Connect with us

ಬಹಿರಂಗ

ಆರ್.ಎಸ್.ಎಸ್.ನಲ್ಲಿನ ಹೊಲೆಮಾದಿಗರು : ಡಾ.ಅಂಬೇಡ್ಕರ್ ಚಿಂತನೆಗಳ ಹಂತಕರು.. !

Published

on

ಬೋಧಿಸತ್ವ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರನ್ನು ಮತ್ತು ಅವರ ಚಿಂತನೆಗಳನ್ನು ನಾಶ ಮಾಡಲೆಂದೆ 1925 ರಲ್ಲಿ ಆರ್.ಎಸ್.ಎಸ್. ಸ್ಥಾಪನೆ ಮಾಡಲಾಗಿದೆ. ಇದರ ಅರಿವಿದ್ಧ ಡಾ.ಅಂಬೇಡ್ಕರ್ ಅವರು ಆ ಸಂಘಟನೆಯಿಂದ ತುಂಬಾ ಜಾಗರೂಕರಾಗಿದ್ದರು ಹಾಗೂ ಹೊಲೆ-ಮಾದಿಗರನ್ನು ಅದರಿಂದ ರಕ್ಷಣೆ ಮಾಡಿದ್ದರು.

ಆದರೆ ಇತ್ತಿಚಿನ ಕೆಲವು ದಿನಗಳಲ್ಲಿ ಕರ್ನಾಟಕದಲ್ಲೀನ ‘ಹೊಲೆ-ಮಾದಿಗರು’ ತಮ್ಮ ಸ್ವಾಭಿಮಾನವನ್ನು ಮಾರಿಕೊಂಡು ಅಧಿಕಾರದ ದುರಾಸೆಗಾಗಿ ‘ಆರ್.ಎಸ್.ಎಸ್’ . ‘ವಿಶ್ವಹಿಂದೂ ಪರೀಷತ್’ ಮತ್ತು ಅದರ ಅಂಗವಾದ ‘ಬಿ.ಜೆ.ಪಿ’ .ಯನ್ನು ಸೇರುವ ಮೂಲಕ ಡಾ.ಅಂಬೇಡ್ಕರ್ ರವರನ್ನು ತಲೆಹಿಡಿದು ತಮ್ಮ ಸ್ವಾರ್ಥ ಸಾಧಿಸಿಕೊಳ್ಳುವ ತಲೆಹಿಡುಕರಾಗುತ್ತಲಿದ್ದಾರೆ.

ಮೀಸಲಾತಿಯ ಲಾಭ ಪಡೆದು ರಾಜ್ಯಮಟ್ಟದ ವೈದ್ಯಾಧಿಕಾರಿಯಾಗಿ ನಿವೃತ್ತಿಯಾಗಿರುವ ‘ವಿಜಯಲಕ್ಷ್ಮಿ ದೇಶಮಾನೆ’ ಎನ್ನುವ ಕಲಬುರಗಿಯ ‘ಮಾದಿಗ’ ಸಮುದಾಯದ ಹೆಣ್ಣು ಮಗಳು ಈಶಾನ್ಯ ವಲಯದ ವಿಶ್ಚಹಿಂದೂ ಪರೀಷತ್ತಿನ. ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪ್ರಭಾರತ್ವ ವಹಿಸಿಕೊಂಡಿರುವುದು. ‘ಸುಭಾಷ್ ಕಾಂಬಳೆ’ ಎನ್ನುವ ‘ಹೊಲೆಯ’ ಸಮುದಾಯದ ವ್ಯಕ್ತಿ ವಿಶ್ಚಹಿಂದೂ ಪರೀಷತ್ತಿನ ಕಲಬುರಗಿ ಜಿಲ್ಲಾ ಅಧ್ಯಕ್ಷನಾಗಿರುವುದು ಖೇದದ ಸಂಗತಿಯಾಗಿದೆ.

ಅದರೆ ದುರಂತದ ಸಂಗತಿ ಎಂದರೆ ಇವರಿಬ್ಬರ ಕುಟುಂಬದ ಸದಸ್ಯರು ತಮ್ಮವರನ್ನು ಮನುವಾದಿಗಳ ಕಪಿಮುಷ್ಟಿಯಿಂದ ಹೊರಗೆ ತರದೆ ಡಾ.ಅಂಬೇಡ್ಕರ್ ರವರ ಹೆಸರಲ್ಲಿ ಜನರನ್ನು ಯಾಮಾರಿಸುತ್ತಾ ನಮ್ಮ ತಿರಗುತ್ತಲಿದ್ದಾರೇ . ಇವರಿಬ್ಬರಷ್ಟೆ ಅಲ್ಲ ‘ಚಿ.ನಾ.ರಾಮು’ ಎನ್ನುವ ಬಿ.ಜೆ.ಪಿ. ಬಾಗೀಲು ಕಾಯುವ ಕಾವಲುಗಾರ, ‘ಕೆ.ಶಿವರಾಮ್’ , ಎನ್ನುವ ಕಾಲು ಹಿಡಿಯುವ ಗುಲಾಮ, ಡಾ.ಅಂಬೇಡ್ಕರ್ ರವರ ಅನುಯಾಯಿ ಎಂದು ಬೀಗುತ್ತ ಅಧಿಕಾರದ ಆಸೆಗಾಗಿ ಅಮಂಗಳವಾದ ‘ಶ್ರೀನಿವಾಸ ಪ್ರಸಾದ’,ಮನುವಾದಿಗಳ ಮಂದಿರದಲ್ಲಿ ಅವರ ಚಪ್ಪಲಿ ಹತ್ತಿರ ನಿಲ್ಲುವ ‘ರಮೇಶ ಹಿಗಜಿಣಗಿ’, ಮನುವಾದಿಗಳಿಗೆ ಬೆನ್ನೆಲುಬಾದ ಗೋವಿಂದ ಕಾರಜೋಳ್, ದಲಿತಪರ ಧ್ವನಿ ಎತ್ತದ ‘ಡಿ.ಎಸ್.ವೀರಯ್ಯಾ’ , ಹೊಸಕಾವಲುಗಾರ ‘ಛಲವಾದಿ ನಾರಾಯಣಸ್ವಾಮಿ’, ಡಾ.ಅಂಬೇಡ್ಕರ್ ಭವನ ಕಟ್ಟಲು ಯೊಗ್ಯತೆ ಇರದ ‘ಎಸ್.ಅಂಗಾರು’ , ಕಟ್ಟಾ ಕಮ್ಯುನಿಷ್ಟ್ ಎಂದು ಫೋಜ್ ಕೊಡುತ್ತಾ, ರಾಮಮಂದಿರದ ಭಕ್ತನಾಗಿ, ಹಿತ್ತಲ ಬಾಗೀಲಿನ ಮೂಲಕ ರಾಜ್ಯಸಭಾ ಸದಸ್ಯನಾಗುವ ‘ಕೆ.ಬಿ.ಶ್ಯಾಣಪ್ಪ’ , ಸಮಾಜವನ್ನೇ ಅಡವಿಟ್ಟು ಅಧಿಕಾರ ಹಿಡಿಯುವ ಸ್ವಾರ್ಥ ಶಾಸಕರುಗಳಾದ ‘ಚಂದ್ರಪ್ಪ’, ‘ನಾರಾಯಣಸ್ವಾಮಿ, ಹರ್ಷವರ್ಧನ, ಲಿಂಗಣ್ಣ, ಎಸ್.ರಾಘು, ಕುಮಾರಸ್ವಾಮಿ, ಬಸವರಾಜ್, ಡಿ.ಎಸ್.ಹುಲಗೇರಿ, ಬಸವರಾಜ ಮತ್ತಿಮೂಡ , ಮುಂತಾದ ಹೊಲೆ ಮಾದಿಗರು ಒಮ್ಮೆಯಾದರೂ ಈ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದಾರೆಯೇ ?.

  1. ಭಾರತದ ಸಂವಿಧಾನ ಬದಲಾವಣೆ ಮಾಡಲೆಂದೇ ನಾವು (ಬಿ.ಜೆ.ಪಿ) ಅಧಿಕಾರಕ್ಕೆ ಬಂದಿರುವುದು ಎಂದ ಅವಿವೇಕಿ ಕುರಿತು.
  2. ದಲಿತರು ಬೀದಿ ನಾಯಿಗಳು ಮತ್ತು ಜಾತ್ಯಾತೀತರು ಒಂದು ಅಪ್ಪನಿಗೆ ಹುಟ್ಟಿಲ್ಲ ಎಂದು ಉದ್ಧಟತನದ ಹೇಳಿಕೆ ಕೊಟ್ಟ ಅವಿವೇಕಿ
    ಅನಂತಕುಮಾರ ಹೆಗಡೆ ವಿರುದ್ಧ.
  3. ಎಸ್.ಸಿ.ಎಸ್.ಟಿ.ದೌರ್ಜನ್ಯ ತಡೆಕಾಯ್ದೆ 1989 & 95 ಯನ್ನು ‘ಜಾಮೀನುಸಹಿತ’ ಕಾಯ್ದೆ ಮಾಡಿದಾಗ.
  4. ಸರಕಾರಿ ನೌಕರರ ಬಡ್ತಿ ಮೀಸಲಾತಿ ಕಾಯ್ದೆಯ ಗೊಂದಲಾದಾಗ ಮತ್ತು ಜಾರಿ ಮಾಡದೆ ವಿಳಂಬ ಮಾಡುತ್ತಲಿರುವಾಗ.
  5. ಪ್ರತಿನಿತ್ಯ ದಲಿತರ ಮೇಲಾಗುತ್ತಿರುವ ದೌರ್ಜನ್ಯ, ಮಹೀಳೆಯರ ಮೇಲಿನ ಬಲತ್ಕಾರಗಳು ನಡೆದಾಗ.
  6. ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯ ಮೇಲಾಗುತ್ತಿರುವ ಆಕ್ರಮಣಗಳ ನಡೆದಾಗ.
  7. ನಕಲಿ ಎಸ್.ಸಿ.ಎಸ್.ಟಿ ಜನರು ನಮ್ಮವರ ಬದಲಾಗಿ ಸರಕಾರಿ ನೌಕರಿ ಪಡೆದುಕೊಂಡಾಗ.
  8. ಡಾ.ಅಂಬೇಡ್ಕರ್ ಸಾಹಿತ್ಯವನ್ನು ತಿರಚುತ್ತಲಿರುವ ರಾಷ್ಟ್ರೋತ್ಥಾನ ಪ್ರತಿಷ್ಠಾನದ ಬಗ್ಗೆ
  9. ಎಸ್.ಸಿ.ಎಸ್.ಟಿ ಅನುದಾನ ಬಳಕೆ ಮಾಡದೆ ಅನುದಾವನ್ನು ಲ್ಯಾಪ್ಸ್ ಮಾಡಿದಾಗ.
  10. ಗತೆಗೆಟ್ಟ ‘ಹಾಸ್ಟಲ್ಗಳ ಬಗ್ಗೆ’ ಮತಿಗೆಟ್ಟ ಸಮಾಜ ಕಲ್ಯಾಣಾಧಿಕಾರಿಗಳ ಮತ್ತು ಕಳಪೆ ಮಟ್ಟದ ಆಹಾರದ ಬಗ್ಗೆ.
  11. ಇಪ್ಪತ್ತುಸಾವೀರಕ್ಕೂ ಹೆಚ್ಚಿನ ಬಾಕಿ ಉಳಿದಿರುವ ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಬಗ್ಗೆ.
  12. ‘ಜಂತರ್ ಮಂತರ್ದಲ್ಲಿ ಭಾರತದ ಸಂವಿಧಾನದ ಪ್ರತಿಯನ್ನು ಬ್ರಾಹ್ಮಣವಾದಿಗಳು ಸುಟ್ಟಾಗ ಅವರ ಮೇಲೆ ಕ್ರಮ ಜರುಗಿಸಲು ಒತಾಯ
    ಮಾಡುವಾಗ.
  13. ದಾನಮ್ಮಳನ್ನು ಬಲತ್ಕಾರ ಮಾಡಿ ಕೊಂದುಹಾಕಿರುವ ಆರ್.ಎಸ್.ಎಸ್. ಕಾರ್ಯಕರ್ತರ ಬಗ್ಗೆ.
  14. ಮೌಢ್ಯವನ್ನು ಹೋಗಲಾಡಿಸಲು, ದಲಿತರನ್ನು ಜಾಗೃತ ಮಾಡಲು ತಮ್ಮ ಬರವಣಿಗೆ ಮೂಲಕ ಕಾಯಕದಲ್ಲಿ ತೊಡಗಿದ್ದ ‘ಗೌರಿಲಂಕೇಶ’,
    ‘ಎಮ್.ಎಮ್.ಕಲಬುರಗಿ’ಯವರನ್ನು ಸಂಘ ಪರಿವಾರದವರು ಕೊಲೆ ಮಾಡಿದಾಗ.
  15. ಎಪ್ರೀಲ್ 2. 2018ರಂದು ಮದ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಮೆರವಣಿಗೆ ಮಾಡುತ್ತಲಿದ್ದ ದಲಿತ ಯುವಕರನ್ನು ಗುಂಡಿಟ್ಟು ಕೊಂದ ಆರ್.ಎಸ್.ಎಸ್. ಕಾರ್ಯಕರ್ತರ ಬಗ್ಗೆ.
  16. ಡಾ.ಅಂಬೇಡ್ಕರ್ವಾದಿ ‘ಚಂದ್ರಶೇಖರ ರಾವಣ’ನನ್ನು ಫರಜಿ ಕೇಸ್ನಲ್ಲಿ ಫಿಟ್ ಮಾಡಿ ಒಂದು ವರ್ಷದಿಂದಲೂ ಜೈಲಿನಲ್ಲಿ ಕೊಳಡಸುತ್ತಿರುವ ಆದಿತ್ಯನಾಥನ ಬಗ್ಗೆ.

ಹೀಗೆ ಬಾಬಾಸಾಹೇಬರ ಪ್ರತಿಮೆಯ ಮೇಲೆ, ಸಂವಿಧಾನದ ಮೇಲೆ ಮತ್ತು ದಲಿತರ ಮೇಲೆ ದಿನನಿತ್ಯ ರಾಷ್ಟ್ರವಾದಿಗಳಿಂದ ನಡೆಯುತ್ತಿರುವ ದೌರ್ಜನ್ಯ ಗಳ ಕುರಿತು ಒಂದೂ ಮಾತನ್ನಾಡುವುದಿಲ್ಲ. ದಲಿತರ ಧ್ವನಿಯಾಗಬೇಕಾದ ಇವರು ಆಯಾ ಪಕ್ಷಗಳ ಧ್ವನಿಯಾಗಿ ಸ್ವಾರ್ಥ ರಾಜಕಾರಣಕ್ಕಾಗಿ ಮತ್ತು ಅಧಿಕಾರಕ್ಕಾಗಿ ತಮ್ಮ ಸಮಾಜಕ್ಕೆ ಮತ್ತು ಬಾಬಾಸಾಹೇಬರಿಗೆ ವಂಚನೆ ಮಾಡುತ್ತಲಿದ್ದಾರೆ. ಅಧಿಕಾರಕ್ಕಾಗಿ ಆರ್.ಎಸ್.ಎಸ್. ಸೇರುವ ಹೊಲೆ ಮಾದಿಗರ ಸಂಖ್ಯೆ ಹೆಚ್ಚಾಗುತ್ತಲಿದೆ. ಇವರು ಖಾಕಿಚಡ್ಡಿ ಹಾಕಿಕೊಂಡು ಕೈಯಲ್ಲಿ ಲಾಠಿ ಹಿಡಿದು ಬ್ರಾಹ್ಮಣವಾದವನ್ನು ಕಾಯುತ್ತಲಿದ್ದಾರೆ. ಹಾಗೂ ಇವರೆ ಮುಂದು ನಿಂತು ಡಾ.ಅಂಬೇಡ್ಕರ್ ಚಿಂತನೆಗಳ ಕೊಲೆ ಮಾಡುತ್ತಲಿದ್ದಾರೆ.

ಎಚ್ಚರಾಗಿ ಭೀಮನ ಹುಲಿಗಳೆ ಹೊಲೆ ಮಾದಿಗರೆಂದು ವಿಭಜಿಸಿ ಆಳುತ್ತಿರುವ ಈ ಅವಕಾಶವಾದಿ ರಾಜಕಾರಣಿಗಳ ಕಪಿಮುಷ್ಠಿಯಿಂದ ಹೊರ ಬಂದು ಹೊಲೆ ಮಾದಿಗರು ಒಂದಾಗುವ ಮೂಲಕ ‘ಭೀಮರಾಜ್ಯ’ವನ್ನು ಸ್ಥಾಪಿಸೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

Published

on

bengaluru-koodlugate-snn-raj-eternia-18-floor-building-demolition
ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ


ಸುದ್ದಿದಿನ,ಬೆಂಗಳೂರು:
ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.

₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ

ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ

ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್‌ ಅಪಾರ್ಟ್‌ಮೆಂಟ್‌ ನಿರ್ದೇಶಕ ಅನೂಜ್‌ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.

ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣ

ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್‌ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.

ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

Continue Reading

ದಿನದ ಸುದ್ದಿ

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

Published

on

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.

ಹೈಲೈಟ್ಸ್

  • ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಶಂಕಿತ ಡ್ರೋನ್ ಹಾರಾಟ
  • 🇵🇰 ಡ್ರೋನ್ ಪಾಕಿಸ್ತಾನದ ದಿಕ್ಕಿಗೆ ವಾಪಸ್ ತೆರಳಿದ ಶಂಕೆ
  • ಡ್ರೋನ್‌ನಿಂದ ವಸ್ತುಗಳನ್ನು ಕೆಳಗೆ ಹಾಕಲಾಗಿದೆಯೇ ಎಂದು ಶೋಧ
  • ಉಧಂಪುರ, ಕಥುವಾ, ರಾಜೌರಿಯಲ್ಲಿ ಜಂಟಿ ಸರ್ಚ್ ಆಪರೇಷನ್
  • ಶಸ್ತ್ರಸಜ್ಜಿತ ವ್ಯಕ್ತಿಗಳ ಮಾಹಿತಿ ಹಿನ್ನೆಲೆ ರಾಜೌರಿಯಲ್ಲೂ ಹೈ ಅಲರ್ಟ್

http://Visit : www.suddidina.com

ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್

ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ

ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.

ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.

ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ

ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಹೆಚ್ಚಿದ ಕಣ್ಗಾವಲು

ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.

ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

Continue Reading

ದಿನದ ಸುದ್ದಿ

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

Published

on

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

  • ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
  • ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
  • NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
  • “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP 

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

http://Visit : www.suddidina.com

ಇಂಡಿಯಾ ಗೇಟ್‌ನಿಂದ ಮೆರವಣಿಗೆ

ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.

ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’

ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.

“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.

“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ” 

  • CJP ಆರೋಪ

ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ

ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.

ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.

ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

Continue Reading
Advertisement

Title

ದಿನದ ಸುದ್ದಿ11 hours ago

ಬೆಂಗಳೂರು ಜಲಸಂಚಾರಕ್ಕೆ ಹೊಸ ವೇಗ: ಬಿನ್ನಿಗಾನಹಳ್ಳಿ-ಬೈಯಪ್ಪನಹಳ್ಳಿ ನಡುವೆ 65 ಕಿ.ಮೀ. ನೀರು ಮಾರ್ಗ!

ಸುದ್ದಿದಿನ,ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಬಂದಾಗಲೆಲ್ಲಾ ಎದುರಾಗುವ ನೀರು ನಿಲ್ಲುವಿಕೆ ಹಾಗೂ ಪ್ರವಾಹದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತಾಂತ್ರಿಕ ಕ್ರಮಗಳಿಗೆ ಒತ್ತು ನೀಡಲಾಗುತ್ತಿದೆ. ಇದರ ಭಾಗವಾಗಿ...

bengaluru-koodlugate-snn-raj-eternia-18-floor-building-demolition bengaluru-koodlugate-snn-raj-eternia-18-floor-building-demolition
ದಿನದ ಸುದ್ದಿ11 hours ago

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ...

kalaburagi-municipal-corporation-mayor-deputy-mayor-election-congress-win kalaburagi-municipal-corporation-mayor-deputy-mayor-election-congress-win
ದಿನದ ಸುದ್ದಿ11 hours ago

ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್...

ravichandran-political-entry-dk-shivakumar-mlc-nomination ravichandran-political-entry-dk-shivakumar-mlc-nomination
ದಿನದ ಸುದ್ದಿ12 hours ago

ರಾಜಕೀಯಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಎಂಟ್ರಿ? ಡಿಕೆಶಿ ಭೇಟಿಯ ಹಿಂದೆ ಇದೆ ‘ಕೈ’ ಲೆಕ್ಕ!

ಸಿಎಂ ಡಿಕೆ ಶಿವಕುಮಾರ್ ಭೇಟಿ ಬಳಿಕ ಹೆಚ್ಚಿದ ಕುತೂಹಲ; ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ ಸುದ್ದಿದಿನ,ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಕ್ರೇಜಿಸ್ಟಾರ್ ರವಿಚಂದ್ರನ್...

ದಿನದ ಸುದ್ದಿ12 hours ago

ರಸ್ತೆ ನಿಯಮ ಉಲ್ಲಂಘನೆಗೆ ಬ್ರೇಕ್ ಯಾವಾಗ? 4 ವರ್ಷದಲ್ಲಿ 5.67 ಕೋಟಿ ಪ್ರಕರಣ, ₹2,361 ಕೋಟಿ ದಂಡ ಸಂಗ್ರಹ!

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಆತಂಕಕಾರಿ ಪ್ರಮಾಣದಲ್ಲಿ ದಾಖಲಾಗುತ್ತಿವೆ. ರಸ್ತೆ ಸುರಕ್ಷತೆ ಕುರಿತು ನಿರಂತರವಾಗಿ ಜಾಗೃತಿ ಮೂಡಿಸಲಾಗುತ್ತಿದ್ದರೂ, ನಿಯಮ ಉಲ್ಲಂಘನೆಗೆ...

janardhana-reddy-attacks-b-nagendra-valmiki-scam-ballari-political-war janardhana-reddy-attacks-b-nagendra-valmiki-scam-ballari-political-war
ದಿನದ ಸುದ್ದಿ12 hours ago

ವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್‌ಗೆ ರಾಜೀನಾಮೆ ಸವಾಲು!

ಸುದ್ದಿದಿನ, ಬಳ್ಳಾರಿ: ಬಳ್ಳಾರಿಯಲ್ಲಿ ರಾಜಕೀಯ ವಾಕ್ಸಮರ ಮತ್ತೊಮ್ಮೆ ತೀವ್ರಗೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಮುಂದಿಟ್ಟುಕೊಂಡು ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಮಾಜಿ...

bengaluru-strr-ring-road-traffic-relief-40-percent-reduction bengaluru-strr-ring-road-traffic-relief-40-percent-reduction
ದಿನದ ಸುದ್ದಿ15 hours ago

ಬೆಂಗಳೂರಿನ ಟ್ರಾಫಿಕ್‌ಗೆ ಬಿಗ್ ರಿಲೀಫ್‌! ವರ್ಷಾಂತ್ಯಕ್ಕೆ STRR ಸಂಚಾರ ಮುಕ್ತ: ನಗರ ದಟ್ಟಣೆ ಶೇ.40ರಷ್ಟು ಇಳಿಕೆ ನಿರೀಕ್ಷೆ

ಸುದ್ದಿದಿನ,ಬೆಂಗಳೂರು: ಬೆಂಗಳೂರು ನಗರ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವಂತೆ ವಾಹನ ದಟ್ಟಣೆಯ ಸಮಸ್ಯೆಯೂ ಹೆಚ್ಚುತ್ತಿದೆ. ಅದರಲ್ಲೂ ಹೊರರಾಜ್ಯಗಳಿಂದ ನಗರವನ್ನು ದಾಟಿ ಸಾಗುವ ಭಾರಿ ವಾಹನಗಳು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರದ...

toxic-movie-kichcha-sudeepa-supports-yash-negative-reviews toxic-movie-kichcha-sudeepa-supports-yash-negative-reviews
ದಿನದ ಸುದ್ದಿ16 hours ago

ವಿಭಿನ್ನ ಪ್ರಯೋಗಕ್ಕೆ ಸುದೀಪ್‌ ಫಿದಾ; ‘ಟಾಕ್ಸಿಕ್’ ವಿರುದ್ಧದ ಟೀಕೆಗಳ ನಡುವೆ ಯಶ್‌ಗೆ ಭರ್ಜರಿ ಬೆಂಬಲ

ಸುದ್ದಿದಿನ,ಸಿನಿಮಾ: ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಬಿಡುಗಡೆಯಾದ ಬಳಿಕ ನಿರೀಕ್ಷೆಗಿಂತ ಹೆಚ್ಚಾಗಿ ಚರ್ಚೆ ಮತ್ತು ಟೀಕೆಗೆ ಕಾರಣವಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹಾಗೂ ಗೀತು...

ದಿನದ ಸುದ್ದಿ16 hours ago

ಶನಿವಾರ ಕಲಬುರಗಿ ಪಾಲಿಕೆಯ ಹೊಸ ಮೇಯರ್‌, ಉಪ ಮೇಯರ್‌ ಆಯ್ಕೆ: ಯಾರಿಗೆ ಒಲಿಯಲಿದೆ ಅಧಿಕಾರದ ಪಟ್ಟ?

ಸುದ್ದಿದಿನ, ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್‌ ಹಾಗೂ ಉಪ ಮೇಯರ್‌ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಶನಿವಾರ ನಡೆಯಲಿರುವ ಚುನಾವಣೆಯಲ್ಲಿ ಮೇಯರ್‌ ಸ್ಥಾನವನ್ನು ಬಿಸಿಎ ವರ್ಗಕ್ಕೆ...

ದಿನದ ಸುದ್ದಿ16 hours ago

ಹೆದ್ದಾರಿಯಲ್ಲಿ ಹಾಲಿನ ಹೊಳೆ! ಪಲ್ಟಿಯಾದ ನಂದಿನಿ ಟ್ಯಾಂಕರ್‌ನಿಂದ 21 ಸಾವಿರ ಲೀಟರ್ ಹಾಲು ರಸ್ತೆಗೆ

ತುಮಕೂರು: ಸಾಮಾನ್ಯವಾಗಿ ಮಳೆ ಬಂದಾಗ ರಸ್ತೆಯಲ್ಲಿ ನೀರು ಹರಿಯುವುದನ್ನು ನೋಡುತ್ತೇವೆ. ಆದರೆ ತುಮಕೂರಿನ ಶಿರಾ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಡೆದ ಘಟನೆ ಮಾತ್ರ ವಿಭಿನ್ನ. ಇಲ್ಲಿ ನೀರಿನ ಬದಲು...

Trending