ದಿನದ ಸುದ್ದಿ

ದಾವಣಗೆರೆ | ಜಿಲ್ಲೆಯ 25 ಗ್ರಾಮಗಳು ನಿಯಂತ್ರಿತ ವಲಯ : ಜಿಲ್ಲಾಧಿಕಾರಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಕೋವಿಡ್-19 ಸಾಂಕ್ರಮಿಕ ರೋಗದ 2ನೇ ಅಲೆ ನಿಯಂತ್ರಣಕ್ಕಾಗಿ ದಾವಣಗೆರೆ ಜಿಲ್ಲೆಯಲ್ಲಿನ ಗ್ರಾಮಾಂತರ ಪ್ರದೇಶಗಳಲ್ಲಿ ಹತ್ತಕ್ಕಿಂತ ಹೆಚ್ಚು ಕೋವಿಡ್ ಸೋಂಕಿತರಿರುವ ವಿವಿಧ ಗ್ರಾಮಗಳಲ್ಲಿ ಕೋವಿಡ್ ಸೋಂಕು ಹರಡುವ ಸರಪಳಿಯನ್ನು ತಡೆಗಟಲು ಈ ಕೆಳಕಂಡ ಗ್ರಾಮಗಳನ್ನು ನಿಯಂತ್ರಿತ ವಲಯಗಳೆಂದು ಘೋಷಿಸಿ ವಿಪತ್ತು ನಿರ್ವಹಣ ಕಾಯ್ದೆ 2005 ರ ಕಲಂ 26,33,34 ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಈ ಕೆಳಕಂಡ ಗ್ರಾಮಗಳನ್ನು ನಿಯಂತ್ರಿತ ವಲಯ ಎಂದು ಘೋಷಿಸಿ ಜಿಲ್ಲಾಧಿಕಾರಿ ಮಹಾಾಂತೇಶ್ ಬೀಳಗಿ ಆದೇಶಿಸಿರುತ್ತಾರೆ.

ದಾವಣಗೆರೆ ತಾಲ್ಲೂಕಿನ ಅಣಬೇರು, ಕುಕ್ಕುವಾಡ, ಕೈದಾಳೆ, ಕುರ್ಕಿ, ತುರ್ಚಘಟ್ಟ, ಬೇತೂರು, ಕಾಶೀಪುರ, ಮಳಲಕೆರೆ ಗ್ರಾಮಗಳು, ಹರಿಹರ ತಾಲ್ಲೂಕಿನ ಗುತ್ತೂರು, ಕೆ.ಬೇವಿನಹಳ್ಳಿ, ನಂದಿತಾವರೆ, ಭಾನುವಳ್ಳಿ, ಹೊಳೆಸಿರಿಗೆರೆ, ಹಾಲಿವಾಣ ಗ್ರಾಮಗಳು, ಹೊನ್ನಾಳಿ ತಾಲ್ಲೂಕಿನ ಕುಳಗಟ್ಟೆ, ಹನುಮನಹಳ್ಳಿ, ಕೂಲಂಬಿ, ಗೊಲ್ಲರಹಳ್ಳಿ, ಐನೂರು ಗ್ರಾಮಗಳು, ನ್ಯಾಮತಿ ತಾಲ್ಲೂಕಿನ ದಾನಿಹಳ್ಳಿ, ಕುಂಕೊವ, ಫಲವನಹಳ್ಳಿ, ಸುರಹೊನ್ನೆ ಗ್ರಾಮಗಳು, ಚನ್ನಗಿರಿ ತಾಲ್ಲೂಕಿನ ಸಿದ್ದನಮಠ ಗ್ರಾಮ ಹಾಗೂ ಜಗಳೂರು ತಾಲ್ಲೂಕಿನ ಹೊಸಕೆರೆ ಗ್ರಾಮಗಳಲ್ಲಿ ಹತ್ತಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಈ ಗ್ರಾಮಗಳನ್ನು ನಿಯಂತ್ರಿತ ವಲಯಗಳೆಂದು ಘೋಷಿಸಲಾಗಿದೆ.

ಮೇಲ್ಕಂಡ ನಿಯಂತ್ರಣ ವಲಯದ ಗ್ರಾಮಗಳಲ್ಲಿ ಘಟನ ಕಮ್ಯಾಂಡರ್ ಆಗಿ ಸಂಬಂಧಿತ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸಲಾಗಿರುತ್ತದೆ. ಸದರಿ ಗ್ರಾಮಗಳಲ್ಲಿ ಅನಾವಶ್ಯಕವಾಗಿ ಜನರು ಓಡಾಡುವುದು ಹಾಗೂ ಸದರಿ ಗ್ರಾಮಗಳಲ್ಲಿ ಹೊರಗಿನ ಜನರು ಓಡಾಡುವುದು ನಿಷೇಧಿಸಲಾಗಿದ್ದು, ಮಾರ್ಗಸೂಚಿಗಳಲ್ಲಿ ವಿಧಿಸಿರುವ ನಿಬಂಧನೆಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version