ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು
ಬೆಳಗಿನ ಪ್ರಮುಖ ಸುದ್ದಿಗಳು
- ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯರಸ್ತೆಗಳ ಅಸುಪಾಸಿನಲ್ಲಿ ಅನಧಿಕೃತ ಕಟ್ಟಡ ನಿರ್ಮಿಸದಂತೆ ಲೋಕೋಪಯೋಗಿ ಇಲಾಖೆಯಿಂದ ಹೊಸ ನಿಯಮ ಜಾರಿಗೆ ತರಲಾಗಿದೆ ಎಂದು ಇಲಾಖೆ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ಹೆದ್ದಾರಿಗಳ ಇಕ್ಕೆಲೆಗಳ ಕಟ್ಟಡ ನಿರ್ಮಾಣ ಎಷ್ಟು ಪ್ರಮಾಣದ ಅಂತರ ಕಾಪಾಡಿಕೊಳ್ಳಬೇಕು ಎಂಬ ನಿಯಮ, ವಿವರ ನಮೂದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
- ಬೆಳಕು ಯೋಜನೆಯಡಿ ರಾಜ್ಯದಲ್ಲಿ ವಿದ್ಯುತ್ ರಹಿತ ಮನೆಗಳಿಗೆ ಸಂಪರ್ಕ ನೀಡಲಾಗಿದೆ. 24 ಗಂಟೆಯೊಳಗೆ ಟ್ರಾನ್ಸ್ಫರ್ಮರ್ ಬದಲಾವಣೆಗೆ ಕ್ರಮ ಕೈಗೊಳ್ಳಲಾಗಿದೆ.160ಕಡೆ ಟಿಸಿ ಬ್ಯಾಂಕ್ ಸ್ಥಾಪನೆ ಮಾಡಲಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಬಾಗಲಕೋಟೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ರೇಷ್ಮೆ ಉತ್ಪಾದನೆಗೆ ಆದ್ಯತೆ ನೀಡಲಾಗುವುದು ಎಂದು ಕರ್ನಾಟಕ ರೇಷ್ಮೆ ಕೈಗಾರಿಕಾ ನಿಗಮದ ನೂತನ ಅಧ್ಯಕ್ಷ ಗೌತಮ್ ಗೌಡ ರಾಮನಗರದಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಹಾಲಿ ಇರುವ 17 ರೇಷ್ಮೆ ಕೈಗಾರಿಕಾ ನಿಗಮದ ಮಾರಾಟ ಮಳಿಗೆಗಳನ್ನು ವಿನೂತನವಾಗಿ ನವೀಕರಿಸಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಮಾರ್ಪಾಡು ಮಾಡಲಾಗುವುದು ಎಂದು ಅವರು ತಿಳಿಸಿದರು.
- ಕರ್ನಾಟಕ ಪರಿಕ್ಷಾ ಪ್ರಾಧಿಕಾರದ ವತಿಯಿಂದ ಇದೇ 7ರಂದು ನಡೆಯಲಿರುವ ಕೆಪಿಟಿಸಿಎಲ್ ಸ್ಪರ್ಧಾತ್ಮಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ – ಇಸ್ರೋ, ತನ್ನ ಸಣ್ಣ ಉಪಗ್ರಹ ಉಡಾವಣಾ ವಾಹನ – ಎಸ್ಎಸ್ಎಲ್ವಿ ಮೂಲಕ ಇದೇ 7ರ ಭಾನುವಾರದಂದು ಪ್ರಥಮ ಉಡಾವಣೆ ಮಾಡಲಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಕಾಲಮಾನ ಭಾನುವಾರ ಬೆಳಿಗ್ಗೆ 9 ಗಂಟೆ 18 ನಿಮಿಷಕ್ಕೆ ಇಒಎಸ್-02ಉಪಗ್ರಹ ಉಡಾವಣೆಯಾಗಲಿದೆ ಎಂದು ಇಸ್ರೋ ತಿಳಿಸಿದೆ.
- 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ, ಕೈಮಗ್ಗ ಮತ್ತು ಜವಳಿ ಇಲಾಖೆ ನಾಳೆಯಿಂದ ಆಗಸ್ಟ್ (5 ರಿಂದ) 7ರವರೆಗೆ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಆಯೋಜಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಬೆಂಗಳೂರಿನಲ್ಲಿ ಪ್ರದರ್ಶನ ಉದ್ಘಾಟಿಸಲಿದ್ದಾರೆ.
- ರಾಜ್ಯದಲ್ಲಿ ಪಿಎಸ್ಐ ನೇಮಕಾತಿಯ ಮರು ಪರೀಕ್ಷೆ ಶೀಘ್ರದಲ್ಲಿಯೇ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕ್ರಿಯೆ ಮುಗಿದ ನಂತರ ಮರು ಪರೀಕ್ಷೆ ನಡೆಸುವ ಬಗ್ಗೆ ಪ್ರಕಟಣೆ ಹೊರಡಿಸಲಾಗುವುದು ಎಂದು ಸಚಿವರು ಹೇಳಿದರು.
- ರಾಜ್ಯ ಹೆದ್ದಾರಿ ಜಿಲ್ಲಾ ಮುಖ್ಯರಸ್ತೆಗಳ ಆಸುಪಾಸಿನಲ್ಲಿ ಅನಧಿಕೃತ ಕಟ್ಟಡ ನಿರ್ಮಿಸದಂತೆ ಲೋಕೋಪಯೋಗಿ ಇಲಾಖೆಯಿಂದ ಹೊಸ ನಿಯಮ ಜಾರಿಗೆ ತರಲಾಗಿದೆ ಎಂದು ಇಲಾಖೆ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ಸಿಟಿ ಕಾರ್ಪೋರೇಷನ್ ವ್ಯಾಪ್ತಿಯಲ್ಲಿ 12 ಮೀಟರ್ ದೂರದವರೆಗೆ ಅಂತರ ಪಾಲಿಸುವುದು ಕಡ್ಡಾಯವಾಗಿದೆ. ಪಟ್ಟಣ ಪಂಚಾಯತಿ, ನಗರಸಭೆ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ೬ ಮೀಟರ್ ಅಂತರ ಕಾಪಾಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.
- ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆ ’ಹರ್ ಘರ್ ತಿರಂಗ್’ ಕಾರ್ಯಕ್ರಮದ ಅಂಗವಾಗಿ ದಾವಣಗೆರೆ ಮಹಾನಗರ ಪಾಲಿಕೆಯಿಂದ ನಿನ್ನೆ ಕಾರ್ಮಿಕರಿಗೆ ತ್ರಿವರ್ಣ ಧ್ವಜ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆಗಸ್ಟ್ 13 ರಿಂದ 15 ರ ವರೆಗೆ ಎಲ್ಲರ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಿ, ರಾಷ್ಟ್ರ ಪ್ರೇಮವನ್ನು ಎಲ್ಲೆಡೆ ಪಸರಿಸಿ, ಭಾರತ ಮಾತೆಗೆ ಗೌರವ ಸಲ್ಲಿಸಲು ಅನುಕೂಲವಾಗುವಂತೆ ಅಂಗಡಿ ವರ್ತಕರು, ಹಾಗೂ ಅಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಧ್ವಜ ವಿತರಣೆ ಕಾರ್ಯಕ್ಕೆ ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸೋಗಿ ಶಾಂತಕುಮಾರ ಚಾಲನೆ ನೀಡಿದರು.
- 2021-22ರ ಸಾಲಿನಲ್ಲಿ 99.30 ಲಕ್ಷ ಮೆಟ್ರಿಕ್ ಟನ್ನಷ್ಟು ಸಕ್ಕರೆ ರಫ್ತು ಮಾಡಲಾಗಿದೆ ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ಸರಬರಾಜು ಖಾತೆ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ತಿಳಿಸಿದ್ದಾರೆ. ದೇಶದಲ್ಲಿ ಸಕ್ಕರೆ ಲಭ್ಯತೆ, ಮಾರಾಟ ಮತ್ತು ರಫ್ತು ವಹಿವಾಟನ್ನು ಸಚಿವಾಲಯ ನಿರಂತರವಾಗಿ ನಿಗಾ ವಹಿಸುತ್ತಿದೆ ಎಂದು ಅವರು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
- ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ 2 ದಿನಗಳ ಭೇಟಿಗಾಗಿ ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಕಳೆದ ರಾತ್ರಿ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಹಿರಿಯ ಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಆರಗ ಜ್ಞಾನೇಂದ್ರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು, ಅಮಿತ್ ಶಾ ಅವರನ್ನು ಸ್ವಾಗತಿಸಿದರು.
- ಇಂದು ಬೆಂಗಳೂರು ನಗರದಲ್ಲಿ ನಡೆಯಲಿರುವ 3ನೇ ಆವೃತ್ತಿಯ ’ಸಂಕಲ್ಪದಿಂದ ಸಿದ್ಧಿ’ ಕಾರ್ಯಕ್ರಮದಲ್ಲಿ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ಅನಂತರ ಅವರು, ದೇಶದಲ್ಲೇ ಅತಿ ದೊಡ್ಡ ಹಾಲಿನ ಘಟಕವೆಂದು ಖ್ಯಾತಿಗಳಿಸಿರುವ ಕರ್ನಾಟಕ ಹಾಲು ಒಕ್ಕೂಟ-ಕೆಎಂಎಫ್ಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ಭಾಗವಹಿಸಲಿದ್ದಾರೆ.
- ಹೈಕೋರ್ಟ್ನ ನ್ಯಾಯಮೂರ್ತಿ ಪಿ. ಕೃಷ್ಣಾಭಟ್ ಅವರು ಸೇವೆಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಅವರಿಗೆ ಹೈಕೋರ್ಟ್ನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿದೆ. ಹಂಗಾಮಿ ಮುಖ್ಯನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
- ಕೇಂದ್ರ ಸಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ 2022ನೇ ಸಾಲಿನ ವಯೋಶ್ರೇಷ್ಠ ಸಮ್ಮಾನ್ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
- ಗೃಹ ರಕ್ಷಕ ದಳ ಮತ್ತು ರಾಜ್ಯ ವಿಪ್ಪತ್ತು ಸ್ಪಂದನಾ ಪಡೆಯಿಂದ ಇಂದು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಆಯೋಜಿಸಲಾಗಿದೆ. ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ನಡೆಯುವ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತಿತರರು ಭಾಗವಹಿಸಲಿದ್ದಾರೆ.
- ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ತೇಜಸ್ವಿನಿ ಶಂಕರ್ ಅಥ್ಲೆಟಿಕ್ಸ್ನಲ್ಲಿ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ. ಪುರುಷರ ಹೈಜಂಪ್ ಫೈನಲ್ನಲ್ಲಿ ಅವರು, ಐತಿಹಾಸಿಕ ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ. ಭಾರತದ ವೇಟ್ಲಿಫ್ಟರ್ ಗುರ್ದಿಪ್ ಸಿಂಗ್ ಪುರುಷರ 109ಕೆಜಿ ವಿಭಾಗದಲ್ಲಿ ಕಂಚಿನ ಪದಕವನ್ನು ಜಯಿಸಿದ್ದಾರೆ. ಭಾರತದ ಜುಡೊ ಪಟು ತುಲಿಕಾ ಮಾನ್ ಮಹಿಳೆಯರ 78 ಕೆಜಿ ವಿಭಾಗದಲ್ಲಿ ಸ್ಕಾಟ್ಲ್ಯಾಂಡ್ನ ಆಟಗಾರ್ತಿ ವಿರುದ್ಧ ಗೆದ್ದು, ಬೆಳ್ಳಿ ಪದಕವನ್ನು ಸಂಪಾದಿಸಿದ್ದಾರೆ.ಇದರೊಂದಿಗೆ ಭಾರತ ಒಟ್ಟು 5 ಚಿನ್ನ, 6 ಬೆಳ್ಳಿ, ಮತ್ತು 7 ಕಂಚಿನ ಪದಕ ಸೇರಿ 18 ಪದಕಗಳನ್ನು ಗೆದ್ದದಂತಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
RCB ಗೆ ಹದಿನೆಂಟರ ಇಡಿಗಂಟು | ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ : ವಿರಾಟ್ ಕೊಹ್ಲಿ
ಸುದ್ದಿದಿನಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ – ಐಪಿಎಲ್ ಟಿ-20 ಕ್ರಿಕೆಟ್ನ 18 ನೇ ಆವೃತ್ತಿಯ ಪ್ರಶಸ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಡಿಗೇರಿಸಿಕೊಂಡಿದೆ.
ನಿನ್ನೆ ರಾತ್ರಿ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದ ನಂತರ, ಆರ್ಸಿಬಿ ನಾಯಕ ರಜತ್ ಪಾಟಿದಾರ್, ವಿರಾಟ್ ಕೊಹ್ಲಿ ಮತ್ತು ಎಲ್ಲಾ ಅಭಿಮಾನಿಗಳು ಈ ಗೆಲುವಿಗೆ ಹೆಚ್ಚು ಅರ್ಹರು ಎಂದು ಹೇಳಿದರು. ಪ್ರತಿಯೊಬ್ಬ ಆಟಗಾರನನ್ನು ಬೆಂಬಲಿಸಿದ್ದಕ್ಕಾಗಿ, ತಂಡದ ನಿರ್ವಹಣೆ ಮತ್ತು ತರಬೇತಿ ಸಿಬ್ಬಂದಿಗೆ ಅವರು ಧನ್ಯವಾದ ಅರ್ಪಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ, ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ಗಳಿಗೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ ಗರಿಷ್ಠ 43 ರನ್ ಗಳಿಸಿದರೆ, ನಾಯಕ ಪಾಟಿದಾರ್ 26 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಅರ್ಶ್ದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ತಲಾ 3 ವಿಕೆಟ್ ಪಡೆದರು. 191 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್, ನಿಗದಿತ 20 ಓವರ್ಗಳಲ್ಲಿ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರು.
ಅಸಾಧಾರಣ ಬೌಲಿಂಗ್ಗಾಗಿ, ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಪಂದ್ಯದ ನಂತರದ ಪ್ರಸ್ತುತಿಯಲ್ಲಿ, ಗುಜರಾತ್ ಟೈಟಾನ್ಸ್ನ ಸಾಯಿ ಸುದರ್ಶನ್ ಅತಿ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರೆ. ಅದೇ ತಂಡದ ಸಹ ಆಟಗಾರ ಪ್ರಸಿದ್ಧ್ ಕೃಷ್ಣ ಈ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್ಗಳನ್ನು ಪಡೆದಿದ್ದಕ್ಕಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರು. ಮುಂಬೈ ಇಂಡಿಯನ್ಸ್ನ ಸೂರ್ಯ ಕುಮಾರ್ ಯಾದವ್ ಪಂದ್ಯಾವಳಿಯಾದ್ಯAತ ತಮ್ಮ ಅಸಾಧಾರಣ ಬ್ಯಾಟಿಂಗ್ಗಾಗಿ ಅತ್ಯಂತ ಮೌಲ್ಯಯುತ ಆಟಗಾರ ಎಂಬ ಪ್ರಶಸ್ತಿಯನ್ನು ಪಡೆದರು.
ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ
17 ವರ್ಷಗಳ ನಂತರ ವಿರಾಟ್ ಕೊಹ್ಲಿ ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಎತ್ತಿ ಹಿಡಿದರು. ಫೈನಲ್ನಲ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದ ಕೊಹ್ಲಿ, ಸುಮಾರು ಎರಡು ದಶಕಗಳಿಂದ ಬೆನ್ನಟ್ಟಿದ ಕ್ಷಣ ಅಂತಿಮವಾಗಿ ವಾಸ್ತವವಾದಾಗ ಭಾವುಕರಾದರು “ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ದಿನ ಬರುತ್ತದೆ ಎಂದು ಭಾವಿಸಿರಲಿಲ್ಲ ಎಂದು ಗೆದ್ದು ಭಾವುಕರಾಗಿದ್ದ ವಿರಾಟ್ ಕೊಹ್ಲಿ ಪಂದ್ಯದ ನಂತರದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಆರ್ಸಿಬಿ ಗೆಲುವಿನ ಸಂಭ್ರಮದಲ್ಲಿ ಕರ್ನಾಟಕ, ವಿಶೇಷವಾಗಿ ರಾಜಧಾನಿ ಬೆಂಗಳೂರು, ನಿನ್ನೆ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಿದ ನಂತರ ಸಂತೋಷದಿAದ ತುಂಬಿ ತುಳುಕುತ್ತಿತ್ತು. ಅಭಿಮಾನಿಗಳು ಇಂದು ಬೆಳಗಿನ ಜಾವದವರೆಗೆ ಪಟಾಕಿ ಸಿಡಿಸಿ ಬೀದಿಗಳಲ್ಲಿ ಜಮಾಯಿಸಿ ಸಂಭ್ರಮಿಸಿದರು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್ಸಿಬಿಯನ್ನು ಶ್ಲಾಘಿಸುತ್ತಾ, “ಐಪಿಎಲ್ ಐತಿಹಾಸಿಕ ವಿಜಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿನಂದನೆ. ಕನಸು ಕೊನೆಗೂ ನನಸಾಗಿದೆ.
ಈ ಸಲಾ ಕಪ್ ನಮ್ದೆ. ಅಚಲವಾದ ಚೈತನ್ಯದಿಂದ, ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ಹೆಚ್ಚಿಸಿದೆ. ಪ್ರಪಂಚದಾದ್ಯAತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ ಎಂದು ಹೇಳಿದ್ದಾರೆ. ಐಪಿಎಲ್ ಪ್ರಶಸ್ತಿ ಗೆದ್ದ ಆರ್ಸಿಬಿ ತಂಡಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಆರ್ಸಿಬಿ ತಂಡ ಪಡೆದ ರೋಮಾಂಚಕ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲಕ್ಷಾಂತರ ಅಭಿಮಾನಿಗಳ ಕನಸುಗಳು ನನಸಾಗಿದೆ. ಇಡೀ ಆರ್ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಏ.10 ರಿಂದ ಬೇಸಿಗೆ ಕಬಡ್ಡಿ ತರಬೇತಿ ಶಿಬಿರ
ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೃಷ್ಟಿ ಕಬಡಿ ಅಕಾಡೆಮಿ(ರಿ), ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಕಬಡ್ಡಿ ತರಬೇತಿ ಶಿಬಿರವನ್ನು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ 30 ರವರೆಗೆ ಬೆಳಿಗ್ಗೆ 6.30 ರಿಂದ 8 ಗಂಟೆಯ ವರೆಗೆ ಹಾಗೂ ಸಾಯಂಕಾಲ ಸಂಜೆ 5 ರಿಂದ 6.30 ರ ವರೆಗೆ ಆಯೋಜಿಸಲಾಗಿದೆ.
ಆಸಕ್ತ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೇಸಿಗೆ ಕಬಡ್ಡಿ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಶ್ರೀಶೈಲ ಎಸ್-ಮೊ.ನಂ: 9448667255 ಹಾಗೂ ನೂರುಲ್ಲ ಮೊ.ನಂ: 9740107364, ಶಿವಯೋಗಿ ಮೊ.ನಂ: 9019619900, ರಾಕೇಶ್ ಮೊನಂ:9448835907 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಕರ್ತವ್ಯ ಲೋಪ ; ಪಿ.ಮಣಿವಣ್ಣನ್, ಕ್ರೈಸ್ ಇ.ಡಿ ಕಾಂತರಾಜು ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ
-
ದಿನದ ಸುದ್ದಿ6 days agoಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ | 8 ಕುಲಸಚಿವರು, 10 ಹಣಕಾಸು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ6 days agoಹೊಳಲ್ಕೆರೆ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಖರೀದಿ ವ್ಯವಹಾರ ಪ್ರಾಂಶುಪಾಲ ಡಾ ಎಸ್.ಪಿ ರವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಓಬಳೇಶ್ ದೂರು
-
ದಿನದ ಸುದ್ದಿ3 days agoಕರ್ತವ್ಯ ಲೋಪ | ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ5 days agoನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
-
ದಿನದ ಸುದ್ದಿ5 days agoಇದೇ 15 ರಂದು ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

