Connect with us

ದಿನದ ಸುದ್ದಿ

ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ಪರಿಹಾರ : ಕರೆಮಾಡಿ

Published

on

ಶ್ರೀ ದತ್ತಾತ್ರೇಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.

ಇಂದೇ ಕರೆ ಮಾಡಿ: 9945410150

ಮೇಷ ರಾಶಿ

ಸಕಾರಾತ್ಮಕ ಚಿಂತೆಯ ಫಲಗಳಿಂದ ಶುಭಕರವಾದ ವಾತಾವರಣ ನಿರ್ಮಿಸಲಿದ್ದೀರಿ. ಯೋಜನೆಗಳಲ್ಲಿ ಉತ್ತಮ ರೀತಿಯ ಪಾಲ್ಗೊಳ್ಳುವಿಕೆ ಕಂಡುಬರುತ್ತದೆ. ವ್ಯವಹಾರ ನಿಮಿತ್ತ ಪ್ರಯಾಣ ಮಾಡಬೇಕಾದ ಸಂದರ್ಭ ಬರಲಿದೆ ಇದು ಲಾಭಾಂಶ ತಂದುಕೊಡುತ್ತದೆ. ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುವುದು ಸೂಕ್ತ. ಸಂಗಾತಿಯ ಇಷ್ಟಾರ್ಥಗಳನ್ನು ಕಡೆಗಣಿಸದೆ ಅವರನ್ನು ಸಂತುಷ್ಟ ಪಡಿಸಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಷಭ ರಾಶಿ

ಸಂತೋಷದ ವಿಷಯಗಳನ್ನು ಈ ದಿನ ಆಲಿಸಲಿದ್ದೀರಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿಕೆಯ ಸಾಧ್ಯತೆಗಳು ಕಂಡು ಬರುತ್ತದೆ. ನಿಮ್ಮ ವಿಚಾರದಂತೆ ಆರ್ಥಿಕ ವ್ಯವಸ್ಥೆ ನಡೆಯಲಿದ್ದು ಸಮಯದ ಗತಿಯಲ್ಲಿ ಉತ್ತಮ ಫಲಿತಾಂಶ ತಂದುಕೊಡಲಿದೆ. ನಂಬಿಕಸ್ಥ ಜನಗಳಿಂದ ವಂಚನೆಗಳು ಬರಬಹುದಾದ ಸಾಧ್ಯತೆಯಿದೆ ಎಚ್ಚರ. ಹೊಸ ಒಪ್ಪಂದಗಳು ಕಂಡುಬರಲಿದ್ದು ಸಕಾರಾತ್ಮಕವಾಗಿ ನಿಮ್ಮಂತೆಯೇ ಆಗುವುದು ನಿಶ್ಚಿತ. ವ್ಯಾಪಾರ-ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ ಕಾಣಬಹುದಾಗಿದೆ. ಮಕ್ಕಳನ್ನು ಆದಷ್ಟು ನಿಮ್ಮ ಹತೋಟಿಯಲ್ಲಿ ಇಟ್ಟುಕೊಳ್ಳುವುದು ಕ್ಷೇಮ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಿಥುನ ರಾಶಿ

ನಿಮ್ಮ ಪ್ರಯತ್ನ ಹಾಗೂ ಶ್ರಮದ ಫಲಗಳು ನಿಮ್ಮ ಗೆಲುವಿಗೆ ಸಹಕಾರಿಯಾಗಲಿದೆ. ಯೋಜನೆಗಳಲ್ಲಿ ಸಕಾರಾತ್ಮಕ ಫಲಿತಾಂಶ ದೊರೆಯಲಿದೆ. ಅಚಾತುರ್ಯವಾಗಿ ನಡೆಯುವ ತಪ್ಪುಗಳಿಂದ ಮಾನಸಿಕ ಗೊಂದಲ ಏರ್ಪಡು ಬಹುದು ಆದಷ್ಟು ತಪ್ಪಾಗದಂತೆ ಕಾರ್ಯನಿರ್ವಹಿಸಿ. ಕೌಟುಂಬಿಕ ವ್ಯಾಜ್ಯಗಳಲ್ಲಿ ನಿಮ್ಮ ಪರವಾಗಿಯೇ ಗೆಲುವು ಕಂಡುಬರುತ್ತದೆ. ಹಿರಿಯರು ನಿಮ್ಮ ವಿಚಾರಕ್ಕೆ ಮನಸೋತು ಪ್ರಶಂಸೆ ಹಾಗೂ ಜವಾಬ್ದಾರಿಯನ್ನು ನೀಡುವ ಸಾಧ್ಯತೆ ಕಾಣಬಹುದು. ಕಮಿಷನ್ ಏಜೆಂಟ, ಮಧ್ಯವರ್ತಿಗಳಿಗೆ ಉತ್ತಮ ಫಲಿತಾಂಶ ವಿದೆ. ಶೈಕ್ಷಣಿಕವಾಗಿ ನಿಮ್ಮ ಆಸಕ್ತಿ ಇನ್ನೂ ಹೆಚ್ಚಿನದಾಗಿ ಕಂಡುಬರುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕರ್ಕಾಟಕ ರಾಶಿ

ನಿಮ್ಮನ್ನು ಅನಗತ್ಯವಾಗಿ ಪ್ರೇರೇಪಿಸುವ ಜನಗಳು ಶಾಂತಿಯನ್ನು ಕದಡ ಬಹುದಾಗಿದೆ ಆದಷ್ಟು ತಾಳ್ಮೆ ಇರಲಿ. ಕೆಲಸದಲ್ಲಿ ನಿರುತ್ಸಾಹದ ವಾತಾವರಣ ತೆಗೆದುಹಾಕಲು ಪ್ರಯತ್ನಿಸಿ. ಆತುರದ ನಿರ್ಣಯಗಳಿಂದ ಸಮಸ್ಯೆ ಬರಬಹುದು ಎಚ್ಚರ. ವ್ಯವಹಾರದಲ್ಲಿ ಗೊಂದಲಗಳು ಹೆಚ್ಚಾಗಲಿದ್ದು ಇದು ಪ್ರತಿಕೂಲ ಪರಿಣಾಮ ಬೀರಬಹುದು ಆದಷ್ಟು ಸಮಾಧಾನಚಿತ್ತದಿಂದ ಅಧ್ಯಯನ ನಡೆಸಿ. ಪತ್ನಿಯ ಬೇಡಿಕೆಗಳ ಪಟ್ಟಿ ಬೆಳೆಯುತ್ತಾ ಸಾಗಲಿದೆ ನಿಮ್ಮ ಕೈಲಾದಷ್ಟು ಸ್ಪಂದಿಸುವುದು ಒಳಿತು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಸಿಂಹ ರಾಶಿ

ಮೋಸದ ಜಾಲಗಳು ವಿಷವರ್ತುಲದಂತೆ ಸುತ್ತುತ್ತಿದೆ, ಇದು ನಿಮ್ಮ ವ್ಯವಹಾರಗಳನ್ನು ನಷ್ಟ ಮಾಡಬಹುದು ಎಚ್ಚರ. ಸಾಲ ನೀಡುವ ಗೋಜಿಗೆ ಹೋಗಬೇಡಿ. ನಯವಂಚನೆಯ ಮಾತುಗಳಿಂದ ನಿಮ್ಮ ವ್ಯವಸ್ಥೆಯನ್ನು ಹಾಳು ಮಾಡಬಹುದು ಎಚ್ಚರವಿರಲಿ. ಕೆಲಸದ ಒತ್ತಡದಿಂದ ಕುಟುಂಬದ ಬಗ್ಗೆ ಗಮನಹರಿಸಲು ಸಾಧ್ಯವಾಗದಿರಬಹುದು ಆದಷ್ಟು ಕುಟುಂಬಕ್ಕಾಗಿ ಸಮಯವನ್ನು ಹೊಂದಾಣಿಕೆ ಮಾಡಿಕೊಳ್ಳಿ. ಇಬ್ಬರ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸುವುದು ತಪ್ಪಾಗಬಹುದು. ಗೃಹ ಕಟ್ಟಡ ಕಾಮಗಾರಿಗಳಿಗೆ ಉತ್ತಮವಾದ ವಾತಾವರಣ ಇರಲಿದೆ. ಆರೋಗ್ಯದ ಹಿತದೃಷ್ಟಿ ಗಮನವಹಿಸುವುದು ಸೂಕ್ತ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕನ್ಯಾ ರಾಶಿ

ಚರ್ಚಾಸ್ಪದ ವಿಷಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಾಣಬಹುದು. ನಿಮ್ಮ ವಿಚಾರಗಳು ಕೆಲವರಿಗೆ ಅಪಹಾಸ್ಯ ಎನಿಸಬಹುದು ಆದರೆ ಅವುಗಳು ಉತ್ತಮವಾದದ್ದು ಎಂಬುದು ನಂತರವೇ ಮನವರಿಕೆ ಆಗಲಿದೆ. ಹೊಸತನದತ್ತ ನಿಮ್ಮ ಪ್ರಯಾಣ ಸಾಗಲಿದೆ. ನೂತನ ಉದ್ಯಮವನ್ನು ಸ್ಥಾಪಿಸುವ ಗುರಿ ಈಡೇರುವ ಸಾಧ್ಯತೆಗಳನ್ನು ಕಾಣಬಹುದು. ಸಂಗಾತಿಯೊಡನೆ ಗೃಹಾಲಂಕಾರಕ್ಕೆ ಖರೀದಿ ಪ್ರಕ್ರಿಯೆಗಳನ್ನು ಆರಂಭಿಸುವ ಸಾಧ್ಯತೆ ಇದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ತುಲಾ ರಾಶಿ

ಶೈಕ್ಷಣಿಕ ಅಧ್ಯಯನದಲ್ಲಿ ಹಿನ್ನಡೆಯಾಗಬಹುದು. ಏಕಾಗ್ರತೆಯನ್ನು ರೂಢಿಸಿಕೊಳ್ಳಲು ಮುಂದಾಗಿ. ಮಕ್ಕಳ ಸ್ವಭಾವವನ್ನು ಆದಷ್ಟು ಕೂಲಂಕುಷವಾಗಿ ಅಧ್ಯಯನ ಮಾಡುವುದು ಒಳಿತು. ಶುಭ ಕಾರ್ಯದ ಬಗ್ಗೆ ಕುಟುಂಬದಲ್ಲಿ ಪ್ರಸ್ತಾಪನೆ ನಡೆಯಲಿದೆ. ಸಾಂಪ್ರದಾಯಿಕ ವಿಚಾರಗಳನ್ನು ಕಡೆಗಣಿಸಬೇಡಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಶ್ಚಿಕ ರಾಶಿ

ಉದ್ಯೋಗದಲ್ಲಿ ಮತ್ಸರ ಸಾಧಿಸುವ ಜನಗಳು ಕಂಡುಬರುತ್ತಾರೆ, ನಿಮ್ಮ ಉತ್ತಮ ಮಾತುಗಳಿಂದ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವ ಪ್ರಯತ್ನ ಮಾಡಿ. ನಿಮ್ಮ ಗುರಿ ತಲುಪುವರೆಗೆ ಛಲ ಬಿಡಬೇಡಿ, ಆತ್ಮವಿಶ್ವಾಸದಿಂದ ಸಾಧನೆಗೆ ಮುಂದಾಗಿ. ಕುಟುಂಬಸ್ಥರಿಂದ ಅನುಕೂಲಕರ ಸಂಗತಿಗಳು ಈ ದಿನ ಕಾಣಬಹುದು. ದುಂದುವೆಚ್ಚವನ್ನು ಆದಷ್ಟು ನಿಲ್ಲಿಸುವುದು ಸೂಕ್ತ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಧನಸ್ಸು ರಾಶಿ

ಮಾತಿಗಿಂತ ಕೃತಿ ಮುಖ್ಯ ಸಂಗತಿ ಎಂಬುದನ್ನು ನೆನಪಿಡಿ. ಯಶಸ್ವಿಗೆ ಶ್ರಮ ಅಗತ್ಯವಿದೆ, ಆದಷ್ಟು ಸೋಮಾರಿತನವನ್ನು ತೆಗೆದುಹಾಕುವುದು ಒಳ್ಳೆಯದು. ಕೆಲವರು ಹೊಗಳಬಹುದು ಅಥವಾ ನಿಮ್ಮನ್ನು ನೀವೇ ಉತ್ತಮ ದರ್ಜೆಯಲ್ಲಿ ತೋರ್ಪಡಿಸಿ ಕೊಳ್ಳಬಹುದು ಇವುಗಳು ಶಾಶ್ವತವಲ್ಲ ಬದುಕಿನ ಗೆಲುವಿಗೆ ನಿರಂತರ ಹೋರಾಟ ಅಗತ್ಯ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150.

ಮಕರ ರಾಶಿ

ನಿಮ್ಮಲ್ಲಿನ ಬೇಜವಾಬ್ದಾರಿತನದಿಂದ ಇಂದು ಕೆಲವು ಸಂಕಷ್ಟಗಳು ಈಡಾಗಬಹುದು ಎಚ್ಚರವಿರಲಿ. ಕೆಲವು ಆಮಂತ್ರಣಗಳು ನಿಮಗೆ ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮನಸ್ಥಿತಿ ತರುತ್ತದೆ. ಆದಷ್ಟು ನಿಮ್ಮ ಕೆಲಸವನ್ನು ನೀವೇ ಮಾಡಿ ಅನ್ಯರ ನಂಬಿ ಸಮಸ್ಯೆಗಳಲ್ಲಿ ಸಿಲುಕಬೇಡಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕುಂಭ ರಾಶಿ

ನೀವು ಈ ದಿನ ಪರಿಶ್ರಮ ಹಾಗೂ ಹೆಚ್ಚಿನ ಒತ್ತಡ ಅನುಭವಿಸುವ ಸೂಚನೆ ಕಂಡು ಬರುತ್ತದೆ. ಕೆಲವು ವ್ಯವಹಾರಗಳು ನಿಮ್ಮ ಇಚ್ಛೆಯ ವಿರುದ್ಧವಾಗಿ ನಡೆಯಬಹುದಾದ ದಿನವಿದು. ಹಣಕಾಸಿನಲ್ಲಿ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಬಹುದು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮೀನ ರಾಶಿ

ನಿಮ್ಮ ಮನಸ್ಸು ಗೊಂದಲ ಮತ್ತು ಅಸಮತೋಲನದಿಂದ ವರ್ತಿಸಲಿದೆ, ನೀವು ಈ ದಿನ ಯೋಗ, ವ್ಯಾಯಾಮದಲ್ಲಿ ತೋಡಗುವುದು ಒಳಿತು. ಸಣ್ಣಪುಟ್ಟ ವಿಷಯಗಳನ್ನು ಹೆಚ್ಚಾಗಿ ಚರ್ಚಿಸಿ ಅಥವಾ ಚಿಂತೆಗೆ ತೆಗೆದುಕೊಂಡು ಕೊರಬೇಡಿ. ಪತ್ನಿಯ ಹಿತನುಡಿಗಳು ಹಾಗೂ ಪ್ರೇಮಭರಿತ ನೋಟವು ನಿಮಗೆ ಸಮಾಧಾನ ತರುವುದು ನಿಶ್ಟಿತ. ಸಂಜೆಯ ವೇಳೆಗೆ ಶುಭ ಸುದ್ದಿ ಕೇಳುವಿರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ

ಇಂದೇ ಕರೆ ಮಾಡಿ: 9945410150

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending