Connect with us

ದಿನದ ಸುದ್ದಿ

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆ ಪ್ರಗತಿ ಪರಿಶೀಲನೆ ; ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ

Published

on

ಸುದ್ದಿದಿನ,ಚಿತ್ರದುರ್ಗ: ಬಯಲುಸೀಮೆಯ ಜನರ ಬಹುದಿನಗಳ ಬೇಡಿಕೆಯಾಗಿರುವ ದಾವಣಗೆರೆ-ಚಿತ್ರದುರ್ಗ-ತುಮಕೂರು 198 ಕಿ.ಮೀ. ಉದ್ದದ ನೂತನ ನೇರ ರೈಲ್ವೆ ಮಾರ್ಗ ಯೋಜನೆಗೆ 06 ತಿಂಗಳ ಒಳಗಾಗಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆ ಕುರಿತು ಚಿತ್ರದುರ್ಗ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಶನಿವಾರ ಮೂರು ಜಿಲ್ಲೆಗಳ ಅಧಿಕಾರಿಗಳು ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಾವಣಗೆರೆ-ಚಿತ್ರದುರ್ಗ-ತುಮಕೂರು ರೈಲ್ವೆ ಮಾರ್ಗವು ಈ ಭಾಗದ ಜನರ ಬಹು ಬೇಡಿಕೆಯ ಯೋಜನೆಯಾಗಿದ್ದು, 198 ಕಿ.ಮೀ. ರೈಲ್ವೆ ಮಾರ್ಗಕ್ಕೆ 1801 ಕೋಟಿ ರೂ. ವೆಚ್ಚದ ಅಂದಾಜು ಮಾಡಲಾಗಿದೆ. ಈ ಯೋಜನೆಗೆ ರಾಜ್ಯ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಿದರೆ, ಉಳಿದ ಶೇ. 50 ರಷ್ಟು ವೆಚ್ಚವನ್ನು ರೈಲ್ವೆ ಇಲಾಖೆ ಭರಿಸಲು ಸಿದ್ಧವಾಗಿದೆ. ಪ್ರಮುಖವಾಗಿ ಈ ಯೋಜನೆಗೆ ಭೂಮಿ ಸ್ವಾಧೀನ ಪಡಿಸಿ, ರೈಲ್ವೆ ಇಲಾಖೆಗೆ ಹಸ್ತಾಂತರಿಸುವ ಗುರುತರ ಹೊಣೆ ರಾಜ್ಯ ಸರ್ಕಾರದ ಮೇಲಿದ್ದು, ಇದುವರೆಗೂ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ 900 ಕೋಟಿ ಅನುದಾನವನ್ನು ಬಿಡುಗಡೆ ಮಾಡಬೇಕಿದೆ ಅಲ್ಲದೆ, ವಿಶೇಷ ಭೂಸ್ವಾಧೀನ ಅಧಿಕಾರಿಯ ಕಚೇರಿಯನ್ನು ಚಿತ್ರದುರ್ಗದಲ್ಲಿ ಸ್ಥಾಪಿಸಿ, ಅಧಿಕಾರಿಯನ್ನು ರಾಜ್ಯ ಸರ್ಕಾರ ನೇಮಿಸಬೇಕು.

ಪ್ರಸ್ತುತ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಮುಗಿದ ಕೂಡಲೆ, ಮುಖ್ಯಮಂತ್ರಿಗಳನ್ನು ಭೇಟಿಯಾಗಿ, ಅನುದಾನ ಬಿಡುಗಡೆ ಹಾಗೂ ವಿಶೇಷ ಭೂಸ್ವಾಧೀನ ಅಧಿಕಾರಿಯನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದು. ಲೋಕಸಭೆಗೆ ಚುನಾವಣೆ ಮಾರ್ಚ್ ವೇಳೆಗೆ ಘೋಷಣೆಯಾಗುವ ಸಂಭವ ಇರುವುದರಿಂದ, ಅಧಿಕಾರಿಗಳು ಭೂಸ್ವಾಧೀನ ಪ್ರಕ್ರಿಯೆಯನ್ನು ಕೂಡಲೆ ಪ್ರಾರಂಭಿಸಬೇಕು. ಭೂಮಿ ಕಳೆದುಕೊಳ್ಳುವ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು.

ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ರೈಲ್ವೆ ಮಾರ್ಗ ಬರುವುದರಿಂದ ಭೂಮಿಯ ಬೆಲೆ ದುಬಾರಿ ಇರುತ್ತದೆ. ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾದಷ್ಟೂ ಭೂಮಿಯ ಬೆಲೆ ಇನ್ನಷ್ಟು ಹೆಚ್ಚಾಗುತ್ತದೆ. ಇದರಿಂದ ಯೋಜನೆಯ ಮೇಲೆ ಅನಗತ್ಯ ಹೆಚ್ಚುವರಿ ವೆಚ್ಚ ತಗುಲುವ ಸಾಧ್ಯತೆ ಇರುತ್ತದೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವುದು, ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವುದು ಹಾಗೂ ವಿಶೇಷ ಭೂಸ್ವಾಧೀನ ಅಧಿಕಾರಿಯನ್ನು ನೇಮಿಸುವ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿಯ ಅಗತ್ಯವಿದೆ. ಹೀಗಾಗಿ ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ಭೂಸ್ವಾಧೀನ ಅಧಿಕಾರಿಗಳು ಕೂಡಲೆ ಆದ್ಯತೆ ಮೇರೆಗೆ ಕ್ರಮ ಕೈಗೊಂಡು 06 ತಿಂಗಳ ಒಳಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಭೂಸ್ವಾಧೀನ ಬಳಿಕವೂ ಪರಿಹಾರ ಹಣ ಪಾವತಿ ವಿಳಂಬವಾದಲ್ಲಿ, ಪರಿಹಾರ ಮೊತ್ತಕ್ಕೆ ನಿಯಮಾನುಸಾರ ಬಡ್ಡಿ ಸಹಿತ ರೈತರಿಗೆ ಪರಿಹಾರ ಪಾವತಿಸಬೇಕು ಎಂದು ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ ಸೂಚನೆ ನೀಡಿದರು.

ರೈಲ್ವೆ ಇಲಾಖೆ ಸಿದ್ಧ : ರೈಲ್ವೆ ಇಲಾಖೆ ಬೆಂಗಳೂರಿನ ಮುಖ್ಯ ಇಂಜಿನಿಯರ್ ಅಲೋಕ್ ತಿವಾರಿ ಅವರು ಮಾತನಾಡಿ, ಯೋಜನೆಗೆ ಒಟ್ಟಾರೆ 2165 ಎಕರೆ ಭೂಮಿ ಅಗತ್ಯವಿದ್ದು, ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಕೈಗೊಂಡು, ಭೂಮಿಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಿದ ಕೂಡಲೆ, ಕಾಮಗಾರಿಯನ್ನು ಪ್ರಾರಂಭಿಸಿ, ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಸನ್ನದ್ಧವಾಗಿದೆ ಎಂದರು. ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಈ ಹಿಂದೆ ಸಮೀಕ್ಷೆಗಾಗಿ ಘೋಷಣೆಯಾಗಿದ್ದ ಚಿತ್ರದುರ್ಗ-ಜಗಳೂರು-ಕೊಟ್ಟೂರು ನೂತನ ರೈಲ್ವೆ ಮಾರ್ಗದ ಕುರಿತು ಪ್ರಸ್ತಾಪಿಸಿದ್ದಕ್ಕೆ ಉತ್ತರಿಸಿದ ರೈಲ್ವೆ ಅಧಿಕಾರಿಗಳು, 78 ಕಿ.ಮೀ. ಉದ್ದದ ಈ ಯೋಜನೆಗೆ 554 ಕೋಟಿ ರೂ. ಅಂದಾಜು ವೆಚ್ಚವಾಗಲಿದ್ದು, ಯೋಜನೆ ಕುರಿತು ವಿಸ್ತøತ ಪರಿಶೀಲನೆಯ ಬಳಿಕ, ಈ ಯೋಜನೆ ಅಷ್ಟೇನು ಲಾಭದಾಯಕ ಹಾಗೂ ಕಾರ್ಯಸಾಧುವಲ್ಲ ಎಂಬುದಾಗಿ ರೈಲ್ವೆ ಮಂಡಳಿ ಸ್ಪಷ್ಟಪಡಿಸಿದೆ ಎಂದರು.

ಯೋಜನೆ ಪ್ರಗತಿ ಪರಿಶೀಲನೆ : ಚಿತ್ರದುರ್ಗ ಉಪವಿಭಾಗಾಧಿಕಾರಿ ವಿಜಯಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ 101. 35 ಕಿ.ಮೀ. ರೈಲ್ವೆ ಮಾರ್ಗ ಬರಲಿದ್ದು, 1063 ಎಕರೆ ಭೂಮಿ ಅಗತ್ಯವಿದ್ದು, ಪರಿಹಾರಕ್ಕಾಗಿ 560 ಕೋಟಿ ರೂ. ಅಗತ್ಯವಿದೆ. ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದ ಕೂಡಲೆ, ಪರಿಹಾರ ಮೊತ್ತ ಪಾವತಿಸಲು ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಬೇಕಾಗುತ್ತದೆ. ಭೂಸ್ವಾಧೀನ ಪ್ರಕ್ರಿಯೆ ತ್ವರಿತವಾಗಿ ಕೈಗೊಳ್ಳಲಾಗುವುದು ಎಂದರು. ದಾವಣಗೆರೆ ಜಿಲ್ಲೆಯ ಅಧಿಕಾರಿ ರೇಷ್ಮಾ ಅವರು ಮಾತನಾಡಿ, ಜಿಲ್ಲೆಯಲ್ಲಿ 31. 05 ಕಿ.ಮೀ. ರೈಲ್ವೆ ಮಾರ್ಗ ಬರಲಿದ್ದು, 237 ಎಕರೆ ಭೂಮಿಯನ್ನು ಸ್ವಾಧೀನಕ್ಕೆ ತೆಗೆದುಕೊಳ್ಳಬೇಕಿದೆ. 7 ಗ್ರಾಮಗಳಲ್ಲಿ ಕಂದಾಯ ಹಾಗೂ ರೈಲ್ವೆ ಇಲಾಖೆ ಜಂಟಿ ಅಳತೆ ಮಾಡಿದ್ದು, ಇನ್ನು 7 ಗ್ರಾಮಗಳಲ್ಲಿ ಜಂಟಿ ಅಳತೆ ಕಾರ್ಯ ಬಾಕಿ ಇದೆ. ಜನವರಿ ಒಳಗಾಗಿ ಈ ಕಾರ್ಯ ಪೂರ್ಣಗೊಳ್ಳುತ್ತದೆ. ಪರಿಹಾರ ಪಾವತಿಗೆ 100 ಕೋಟಿ ರೂ. ಅನುದಾನದ ಅಗತ್ಯವಿದೆ. ಈಗಾಗಲೆ 237 ಎಕರೆ ಭೂಸ್ವಾಧೀನಕ್ಕೆ 11(1) ಅಧಿಸೂಚನೆ ಹೊರಡಿಸಲಾಗಿದೆ. 6 ತಿಂಗಳ ಒಳಗಾಗಿ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.

ತುಮಕೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಅವರು ಮಾತನಾಡಿ, ಜಿಲ್ಲೆಯಲ್ಲಿ 59 ಕಿ.ಮೀ. ರೈಲ್ವೆ ಮಾರ್ಗ ಬರಲಿದ್ದು, 796 ಎಕರೆ ಭೂಮಿ ಅಗತ್ಯವಿದೆ. ಈಗಾಗಲೆ 26 ಎಕರೆ ಸರ್ಕಾರಿ ಭೂಮಿ ಲಭ್ಯವಿದ್ದು, ಉಳಿದ 661 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಿದೆ. ಈ ಪೈಕಿ 136 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಕಾಮಗಾರಿ ಪ್ರಾರಂಭಗೊಂಡಿದೆ. ಭೂಮಿ ಸ್ವಾಧೀನ ಸಂಬಂಧ ಪರಿಹಾರ ಪಾವತಿಸಲು 360 ಕೋಟಿ ರೂ. ಅನುದಾನದ ಅಗತ್ಯವಿದೆ. 6 ತಿಂಗಳ ಒಳಗಾಗಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.

ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಮಾತನಾಡಿ, ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗವು ಸಾರ್ವಜನಿಕ ಹಿತದೃಷ್ಟಿಯಿಂದ ಅತ್ಯಂತ ಉಪಯುಕ್ತ ಯೋಜನೆಯಾಗಿದೆ. ಈ ಮಾರ್ಗದಲ್ಲಿ ಬಸ್ ಪ್ರಯಾಣ ದರ ಹಾಗೂ ಸರಕು ಸಾಗಾಣಿಕೆ ದರ ಅತ್ಯಂತ ದುಬಾರಿ ಇದೆ. ನೂತನ ರೈಲ್ವೆ ಮಾರ್ಗ ಬೇಗ ಪೂರ್ಣಗೊಂಡಲ್ಲಿ, ಸಾರ್ವಜನಿಕರಿಗೆ ಪ್ರಯಾಣಕ್ಕೆ ಹಾಗೂ ಸರಕು ಸಾಗಾಣಿಕೆಯೂ ಮಿತವ್ಯಯವಾಗಲಿದೆ. ಜಿಲ್ಲೆಯಲ್ಲಿ ಭೂಸ್ವಾಧೀನ ಕಾರ್ಯ ಕುರಿತು ತಾವೇ ಖುದ್ದಾಗಿ ಆಸಕ್ತಿ ವಹಿಸಿ, ಬೇಗ ಪೂರ್ಣಗೊಳಿಸಲು ಪ್ರಾಮಾಣಿಕ ಯತ್ನ ಮಾಡುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎನ್. ರವೀಂದ್ರ, ಅಪರ ಜಿಲ್ಲಾಧಿಕಾರಿ ಸಂಗಪ್ಪ ಸೇರಿದಂತೆ ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ ಕಂದಾಯ ಇಲಾಖೆ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೆಕ್ಕೆಜೋಳ ಖರೀದಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ರೈತರಿಂದ ಎಕರೆಗೆ 12 ಕ್ವಿಂಟಾಲ್ ಹಾಗೂ ಗರಿಷ್ಠ 50 ಕ್ವಿಂಟಾಲ್‌ನಂತೆ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.2400.00 ರಂತೆ ಖರೀದಿಸಲಾಗುವುದು. ಮೆಕ್ಕೆಜೋಳ ಖರೀದಿದಾರರು ಡಿಸ್ಟಿಲರಿ ಮಾಲೀಕರಿಂದ ಮಾರಾಟದ ಮೊತ್ತ ಪಡೆದ ದಿನಾಂಕದಿಂದ ಮೂರು ದಿನಗಳಲ್ಲಿ ಸಂಬಂಧಪಟ್ಟ ರೈತರಿಗೆ ಡಿಬಿಟಿ ಮೂಲಕ ಪಾವತಿಸಲಾಗುವುದು. ಖರೀದಿ ಪ್ರಕ್ರಿಯೆಗೆ ಎನ್‌ಇಎಂಎಲ್ (NEML) ಸಂಸ್ಥೆಯ ತಂತ್ರಾಂಶ ಅಳವಡಿಸಿಕೊಂಡು ಸರ್ಕಾರದ ಪ್ರೂಟ್ಸ್ ಪೊರ್ಟಲ್(FRUITS Portal) ಮತ್ತು ಡಿಬಿಟಿ ಸಂಯೋಜನೆಯೊಂದಿಗೆ ರೈತರ ನೊಂದಣಿ ಕಾರ್ಯ ನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ 730 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಗುರಿಯನ್ನು ಹೊಂದಲಾಗಿದೆ. ರೈತರು ಮೆಕ್ಕೆಜೋಳ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಇದರ ಪ್ರಯೋಜನೆ ಪಡೆದುಕೊಳ್ಳುವಂತೆ ತಿಳಿಸಿದರು. ಸಹಕಾರ ಇಲಾಖೆ ಮತ್ತು ಎಪಿಎಂಸಿ ಅಧಿಕಾರಿಗಳು ಮೆಕ್ಕೆಜೋಳ ಖರೀದಿ ಕುರಿತು ಮಾಹಿತಿಯುಳ್ಳ ಕರಪತ್ರಗಳನ್ನು ಮುದ್ರಿಸಿ ರೈತರಿಗೆ ನೀಡಬೇಕು. ಮೆಕ್ಕೆಜೋಳ ಖರೀದಿಯಲ್ಲಿ ಯಾವುದೇ ಗೊಂದಲ ಆಗದಂತೆ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಸಹಕಾರ ಇಲಾಖೆ ಉಪನಿಬಂಧಕ ಮಧು ಶ್ರೀನಿವಾಸ್, ಅಬಕಾರಿ ಇಲಾಖೆಯ ಉಪ ಆಯುಕ್ತ ಜುನೈದ್ , ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ಹಾಗೂ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ

Published

on

~ಅನಿರೀಕ್ಷಿತ್ ನಾರಾಯಣ

ಕೆಲ ಮುನ್ನೆಚ್ಚರಿಕೆಯ ಅಂಶಗಳನ್ನು ಪಾಲಿಸುವುದರಿಂದ ಗ್ಯಾಸ್ ಗೀಸರ್ ನಿಂದ ಆಗುವ ಅಪಾಯವನ್ನು ತಡೆಗಟ್ಟಬಹುದು.

1. ಮೊದಲಿಗೆ ಇದು ಎಲ್ಲರಿಗೂ ಗೊತ್ತಿರುವ ವಿಷಯ. ಗ್ಯಾಸ್ ಗೀಸರ್ ಅನ್ನು ಬಳಸದಿದ್ದಾಗ ರೆಗ್ಯುಲೇಟರಿನಲ್ಲೇ ಆಫ್ ಮಾಡಿ ಗ್ಯಾಸ್ ಸರಬರಾಜನ್ನು ನಿಲ್ಲಿಸಬೇಕು. ಬೇಕೆಂದಾಗ ಮಾತ್ರ ಆನ್ ಮಾಡಿಕೊಳ್ಳಬೇಕು.

2. ನಿಮ್ಮ ಸ್ನಾನದ ಮನೆಯಲ್ಲಿ ಗ್ಯಾಸ್ ಗೀಸರ್ ಅನ್ನು ಅಳವಡಿಸಬೇಕೆಂದಿದ್ದರೆ ಅಲ್ಲಿ ಚೆನ್ನಾಗಿ ಗಾಳಿಯಾಡಲು ಅಗತ್ಯವಿದ್ದಷ್ಟು ಕಿಟಕಿ ಇರಲೇಬೇಕು. ಕೆಲ ಸ್ನಾನದ ಮನೆಗಳಲ್ಲಿ ಬರೀ ಬೆಳಕು ಬರಲಷ್ಟೇ ಗಾಜಿರುವ ಕಿಟಕಿ ಮಾಡಿರುತ್ತಾರೆ. ಅಂತಹ ಕಡೆಗಳಲ್ಲಿ ಗ್ಯಾಸ್ ಗೀಸರ್ ಅನ್ನು ಅಳವಡಿಸದಿರುವುದೇ ಉತ್ತಮ. ಸ್ನಾನದ ಮನೆ ಬಿಟ್ಟು ಹೊರಗೆ ಎಲ್ಲಾದರೂ ಗಾಳಿಯಾಡುವ ಕಡೆ ಗ್ಯಾಸ್ ಗೀಸರ್ ಅನ್ನು ಅಳವಡಿಸಿ ಅಲ್ಲಿಂದ ಬಿಸಿ ನೀರನ್ನು ಒಳಗೆ ತೆಗೆದುಕೊಳ್ಳುತ್ತೇನೆ ಎಂದರೆ ಕೊಂಚ inconvenience ಅನ್ನಿಸಿದರೂ ಹೆಚ್ಚು ಸುರಕ್ಷಿತ.

3. ಗ್ಯಾಸ್ ಗೀಜರ್ ಅನ್ನು ಸ್ನಾನದ ಮನೆಯೊಳಗೆ ಅಳವಡಿಸಿದರೆ, ಮೊದಲು ಬಾಗಿಲು ತೆರೆದಿಟ್ಟುಕೊಂಡೇ, ಬಿಸಿ ನೀರನ್ನು ಬಕೆಟ್ಟಿಗೆ ಬಿಟ್ಟುಕೊಂಡು ನಂತರ ಸ್ಥಾನಕ್ಕೆ ಹೋಗುವುದು ಒಳ್ಳೆಯದು. ಆಗ ಈ ಆತಂಕ ಇರುವುದಿಲ್ಲ.

4. ಈಗ ಮನೆ ಬಳಕೆಯ ಉಪಕರಣಗಳನ್ನು ಮಾರುವ ಅಂಗಡಿಗಳಲ್ಲಿ exhaust fan (ಗಾಳಿಯನ್ನು ಹೊರಹಾಕುವ fan) ದೊರಕುತ್ತದೆ. ಅದರ ಬೆಲೆ ಹೆಚ್ಚೆಂದರೆ ಒಂದು ಸಾವಿರ ರೂಪಾಯಿ ಅಷ್ಟೇ. ಬರೀ ಎರಡು ರೂಪಾಯಿಯ ಟ್ಯಾಗ್ ಬಳಸಿ ಅದನ್ನು ಎಲ್ಲಿ ಬೇಕೆಂದರಲ್ಲಿ (ಕಿಟಕಿಯ ಸರಳುಗಳಿಗೇ) ಎರಡೇ‌ ನಿಮಿಷದಲ್ಲಿ ನಾವೇ install ಮಾಡಿಕೊಳ್ಳಬಹುದು. ಗ್ಯಾಸ್ ಗೀಸರ್ ON ಮಾಡಿದಾಗೆಲ್ಲ, Exhaust Fanಅನ್ನೂ ಆನ್ ಮಾಡಿಕೊಂಡರೆ ಗ್ಯಾಸ್ ಗೀಸರ್ ಹೊರ ಸೂಸಬಹುದಾದ ಕಾರ್ಬನ್ ಮಾನಾಕ್ಸೈಡ್ ಬಗ್ಗೆ ಚಿಂತಿಸುವ ಅಗತ್ಯವೇ ಇಲ್ಲ. ಏಕೆಂದರೆ exhaust fan ಸ್ನಾನದ ಕೊಠಡಿ ಒಳಗಿನ ಗಾಳಿಯನ್ನೆಲ್ಲ ಹೊರಹಾಕುತ್ತಲೇ ಇರುತ್ತದೆ. ಅದರ ಮೂಲಕ ಕಾರ್ಬನ್ ಮಾನಾಕ್ಸೈಡ್ ಕೂಡ ಹೊರಹೋಗುತ್ತದೆ. ಜೊತೆಗೆ ಕೊಠಡಿಯ ವಾಯುಭಾರ ಕುಸಿತವಾದಂತೆಲ್ಲ ಸ್ವಚ್ಛ ಗಾಳಿ ತನ್ನಂತಾನೇ ಒಳಬರುತ್ತದೆ.

5. Carbon monoxide detector: ಮೇಲೆ ಹೇಳಿದಂತೆ ಕಾರ್ಬನ್ ಮಾನಾಕ್ಸೈಡ್ ಸೋರಿಕೆಯಾಗುತ್ತಿದೆ ಅಂತ ಮನುಷ್ಯನ ಇಂದ್ರಿಯಗಳಿಗೆ ಗ್ರಹಿಸಲು ಸಾಧ್ಯವಿಲ್ಲ. ಆದರೆ ಇವುಗಳನ್ನು ಪತ್ತೆಹಚ್ಚಲೆಂದೆ ಕಾರ್ಬನ್ ಮಾನಾಕ್ಸೈಡ್ ಡಿಟೆಕ್ಟರ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಸಾಧ್ಯವಾದಲ್ಲಿ ಇವುಗಳನ್ನು ಅಳವಡಿಸಿಕೊಂಡರೆ ಗಾಳಿಯಲ್ಲಿ ಕಾರ್ಬನ್ ಮಾನಾಕ್ಸೈಡ್ ಪತ್ತೆಯಾದ ತಕ್ಷಣ ಇವುಗಳು alarm ಕೂಗಿ ಎಚ್ಚರಿಸುತ್ತವೆ. ಆಗ ತಕ್ಷಣ ನಾವು ಕ್ರಮ ಕೈಗೊಳ್ಳಬಹುದು.

6. ಈ ವಿಷಯಗಳನ್ನು ಮುಖ್ಯವಾಗಿ ಮನೆಯ ದೊಡ್ಡವರು ತಿಳಿದುಕೊಂಡಿರಬೇಕು. ಚಿಕ್ಕ ಮಕ್ಕಳು ಸ್ನಾನಕ್ಕೆ ಹೋಗುವಾಗ ಅವರ ಪಾಡಿಗೆ ಅವರನ್ನು ಬಿಡುವ ಬದಲಿಗೆ, ತಾವೇ ನೀರು ಬಿಟ್ಟುಕೊಟ್ಟು ನಂತರ ಅವರನ್ನು ಸ್ನಾನಕ್ಕೆ ಕಳಿಸಬೇಕು.

7. ಒಂದು ಮನೆಯಿಂದ ಇನ್ನೊಂದು ಮನೆಗೆ ಶಿಫ್ಟ್ ಆಗುವಾಗ ನೀವಾಗಿಯೇ ಗ್ಯಾಸ್ ಗೀಜರ್ ಅನ್ನು ಅಳವಡಿಸುವುದರ ಬದಲಾಗಿ ಯಾರಾದರೂ professional ವ್ಯಕ್ತಿಗಳನ್ನೇ ನೆಚ್ಚಿಕೊಂಡರೆ ಒಳ್ಳೆಯದು. ಆಗ ಅವರು ಗೀಸರನ್ನು ಅಳವಡಿಸಬಹುದಾದ ಜಾಗದ ವೆಂಟಿಲೇಶನ್ ಅನ್ನು ಗಮನಿಸಿ‌ ಅವರೇ ಸೂಕ್ತ ಸಲಹೆ ನೀಡುತ್ತಾರೆ.

8. Regular maintenance: ಗ್ಯಾಸ್ ಸಿಲೆಂಡರ್, ರೆಗ್ಯುಲೇಟರ್, ಗ್ಯಾಸ್ ಪೈಪ್ ಮತ್ತು ಗೀಸರನ್ನು ಆಗಾಗ ಗಮನಿಸುತ್ತ ಅಗತ್ಯ ಬಂದಲ್ಲಿ ಅವುಗಳನ್ನು ಬದಲಾಯಿಸಬೇಕು.

9. ಗ್ಯಾಸ್ ಗೀಸರ್ ಬಳಸುವಾಗ ಯಾವುದೇ ಅನುಮಾನ ಬಂದರೂ ಕೂಡಲೆ ಅದನ್ನು ಸರಿಪಡಿಸಿಕೊಳ್ಳುವುದು ಅಗತ್ಯ. ಆಗಲು ನಾವೇ ಏನಾದರೂ ಒಂದು ಮಾಡುವ ಬದಲು, ಅದನ್ನು ರಿಪೇರಿ ಮಾಡುವರಿಂದಲೇ ಸರಿ‌ಮಾಡಿಸುವುದು ಒಳ್ಳೆಯದು.

ಬರಹ ಕೃಪೆ : ಫೇಸ್ ಬುಕ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 hours ago

ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ1 day ago

ಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ

~ಅನಿರೀಕ್ಷಿತ್ ನಾರಾಯಣ ಕೆಲ ಮುನ್ನೆಚ್ಚರಿಕೆಯ ಅಂಶಗಳನ್ನು ಪಾಲಿಸುವುದರಿಂದ ಗ್ಯಾಸ್ ಗೀಸರ್ ನಿಂದ ಆಗುವ ಅಪಾಯವನ್ನು ತಡೆಗಟ್ಟಬಹುದು. 1. ಮೊದಲಿಗೆ ಇದು ಎಲ್ಲರಿಗೂ ಗೊತ್ತಿರುವ ವಿಷಯ. ಗ್ಯಾಸ್ ಗೀಸರ್...

ದಿನದ ಸುದ್ದಿ4 days ago

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು....

ದಿನದ ಸುದ್ದಿ4 days ago

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ...

ದಿನದ ಸುದ್ದಿ6 days ago

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ...

ದಿನದ ಸುದ್ದಿ7 days ago

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು...

ದಿನದ ಸುದ್ದಿ1 week ago

ಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು. ಜಿಎಂ ವಿಶ್ವವಿದ್ಯಾಲಯದ ಎಲ್ಲಾ...

ದಿನದ ಸುದ್ದಿ1 week ago

ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು. ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ1 week ago

ದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ

ಸುದ್ದಿದಿನ,ದಾವಣಗೆರೆ:ಕಾರ್ಮಿಕರಿಗೆ ತ್ವರಿತವಾಗಿ, ಕೆಲಸದ ಸ್ಥಳಗಳಲ್ಲೇ ವೈದ್ಯಕೀಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ‘ಸಂಚಾರಿ ಆರೋಗ್ಯ ಘಟಕ’ (ಮೊಬೈಲ್ ಮೆಡಿಕಲ್ ಯುನಿಟ್) ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಕಾರ್ಮಿಕರು ಇದರ...

ದಿನದ ಸುದ್ದಿ1 week ago

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನದಡಿ ಮೀನುಮಾರಾಟಗಾರರಿಂದ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ....

Trending