ದಿನದ ಸುದ್ದಿ
3 ವರ್ಷದ ಈಜುಪಟು ಮಿಥಿಲಾ ಆಸೆ ಪೂರೈಸಿದ ಡಿ ಬಾಸ್..!
ಸುದ್ದಿದಿನ,ಸಾಗರ: ತಾಲ್ಲೂಕಿನ ಕಿಪ್ಪಡಿ ಗ್ರಾಮದ ಪುಟಾಣಿ ಈಜುಪಟು ಮಿಥಿಲಾ ಕಳೆದ ವರ್ಷ ಕಳಸವಳ್ಳಿ-ಅಂಬಾರಗೋಡ್ಲು (ಸಿಗಂದೂರು ಮಾರ್ಗ) ನಡುವೆ ಶರಾವತಿ ಹಿನ್ನೀರಿನಲ್ಲಿ 2.5 ಕಿ.ಮೀ. ಈಜುವ ಮೂಲಕ ಸುದ್ದಿ ಮಾಡಿದ್ದಳು. ಆಗ ಆಕೆಗೆ ವಯಸ್ಸು ಕೇವಲ 3ವರ್ಷ 9 ತಿಂಗಳು ಮಾತ್ರ. ಈಚೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡುವ ಮಿಥಿಲಾ ಮತ್ತೊಮ್ಮೆ ಸುದ್ದಿ ಮಾಡಿದ್ದಾಳೆ. ಈ ಭೇಟಿಯ ಹಿಂದೆ ಸ್ವಾರಸ್ಯಕರ ಕತೆಯೊಂದಿದೆ.
ಕಿಪ್ಪಡಿ ಗ್ರಾಮದ ಗಿರೀಶ್, ವಿನುತಾ ದಂಪತಿ ಪುತ್ರಿ ಮಿಥಿಲಾ ಚಿತ್ರನಟ ದರ್ಶನ್ ಅವರ ಅಪ್ಪಟ ಅಭಿಮಾನಿ. ಕಳೆದ ವರ್ಷ ಆಕೆಗೆ 2.5 ಕಿ.ಮೀ ದೂರ ಈಜಬೇಕು ಎಂಬ ವಿಷಯ ಬಂದಾಗ ‘ನಾನು ಯಾಕೆ ಅಷ್ಟು ದೂರ ಈಜಬೇಕು’ ಎಂಬ ಪ್ರಶ್ನೆಯನ್ನು ಪೋಷಕರಿಗೆ ಕೇಳಿದ್ದಳು.
ಮಿಥಿಲಾ ದರ್ಶನ್ ಅಭಿಯಾನಿಯಾಗಿರುವುದರಿಂದ ಪೋಷಕರು ಒಂದು ಉಪಾಯ ಮಾಡಿದ್ದರು. ‘ನೀನು 2.5 ಕಿ.ಮೀ. ದೂರ ಈಜಿದರೆ ಆಚೆಯ ದಡದಲ್ಲಿ ದರ್ಶನ್ ನಿನಗಾಗಿ ಕಾಯುತ್ತಿದ್ದಾರೆ’ ಎಂದು ಹೇಳಿ ನಂಬಿಸಿದ್ದರು. ಈಜಿ ದಡಕ್ಕೆ ಸೇರಿದ ನಂತರ ಮಿಥಿಲಾಗೆ ನಟ ದರ್ಶನ್ ಅವರ ದರ್ಶನವಾಗಿರಲಿಲ್ಲ.
ಅಂದಿನಿಂದ ಮಿಥಿಲಾ ದರ್ಶನ್ ಅವರನ್ನು ಭೇಟಿ ಮಾಡಿಸುವಂತೆ ಪೋಷಕರಿಗೆ ದುಂಬಾಲು ಬಿದ್ದಿದ್ದಳು. ಈ ವಿಷಯ ಹೇಗೋ ಡಿ ಬಾಸ್ ಕಿವಿಗೆ ತಲುಪಿದೆ. ಮಿಥಿಲಾರ ಪೋಷಕರಿಗೆ ಕರೆ ಮಾಡಿದ ದರ್ಶನ್ ಬೆಂಗಳೂರಿನ ತಮ್ಮ ಮನೆಗೆ ಮಿಥಿಲಾಳನ್ನು ಪೋಷಕರೊಂದಿಗೆ ಕರೆಸಿಕೊಂಡು ಆಕೆಯ ಆಸೆ ಪೂರೈಸಿದ್ದಾರೆ.
ಮಿಥಿಲಾಗೆ ಉಡುಗೊರೆಯನ್ನು ನೀಡಿದ ಡಿ ಬಾಸ್ ಆಕೆಯನ್ನು ಬೀಳ್ಕೊಟ್ಟಿದ್ದಾರೆ. ಮಿಥಿಲಾ ಜೊತೆಗೆ ಈಜು ತರಬೇತುದಾರರಾದ ಹರೀಶ್ ನವಾತೆ, ಎನ್.ಸಿ. ಗಂಗಾಧರ್ ಇದ್ದರು.
https://www.facebook.com/223631631870616/posts/732359614331146/
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243