ದಿನದ ಸುದ್ದಿ
ದಲಿತರ ಮೇಲೆ ಸವರ್ಣೀಯರಿಂದ ದೌರ್ಜನ್ಯ : ಈ ಊರಲ್ಲಿ ದಲಿತರಿಗೆ ಪ್ರವೇಶವಿಲ್ಲ
ಸುದ್ದಿದಿನ ವಿಶೇಷ : ಕುಲ ಕುಲ ಎಂದು ಹೊಡೆದಾಡದಿರಿ ನಿಮ್ಮ ಕುಲದ ನೇಲೆ ಎನ್ನಾದರು ಬಲೀರಾ ಅಂತ ದಾಸರೇ ಹೇಳಿದ್ದಾರೆ.ಆದ್ದರೆ ಅಂತಹ ಕುಲದ ಹೊಡೆದಾಟ ಇನ್ನು ಸಹಿತ ನಡೀತಿದೆ .ಇವನ್ನು ಮೇಲು ಕೀಳು ಎಂಬ ಭಾವನೆ ಇಂದಿಗು ಸಹ ಜೀವಂತವಾಗಿ ಕಣ್ಣಮುಂದೆ ಕಾಣ್ತಿದೆ.ಮೇಲ್ಜಾತಿಯವರು ಕೇಳ್ಜಾತಿವರ ಮೇಲೆ ನಿರಂತರವಾಗಿ ಶೋಷಣೆ ಮಾಡ್ತಿದ್ದಾರೆ .ಅಂತಹ ಅಸ್ಪೃಶ್ಯತೆಯ ಜನಾಂಗ ದೌರ್ಜನಕ್ಕೆ ಒಳಗಾಗಿ ಕೇಸರಿನ ಹುಳುಗಳ ರೀತಿಯಲ್ಲಿ ಬದುಕುತ್ತಿದ್ದಾರೆ .ಅಂತಹ ಹೃದಯ ವಿದ್ರಾವಕ ಘಟನೆ ಇಲ್ಲಿನ ಜನರದ್ದಾಗಿ ಇವರ ಪರಿಸ್ಥಿತಿ.
ಇದು ರಾಯಚೂರು ಜಿಲ್ಲೆ ಲಿಂಗಸುಗೂರ ತಾಲೂಕಿನ ಯರಜಂತಿ ಗ್ರಾಮ ಈ ಗ್ರಾಮದಲ್ಲಿ ದಲಿತರಿಗೆ ಅಸ್ಪೃಶ್ಯರಿಗೆ ಗ್ರಾಮದಲ್ಲಿ ಅವಕಾಶ ಇಲ್ಲ ಯಾವುದೇ ಗುಡಿ ಗುಂಡಾರಗಳಲ್ಲಿ ,ಊರು ಕೇರಿಗಳಲ್ಲಿ ಹೊಗುವಂತಿಲ್ಲ .ಯಾರು ಮುಟ್ಟಬಾರದು ಯಾರು ಇವರನ್ನು ಮಾತನಾಡಿಸಬಾರದು .ಯಾವುದೇ ಅಂಗಡಿಗಳಿಗು ಸಹ ಹೋಗುವಹಾಗಿಲ್ಲ ಅಷ್ಟೇ ಯಾಕ್ಕೆ ಇವರು ಮಕ್ಕಳಿಗು ಸಹ ಶಾಲೆಯಲ್ಲಿ ಅವಕಾಶ ಇಲ್ವಂತೆ ಅವರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಒಂದು ತುತ್ತು ಊಟವನ್ನು ಹಾಕ್ತಿಲ.ಇಲ್ಲಿರುವ ಕೇಳವರ್ಗದವರು ಜನರು ಒಡಾಡುವ ರಸ್ತೆ ನೋಡಿದ್ರೆ ಭಯಬೀತರಾಗಿ ಬಿಡ್ತಿರಾ ಯಾಕಂದ್ರೆ ಇವರು ಒಡಾಡುವ ರಸ್ತೆ ಕಲ್ಲು ಮುಳಿನ ಗುಡ್ಡಗಳಿಂದ ಕೂಡಿದ ಸಾವಿನ ದಿಬ್ಬವಾಗಿ ಪರಿಣಮಿಸಿದೆ. ಅದೇ ರೀತಿ ಮೇಲ್ಜಾತಿಯವರ ರಸ್ತೆಗಳು ಆರ್ ಸಿ ಸಿ ರಸ್ತೆಯಾಗಿದೆ.ಒಂದು ವೇಳೆ ಅವರ ನಿಯಮವನ್ನು ತಪ್ಪಿದ್ದರೆ ಇವರ ಮೇಲೆ ಮಚ್ಚಿನಿಂದ ಕೊಚ್ಚಿ ಹಾಕುತ್ತೆನೆ . ಅಂತ ಮಾರಣಾಂತಿಕ ಹಲ್ಲೆ ಮಾಡಲು ಮುಂದಾಗುತ್ತಾರೆ.ಬಾಯಿಗೆ ಬಂದಂತೆ ಸ್ತ್ರೀ ಯರ ಮೇಲೆ ನಿಂದನೆ ಮಾಡೋದು ತೊಡೆ ತಟ್ಟಿ ಕರೆಯೊದು ಇಂತಹ ಅವಮಾನವೀಯ ನಡವಳಿಕೆ ಇಲ್ಲಿನ ಗ್ರಾಮಸ್ಥರು ಮತ್ತು ಇಲ್ಲಿನ ಪಂಚಾಯಿತಿಯ ಸದ್ಯಸರು ದೌರ್ಜನ್ಯವೆಸಗುತ್ತಿದ್ದಾರೆ.
ಈ ಊರಿನಲ್ಲಿ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲ ಆಟೋಗಳ ಮುಖಾಂತರವಾಗಿ ಬರಬೇಕು ಅಂತಹ ಪರಿಣಾಮವಾಗಿದೆ .ಹೀಗಿರುವಾಗ ದಲಿತರು ಬಂದರೆ ಅವರಿಗೆ ಆಟೋಗಳಲ್ಲಿಯು ಅವಕಾಶ ಇಲ್ಲ ಸಾವು ಬದುಕುನ ನಡುವೆ ಹೋರಾಡುತ್ತಿದ್ದಾರೆ ಚಿಕಿತ್ಸೆ ಪಡೆಯಲು ಅವರು ಪರದಾಟ ಪಟ್ಟ ಸ್ಥಿತಿ ಅಷ್ಟ ಇಷ್ಟಲ. ಕುಡಿಯಲು ನೀರಿಗೆ ಸುಮಾರು ದೂರಹೋಗಿ ತರಬೇಕು ಅದು ಜಾನುವಾರಗಳು ಕುಡಿಯುವ ನೀರಿನ ಹೊಂಡದಲ್ಲಿ. ಇನ್ನು ಇಲ್ಲಿನ ಜನರಿಗೆ ಯಾವುದೇ ಸರಕಾರಿ ಮನೆಗಳು ಶೌಚಾಲಯಗಳಿಲ ಸರಕಾರದ ಬೋಮಿಯನ್ನು ಸಹ ಲಪಟಾಯಿಸ್ಸಿದ್ದಾರೆ. ವಾಸಿಸಲು ಮನೆ ಇಲ್ಲದೆ ಊರಿನ ಹೊರ ಭಾಗದ ದಿಬ್ಬದಲ್ಲಿ ವಾಸ ಮಾಡ್ತಿದ್ದಾರೆ.ಇಂತಹ ಚಿತ್ರಣವನ್ನು ನೊಡುತ್ತಿದ್ದರೆ ಇದು ರಾಮರಾಜ್ಯದ ಕನಸ್ಸಿನ ಕರ್ನಾಟಕ ನಾ ಇಲ್ಲ ರಾವಣ ದೌರ್ಜನ್ಯ ಪ್ರದೇಶ ನಾ ಅಂತ ಗೋಚ್ಚರಿಸುತ್ತಿದೆ.ಇಂತಹ ಇಷ್ಟ ಕಷ್ಟಗಳ ಸಂಕೊಲೆಗಳಲಿ ಜನ ಜೀವಂತ ಶವವಾಗಿ ಬದುಕುತ್ತಿದ್ದಾರೆ.ಎಲ್ಲಿದೆ ಮಾನವನ ಮೂಲಭೂತ ಹಕ್ಕು ಎಂಬ ಪ್ರಶ್ನೆ ಕಾಡುತ್ತಿದೆ.ಈ ಜನರ ಕಣ್ಣಿರಿನ ಆಕ್ರೋಶದ ಕಥೆಯನ್ನು ಕೇಳಿದ್ರೆ ಎಂತಹ ಹಿಟ್ಲರನ ಹೃದಯದವನಿದ್ದರು ಕರಗುತ್ತಾನೆ.
ಇನ್ನೂ ರಾಜಕೀಯ ನಾಯಕರು ತಮ್ಮ ಬೇಳೆಯನ್ನು ಬೆಯಿಸಿಕೊಳಲು ಚುನಾವಣೆ ಬಂದಾಗ ಅವರ ಮನೆಯಲ್ಲಿ ಊಟ ಮಾಡೊದು ನೀರು ಕುಡಿಯೊದು ಮಲಗೊದು ಇಂತಹ ನಾಟಕವನ್ನು ಬಿಟ್ಟು ಇವರ ಮೇಲೆ ನಡೆಯುವ ದಬ್ಬಾಳಿಕೆ ವಿರುದ್ಧ ಕೈ ಜೋಡಿಸಿ ಅಂಬೇಡ್ಕರ್ ಹೊತ್ತ ಕನಸಿನ ಆದರ್ಶ ಪ್ರರೂಪಗಳು ಪಾಲಿಸಿ .ಕಾಲ್ತುಳಿತಕ್ಕೆ ಒಳಗಾಗಿರುವ ಇಂತಹ ಕಾಯಕ ಸಮಾಜದವನ್ನು ಉನ್ಬತಿ ಕರಿಸಿ ಅಸ್ಪೃಶ್ಯತೆಯ ವಿರುದ್ದ ದಬ್ಬಾಳಿಕೆ ಮಾಡುವವರನ್ನು ಶಿಕ್ಷಿಸಿ. ಕಾಯಕ ಸಮಾಜಕ್ಕೆ ಸಿಗಲಿ ಸ್ಥಾನ ಮಾನ.
ನೀರಿಗ ಯಾವ ಕುಲ
ಅಗ್ನಿಗೆ ಯಾವ ಕುಲ,
ವಾಯುಗೆ ಯಾವ ಕುಲ,
ರಕ್ತಕ್ಕೆ ಯಾವ ಕುಲ .
ಇರುವುದು ಒಂದೆ ಕುಲ ಅದು ಮನುಷ್ಯ ಕುಲ…ಮನುಷ್ಯ ಕುಲ

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.



