ದಿನದ ಸುದ್ದಿ
ಕೊಲೆಕೇಸ್ | ನಟ ಚಿಕ್ಕಣ್ಣ ಆಯ್ತು ; ಈಗ ಮತ್ತೊಬ್ಬ ನಟ..!
ಸುದ್ದಿದಿನಡೆಸ್ಕ್:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪ್ರಮುಖ ಆರೋಪಿ ಆಗಿದ್ದಾರೆ. ಈ ಕೇಸ್ನ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ಮಾಡುವುದಕ್ಕೂ ಮುನ್ನ ಆರ್ಆರ್ ನಗರದಲ್ಲಿರುವ ರೆಸ್ಟೋರೆಂಟ್ನಲ್ಲಿ ಇವರು ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಕೂಡ ಇದ್ದರು. ಹಾಗೆಯೇ ಚಿಕ್ಕಣ್ಣ ಜೊತೆಗೆ ಮತ್ತೋರ್ವ ಸ್ಯಾಂಡಲ್ವುಡ್ ನಟ ಇದ್ದರು ಎನ್ನಲಾಗಿದೆ. ದರ್ಶನ್ ಆಪ್ತ ಕೂಡ ಇದ್ದರು. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243