ದಿನದ ಸುದ್ದಿ

ಭೈರಪ್ಪರಿಗೆ ಈ ಬಾರಿಯೂ ತಪ್ಪಿದ ದಸರಾ ಉದ್ಘಾಟನೆ ಭಾಗ್ಯ

Published

on

ಸುದ್ದಿದಿನ ಡೆಸ್ಕ್: ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ನಾರಾಯಣ ಮೂರ್ತಿ ಅವರಿಗೆ ಈ ಬಾರಿ ದಸರಾ ಉದ್ಘಾಟನೆ ಅವಕಾಶ ನೀಡಲಾಗಿದೆ.

ಈ ಮೂಲಕ ಖ್ಯಾತ ಕಾದಂಬರಿಕಾರ ಭೈರಪ್ಪ ಅವರಿಗೆ ಈ ಅವಕಾಶ ಸಿಗಬಹುದೆಂಬ ಅಭಿಮಾನಿಗಳಿಗೆ ನಿರಾಶೆಯಾಗಿದೆ.

ಕಳೆದಬಾರಿಯೇ ಭೈರಪ್ಪ ಅವರಿಗೆ ಈ ಗೌರವ ಸಿಗಬಹುದೆಂದು ನಿರೀಕ್ಷಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ತಂಡ ಕವಿ ನಿಸಾರ್ ಅಹ್ಮದ್ ಅವರನ್ನು ಆಯ್ಕೆ ಮಾಡುವ ಮೂಲಕ ಜಾತ್ಯತೀತತೆ ಮೌಲ್ಯಗಳನ್ನು ಎತ್ತಿಹಿಡಿಯಲಾಯಿತು.

ಭೈರಪ್ಪ ಅವರನ್ನು ಆಯ್ಕೆ ಮಾಡದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿದೆ ಜತೆಗೆ ನಾರಾಯಣ ಮೂರ್ತಿ ಅವರ ಕುಟುಂಬ ಎಚ್ ಡಿ ಕುಮಾರಸ್ವಾಮಿ ಅವರಿಗೆ ಹತ್ತಿರವಾಗಿದೆ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

Leave a Reply

Your email address will not be published. Required fields are marked *

Trending

Exit mobile version