿಂದ ಬೃಹತ್ ಕಾರ್ಯಕ್ರಮ ನಡೆಯಲಿದೆ ಎಂದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಕ್ಫ್, ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್‌ಖಾನ್, ಪ್ರವಾಸೋದ್ಯಮ ಹಾಗೂ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಣ್ಣನೀರಾವರಿ ಸಚಿವ ಎನ್.ಎಸ್.ಭೋಸರಾಜು, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಯೋಜನಾ ಸಚಿವರಾದ ಡಿ.ಸುಧಾಕರ್, ಸಂಸದ ಈ.ತುಕಾರಾಂ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶೀನಿವಾಸ್, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಕಂಪ್ಲಿ ಶಾಸಕ ಗಣೇಶ್, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ಸಿಂಧನೂರು ಶಾಸಕರಾದ ಹಂಪನಗೌಡ ಬಾದರ್ಲಿ, ಮೊಣಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿರಾಜ್ ಶೇಖ್, ಬಳ್ಳಾರಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಸಿಇಒ ಮೊಹಮ್ಮದ್ ನೋಂಗ್ಜಾಯ್ ಅಕ್ರಮ್ ಷಾ ಅಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶ್ರೀಹರಿಬಾಬು.ಬಿ.ಎಲ್, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ಮೊಹಮ್ಮದ್ ಹ್ಯಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಇತರರಿದ್ದರು.

www.suddidina.com | contact : watsapp 9980346243
Continue Reading

ದಿನದ ಸುದ್ದಿ

ಚನ್ನಗಿರಿ | ರೈತರಿಗೆ, ವ್ಯಾಪಾರಿಗಳಿಗೆ ರಿಯಾಯಿತಿ ದರದಲ್ಲಿ ಗೋದಾಮುಗಳ ಬಾಡಿಗೆ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯ ಉಗ್ರಾಣ ನಿಗಮವು ಸರ್ಕಾರದ ಅಂಗ ಸಂಸ್ಥೆಯಾಗಿದ್ದು, ರಾಜ್ಯಾದ್ಯಂತ 161 ಉಗ್ರಾಣ ಕೇಂದ್ರಗಳ ಮೂಲಕ ರೈತರಿಗೆ, ರೈತ ಉತ್ಪಾದಕ ಸಂಸ್ಥೆ, ಸರ್ಕಾರಿ ಸಂಸ್ಥೆಗಳಿಗೆ ಹಾಗೂ ವ್ಯಾಪಾರಸ್ಥರಿಗೆ, ಇತರೆ ಸಂಘ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ಗೋದಾಮುಗಳನ್ನು ಬಾಡಿಗೆಗೆ ನೀಡಲು ಇಚ್ಚಿಸಿದ್ದು, ಕೃಷಿ ಉತ್ಪನ್ನಗಳನ್ನು ವೈಜ್ಞಾನಿಕ ಸರಕು ಸಂಗ್ರಹಣಾ ಸೌಲಭ್ಯ ಒದಗಿಸುತ್ತಿದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಪ್ರಾದೇಶಿಕ ವ್ಯವಸ್ಥಾಪಕರು ತಿಳಿಸಿದ್ದಾರೆ.

ಅದರಂತೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಾಗರಪೇಟೆಯಲ್ಲಿ 3 ಗೋದಾಮುಗಳನ್ನು ಸ್ಥಾಪಿಸಿದ್ದು, ಒಟ್ಟಾರೆ 7 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯ ಮತ್ತು ಹೊಸಹಳ್ಳಿಯಲ್ಲಿ 2 ಗೋದಾಮುಗಳನ್ನು ಸ್ಥಾಪಿಸಿದ್ದು, ಒಟ್ಟಾರೆ 10108 ಮೆಟ್ರಿಕ್ ಟನ್ ಸಾಮರ್ಥ್ಯದ ಗೋದಾಮುಗಳನ್ನು ನಿರ್ಮಿಸಲಾಗದೆ. ಆಸಕ್ತಿಯುಳ್ಳವರು ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಪ್ರಾದೇಶಿಕ ವ್ಯವಸ್ಥಾಪಕರು ದೂರವಾಣಿ ಸಂಖ್ಯೆ 7760966953 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

www.suddidina.com ಸುದ್ದಿದಿನ.ಕಾಂ|ವಾಟ್ಸಾಪ್|9980346243
Continue Reading

Trending