Connect with us

ದಿನದ ಸುದ್ದಿ

ಬಂಗಾಳಕೊಲ್ಲಿಯಲ್ಲಿ ಮ್ಯಾಂಡೋಸ್ ಚಂಡಮಾರುತ ; ಕರ್ನಾಟಕ, ತಮಿಳುನಾಡು ಸೇರಿ ಹಲವು ರಾಜ್ಯಗಳಲ್ಲಿ ಮಳೆ

Published

on

ಸುದ್ದಿದಿನ ಡೆಸ್ಕ್ : ಬಂಗಾಳಕೊಲ್ಲಿಯಲ್ಲಿ ಮ್ಯಾಂಡೋಸ್ ಚಂಡಮಾರುತ ಗಂಟೆಗೆ 180ಕಿಲೋಮೀಟರ್ ವೇಗದಲ್ಲಿ ಬೀಸುತ್ತಿದ್ದು, ಕರ್ನಾಟಕ, ತಮಿಳುನಾಡು, ಸೇರಿದಂತೆ ಹಲವು ರಾಜ್ಯಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ನಿನ್ನೆ ಬೆಳಗ್ಗೆಯಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಬೆಂಗಳೂರಿನಲ್ಲಿ ಮಳೆಯ ಜತೆಗೆ ಥಂಡಿ ವಾತಾವರಣ ಕೂಡ ಹೆಚ್ಚಾಗಿದೆ. ನಿನ್ನೆ ಇಡೀ ದಿನ ಮಳೆಯಾಗಿದ್ದು, ಹಲವಾರು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆ ಕರ್ನಾಟಕದ ಕೆಲವು ಭಾಗದಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ತೀರ ಪ್ರದೇಶದಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಈಗಾಗಲೇ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಮೀನುಗಾರರು ಕೂಡ ಸಮುದ್ರಯಕ್ಕೆ ಇಳಿಯಬಾರದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಮ್ಯಾಂಡೋಸ್ ಚಂಡಮಾರುತ ತಮಿಳುನಾಡಿನ ಕರಾವಳಿಯ ಮಾಮಲ್ಲಪುರಂ ದಾಟಿ ಮುಂದೆ ಸಾಗಿದ್ದು, ಕ್ರಮೇಣ ದುರ್ಬಲವಾಗಲಿದೆ. ಅದರ ಪರಿಣಾಮ ಶ್ರೀಹರಿಕೋಟಾ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕದ ಕೇರಳ ಕರಾವಳಿ ಭಾಗದ ಮೇಲೆ ಉಂಟಾಗಲಿದ್ದು, ಸಾಧಾರಣ ಮಳೆಯಾಗಲಿದೆ.

ಚಂಡಮಾರುತದ ಪರಿಸ್ಥಿತಿ ಕುರಿತಂತೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್ ಉನ್ನತ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು. ಚೆನ್ನೈ ಸುತ್ತಮುತ್ತ ಇರುವ ಕರಾವಳಿ ಪ್ರದೇಶಗಳಿಗೆ ಭೇಟಿ ನೀಡಿದ್ದ ಸ್ಟ್ಯಾಲಿನ್ ಮೀನುಗಾರ ಸಮಸ್ಯೆಗಳನ್ನು ಆಲಿಸಿದರು.

ಸರ್ಕಾರ ಕೈಗೊಂಡ ಮುಂಜಾಗ್ರತಾ ಕ್ರಮಗಳಿಂದಾಗಿ ಅಪಾಯದ ಪ್ರಮಾಣ ಕಡಿಮೆಯಾಗಿದೆ ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದರು.

ತಮಿಳುನಾಡಿನ ಮಹಾನಗರ ಪಾಲಿಕೆಯಲ್ಲಿ ಮಳೆಯಿಂದ ಆಗಿರುವ ತೊಂದರೆಗೆ ಪರಿಹಾರ ಕಾರ್ಯವನ್ನು ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಪಾಲಿಕೆಯ ಆಯುಕ್ತ ಗಗನ್ ದೀಪ್ ಸಿಂಗ್ ಬೇಡಿ ಅವರಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು ಎಂದು ವರದಿಯಾಗಿದೆ. ಚಂಡಮಾರುತದಿಂದ ಪುದುಚೆರಿಯಲ್ಲಿಯೂ ಸಹ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಹಾನಿಯಾಗಿದೆ. ಶಾಲಾ-ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿತ್ತು.

ಚಂಡಮಾರುತದ ಪರಿಣಾಮ ಚಳಿಗಾಳಿ ಬೀಸುತ್ತಿದೆ. ಆಂಧ್ರದ ಕರಾವಳಿಯಲ್ಲಿ ಮೀನುಗಾರರು ಕಡಲಿಗಿಳಿಯದಂತೆ ಮುನ್ನೆಚ್ಚರಿಕೆ ಘೋಷಿಸಲಾಗಿದೆ. ಎಲ್ಲಾ ಕರಾವಳಿಗಳಲ್ಲಿ ಸಾಧಾರಣದಿಂದ ಕೂಡಿದ ಹಗುರ ಮಳೆಯಾಗುವ ನಿರೀಕ್ಷೆ ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending