ದಿನದ ಸುದ್ದಿ
ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ಪರಿಹಾರ : ಕರೆಮಾಡಿ
ಶ್ರೀ ದತ್ತಾತ್ರೇಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ: 9945410150
ಮೇಷ ರಾಶಿ
ಸಕಾರಾತ್ಮಕ ಚಿಂತೆಯ ಫಲಗಳಿಂದ ಶುಭಕರವಾದ ವಾತಾವರಣ ನಿರ್ಮಿಸಲಿದ್ದೀರಿ. ಯೋಜನೆಗಳಲ್ಲಿ ಉತ್ತಮ ರೀತಿಯ ಪಾಲ್ಗೊಳ್ಳುವಿಕೆ ಕಂಡುಬರುತ್ತದೆ. ವ್ಯವಹಾರ ನಿಮಿತ್ತ ಪ್ರಯಾಣ ಮಾಡಬೇಕಾದ ಸಂದರ್ಭ ಬರಲಿದೆ ಇದು ಲಾಭಾಂಶ ತಂದುಕೊಡುತ್ತದೆ. ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುವುದು ಸೂಕ್ತ. ಸಂಗಾತಿಯ ಇಷ್ಟಾರ್ಥಗಳನ್ನು ಕಡೆಗಣಿಸದೆ ಅವರನ್ನು ಸಂತುಷ್ಟ ಪಡಿಸಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಷಭ ರಾಶಿ
ಸಂತೋಷದ ವಿಷಯಗಳನ್ನು ಈ ದಿನ ಆಲಿಸಲಿದ್ದೀರಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿಕೆಯ ಸಾಧ್ಯತೆಗಳು ಕಂಡು ಬರುತ್ತದೆ. ನಿಮ್ಮ ವಿಚಾರದಂತೆ ಆರ್ಥಿಕ ವ್ಯವಸ್ಥೆ ನಡೆಯಲಿದ್ದು ಸಮಯದ ಗತಿಯಲ್ಲಿ ಉತ್ತಮ ಫಲಿತಾಂಶ ತಂದುಕೊಡಲಿದೆ. ನಂಬಿಕಸ್ಥ ಜನಗಳಿಂದ ವಂಚನೆಗಳು ಬರಬಹುದಾದ ಸಾಧ್ಯತೆಯಿದೆ ಎಚ್ಚರ. ಹೊಸ ಒಪ್ಪಂದಗಳು ಕಂಡುಬರಲಿದ್ದು ಸಕಾರಾತ್ಮಕವಾಗಿ ನಿಮ್ಮಂತೆಯೇ ಆಗುವುದು ನಿಶ್ಚಿತ. ವ್ಯಾಪಾರ-ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ ಕಾಣಬಹುದಾಗಿದೆ. ಮಕ್ಕಳನ್ನು ಆದಷ್ಟು ನಿಮ್ಮ ಹತೋಟಿಯಲ್ಲಿ ಇಟ್ಟುಕೊಳ್ಳುವುದು ಕ್ಷೇಮ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಿಥುನ ರಾಶಿ
ನಿಮ್ಮ ಪ್ರಯತ್ನ ಹಾಗೂ ಶ್ರಮದ ಫಲಗಳು ನಿಮ್ಮ ಗೆಲುವಿಗೆ ಸಹಕಾರಿಯಾಗಲಿದೆ. ಯೋಜನೆಗಳಲ್ಲಿ ಸಕಾರಾತ್ಮಕ ಫಲಿತಾಂಶ ದೊರೆಯಲಿದೆ. ಅಚಾತುರ್ಯವಾಗಿ ನಡೆಯುವ ತಪ್ಪುಗಳಿಂದ ಮಾನಸಿಕ ಗೊಂದಲ ಏರ್ಪಡು ಬಹುದು ಆದಷ್ಟು ತಪ್ಪಾಗದಂತೆ ಕಾರ್ಯನಿರ್ವಹಿಸಿ. ಕೌಟುಂಬಿಕ ವ್ಯಾಜ್ಯಗಳಲ್ಲಿ ನಿಮ್ಮ ಪರವಾಗಿಯೇ ಗೆಲುವು ಕಂಡುಬರುತ್ತದೆ. ಹಿರಿಯರು ನಿಮ್ಮ ವಿಚಾರಕ್ಕೆ ಮನಸೋತು ಪ್ರಶಂಸೆ ಹಾಗೂ ಜವಾಬ್ದಾರಿಯನ್ನು ನೀಡುವ ಸಾಧ್ಯತೆ ಕಾಣಬಹುದು. ಕಮಿಷನ್ ಏಜೆಂಟ, ಮಧ್ಯವರ್ತಿಗಳಿಗೆ ಉತ್ತಮ ಫಲಿತಾಂಶ ವಿದೆ. ಶೈಕ್ಷಣಿಕವಾಗಿ ನಿಮ್ಮ ಆಸಕ್ತಿ ಇನ್ನೂ ಹೆಚ್ಚಿನದಾಗಿ ಕಂಡುಬರುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕರ್ಕಾಟಕ ರಾಶಿ
ನಿಮ್ಮನ್ನು ಅನಗತ್ಯವಾಗಿ ಪ್ರೇರೇಪಿಸುವ ಜನಗಳು ಶಾಂತಿಯನ್ನು ಕದಡ ಬಹುದಾಗಿದೆ ಆದಷ್ಟು ತಾಳ್ಮೆ ಇರಲಿ. ಕೆಲಸದಲ್ಲಿ ನಿರುತ್ಸಾಹದ ವಾತಾವರಣ ತೆಗೆದುಹಾಕಲು ಪ್ರಯತ್ನಿಸಿ. ಆತುರದ ನಿರ್ಣಯಗಳಿಂದ ಸಮಸ್ಯೆ ಬರಬಹುದು ಎಚ್ಚರ. ವ್ಯವಹಾರದಲ್ಲಿ ಗೊಂದಲಗಳು ಹೆಚ್ಚಾಗಲಿದ್ದು ಇದು ಪ್ರತಿಕೂಲ ಪರಿಣಾಮ ಬೀರಬಹುದು ಆದಷ್ಟು ಸಮಾಧಾನಚಿತ್ತದಿಂದ ಅಧ್ಯಯನ ನಡೆಸಿ. ಪತ್ನಿಯ ಬೇಡಿಕೆಗಳ ಪಟ್ಟಿ ಬೆಳೆಯುತ್ತಾ ಸಾಗಲಿದೆ ನಿಮ್ಮ ಕೈಲಾದಷ್ಟು ಸ್ಪಂದಿಸುವುದು ಒಳಿತು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಸಿಂಹ ರಾಶಿ
ಮೋಸದ ಜಾಲಗಳು ವಿಷವರ್ತುಲದಂತೆ ಸುತ್ತುತ್ತಿದೆ, ಇದು ನಿಮ್ಮ ವ್ಯವಹಾರಗಳನ್ನು ನಷ್ಟ ಮಾಡಬಹುದು ಎಚ್ಚರ. ಸಾಲ ನೀಡುವ ಗೋಜಿಗೆ ಹೋಗಬೇಡಿ. ನಯವಂಚನೆಯ ಮಾತುಗಳಿಂದ ನಿಮ್ಮ ವ್ಯವಸ್ಥೆಯನ್ನು ಹಾಳು ಮಾಡಬಹುದು ಎಚ್ಚರವಿರಲಿ. ಕೆಲಸದ ಒತ್ತಡದಿಂದ ಕುಟುಂಬದ ಬಗ್ಗೆ ಗಮನಹರಿಸಲು ಸಾಧ್ಯವಾಗದಿರಬಹುದು ಆದಷ್ಟು ಕುಟುಂಬಕ್ಕಾಗಿ ಸಮಯವನ್ನು ಹೊಂದಾಣಿಕೆ ಮಾಡಿಕೊಳ್ಳಿ. ಇಬ್ಬರ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸುವುದು ತಪ್ಪಾಗಬಹುದು. ಗೃಹ ಕಟ್ಟಡ ಕಾಮಗಾರಿಗಳಿಗೆ ಉತ್ತಮವಾದ ವಾತಾವರಣ ಇರಲಿದೆ. ಆರೋಗ್ಯದ ಹಿತದೃಷ್ಟಿ ಗಮನವಹಿಸುವುದು ಸೂಕ್ತ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕನ್ಯಾ ರಾಶಿ
ಚರ್ಚಾಸ್ಪದ ವಿಷಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಾಣಬಹುದು. ನಿಮ್ಮ ವಿಚಾರಗಳು ಕೆಲವರಿಗೆ ಅಪಹಾಸ್ಯ ಎನಿಸಬಹುದು ಆದರೆ ಅವುಗಳು ಉತ್ತಮವಾದದ್ದು ಎಂಬುದು ನಂತರವೇ ಮನವರಿಕೆ ಆಗಲಿದೆ. ಹೊಸತನದತ್ತ ನಿಮ್ಮ ಪ್ರಯಾಣ ಸಾಗಲಿದೆ. ನೂತನ ಉದ್ಯಮವನ್ನು ಸ್ಥಾಪಿಸುವ ಗುರಿ ಈಡೇರುವ ಸಾಧ್ಯತೆಗಳನ್ನು ಕಾಣಬಹುದು. ಸಂಗಾತಿಯೊಡನೆ ಗೃಹಾಲಂಕಾರಕ್ಕೆ ಖರೀದಿ ಪ್ರಕ್ರಿಯೆಗಳನ್ನು ಆರಂಭಿಸುವ ಸಾಧ್ಯತೆ ಇದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ತುಲಾ ರಾಶಿ
ಶೈಕ್ಷಣಿಕ ಅಧ್ಯಯನದಲ್ಲಿ ಹಿನ್ನಡೆಯಾಗಬಹುದು. ಏಕಾಗ್ರತೆಯನ್ನು ರೂಢಿಸಿಕೊಳ್ಳಲು ಮುಂದಾಗಿ. ಮಕ್ಕಳ ಸ್ವಭಾವವನ್ನು ಆದಷ್ಟು ಕೂಲಂಕುಷವಾಗಿ ಅಧ್ಯಯನ ಮಾಡುವುದು ಒಳಿತು. ಶುಭ ಕಾರ್ಯದ ಬಗ್ಗೆ ಕುಟುಂಬದಲ್ಲಿ ಪ್ರಸ್ತಾಪನೆ ನಡೆಯಲಿದೆ. ಸಾಂಪ್ರದಾಯಿಕ ವಿಚಾರಗಳನ್ನು ಕಡೆಗಣಿಸಬೇಡಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಶ್ಚಿಕ ರಾಶಿ
ಉದ್ಯೋಗದಲ್ಲಿ ಮತ್ಸರ ಸಾಧಿಸುವ ಜನಗಳು ಕಂಡುಬರುತ್ತಾರೆ, ನಿಮ್ಮ ಉತ್ತಮ ಮಾತುಗಳಿಂದ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವ ಪ್ರಯತ್ನ ಮಾಡಿ. ನಿಮ್ಮ ಗುರಿ ತಲುಪುವರೆಗೆ ಛಲ ಬಿಡಬೇಡಿ, ಆತ್ಮವಿಶ್ವಾಸದಿಂದ ಸಾಧನೆಗೆ ಮುಂದಾಗಿ. ಕುಟುಂಬಸ್ಥರಿಂದ ಅನುಕೂಲಕರ ಸಂಗತಿಗಳು ಈ ದಿನ ಕಾಣಬಹುದು. ದುಂದುವೆಚ್ಚವನ್ನು ಆದಷ್ಟು ನಿಲ್ಲಿಸುವುದು ಸೂಕ್ತ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಧನಸ್ಸು ರಾಶಿ
ಮಾತಿಗಿಂತ ಕೃತಿ ಮುಖ್ಯ ಸಂಗತಿ ಎಂಬುದನ್ನು ನೆನಪಿಡಿ. ಯಶಸ್ವಿಗೆ ಶ್ರಮ ಅಗತ್ಯವಿದೆ, ಆದಷ್ಟು ಸೋಮಾರಿತನವನ್ನು ತೆಗೆದುಹಾಕುವುದು ಒಳ್ಳೆಯದು. ಕೆಲವರು ಹೊಗಳಬಹುದು ಅಥವಾ ನಿಮ್ಮನ್ನು ನೀವೇ ಉತ್ತಮ ದರ್ಜೆಯಲ್ಲಿ ತೋರ್ಪಡಿಸಿ ಕೊಳ್ಳಬಹುದು ಇವುಗಳು ಶಾಶ್ವತವಲ್ಲ ಬದುಕಿನ ಗೆಲುವಿಗೆ ನಿರಂತರ ಹೋರಾಟ ಅಗತ್ಯ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150.
ಮಕರ ರಾಶಿ
ನಿಮ್ಮಲ್ಲಿನ ಬೇಜವಾಬ್ದಾರಿತನದಿಂದ ಇಂದು ಕೆಲವು ಸಂಕಷ್ಟಗಳು ಈಡಾಗಬಹುದು ಎಚ್ಚರವಿರಲಿ. ಕೆಲವು ಆಮಂತ್ರಣಗಳು ನಿಮಗೆ ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮನಸ್ಥಿತಿ ತರುತ್ತದೆ. ಆದಷ್ಟು ನಿಮ್ಮ ಕೆಲಸವನ್ನು ನೀವೇ ಮಾಡಿ ಅನ್ಯರ ನಂಬಿ ಸಮಸ್ಯೆಗಳಲ್ಲಿ ಸಿಲುಕಬೇಡಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕುಂಭ ರಾಶಿ
ನೀವು ಈ ದಿನ ಪರಿಶ್ರಮ ಹಾಗೂ ಹೆಚ್ಚಿನ ಒತ್ತಡ ಅನುಭವಿಸುವ ಸೂಚನೆ ಕಂಡು ಬರುತ್ತದೆ. ಕೆಲವು ವ್ಯವಹಾರಗಳು ನಿಮ್ಮ ಇಚ್ಛೆಯ ವಿರುದ್ಧವಾಗಿ ನಡೆಯಬಹುದಾದ ದಿನವಿದು. ಹಣಕಾಸಿನಲ್ಲಿ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮೀನ ರಾಶಿ
ನಿಮ್ಮ ಮನಸ್ಸು ಗೊಂದಲ ಮತ್ತು ಅಸಮತೋಲನದಿಂದ ವರ್ತಿಸಲಿದೆ, ನೀವು ಈ ದಿನ ಯೋಗ, ವ್ಯಾಯಾಮದಲ್ಲಿ ತೋಡಗುವುದು ಒಳಿತು. ಸಣ್ಣಪುಟ್ಟ ವಿಷಯಗಳನ್ನು ಹೆಚ್ಚಾಗಿ ಚರ್ಚಿಸಿ ಅಥವಾ ಚಿಂತೆಗೆ ತೆಗೆದುಕೊಂಡು ಕೊರಬೇಡಿ. ಪತ್ನಿಯ ಹಿತನುಡಿಗಳು ಹಾಗೂ ಪ್ರೇಮಭರಿತ ನೋಟವು ನಿಮಗೆ ಸಮಾಧಾನ ತರುವುದು ನಿಶ್ಟಿತ. ಸಂಜೆಯ ವೇಳೆಗೆ ಶುಭ ಸುದ್ದಿ ಕೇಳುವಿರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ
ಇಂದೇ ಕರೆ ಮಾಡಿ: 9945410150

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.
ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್ನ ‘ಯೂನಿವರ್ಸಿಟಿ ಆಫ್ ಸ್ಯಾಲ್ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.
ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ದಿನದ ಸುದ್ದಿ2 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ಅಂತರಂಗ3 hours agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ18 hours agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

