ದಿನದ ಸುದ್ದಿ

ದಲಿತರ ಮೇಲೆ ಸವರ್ಣೀಯರಿಂದ ದೌರ್ಜನ್ಯ : ಈ ಊರಲ್ಲಿ ದಲಿತರಿಗೆ ಪ್ರವೇಶವಿಲ್ಲ

Published

on

ಗ್ರಾಮದ ಹೊರಗಿರುವ ದಲಿತರು

ಸುದ್ದಿದಿನ ವಿಶೇಷ : ಕುಲ ಕುಲ ಎಂದು ಹೊಡೆದಾಡದಿರಿ ನಿಮ್ಮ ಕುಲದ ನೇಲೆ ಎನ್ನಾದರು ಬಲೀರಾ ಅಂತ ದಾಸರೇ ಹೇಳಿದ್ದಾರೆ.ಆದ್ದರೆ ಅಂತಹ ಕುಲದ ಹೊಡೆದಾಟ ಇನ್ನು ಸಹಿತ ನಡೀತಿದೆ .ಇವನ್ನು ಮೇಲು‌ ಕೀಳು ಎಂಬ ಭಾವನೆ ಇಂದಿಗು ಸಹ ಜೀವಂತವಾಗಿ ಕಣ್ಣಮುಂದೆ ಕಾಣ್ತಿದೆ.ಮೇಲ್ಜಾತಿಯವರು ಕೇಳ್ಜಾತಿವರ ಮೇಲೆ ನಿರಂತರವಾಗಿ ಶೋಷಣೆ ಮಾಡ್ತಿದ್ದಾರೆ .ಅಂತಹ ಅಸ್ಪೃಶ್ಯತೆಯ ಜನಾಂಗ ದೌರ್ಜನಕ್ಕೆ ಒಳಗಾಗಿ ಕೇಸರಿನ ಹುಳುಗಳ ರೀತಿಯಲ್ಲಿ ಬದುಕುತ್ತಿದ್ದಾರೆ .ಅಂತಹ ಹೃದಯ ವಿದ್ರಾವಕ‌ ಘಟನೆ ಇಲ್ಲಿನ ಜನರದ್ದಾಗಿ ಇವರ ಪರಿಸ್ಥಿತಿ.

ಇದು ರಾಯಚೂರು ಜಿಲ್ಲೆ ಲಿಂಗಸುಗೂರ ತಾಲೂಕಿನ ‌ಯರಜಂತಿ ಗ್ರಾಮ ಈ ಗ್ರಾಮದಲ್ಲಿ ದಲಿತರಿಗೆ ಅಸ್ಪೃಶ್ಯರಿಗೆ ಗ್ರಾಮದಲ್ಲಿ ಅವಕಾಶ ಇಲ್ಲ ಯಾವುದೇ ಗುಡಿ ಗುಂಡಾರಗಳಲ್ಲಿ ,ಊರು ಕೇರಿಗಳಲ್ಲಿ ಹೊಗುವಂತಿಲ್ಲ .‌ಯಾರು ಮುಟ್ಟಬಾರದು ಯಾರು ಇವರನ್ನು ಮಾತನಾಡಿಸಬಾರದು .ಯಾವುದೇ ಅಂಗಡಿಗಳಿಗು ಸಹ ಹೋಗುವಹಾಗಿಲ್ಲ ಅಷ್ಟೇ ಯಾಕ್ಕೆ ಇವರು ಮಕ್ಕಳಿಗು ಸಹ ಶಾಲೆಯಲ್ಲಿ ಅವಕಾಶ ಇಲ್ವಂತೆ ಅವರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಒಂದು ತುತ್ತು ಊಟವನ್ನು ಹಾಕ್ತಿಲ.ಇಲ್ಲಿರುವ ಕೇಳವರ್ಗದವರು ಜನರು ಒಡಾಡುವ ರಸ್ತೆ ನೋಡಿದ್ರೆ‌ ಭಯಬೀತರಾಗಿ ಬಿಡ್ತಿರಾ ಯಾಕಂದ್ರೆ ಇವರು ಒಡಾಡುವ ರಸ್ತೆ ಕಲ್ಲು ಮುಳಿನ ಗುಡ್ಡಗಳಿಂದ ಕೂಡಿದ ಸಾವಿನ ದಿಬ್ಬವಾಗಿ ಪರಿಣಮಿಸಿದೆ. ಅದೇ ರೀತಿ ಮೇಲ್ಜಾತಿಯವರ ರಸ್ತೆಗಳು ಆರ್ ಸಿ ಸಿ ರಸ್ತೆಯಾಗಿದೆ.ಒಂದು ವೇಳೆ ಅವರ ನಿಯಮವನ್ನು ತಪ್ಪಿದ್ದರೆ ಇವರ ಮೇಲೆ ಮಚ್ಚಿನಿಂದ ಕೊಚ್ಚಿ ಹಾಕುತ್ತೆನೆ . ಅಂತ ಮಾರಣಾಂತಿಕ ಹಲ್ಲೆ ಮಾಡಲು ಮುಂದಾಗುತ್ತಾರೆ.ಬಾಯಿಗೆ ಬಂದಂತೆ ಸ್ತ್ರೀ ಯರ ಮೇಲೆ ನಿಂದನೆ ಮಾಡೋದು ತೊಡೆ ತಟ್ಟಿ ಕರೆಯೊದು ಇಂತಹ ಅವಮಾನವೀಯ ನಡವಳಿಕೆ ಇಲ್ಲಿನ ಗ್ರಾಮಸ್ಥರು ಮತ್ತು ಇಲ್ಲಿನ ಪಂಚಾಯಿತಿಯ ಸದ್ಯಸರು ದೌರ್ಜನ್ಯವೆಸಗುತ್ತಿದ್ದಾರೆ.

ಈ ಊರಿನಲ್ಲಿ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲ ಆಟೋಗಳ ಮುಖಾಂತರವಾಗಿ ಬರಬೇಕು ಅಂತಹ ಪರಿಣಾಮವಾಗಿದೆ .ಹೀಗಿರುವಾಗ ದಲಿತರು ಬಂದರೆ ಅವರಿಗೆ ಆಟೋಗಳಲ್ಲಿಯು ಅವಕಾಶ ಇಲ್ಲ ಸಾವು ಬದುಕುನ ನಡುವೆ ಹೋರಾಡುತ್ತಿದ್ದಾರೆ ಚಿಕಿತ್ಸೆ ಪಡೆಯಲು ಅವರು ಪರದಾಟ ಪಟ್ಟ ಸ್ಥಿತಿ ಅಷ್ಟ ಇಷ್ಟಲ. ಕುಡಿಯಲು ನೀರಿಗೆ ಸುಮಾರು ದೂರಹೋಗಿ ತರಬೇಕು ಅದು ಜಾನುವಾರಗಳು ಕುಡಿಯುವ ನೀರಿನ ಹೊಂಡದಲ್ಲಿ. ಇನ್ನು ಇಲ್ಲಿನ ಜನರಿಗೆ ಯಾವುದೇ ಸರಕಾರಿ ಮನೆಗಳು ಶೌಚಾಲಯಗಳಿಲ ಸರಕಾರದ ಬೋಮಿಯನ್ನು ಸಹ ಲಪಟಾಯಿಸ್ಸಿದ್ದಾರೆ. ವಾಸಿಸಲು ಮನೆ ಇಲ್ಲದೆ ಊರಿನ ಹೊರ ಭಾಗದ ದಿಬ್ಬದಲ್ಲಿ ವಾಸ ಮಾಡ್ತಿದ್ದಾರೆ.ಇಂತಹ ಚಿತ್ರಣವನ್ನು ನೊಡುತ್ತಿದ್ದರೆ ಇದು ರಾಮರಾಜ್ಯದ ಕನಸ್ಸಿನ‌ ಕರ್ನಾಟಕ ನಾ ಇಲ್ಲ ರಾವಣ ದೌರ್ಜನ್ಯ ಪ್ರದೇಶ ನಾ ಅಂತ ಗೋಚ್ಚರಿಸುತ್ತಿದೆ.ಇಂತಹ ಇಷ್ಟ ಕಷ್ಟಗಳ ಸಂಕೊಲೆಗಳಲಿ‌ ಜನ ಜೀವಂತ ಶವವಾಗಿ ಬದುಕುತ್ತಿದ್ದಾರೆ.ಎಲ್ಲಿದೆ ಮಾನವನ ಮೂಲಭೂತ ಹಕ್ಕು ಎಂಬ ಪ್ರಶ್ನೆ ಕಾಡುತ್ತಿದೆ.ಈ ಜನರ ಕಣ್ಣಿರಿನ‌‌ ಆಕ್ರೋಶದ ಕಥೆಯನ್ನು ಕೇಳಿದ್ರೆ ಎಂತಹ ಹಿಟ್ಲರನ‌ ಹೃದಯದವನಿದ್ದರು ಕರಗುತ್ತಾನೆ.

ಇನ್ನೂ ರಾಜಕೀಯ ನಾಯಕರು ತಮ್ಮ ಬೇಳೆಯನ್ನು ಬೆಯಿಸಿಕೊಳಲು ಚುನಾವಣೆ ಬಂದಾಗ ಅವರ‌ ಮನೆಯಲ್ಲಿ ಊಟ ಮಾಡೊದು ನೀರು ‌ಕುಡಿಯೊದು ಮಲಗೊದು ಇಂತಹ ನಾಟಕವನ್ನು ಬಿಟ್ಟು ಇವರ ಮೇಲೆ ನಡೆಯುವ ದಬ್ಬಾಳಿಕೆ ವಿರುದ್ಧ ಕೈ ಜೋಡಿಸಿ ಅಂಬೇಡ್ಕರ್ ಹೊತ್ತ ಕನಸಿನ ಆದರ್ಶ ಪ್ರರೂಪಗಳು ಪಾಲಿಸಿ .ಕಾಲ್ತುಳಿತಕ್ಕೆ ಒಳಗಾಗಿರುವ ಇಂತಹ ಕಾಯಕ ಸಮಾಜದವನ್ನು ಉನ್ಬತಿ ಕರಿಸಿ ಅಸ್ಪೃಶ್ಯತೆಯ ವಿರುದ್ದ ದಬ್ಬಾಳಿಕೆ ಮಾಡುವವರನ್ನು ಶಿಕ್ಷಿಸಿ. ಕಾಯಕ ಸಮಾಜಕ್ಕೆ ಸಿಗಲಿ ಸ್ಥಾನ ಮಾನ.

ನೀರಿಗ ಯಾವ ಕುಲ
ಅಗ್ನಿಗೆ ಯಾವ ಕುಲ,
ವಾಯುಗೆ ಯಾವ ಕುಲ,
ರಕ್ತಕ್ಕೆ ಯಾವ ಕುಲ .
ಇರುವುದು ಒಂದೆ ಕುಲ ಅದು ಮನುಷ್ಯ ಕುಲ…ಮನುಷ್ಯ ಕುಲ

ಪತ್ರಕರ್ತ
ರಾಯಚೂರು

Leave a Reply

Your email address will not be published. Required fields are marked *

Trending

Exit mobile version