Connect with us

ದಿನದ ಸುದ್ದಿ

ದಲಿತರ ಮೇಲೆ ಸವರ್ಣೀಯರಿಂದ ದೌರ್ಜನ್ಯ : ಈ ಊರಲ್ಲಿ ದಲಿತರಿಗೆ ಪ್ರವೇಶವಿಲ್ಲ

Published

on

ಗ್ರಾಮದ ಹೊರಗಿರುವ ದಲಿತರು

ಸುದ್ದಿದಿನ ವಿಶೇಷ : ಕುಲ ಕುಲ ಎಂದು ಹೊಡೆದಾಡದಿರಿ ನಿಮ್ಮ ಕುಲದ ನೇಲೆ ಎನ್ನಾದರು ಬಲೀರಾ ಅಂತ ದಾಸರೇ ಹೇಳಿದ್ದಾರೆ.ಆದ್ದರೆ ಅಂತಹ ಕುಲದ ಹೊಡೆದಾಟ ಇನ್ನು ಸಹಿತ ನಡೀತಿದೆ .ಇವನ್ನು ಮೇಲು‌ ಕೀಳು ಎಂಬ ಭಾವನೆ ಇಂದಿಗು ಸಹ ಜೀವಂತವಾಗಿ ಕಣ್ಣಮುಂದೆ ಕಾಣ್ತಿದೆ.ಮೇಲ್ಜಾತಿಯವರು ಕೇಳ್ಜಾತಿವರ ಮೇಲೆ ನಿರಂತರವಾಗಿ ಶೋಷಣೆ ಮಾಡ್ತಿದ್ದಾರೆ .ಅಂತಹ ಅಸ್ಪೃಶ್ಯತೆಯ ಜನಾಂಗ ದೌರ್ಜನಕ್ಕೆ ಒಳಗಾಗಿ ಕೇಸರಿನ ಹುಳುಗಳ ರೀತಿಯಲ್ಲಿ ಬದುಕುತ್ತಿದ್ದಾರೆ .ಅಂತಹ ಹೃದಯ ವಿದ್ರಾವಕ‌ ಘಟನೆ ಇಲ್ಲಿನ ಜನರದ್ದಾಗಿ ಇವರ ಪರಿಸ್ಥಿತಿ.

ಇದು ರಾಯಚೂರು ಜಿಲ್ಲೆ ಲಿಂಗಸುಗೂರ ತಾಲೂಕಿನ ‌ಯರಜಂತಿ ಗ್ರಾಮ ಈ ಗ್ರಾಮದಲ್ಲಿ ದಲಿತರಿಗೆ ಅಸ್ಪೃಶ್ಯರಿಗೆ ಗ್ರಾಮದಲ್ಲಿ ಅವಕಾಶ ಇಲ್ಲ ಯಾವುದೇ ಗುಡಿ ಗುಂಡಾರಗಳಲ್ಲಿ ,ಊರು ಕೇರಿಗಳಲ್ಲಿ ಹೊಗುವಂತಿಲ್ಲ .‌ಯಾರು ಮುಟ್ಟಬಾರದು ಯಾರು ಇವರನ್ನು ಮಾತನಾಡಿಸಬಾರದು .ಯಾವುದೇ ಅಂಗಡಿಗಳಿಗು ಸಹ ಹೋಗುವಹಾಗಿಲ್ಲ ಅಷ್ಟೇ ಯಾಕ್ಕೆ ಇವರು ಮಕ್ಕಳಿಗು ಸಹ ಶಾಲೆಯಲ್ಲಿ ಅವಕಾಶ ಇಲ್ವಂತೆ ಅವರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಒಂದು ತುತ್ತು ಊಟವನ್ನು ಹಾಕ್ತಿಲ.ಇಲ್ಲಿರುವ ಕೇಳವರ್ಗದವರು ಜನರು ಒಡಾಡುವ ರಸ್ತೆ ನೋಡಿದ್ರೆ‌ ಭಯಬೀತರಾಗಿ ಬಿಡ್ತಿರಾ ಯಾಕಂದ್ರೆ ಇವರು ಒಡಾಡುವ ರಸ್ತೆ ಕಲ್ಲು ಮುಳಿನ ಗುಡ್ಡಗಳಿಂದ ಕೂಡಿದ ಸಾವಿನ ದಿಬ್ಬವಾಗಿ ಪರಿಣಮಿಸಿದೆ. ಅದೇ ರೀತಿ ಮೇಲ್ಜಾತಿಯವರ ರಸ್ತೆಗಳು ಆರ್ ಸಿ ಸಿ ರಸ್ತೆಯಾಗಿದೆ.ಒಂದು ವೇಳೆ ಅವರ ನಿಯಮವನ್ನು ತಪ್ಪಿದ್ದರೆ ಇವರ ಮೇಲೆ ಮಚ್ಚಿನಿಂದ ಕೊಚ್ಚಿ ಹಾಕುತ್ತೆನೆ . ಅಂತ ಮಾರಣಾಂತಿಕ ಹಲ್ಲೆ ಮಾಡಲು ಮುಂದಾಗುತ್ತಾರೆ.ಬಾಯಿಗೆ ಬಂದಂತೆ ಸ್ತ್ರೀ ಯರ ಮೇಲೆ ನಿಂದನೆ ಮಾಡೋದು ತೊಡೆ ತಟ್ಟಿ ಕರೆಯೊದು ಇಂತಹ ಅವಮಾನವೀಯ ನಡವಳಿಕೆ ಇಲ್ಲಿನ ಗ್ರಾಮಸ್ಥರು ಮತ್ತು ಇಲ್ಲಿನ ಪಂಚಾಯಿತಿಯ ಸದ್ಯಸರು ದೌರ್ಜನ್ಯವೆಸಗುತ್ತಿದ್ದಾರೆ.

ಈ ಊರಿನಲ್ಲಿ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲ ಆಟೋಗಳ ಮುಖಾಂತರವಾಗಿ ಬರಬೇಕು ಅಂತಹ ಪರಿಣಾಮವಾಗಿದೆ .ಹೀಗಿರುವಾಗ ದಲಿತರು ಬಂದರೆ ಅವರಿಗೆ ಆಟೋಗಳಲ್ಲಿಯು ಅವಕಾಶ ಇಲ್ಲ ಸಾವು ಬದುಕುನ ನಡುವೆ ಹೋರಾಡುತ್ತಿದ್ದಾರೆ ಚಿಕಿತ್ಸೆ ಪಡೆಯಲು ಅವರು ಪರದಾಟ ಪಟ್ಟ ಸ್ಥಿತಿ ಅಷ್ಟ ಇಷ್ಟಲ. ಕುಡಿಯಲು ನೀರಿಗೆ ಸುಮಾರು ದೂರಹೋಗಿ ತರಬೇಕು ಅದು ಜಾನುವಾರಗಳು ಕುಡಿಯುವ ನೀರಿನ ಹೊಂಡದಲ್ಲಿ. ಇನ್ನು ಇಲ್ಲಿನ ಜನರಿಗೆ ಯಾವುದೇ ಸರಕಾರಿ ಮನೆಗಳು ಶೌಚಾಲಯಗಳಿಲ ಸರಕಾರದ ಬೋಮಿಯನ್ನು ಸಹ ಲಪಟಾಯಿಸ್ಸಿದ್ದಾರೆ. ವಾಸಿಸಲು ಮನೆ ಇಲ್ಲದೆ ಊರಿನ ಹೊರ ಭಾಗದ ದಿಬ್ಬದಲ್ಲಿ ವಾಸ ಮಾಡ್ತಿದ್ದಾರೆ.ಇಂತಹ ಚಿತ್ರಣವನ್ನು ನೊಡುತ್ತಿದ್ದರೆ ಇದು ರಾಮರಾಜ್ಯದ ಕನಸ್ಸಿನ‌ ಕರ್ನಾಟಕ ನಾ ಇಲ್ಲ ರಾವಣ ದೌರ್ಜನ್ಯ ಪ್ರದೇಶ ನಾ ಅಂತ ಗೋಚ್ಚರಿಸುತ್ತಿದೆ.ಇಂತಹ ಇಷ್ಟ ಕಷ್ಟಗಳ ಸಂಕೊಲೆಗಳಲಿ‌ ಜನ ಜೀವಂತ ಶವವಾಗಿ ಬದುಕುತ್ತಿದ್ದಾರೆ.ಎಲ್ಲಿದೆ ಮಾನವನ ಮೂಲಭೂತ ಹಕ್ಕು ಎಂಬ ಪ್ರಶ್ನೆ ಕಾಡುತ್ತಿದೆ.ಈ ಜನರ ಕಣ್ಣಿರಿನ‌‌ ಆಕ್ರೋಶದ ಕಥೆಯನ್ನು ಕೇಳಿದ್ರೆ ಎಂತಹ ಹಿಟ್ಲರನ‌ ಹೃದಯದವನಿದ್ದರು ಕರಗುತ್ತಾನೆ.

ಇನ್ನೂ ರಾಜಕೀಯ ನಾಯಕರು ತಮ್ಮ ಬೇಳೆಯನ್ನು ಬೆಯಿಸಿಕೊಳಲು ಚುನಾವಣೆ ಬಂದಾಗ ಅವರ‌ ಮನೆಯಲ್ಲಿ ಊಟ ಮಾಡೊದು ನೀರು ‌ಕುಡಿಯೊದು ಮಲಗೊದು ಇಂತಹ ನಾಟಕವನ್ನು ಬಿಟ್ಟು ಇವರ ಮೇಲೆ ನಡೆಯುವ ದಬ್ಬಾಳಿಕೆ ವಿರುದ್ಧ ಕೈ ಜೋಡಿಸಿ ಅಂಬೇಡ್ಕರ್ ಹೊತ್ತ ಕನಸಿನ ಆದರ್ಶ ಪ್ರರೂಪಗಳು ಪಾಲಿಸಿ .ಕಾಲ್ತುಳಿತಕ್ಕೆ ಒಳಗಾಗಿರುವ ಇಂತಹ ಕಾಯಕ ಸಮಾಜದವನ್ನು ಉನ್ಬತಿ ಕರಿಸಿ ಅಸ್ಪೃಶ್ಯತೆಯ ವಿರುದ್ದ ದಬ್ಬಾಳಿಕೆ ಮಾಡುವವರನ್ನು ಶಿಕ್ಷಿಸಿ. ಕಾಯಕ ಸಮಾಜಕ್ಕೆ ಸಿಗಲಿ ಸ್ಥಾನ ಮಾನ.

ನೀರಿಗ ಯಾವ ಕುಲ
ಅಗ್ನಿಗೆ ಯಾವ ಕುಲ,
ವಾಯುಗೆ ಯಾವ ಕುಲ,
ರಕ್ತಕ್ಕೆ ಯಾವ ಕುಲ .
ಇರುವುದು ಒಂದೆ ಕುಲ ಅದು ಮನುಷ್ಯ ಕುಲ…ಮನುಷ್ಯ ಕುಲ

ಪತ್ರಕರ್ತ
ರಾಯಚೂರು

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ7 hours ago

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕಳೆದ...

ದಿನದ ಸುದ್ದಿ7 hours ago

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು...

ದಿನದ ಸುದ್ದಿ8 hours ago

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ. ಅದೇ ರೀತಿ...

ದಿನದ ಸುದ್ದಿ8 hours ago

ದೀನ ದಯಾಳ್ ಅಂತ್ಯೋದಯ ಯೋಜನೆ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಹೊನ್ನಾಳಿ ಪಟ್ಟಣದ ಸಾರ್ವಜನಿಕರಿಗೆ ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಪ್ರಸಕ್ತ ಸಾಲಿಗೆ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ, ವ್ಯಕ್ತಿಗತ ಉದ್ಯಮಶೀಲತೆ...

ದಿನದ ಸುದ್ದಿ9 hours ago

ಐತಿಹಾಸಿಕ, ಪಾರಂಪರಿಕ ದೇವಾಲಯಗಳು ಶಾಸನಗಳು, ವೀರಗಲ್ಲು, ಸ್ಮಾರಕಗಳ ಸಂರಕ್ಷಣೆ ; ಸಾರ್ವಜನಿಕರ ಸಹಕಾರ ಅಗತ್ಯ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಇತಿಹಾಸದ ಶಾಸನಗಳು, ದೇವಾಲಯಗಳು, ಸ್ಮಾರಕಗಳು ಸೇರಿದಂತೆ ಸ್ಥಳಗಳಿದ್ದಲ್ಲಿ ಸಾರ್ವಜನಿಕರು ತಮ್ಮ ತಾಲ್ಲೂಕು, ಊರು, ಗ್ರಾಮಗಳಲ್ಲಿ ವಿನಾಶದ ಸ್ಥಿತಿಯಲ್ಲಿರುವ ದೇವಾಲಯಗಳು, ಶಾಸನಗಳು, ವೀರಗಲ್ಲುಗಳು, ಕೋಟೆಗಳು,...

ದಿನದ ಸುದ್ದಿ9 hours ago

ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ ; ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜು, ಕೊಂಡಜ್ಜಿ ಗ್ರಾಮದಲ್ಲಿನ ಮೊರಾರ್ಜಿ...

ದಿನದ ಸುದ್ದಿ13 hours ago

ಮುಂದಿನ ವರ್ಷದಿಂದ 10ನೇ ತರಗತಿಗೆ ಕೃಪಾಂಕ ರದ್ದು ; ಸಚಿವ ಮಧುಬಂಗಾರಪ್ಪ

ಸುದ್ದಿದಿನ, ಚಿಕ್ಕಮಗಳೂರು : ಪರೀಕ್ಷೆಯಲ್ಲಿ ಪಾವಿತ್ರತೆ ಮತ್ತು ಶಿಸ್ತು ಕಾಪಾಡುವ ಉದ್ದೇಶದಿಂದ ಈ ವರ್ಷ ಹತ್ತನೆ ತರಗತಿ ವಿಧ್ಯಾರ್ಥಿಗಳಿಗೆ ಶೇಕಡ 20 ರಷ್ಟು ಕೃಪಾಂಕಗಳನ್ನು ನೀಡಲಾಗಿದೆ. ಇದು...

ದಿನದ ಸುದ್ದಿ1 day ago

ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಆರಂಭ; ಕೃಷಿ ಚಟುವಟಿಕೆ ಆರಂಭ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ,...

ದಿನದ ಸುದ್ದಿ1 day ago

ಮೇಲ್ಮನೆಯ ಆರು ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಪ್ರಗತಿಯಲ್ಲಿ ; ಕಣದಲ್ಲಿ 103 ಅಭ್ಯರ್ಥಿಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ಆರು ಸ್ಥಾನಗಳಿಗೆ 103 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇಂದು ನಾಮಪತ್ರಗಳ ಪರಿಶೀಲನೆ ಕಾರ್ಯ ಆರಂಭಗೊಂಡಿದೆ. ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳು...

ದಿನದ ಸುದ್ದಿ1 day ago

ವಸತಿ ಶಾಲೆಯಲ್ಲಿನ 7, 8 ಮತ್ತು 9ನೇ ತರಗತಿಗಳಲ್ಲಿನ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನಡೆಸುವ ಒಟ್ಟು 22 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ವಸತಿ...

Trending