ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ
ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಹಾಗೂ ಲಕ್ಷ್ಮಣ್ ಸವದಿ, ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಪಡಿಸಿದೆ.
ಈ ತಿಂಗಳ 30ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತು ಈ ತಿಂಗಳ 13ರಂದು ಅದಿಸೂಚನೆ ಪ್ರಕಟವಾಗಲಿದೆ.
ನಾಮಪತ್ರ ಸಲ್ಲಿಸಲು ಜೂನ್ 20 ಕಡೆಯ ದಿನ. ಜೂನ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸಾತಿಗೆ ಜೂನ್ 23ರಂದು ಅಂತಿಮ ದಿನವಾಗಿದೆ. ಜೂನ್ 30ರಂದು ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243