ದಿನದ ಸುದ್ದಿ
ದಾವಣಗೆರೆಯಲ್ಲಿ ಬಿಸಿಎ ವಿದ್ಯಾರ್ಥಿ ದುರ್ಮರಣ : ಮೂವರಿಗೆ ಗಾಯ
ಸುದ್ದಿದಿನ, ದಾವಣಗೆರೆ: ನಗರದ ಹೊರವಲಯದಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಬಿಸಿಎ ವಿದ್ಯಾರ್ಥಿ ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದಾರೆ. ಶಾಮನೂರು ಬಡಾವಣೆಯ ಬೈಪಾಸ್ ರಸ್ತೆ ಯಲ್ಲಿ ಚಲಿಸುತ್ತಿದ್ದ ಕಾರಿನ ಚಕ್ರ ಸ್ಫೋಟಗೊಂಡು ಕಾರು ಪಕ್ಕದ ಜಮೀನಿನಲ್ಲಿ ಪಲ್ಟಿಯಾಗಿದೆ. ಇದರಿಂದ ಕಾರಿನಲ್ಲಿದ್ದ ಕಾರ್ತೀಕ್ ಎಂಬ ಬಿಸಿಎ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಶಿವು, ದರ್ಶನ್, ಹರ್ಷ ಎಂಬುವವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
Read web version : www.suddidina.com