Connect with us

ದಿನದ ಸುದ್ದಿ

ಪ್ರತಿ ಗ್ರಾಮಪಂಚಾಯತಿಗಳಲ್ಲಿ ಮಕ್ಕಳ ಗ್ರಾಮಸಭೆ ನಡೆಸಲು ಸುತ್ತೋಲೆ; ಮಕ್ಕಳ ಹಕ್ಕುಗಳ ಉಲ್ಲಂಘನೆ ಮಾಡಿದಲ್ಲಿ ಕ್ರಮ: ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ಪ್ರತಿ ಗ್ರಾಮದಲ್ಲೂ ಮಕ್ಕಳ ಗ್ರಾಮಸಭೆ ಕಡ್ಡಾಯವಾಗಿ ಮಾಡಬೇಕು, ಅಲ್ಲಿ ಮಕ್ಕಳಿರುವಂತೆ ನೋಡಿಕೊಳ್ಳಬೇಕು. ಮಕ್ಕಳ ಹಕ್ಕುಗಳು ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು. ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ದಾವಣಗೆರೆ, ಬ್ರೆಡ್ಸ್ ಸಂಸ್ಥೆ, ಬೆಂಗಳೂರು. ಡಾನ್ ಬಾಸ್ಕೋ ಬಾಲಕಾರ್ಮಿಕರ ಮಿಷನ್ ಕ್ರೀಮ್ ಯೋಜನೆ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಕ್ಕಳ ಸ್ನೇಹಿ ಅಧಿಕಾರಿಗಳಿಗೆ ಸನ್ಮಾನ ಸಮಾರಂಭ ಹಾಗೂ ಸಿಆರ್‍ಇಎಎಂ ಯೋಜನೆಯ ಅನುಷ್ಠಾನದಲ್ಲಿ ಇಲಾಖೆಗಳ ಸಮನ್ವಯತೆ ಕುರಿತು ಜಿಲ್ಲಾ ಮಟ್ಟದ ಅಡ್ವೋಕಸಿ ಕಾರ್ಯಾಗಾರ ಉಧ್ಘಾಟಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.

ಡಾನ್ ಬಾಸ್ಕೋ ಸಂಸ್ಥೆ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುತಿದ್ದು, ಈ ಸಂಸ್ಥೆ ನಮ್ಮ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ನಮಗೆ ಹೆಮ್ಮೆ. ಮಕ್ಕಳ ಗ್ರಾಮ ಸಭೆ ಮಾಡುವುದರಿಂದ ಒತ್ತಡ, ಬಾಲ ಕಾರ್ಮಿಕ ಪದ್ದತಿ, ಬಾಲ್ಯವಿವಾಹದಂತಹ ಮಕ್ಕಳ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ.

ಇದನ್ನೂ ಓದಿ | ಸತ್ಯಪ್ಪ ಸಾಹುಕಾರ’ ಎಂಬ ರೈತ ನಾಯಕ..!

ಮಕ್ಕಳ ಅನುಕೂಲಗಳ ಬಗ್ಗೆ ಚರ್ಚೆಯಾಗಬೇಕು ಹಾಗೂ ಮಕ್ಕಳ ಹಕ್ಕುಗಳು ಯಾವ ರೀತಿಯಲ್ಲಿ ಉಲ್ಲಂಘನೆಯಾಗುತ್ತವೆ ಎಂಬುದನ್ನು ಚರ್ಚೆ ಮಾಡಿ ಕ್ರಮ ಕೈಗೊಳ್ಳಲು ಸೂಕ್ತ ವೇದಿಕೆ ಕಲ್ಪಿಸಬೇಕು ಮತ್ತು ಮಕ್ಕಳ ಹಕ್ಕುಗಳ ಸಂಘಗಳನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಉತ್ತೇಜಿಸಲು ಡಿಡಿಪಿಐ ಮೂಲಕ ಸುತ್ತೋಲೆ ಹೊರಡಿಸಲಾಗುವುದು ಎಂದರು.

ಸಂಸ್ಥೆಯು ಎನ್‍ಜಿಒಗಳ ಸಹಾಯದಿಂದ ಬಡ ಮಕ್ಕಳಿಗಾಗಿ, ಮಕ್ಕಳ ಹಕ್ಕುಗಳ ಸಲುವಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ಈ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಸಿಆರ್‍ಇಎಂ ಯೋಜನೆ ಅಧಿಕಾರಿಗಳನ್ನು ಅಭಿನಂದಿಸಿದರು. ನಮ್ಮ ಎಲ್ಲಾ ಅಧಿಕಾರಿಗಳು ಮಕ್ಕಳ ಸ್ನೇಹಿ ಅಧಿಕಾರಿಗಳಾಗಿದ್ದು ಮಕ್ಕಳ ಹಕ್ಕುಗಳಿಗಾಗಿ ಕೆಲಸ ಮಾಡಲು ಸಿದ್ಧರಿದ್ದಾರೆ ಹಾಗೂ ಮಕ್ಕಳನ್ನು ರಕ್ಷಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಲಿದ್ದಾರೆ ಎಂದರು.

ಮಹಾನಗರ ಪಾಲಿಕೆಯ ಆಯುಕ್ತ ವಿಶ್ವನಾಥ್ ಮುದ್ದಜ್ಜಿ ಮಾತನಾಡಿ, ಮಕ್ಕಳ ರಕ್ಷಣೆ ಹಾಗೂ ಸುರಕ್ಷತೆಗಾಗಿ ಮಹಾನಗರ ಪಾಲಿಕೆ ಬದ್ದವಾಗಿದ್ದು, ಪಾಲಿಕೆಯ ವ್ಯಾಪ್ತಿಗೆ ಬರುವ ಎಲ್ಲಾ ಶಾಲಾ-ಕಾಲೇಜುಗಳ ಬಳಿ ರಸ್ತೆ ತಡೆಯನ್ನು ಹಾಕಿ ನಾಮಫಲಕಗಳನ್ನು ಹಾಕಲು ಕ್ರಮ ಕೈಗೊಳ್ಳುತ್ತೇವೆ ಎಂದರು.

ರೈಲ್ವೆ ಪೊಲೀಸ್ ಅಧಿಕಾರಿ ಮಾತನಾಡಿ, ಕಳೆದೆರಡು ವರ್ಷಗಳಲ್ಲಿ ಮನೆ ಬಿಟ್ಟು ಓಡಿಹೋಗುತ್ತಿದ್ದ ಸುಮಾರು 800 ಮಕ್ಕಳನ್ನು ರೈಲು ನಿಲ್ದಾಣದಲ್ಲಿ ಪತ್ತೆಹಚ್ಚಿ, ಅವರಿಗೆ ಕೌನ್ಸಲಿಂಗ್ ನಡೆಸಿ ಅವರನ್ನು ಪೋಷಕರಿಗೆ ಒಪ್ಪಿಸಲಾಗಿದೆ ಎಂದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್.ಎಮ್ ಮಾತನಾಡಿ, ಇತ್ತೀಚೆಗೆ ಮಕ್ಕಳು ಮನೆ ಬಿಟ್ಟು ಹೋಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಪೋಷಕರು ಮಕ್ಕಳ ಮೇಲೆ ಒತ್ತಡ ಹಾಕುವುದನ್ನು ನಿಲ್ಲಿಸಿ, ಅವರ ಆಸಕ್ತಿಯ ಕ್ಷೇತ್ರಗಳಲ್ಲಿ ಬೆಳೆಯಲು ಬಿಡಬೇಕು. ಶಿಕ್ಷಕರು ಮಕ್ಕಳಲ್ಲಿರುವ ವಿಶೇಷ ಆಸಕ್ತಿ ಗುರುತಿಸಿ ಪೋಷಕರಿಗೆ ತಿಳಿಸುವ ಪ್ರಯತ್ನ ಮಾಡಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ಮಾತನಾಡಿ, ಈ ಮೊದಲು ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನನಗೆ ಈ ಹುದ್ದೆ ದೊರಕಿದ ಮೇಲೆ ಮಕ್ಕಳ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಒಳ್ಳೆಯ ಅವಕಾಶ ದೊರೆತಿದೆ. ಇಂದಿಗೂ ಅನೇಕ ಮಕ್ಕಳು ಸಂಕಷ್ಠದಲ್ಲಿದ್ದಾರೆ ಅವರನ್ನು ಗುರುತಿಸಿ ಸಹಾಯ ಮಾಡುವ ಅಭಿಲಾಶೆ ಇದೆ ಎಂದರು.

ಕಾರ್ಯಕ್ರಮದಲ್ಲಿ ಮಕ್ಕಳ ಸ್ನೇಹಿ ಅಧಿಕಾರಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ಅವರಿಗೆ ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿಗಳಿಂದ ಪುಸ್ತಕ ಬಿಡುಗಡೆ : ‘ಮಕ್ಕಳಿಗಾಗಿ ಮಕ್ಕಳ ಹಕ್ಕು’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ಜಿಲ್ಲಾಧಿಕಾರಿಗಳು, ಮಕ್ಕಳಿಗಾಗಿ ಇಂತಹ ಪುಸ್ತಕವನ್ನು ಹೊರತರುತ್ತಿರುವುದು ಶ್ಲಾಘನೀಯ. ನಾವು ಕೂಡ ಸರ್ಕಾರಕ್ಕೆ ಪುಸ್ತಕ ಬಿಡುಗಡೆ ಮಾಡಲು ಶಿಫಾರಸ್ಸು ಮಾಡುತ್ತೇವೆ ಎಂದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಕೌಸರ್ ರೇಷ್ಮಾ, ಅಲ್ಪ ಸಂಖ್ಯಾತರ ಇಲಾಖೆಯ ಅಧಿಕಾರಿ ಬಿದರಿ, ಪರಿಶಿಷ್ಠ ಪಂಗಡ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ ನಾಯ್ಕ. ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಅಶೋಕ್‍ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ರಾಜ್ಯ ವಕೀಲರ ಸಂಘದ ಸದಸ್ಯರಾದ ಅರುಣ್ ಕುಮಾರ್ ಎಲ್.ಹೆಚ್, ಬ್ರೆಡ್ಸ್ ಸಂಸ್ಥೆ, ಕ್ರೀಮ್ ಯೋಜನೆ ಕಾರ್ಯಕಾರಿ ನಿರ್ದೇಶಕ ಫಾ. ಜಾಯ್ ನೆಡುಂಪರಂಬಿಲ್, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending