Connect with us

ದಿನದ ಸುದ್ದಿ

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆ ಪ್ರಗತಿ ಪರಿಶೀಲನೆ ; ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ

Published

on

ಸುದ್ದಿದಿನ,ಚಿತ್ರದುರ್ಗ: ಬಯಲುಸೀಮೆಯ ಜನರ ಬಹುದಿನಗಳ ಬೇಡಿಕೆಯಾಗಿರುವ ದಾವಣಗೆರೆ-ಚಿತ್ರದುರ್ಗ-ತುಮಕೂರು 198 ಕಿ.ಮೀ. ಉದ್ದದ ನೂತನ ನೇರ ರೈಲ್ವೆ ಮಾರ್ಗ ಯೋಜನೆಗೆ 06 ತಿಂಗಳ ಒಳಗಾಗಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆ ಕುರಿತು ಚಿತ್ರದುರ್ಗ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಶನಿವಾರ ಮೂರು ಜಿಲ್ಲೆಗಳ ಅಧಿಕಾರಿಗಳು ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಾವಣಗೆರೆ-ಚಿತ್ರದುರ್ಗ-ತುಮಕೂರು ರೈಲ್ವೆ ಮಾರ್ಗವು ಈ ಭಾಗದ ಜನರ ಬಹು ಬೇಡಿಕೆಯ ಯೋಜನೆಯಾಗಿದ್ದು, 198 ಕಿ.ಮೀ. ರೈಲ್ವೆ ಮಾರ್ಗಕ್ಕೆ 1801 ಕೋಟಿ ರೂ. ವೆಚ್ಚದ ಅಂದಾಜು ಮಾಡಲಾಗಿದೆ. ಈ ಯೋಜನೆಗೆ ರಾಜ್ಯ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಿದರೆ, ಉಳಿದ ಶೇ. 50 ರಷ್ಟು ವೆಚ್ಚವನ್ನು ರೈಲ್ವೆ ಇಲಾಖೆ ಭರಿಸಲು ಸಿದ್ಧವಾಗಿದೆ. ಪ್ರಮುಖವಾಗಿ ಈ ಯೋಜನೆಗೆ ಭೂಮಿ ಸ್ವಾಧೀನ ಪಡಿಸಿ, ರೈಲ್ವೆ ಇಲಾಖೆಗೆ ಹಸ್ತಾಂತರಿಸುವ ಗುರುತರ ಹೊಣೆ ರಾಜ್ಯ ಸರ್ಕಾರದ ಮೇಲಿದ್ದು, ಇದುವರೆಗೂ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ 900 ಕೋಟಿ ಅನುದಾನವನ್ನು ಬಿಡುಗಡೆ ಮಾಡಬೇಕಿದೆ ಅಲ್ಲದೆ, ವಿಶೇಷ ಭೂಸ್ವಾಧೀನ ಅಧಿಕಾರಿಯ ಕಚೇರಿಯನ್ನು ಚಿತ್ರದುರ್ಗದಲ್ಲಿ ಸ್ಥಾಪಿಸಿ, ಅಧಿಕಾರಿಯನ್ನು ರಾಜ್ಯ ಸರ್ಕಾರ ನೇಮಿಸಬೇಕು.

ಪ್ರಸ್ತುತ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಮುಗಿದ ಕೂಡಲೆ, ಮುಖ್ಯಮಂತ್ರಿಗಳನ್ನು ಭೇಟಿಯಾಗಿ, ಅನುದಾನ ಬಿಡುಗಡೆ ಹಾಗೂ ವಿಶೇಷ ಭೂಸ್ವಾಧೀನ ಅಧಿಕಾರಿಯನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದು. ಲೋಕಸಭೆಗೆ ಚುನಾವಣೆ ಮಾರ್ಚ್ ವೇಳೆಗೆ ಘೋಷಣೆಯಾಗುವ ಸಂಭವ ಇರುವುದರಿಂದ, ಅಧಿಕಾರಿಗಳು ಭೂಸ್ವಾಧೀನ ಪ್ರಕ್ರಿಯೆಯನ್ನು ಕೂಡಲೆ ಪ್ರಾರಂಭಿಸಬೇಕು. ಭೂಮಿ ಕಳೆದುಕೊಳ್ಳುವ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು.

ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ರೈಲ್ವೆ ಮಾರ್ಗ ಬರುವುದರಿಂದ ಭೂಮಿಯ ಬೆಲೆ ದುಬಾರಿ ಇರುತ್ತದೆ. ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾದಷ್ಟೂ ಭೂಮಿಯ ಬೆಲೆ ಇನ್ನಷ್ಟು ಹೆಚ್ಚಾಗುತ್ತದೆ. ಇದರಿಂದ ಯೋಜನೆಯ ಮೇಲೆ ಅನಗತ್ಯ ಹೆಚ್ಚುವರಿ ವೆಚ್ಚ ತಗುಲುವ ಸಾಧ್ಯತೆ ಇರುತ್ತದೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವುದು, ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವುದು ಹಾಗೂ ವಿಶೇಷ ಭೂಸ್ವಾಧೀನ ಅಧಿಕಾರಿಯನ್ನು ನೇಮಿಸುವ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿಯ ಅಗತ್ಯವಿದೆ. ಹೀಗಾಗಿ ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ಭೂಸ್ವಾಧೀನ ಅಧಿಕಾರಿಗಳು ಕೂಡಲೆ ಆದ್ಯತೆ ಮೇರೆಗೆ ಕ್ರಮ ಕೈಗೊಂಡು 06 ತಿಂಗಳ ಒಳಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಭೂಸ್ವಾಧೀನ ಬಳಿಕವೂ ಪರಿಹಾರ ಹಣ ಪಾವತಿ ವಿಳಂಬವಾದಲ್ಲಿ, ಪರಿಹಾರ ಮೊತ್ತಕ್ಕೆ ನಿಯಮಾನುಸಾರ ಬಡ್ಡಿ ಸಹಿತ ರೈತರಿಗೆ ಪರಿಹಾರ ಪಾವತಿಸಬೇಕು ಎಂದು ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ ಸೂಚನೆ ನೀಡಿದರು.

ರೈಲ್ವೆ ಇಲಾಖೆ ಸಿದ್ಧ : ರೈಲ್ವೆ ಇಲಾಖೆ ಬೆಂಗಳೂರಿನ ಮುಖ್ಯ ಇಂಜಿನಿಯರ್ ಅಲೋಕ್ ತಿವಾರಿ ಅವರು ಮಾತನಾಡಿ, ಯೋಜನೆಗೆ ಒಟ್ಟಾರೆ 2165 ಎಕರೆ ಭೂಮಿ ಅಗತ್ಯವಿದ್ದು, ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಕೈಗೊಂಡು, ಭೂಮಿಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಿದ ಕೂಡಲೆ, ಕಾಮಗಾರಿಯನ್ನು ಪ್ರಾರಂಭಿಸಿ, ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಸನ್ನದ್ಧವಾಗಿದೆ ಎಂದರು. ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಈ ಹಿಂದೆ ಸಮೀಕ್ಷೆಗಾಗಿ ಘೋಷಣೆಯಾಗಿದ್ದ ಚಿತ್ರದುರ್ಗ-ಜಗಳೂರು-ಕೊಟ್ಟೂರು ನೂತನ ರೈಲ್ವೆ ಮಾರ್ಗದ ಕುರಿತು ಪ್ರಸ್ತಾಪಿಸಿದ್ದಕ್ಕೆ ಉತ್ತರಿಸಿದ ರೈಲ್ವೆ ಅಧಿಕಾರಿಗಳು, 78 ಕಿ.ಮೀ. ಉದ್ದದ ಈ ಯೋಜನೆಗೆ 554 ಕೋಟಿ ರೂ. ಅಂದಾಜು ವೆಚ್ಚವಾಗಲಿದ್ದು, ಯೋಜನೆ ಕುರಿತು ವಿಸ್ತøತ ಪರಿಶೀಲನೆಯ ಬಳಿಕ, ಈ ಯೋಜನೆ ಅಷ್ಟೇನು ಲಾಭದಾಯಕ ಹಾಗೂ ಕಾರ್ಯಸಾಧುವಲ್ಲ ಎಂಬುದಾಗಿ ರೈಲ್ವೆ ಮಂಡಳಿ ಸ್ಪಷ್ಟಪಡಿಸಿದೆ ಎಂದರು.

ಯೋಜನೆ ಪ್ರಗತಿ ಪರಿಶೀಲನೆ : ಚಿತ್ರದುರ್ಗ ಉಪವಿಭಾಗಾಧಿಕಾರಿ ವಿಜಯಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ 101. 35 ಕಿ.ಮೀ. ರೈಲ್ವೆ ಮಾರ್ಗ ಬರಲಿದ್ದು, 1063 ಎಕರೆ ಭೂಮಿ ಅಗತ್ಯವಿದ್ದು, ಪರಿಹಾರಕ್ಕಾಗಿ 560 ಕೋಟಿ ರೂ. ಅಗತ್ಯವಿದೆ. ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದ ಕೂಡಲೆ, ಪರಿಹಾರ ಮೊತ್ತ ಪಾವತಿಸಲು ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಬೇಕಾಗುತ್ತದೆ. ಭೂಸ್ವಾಧೀನ ಪ್ರಕ್ರಿಯೆ ತ್ವರಿತವಾಗಿ ಕೈಗೊಳ್ಳಲಾಗುವುದು ಎಂದರು. ದಾವಣಗೆರೆ ಜಿಲ್ಲೆಯ ಅಧಿಕಾರಿ ರೇಷ್ಮಾ ಅವರು ಮಾತನಾಡಿ, ಜಿಲ್ಲೆಯಲ್ಲಿ 31. 05 ಕಿ.ಮೀ. ರೈಲ್ವೆ ಮಾರ್ಗ ಬರಲಿದ್ದು, 237 ಎಕರೆ ಭೂಮಿಯನ್ನು ಸ್ವಾಧೀನಕ್ಕೆ ತೆಗೆದುಕೊಳ್ಳಬೇಕಿದೆ. 7 ಗ್ರಾಮಗಳಲ್ಲಿ ಕಂದಾಯ ಹಾಗೂ ರೈಲ್ವೆ ಇಲಾಖೆ ಜಂಟಿ ಅಳತೆ ಮಾಡಿದ್ದು, ಇನ್ನು 7 ಗ್ರಾಮಗಳಲ್ಲಿ ಜಂಟಿ ಅಳತೆ ಕಾರ್ಯ ಬಾಕಿ ಇದೆ. ಜನವರಿ ಒಳಗಾಗಿ ಈ ಕಾರ್ಯ ಪೂರ್ಣಗೊಳ್ಳುತ್ತದೆ. ಪರಿಹಾರ ಪಾವತಿಗೆ 100 ಕೋಟಿ ರೂ. ಅನುದಾನದ ಅಗತ್ಯವಿದೆ. ಈಗಾಗಲೆ 237 ಎಕರೆ ಭೂಸ್ವಾಧೀನಕ್ಕೆ 11(1) ಅಧಿಸೂಚನೆ ಹೊರಡಿಸಲಾಗಿದೆ. 6 ತಿಂಗಳ ಒಳಗಾಗಿ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.

ತುಮಕೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಅವರು ಮಾತನಾಡಿ, ಜಿಲ್ಲೆಯಲ್ಲಿ 59 ಕಿ.ಮೀ. ರೈಲ್ವೆ ಮಾರ್ಗ ಬರಲಿದ್ದು, 796 ಎಕರೆ ಭೂಮಿ ಅಗತ್ಯವಿದೆ. ಈಗಾಗಲೆ 26 ಎಕರೆ ಸರ್ಕಾರಿ ಭೂಮಿ ಲಭ್ಯವಿದ್ದು, ಉಳಿದ 661 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಿದೆ. ಈ ಪೈಕಿ 136 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಕಾಮಗಾರಿ ಪ್ರಾರಂಭಗೊಂಡಿದೆ. ಭೂಮಿ ಸ್ವಾಧೀನ ಸಂಬಂಧ ಪರಿಹಾರ ಪಾವತಿಸಲು 360 ಕೋಟಿ ರೂ. ಅನುದಾನದ ಅಗತ್ಯವಿದೆ. 6 ತಿಂಗಳ ಒಳಗಾಗಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.

ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಮಾತನಾಡಿ, ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗವು ಸಾರ್ವಜನಿಕ ಹಿತದೃಷ್ಟಿಯಿಂದ ಅತ್ಯಂತ ಉಪಯುಕ್ತ ಯೋಜನೆಯಾಗಿದೆ. ಈ ಮಾರ್ಗದಲ್ಲಿ ಬಸ್ ಪ್ರಯಾಣ ದರ ಹಾಗೂ ಸರಕು ಸಾಗಾಣಿಕೆ ದರ ಅತ್ಯಂತ ದುಬಾರಿ ಇದೆ. ನೂತನ ರೈಲ್ವೆ ಮಾರ್ಗ ಬೇಗ ಪೂರ್ಣಗೊಂಡಲ್ಲಿ, ಸಾರ್ವಜನಿಕರಿಗೆ ಪ್ರಯಾಣಕ್ಕೆ ಹಾಗೂ ಸರಕು ಸಾಗಾಣಿಕೆಯೂ ಮಿತವ್ಯಯವಾಗಲಿದೆ. ಜಿಲ್ಲೆಯಲ್ಲಿ ಭೂಸ್ವಾಧೀನ ಕಾರ್ಯ ಕುರಿತು ತಾವೇ ಖುದ್ದಾಗಿ ಆಸಕ್ತಿ ವಹಿಸಿ, ಬೇಗ ಪೂರ್ಣಗೊಳಿಸಲು ಪ್ರಾಮಾಣಿಕ ಯತ್ನ ಮಾಡುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎನ್. ರವೀಂದ್ರ, ಅಪರ ಜಿಲ್ಲಾಧಿಕಾರಿ ಸಂಗಪ್ಪ ಸೇರಿದಂತೆ ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ ಕಂದಾಯ ಇಲಾಖೆ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ8 hours ago

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ. ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ,...

ದಿನದ ಸುದ್ದಿ8 hours ago

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ತಿರಸ್ಕೃತಗೊಂಡ...

ದಿನದ ಸುದ್ದಿ3 days ago

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ....

ದಿನದ ಸುದ್ದಿ3 days ago

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ...

ದಿನದ ಸುದ್ದಿ4 days ago

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ...

ದಿನದ ಸುದ್ದಿ5 days ago

ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ

ಸುದ್ದಿದಿನ,ದಾವಣಗೆರೆ:ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆ ಮಳಿಗೆಗಳು ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕವನ್ನು ಅಳವಡಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ. ಒಂದು...

ದಿನದ ಸುದ್ದಿ6 days ago

ದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಕಂದಗಲ್ಲು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಿಂಗೇಶ್ವರ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿದೆ. ನಿಯಮಬಾಹಿರವಾಗಿ ಸಾಮಾನ್ಯ...

ದಿನದ ಸುದ್ದಿ2 weeks ago

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ...

ದಿನದ ಸುದ್ದಿ3 weeks ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ3 weeks ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

Trending