ದಿನದ ಸುದ್ದಿ
ದಲಿತರಿಗೆ ಪರ್ಯಾಯ ಸಂಸ್ಕೃತಿ ಇಲ್ಲವೆ..?
- ರಘೋತ್ತಮ ಹೊ.ಬ
ಮೊನ್ನೆ ಒಂದು ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಹೋಗಿದ್ದೆ. ಶೋಷಿತ ಸಮುದಾಯದ ಒಬ್ಬ ಕಾದಂಬರಿ ಕಾರರ ಕಾದಂಬರಿ ಬಿಡುಗಡೆ ಸಮಾರಂಭ ಅದು. ಪ್ರೇಕ್ಷಕನಾಗಿ ಭಾಷಣ ಕೇಳುತ್ತ ಕುಳಿತಿದ್ದೆ. ಹಾಗೆ ಕುಳಿತು ಭಾಷಣ ಕೇಳಿ ಕಲಿಯುವುದು ಸಾಹಿತ್ಯಾಸಕ್ತನಾಗಿ ನನ್ನ ಹವ್ಯಾಸ. ಅಂದಹಾಗೆ ಅತಿಥಿಗಳೊಬ್ಬರು ಭಾಷಣ ಮಾಡುತ್ತ ದಲಿತರು ಪರ್ಯಾಯ ಸಂಸ್ಕೃತಿ ಕಟ್ಟಿಕೊಳ್ಳುವ ಅಗತ್ಯವಿದೆ ಅಂದರು.
ನನಗೆ ಆಶ್ಚರ್ಯ! ಯಾಕೆಂದರೆ ಆಗಷ್ಟೇ ನಾನು ಬೌದ್ಧ ವಿಹಾರ ಕ್ಕೆ ಹೋಗಿ ವಾರದ ಪ್ರಾರ್ಥನೆ ಮುಗಿಸಿ ಬಂದಿದ್ದೆ. ಈ ನಡುವೆ ಇವರ್ಯಾರು ಪರ್ಯಾಯ ಸಂಸ್ಕೃತಿ ಎಂದು ಹೇಳುತ್ತಿದ್ದಾರಲ್ಲ! ಅಂದಹಾಗೆ ಆ ಭಾಷಣಕಾರರು ತಾವು ಅದ್ಯಾವುದೋ (ಶತಮಾನ) ದಲ್ಲಿ ಮನುವಾದದಿಂದ ಅದೇನೋ ಬರೆದು ವಿಮೋಚನೆ ಗೊಂಡಿದ್ದೇವೆ ಎಂದರು.
ಪಾಪ, ಅವರು ಸನಾತನ ಎಂಬ ಈಚಿನ ಜಾಹೀರಾತೊಂದನ್ನು ನೋಡಿದ ಹಾಗೆ ಕಂಡಿರಲಿಲ್ಲ! ಆದರೂ ದಲಿತರಿಗೆ ಪರ್ಯಾಯ ಸಂಸ್ಕೃತಿ ಎಂದು ಹೇಳುತ್ತಿದ್ದಾರಲ್ಲ? ಹಾಗಿದ್ದರೆ ಲೌಕಿಕ ವಾಗಿ ಇವರು ಗಮನಿಸಿರುವುದಾಸರೂ ಏನು ಎಂದು ಪ್ರಶ್ನೆ ಹಿಡಿದು ಕುಳಿತೆ.
ಹೌದು, ನಾನು ಅಲ್ಲೇ ಹೇಳಿಬಿಡಬಹುದಿತ್ತು. ಆದರೆ ಕಾದಂಬರಿಕಾರರಿಗೆ ಮುಜುಗರ ಆಗಬಹುದು ಎಂದು ಸುಮ್ಮನಾದೆ. ಏಕೆಂದರೆ ದಲಿತರ ಪರ್ಯಾಯ ಸಂಸ್ಕೃತಿ ಅದು ಬೌದ್ಧ ಸಂಸ್ಕೃತಿ ಅಲ್ಲವೆ? ದಲಿತ ಕೇರಿಗಳು ಇಂದು ಬುದ್ಧರ ಹಬ್ಬಗಳು, ಬೌದ್ಧ ಧಾರ್ಮಿಕ ಆಚರಣೆಗಳ ಆಗರವಾಗುತ್ತಿರುವುದನ್ನು ಸದರಿ ಭಾಷಣಕಾರರು ಗಮನಿಸಿಲ್ಲವೆ ಎನಿಸಿತು.
ಸದರಿ ಭಾಷಣಕಾರರು 70 ರ ದಶಕದ ದಲಿತ ಚಳುವಳಿಯ ಸಂದರ್ಭಗಳನ್ನು, ಆ ಸಂದರ್ಭದಲ್ಲಿ ತಿಂದದ್ದು, ಕುಡಿದದ್ದು, ಇಸ್ಪೀಟು ಆಡಿದ್ದು ಎಲ್ಲವನ್ನೂ ಹೇಳಿದರು! ಅರೆ, ಅದು 50 ವರ್ಷಗಳ ಹಿಂದಿನ ಕತೆ. ಮನುಷ್ಯ ಬದಲಾಗಲೇ ಬೇಕಲ್ಲವೆ? ಆ ಬದಲಾದ ಸಂದರ್ಭದಲ್ಲಿ ಈಚಿನ ವರ್ಷಗಳಲ್ಲಿ ನಡೆದಿರುವ ಬೆಳವಣಿಗೆಗಳನ್ನು ಆ ಸಾಹಿತಿ ಅಥವಾ ಅವರಂತಹವರು ಯಾಕೆ ಹೇಳುತ್ತಿಲ್ಲ? ಅಥವಾ ಹೇಳಲಿಲ್ಲ?
ಉದಾಹರಣೆಗೆ ಮೊನ್ನೆ ಮೈಸೂರು ಮತ್ತು ಚಾಮರಾಜನಗರಗಳಲ್ಲಿ ನಮ್ಮ ಮಹಿಳೆಯರು ಸಾವಿತ್ರಿಬಾಯಿ ಫುಲೆ ಜಯಂತಿ ಆಚರಿಸಿದರು. ಆಗ ಆ ಸಮಾರಂಭಗಳಲ್ಲಿ ಮೈದುಂಬಿಕೊಂಡಿದ್ದು ಬುದ್ಧ ಸಂಸ್ಕೃತಿ. ಸಾವಿತ್ರಿಬಾಯಿ ಫುಲೆಯವರೇನು ದಲಿತರಲ್ಲ. ಕಾನ್ಷೀರಾಮ್ ರವರು ಹೆಕ್ಕಿ ತೆಗೆದ ಬಹುಜನ ಚಳುವಳಿಯಲ್ಲಿ ಬರುವ ಹಿಂದುಳಿದ ವರ್ಗದ ಸಾಧಕಿ ಮಹಿಳೆಯವರು.
ಈ ಕಾರ್ಯಕ್ರಮಗಳ ವರದಿ ಎಲ್ಲಾ ಪತ್ರಿಕೆಗಳಲ್ಲೂ, ಸಾಮಾಜಿಕ ಮಾಧ್ಯಮಗಳಲ್ಲು ರಾರಾಜಿಸಿದೆ. ಪ್ರಶ್ನೆ ಎಂದರೆ ಇದನ್ನೂ ಸದರಿ ಸಾಹಿತಿ ಕಂ ಭಾಷಣಕಾರರು ಗಮನಿಸಿಲ್ಲವೆಂದರೆ..? ದಲಿತರಿಗೆ ಪರ್ಯಾಯ ಸಂಸ್ಕೃತಿ ಹುಡುಕಿಕೊಳ್ಳುವ ಸಲಹೆ ನೀಡುತ್ತಾರೆಂದರೆ..?
ಒಂದು ಸಲಹೆಯೆಂದರೆ, ಯಾರೇ ಆಗಲಿ ಕಾಲದ ಸುತ್ತಾ ಅದಕ್ಕೆ ತಕ್ಕಂತೆ ಹೇಗೆ ಬದಲಾವಣೆ ಆಗುತ್ತಿದೆ, ಏನು ಬದಲಾವಣೆ ಆಗುತ್ತಿದೆ ಎಂಬುದನ್ನು ಗಮನಿಸಬೇಕು. ಹಾಗೆಯೇ ಆ ಬದಲಾವಣೆಗೆ ತಕ್ಕಂತೆ ಅದನ್ನು ಗಮನಿಸಿ ಮಾತನಾಡಬೇಕು, ಬರೆಯಬೇಕು. ಇದರ ಬದಲು ಹಳೆಯ 50 ವರ್ಷ, 60 ವರ್ಷ ಹಿಂದಿನ ಪರಿಸ್ಥಿತಿ ನೆನಪಿಸಿಕೊಂಡು ಮಾತನಾಡಿದರೆ ಅಂತಹವರು update ಆಗಿಲ್ಲ ಎಂದು ಕೊಳ್ಳಬೇಕಾಗುತ್ತದೆ. ದಲಿತರಂತು update ಆಗಿದ್ದಾರೆ, ಆಗುತ್ತಿದ್ದಾರೆ ಅದು ಬೌದ್ಧ ಸಂಸ್ಕೃತಿಗೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.
ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.
ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.
ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ5 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ5 days agoಕವಿತೆ | ದೇವರ ಹೂವು
-
ದಿನದ ಸುದ್ದಿ7 days agoಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
-
ದಿನದ ಸುದ್ದಿ3 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ3 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

