ದಿನದ ಸುದ್ದಿ
ಪ್ರವಾಹ ವಿಚಾರದಲ್ಲಿ ರಾಜಕೀಯ ಮಾಡಲ್ಲ, ಜನರ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ನಮ್ಮ ಬೆಂಬಲವಿದೆ : ಡಿ.ಕೆ. ಶಿವಕುಮಾರ್
ಸುದ್ದಿದಿನ,ಹುಬ್ಬಳ್ಳಿ : ಪ್ರವಾಹ ಸಂತ್ರಸ್ತರ ಪರಿಹಾರ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಈ ವಿಚಾರದಲ್ಲಿ ನಾವು ಪಕ್ಷಭೇದ ಮರೆತುಜನರ ನೋವಿಗೆ ಸ್ಪಂದಿಸಬೇಕಿದೆ. ಈ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಕೇಂದ್ರಕ್ಕೆ ಮನವಿ ಮಾಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಸಲುವಾಗಿ ಉತ್ತರ ಕರ್ನಾಟಕ ಜಿಲ್ಲೆಗಳ ಪ್ರವಾಸ ಕೈಗೊಂಡಿರುವ ಡಿಕೆ ಶಿವಕುಮಾರ್, ಸೋಮವಾರ ಹುಬ್ಬಳ್ಳಿಗೆ ಆಗಮಿಸಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪರಿಸ್ಥಿತಿಯಲ್ಲಿ ನಾವು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂಬ ಭರವಸೆ ನೀಡಿದರು.
‘ಪಕ್ಷಬೇಧ ಮರೆತು ಜನರಿಗೆ ಸ್ಪಂಧಿಸುವ ಉದ್ದೇಶದೊಂದಿಗೆ ನಾನು ಆಗಮಿಸಿದ್ದೇನೆ. ಮೊದಲು ಕುಂದಗೋಳಕ್ಕೆ ಭೇಟಿ ನೀಡುತ್ತೇನೆ. ನಂತರ ಜಿಲ್ಲಾ ನಾಯಕರು ಎಲ್ಲಿ ಹೇಳುತ್ತಾರೋ ಅಲ್ಲಿ ಪ್ರವಾಸ ಮಾಡುತ್ತೇನೆ. ನಂತರ ಸಂಜೆ ಬೆಳಗಾವಿಗೆ ತೆರಳಿ ಅಲ್ಲಿನ ನಾಯಕರು ಯಾವ ಪ್ರದೇಶ ಸೂಚಿಸುತ್ತಾರೋ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ’ ಎಂದರು.
ಕೆಲವು ಕಡೆ ಪ್ರವಾಹದಿಂದ 30 ಸಾವಿರ ಕೋಟಿ ನಷ್ಟ ಆಗಿದೆ ಎಂದರೆ ಮತ್ತೆ ಕೆಲವು ಕಡೆ 40 ಸಾವಿರ ಕೋಟಿ ನಷ್ಟ ಆಗಿದೆ ಎಂದು ಸರ್ಕಾರ ಹೇಳುತ್ತಿದೆ. ಹೀಗಾಗಿ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ರಾಜ್ಯ ಮತ್ತು ಕೇಂದ್ರಗಳಲ್ಲಿ ಅವರದೇ ಸರ್ಕಾರ ಇದೆ. ಕೇಂದ್ರಗಳಲ್ಲಿ ಮಂತ್ರಿಗಳಿದ್ದಾರೆ. ಅವರೆಲ್ಲರೂ ಜನರಿಗೆ ಸೂಕ್ತ ಪರಿಹಾರ ನೀಡಬೇಕು. ಇದಕ್ಕೆ ಬೇಕಾದ ಸಹಕಾರವನ್ನು ನಾವು ನೀಡುತ್ತೇವೆ. ಸರ್ವಪಕ್ಷ ನಿಯೋಗ ಕರೆದರೆ ನಾವು ಕೂಡ ಬಂದು ಕೇಂದ್ರದ ಮೇಲೆ ಒತ್ತಡ ಹಾಕುತ್ತೇವೆ. ಅವರದು ಸಂಪೂರ್ಣ ಬಹುಮತ ಇರುವ ಶಕ್ತಿಶಾಲಿ ಸರ್ಕಾರ. ಹೀಗಾಗಿ ಅವರು ರಾಜ್ಯದ ಜನತೆಗೆ ಒಳ್ಳೆಯದು ಮಾಡಲಿ ನಾವು ಅದಕ್ಕೆ ಬೆಂಬಲ ನೀಡುತ್ತೇವೆ ಎಂದರು.
ಸರ್ಕಾರ ಅದು ಮಾಡಿಲ್ಲ ಇದು ಮಾಡಿಲ್ಲ, ಯಾರೂ ಇಲ್ಲ ಅಂತಾ ಮಾತನಾಡುವ ಸಂದರ್ಭ ಇದಲ್ಲ. ಸಮಯ ಬಂದಾಗ ನೀವು ಮಾತಾಡಿ, ನಾವು ಮಾತನಾಡುತ್ತೇವೆ. ಈಗಿನ ಪರಿಸ್ಥಿತಿಯಲ್ಲಿ ಪಕ್ಷಭೇದ ಮರೆತು ಸಂತ್ರಸ್ತರನ್ನು ಕಾಪಾಡಲು ಕೈಜೋಡಿಸಬೇಕು ಎಂದು ನಮ್ಮ ಕಾರ್ಯಕರ್ತರಿಗೂ ಸೂಚನೆ ನೀಡಿದ್ದೇವೆ. ರಾಜ್ಯ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸಾರ್ವಜನಿಕರು ಬಹಳ ಪ್ರಮಾಣದಲ್ಲಿ ಸಹಾಯ ಮಾಡುತ್ತಿದ್ದಾರೆ. ಮಾನವೀಯತೆಯಿಂದ ಸ್ಪಂದಿಸುತ್ತಿರುವ ಅವರೆಲ್ಲರಿಗೂ ವೈಯಕ್ತಿಕವಾಗಿ ಹಾಗೂ ಪಕ್ಷದ ಪರವಾಗಿ ಅವರಿಗೆ ನಾವು ಅಭಿನಂದಿಸುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಯಡಿಯೂರಪ್ಪನವರಿಗೆ ನಾನು ಒಂದು ಕಿವಿ ಮಾತು ಹೇಳಲು ಬಯಸುತ್ತೇನೆ. ಸಂತ್ರಸ್ತರ ನೆರವಿನ ಹೆಸರು ಹೇಳಿಕೊಂಡು ಕೆಲವರು ಹಣ ದೇಣಿಗೆ ಪಡೆಯಲು ಡಬ್ಬ ಹಿಡಿದು ರಸ್ತೆಗೆ ಇಳಿದಿದ್ದಾರೆ. ನಿಜವಾಗಿಯೂ ಸಂತ್ರಸ್ತರಿಗೆ ಸಹಾಯ ಮಾಡಲು ಇಚ್ಛಿಸುವವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನೋಂದಣಿ ಮಾಡಿ, ತಾಲೂಕು ಕಚೇರಿಯಲ್ಲಿ ಮಾಹಿತಿ ನೀಡಿ ಹಣ ಸಂಗ್ರಹಿಸುವಂತಾಗಬೇಕು. ಅನಗತ್ಯವಾಗಿ ಹಣ ವಸೂಲಿ ಮಾಡುವ ಕಾರ್ಯಕ್ಕೆ ಬ್ರೇಕ್ ಹಾಕಿ ಜನರು ಮಾಡುವ ಸಹಾಯ ನೇರವಾಗಿ ಅಗತ್ಯವಿರುವವರಿಗೆ ತಲುಪಬೇಕು. ಹೀಗಾಗಿ ಮುಖ್ಯಮಂತ್ರಿಗಳು ಈ ವಿಚಾರವಾಗಿ ಅಧಿಕಾರಿಗಳಿಗೆ ಸೂಚನೆ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡುತ್ತೇನೆ.
ಇನ್ನು ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ದಿನ ಅಧಿಕಾರಿಗಳೇ ಧ್ವಜಾರೋಹಣ ಮಾಡಲಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನಮ್ಮ ಹಿರಿಯರು ಹೋರಾಟ ಮಾಡಿ ನಮಗೆ ಸ್ವಾತಂತ್ರ ತಂದುಕೊಟ್ಟಿದ್ದಾರೆ. ಅದರ ಪ್ರತೀಕವಾಗಿ ನಾವು ನಮ್ಮ ತ್ರಿವರ್ಣ ಧ್ವಜವನ್ನು ಹಾರಿಸುತ್ತೇವೆ. ಕಳೆದ 70 ವರ್ಷಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಆಯಾ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡುತ್ತಿದ್ದರು. ಆದರೆ ಇದೇ ಮೊದಲ ಬಾರಿಗೆ ಇಂತಹ ಪರಿಸ್ಥಿತಿ ಬಂದಿದೆ. 16ನೇ ತಾರಿಕಿನ ನಂತರ ಸಂಪುಟ ರಚನೆ ಮಾಡುತ್ತೇವೆ ಎಂದು ಯಡಿಯೂರಪ್ಪನವರು ಹೇಳಿದ್ದಾರೆ. ನಾವು ಸರ್ಕಾರದ ವಿಚಾರದಲ್ಲಿ ರಾಜಕೀಯ ಮಾಡಲು ಇಷ್ಟವಿಲ್ಲ. ಆದರೆ ಮಾಧ್ಯಮದವರು ಪ್ರಶ್ನೆ ಕೇಳಿದ್ದಕ್ಕಾಗಿ ನಾನು ಉತ್ತರಿಸುತ್ತಿದ್ದೇನೆ’ ಎಂದರು.
ಪ್ರವಾಹ ವಿಚಾರದಲ್ಲಿ ರಾಜಕೀಯ ಮಾಡಲ್ಲ, ಜನರ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ನಮ್ಮ ಬೆಂಬಲವಿದೆ: ಡಿಕೆ ಶಿವಕುಮಾರ್ಹುಬ್ಬಳ್ಳಿ:ಪ್ರವಾಹ…
Posted by Udayakala News on Monday, 12 August 2019
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


