ದಿನದ ಸುದ್ದಿ
ದಲಿತರ ಮೇಲೆ ಸವರ್ಣೀಯರಿಂದ ದೌರ್ಜನ್ಯ : ಈ ಊರಲ್ಲಿ ದಲಿತರಿಗೆ ಪ್ರವೇಶವಿಲ್ಲ
ಸುದ್ದಿದಿನ ವಿಶೇಷ : ಕುಲ ಕುಲ ಎಂದು ಹೊಡೆದಾಡದಿರಿ ನಿಮ್ಮ ಕುಲದ ನೇಲೆ ಎನ್ನಾದರು ಬಲೀರಾ ಅಂತ ದಾಸರೇ ಹೇಳಿದ್ದಾರೆ.ಆದ್ದರೆ ಅಂತಹ ಕುಲದ ಹೊಡೆದಾಟ ಇನ್ನು ಸಹಿತ ನಡೀತಿದೆ .ಇವನ್ನು ಮೇಲು ಕೀಳು ಎಂಬ ಭಾವನೆ ಇಂದಿಗು ಸಹ ಜೀವಂತವಾಗಿ ಕಣ್ಣಮುಂದೆ ಕಾಣ್ತಿದೆ.ಮೇಲ್ಜಾತಿಯವರು ಕೇಳ್ಜಾತಿವರ ಮೇಲೆ ನಿರಂತರವಾಗಿ ಶೋಷಣೆ ಮಾಡ್ತಿದ್ದಾರೆ .ಅಂತಹ ಅಸ್ಪೃಶ್ಯತೆಯ ಜನಾಂಗ ದೌರ್ಜನಕ್ಕೆ ಒಳಗಾಗಿ ಕೇಸರಿನ ಹುಳುಗಳ ರೀತಿಯಲ್ಲಿ ಬದುಕುತ್ತಿದ್ದಾರೆ .ಅಂತಹ ಹೃದಯ ವಿದ್ರಾವಕ ಘಟನೆ ಇಲ್ಲಿನ ಜನರದ್ದಾಗಿ ಇವರ ಪರಿಸ್ಥಿತಿ.
ಇದು ರಾಯಚೂರು ಜಿಲ್ಲೆ ಲಿಂಗಸುಗೂರ ತಾಲೂಕಿನ ಯರಜಂತಿ ಗ್ರಾಮ ಈ ಗ್ರಾಮದಲ್ಲಿ ದಲಿತರಿಗೆ ಅಸ್ಪೃಶ್ಯರಿಗೆ ಗ್ರಾಮದಲ್ಲಿ ಅವಕಾಶ ಇಲ್ಲ ಯಾವುದೇ ಗುಡಿ ಗುಂಡಾರಗಳಲ್ಲಿ ,ಊರು ಕೇರಿಗಳಲ್ಲಿ ಹೊಗುವಂತಿಲ್ಲ .ಯಾರು ಮುಟ್ಟಬಾರದು ಯಾರು ಇವರನ್ನು ಮಾತನಾಡಿಸಬಾರದು .ಯಾವುದೇ ಅಂಗಡಿಗಳಿಗು ಸಹ ಹೋಗುವಹಾಗಿಲ್ಲ ಅಷ್ಟೇ ಯಾಕ್ಕೆ ಇವರು ಮಕ್ಕಳಿಗು ಸಹ ಶಾಲೆಯಲ್ಲಿ ಅವಕಾಶ ಇಲ್ವಂತೆ ಅವರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಒಂದು ತುತ್ತು ಊಟವನ್ನು ಹಾಕ್ತಿಲ.ಇಲ್ಲಿರುವ ಕೇಳವರ್ಗದವರು ಜನರು ಒಡಾಡುವ ರಸ್ತೆ ನೋಡಿದ್ರೆ ಭಯಬೀತರಾಗಿ ಬಿಡ್ತಿರಾ ಯಾಕಂದ್ರೆ ಇವರು ಒಡಾಡುವ ರಸ್ತೆ ಕಲ್ಲು ಮುಳಿನ ಗುಡ್ಡಗಳಿಂದ ಕೂಡಿದ ಸಾವಿನ ದಿಬ್ಬವಾಗಿ ಪರಿಣಮಿಸಿದೆ. ಅದೇ ರೀತಿ ಮೇಲ್ಜಾತಿಯವರ ರಸ್ತೆಗಳು ಆರ್ ಸಿ ಸಿ ರಸ್ತೆಯಾಗಿದೆ.ಒಂದು ವೇಳೆ ಅವರ ನಿಯಮವನ್ನು ತಪ್ಪಿದ್ದರೆ ಇವರ ಮೇಲೆ ಮಚ್ಚಿನಿಂದ ಕೊಚ್ಚಿ ಹಾಕುತ್ತೆನೆ . ಅಂತ ಮಾರಣಾಂತಿಕ ಹಲ್ಲೆ ಮಾಡಲು ಮುಂದಾಗುತ್ತಾರೆ.ಬಾಯಿಗೆ ಬಂದಂತೆ ಸ್ತ್ರೀ ಯರ ಮೇಲೆ ನಿಂದನೆ ಮಾಡೋದು ತೊಡೆ ತಟ್ಟಿ ಕರೆಯೊದು ಇಂತಹ ಅವಮಾನವೀಯ ನಡವಳಿಕೆ ಇಲ್ಲಿನ ಗ್ರಾಮಸ್ಥರು ಮತ್ತು ಇಲ್ಲಿನ ಪಂಚಾಯಿತಿಯ ಸದ್ಯಸರು ದೌರ್ಜನ್ಯವೆಸಗುತ್ತಿದ್ದಾರೆ.
ಈ ಊರಿನಲ್ಲಿ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲ ಆಟೋಗಳ ಮುಖಾಂತರವಾಗಿ ಬರಬೇಕು ಅಂತಹ ಪರಿಣಾಮವಾಗಿದೆ .ಹೀಗಿರುವಾಗ ದಲಿತರು ಬಂದರೆ ಅವರಿಗೆ ಆಟೋಗಳಲ್ಲಿಯು ಅವಕಾಶ ಇಲ್ಲ ಸಾವು ಬದುಕುನ ನಡುವೆ ಹೋರಾಡುತ್ತಿದ್ದಾರೆ ಚಿಕಿತ್ಸೆ ಪಡೆಯಲು ಅವರು ಪರದಾಟ ಪಟ್ಟ ಸ್ಥಿತಿ ಅಷ್ಟ ಇಷ್ಟಲ. ಕುಡಿಯಲು ನೀರಿಗೆ ಸುಮಾರು ದೂರಹೋಗಿ ತರಬೇಕು ಅದು ಜಾನುವಾರಗಳು ಕುಡಿಯುವ ನೀರಿನ ಹೊಂಡದಲ್ಲಿ. ಇನ್ನು ಇಲ್ಲಿನ ಜನರಿಗೆ ಯಾವುದೇ ಸರಕಾರಿ ಮನೆಗಳು ಶೌಚಾಲಯಗಳಿಲ ಸರಕಾರದ ಬೋಮಿಯನ್ನು ಸಹ ಲಪಟಾಯಿಸ್ಸಿದ್ದಾರೆ. ವಾಸಿಸಲು ಮನೆ ಇಲ್ಲದೆ ಊರಿನ ಹೊರ ಭಾಗದ ದಿಬ್ಬದಲ್ಲಿ ವಾಸ ಮಾಡ್ತಿದ್ದಾರೆ.ಇಂತಹ ಚಿತ್ರಣವನ್ನು ನೊಡುತ್ತಿದ್ದರೆ ಇದು ರಾಮರಾಜ್ಯದ ಕನಸ್ಸಿನ ಕರ್ನಾಟಕ ನಾ ಇಲ್ಲ ರಾವಣ ದೌರ್ಜನ್ಯ ಪ್ರದೇಶ ನಾ ಅಂತ ಗೋಚ್ಚರಿಸುತ್ತಿದೆ.ಇಂತಹ ಇಷ್ಟ ಕಷ್ಟಗಳ ಸಂಕೊಲೆಗಳಲಿ ಜನ ಜೀವಂತ ಶವವಾಗಿ ಬದುಕುತ್ತಿದ್ದಾರೆ.ಎಲ್ಲಿದೆ ಮಾನವನ ಮೂಲಭೂತ ಹಕ್ಕು ಎಂಬ ಪ್ರಶ್ನೆ ಕಾಡುತ್ತಿದೆ.ಈ ಜನರ ಕಣ್ಣಿರಿನ ಆಕ್ರೋಶದ ಕಥೆಯನ್ನು ಕೇಳಿದ್ರೆ ಎಂತಹ ಹಿಟ್ಲರನ ಹೃದಯದವನಿದ್ದರು ಕರಗುತ್ತಾನೆ.
ಇನ್ನೂ ರಾಜಕೀಯ ನಾಯಕರು ತಮ್ಮ ಬೇಳೆಯನ್ನು ಬೆಯಿಸಿಕೊಳಲು ಚುನಾವಣೆ ಬಂದಾಗ ಅವರ ಮನೆಯಲ್ಲಿ ಊಟ ಮಾಡೊದು ನೀರು ಕುಡಿಯೊದು ಮಲಗೊದು ಇಂತಹ ನಾಟಕವನ್ನು ಬಿಟ್ಟು ಇವರ ಮೇಲೆ ನಡೆಯುವ ದಬ್ಬಾಳಿಕೆ ವಿರುದ್ಧ ಕೈ ಜೋಡಿಸಿ ಅಂಬೇಡ್ಕರ್ ಹೊತ್ತ ಕನಸಿನ ಆದರ್ಶ ಪ್ರರೂಪಗಳು ಪಾಲಿಸಿ .ಕಾಲ್ತುಳಿತಕ್ಕೆ ಒಳಗಾಗಿರುವ ಇಂತಹ ಕಾಯಕ ಸಮಾಜದವನ್ನು ಉನ್ಬತಿ ಕರಿಸಿ ಅಸ್ಪೃಶ್ಯತೆಯ ವಿರುದ್ದ ದಬ್ಬಾಳಿಕೆ ಮಾಡುವವರನ್ನು ಶಿಕ್ಷಿಸಿ. ಕಾಯಕ ಸಮಾಜಕ್ಕೆ ಸಿಗಲಿ ಸ್ಥಾನ ಮಾನ.
ನೀರಿಗ ಯಾವ ಕುಲ
ಅಗ್ನಿಗೆ ಯಾವ ಕುಲ,
ವಾಯುಗೆ ಯಾವ ಕುಲ,
ರಕ್ತಕ್ಕೆ ಯಾವ ಕುಲ .
ಇರುವುದು ಒಂದೆ ಕುಲ ಅದು ಮನುಷ್ಯ ಕುಲ…ಮನುಷ್ಯ ಕುಲ

ದಿನದ ಸುದ್ದಿ
ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ
ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್ಡಿಆರ್ಎಫ್, ಎಸ್ಡಿಆರ್ಎಫ್ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!
ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;
ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.
ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.
ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ3 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ2 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ2 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ3 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ


