Connect with us

ದಿನದ ಸುದ್ದಿ

ದಾವಣಗೆರೆ | ಅಪರ ಜಿಲ್ಲಾಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಜನರ ಹಾಗೂ ಅಧಿಕಾರಿಗಳ ಪ್ರೀತಿ ಗಳಿಸಿ ಅತ್ಯುತ್ತಮ ಸೇವೆ ಸಲ್ಲಿಸಿದ ಕೀರ್ತಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಬುಧವಾರ ಜಿಲ್ಲಾಡಳಿತ ಭವನದ ತುಂಗಾಭದ್ರ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಪರ ಜಿಲ್ಲಾಧಿಕಾರಿಗಳ ಬೀಳ್ಕೊಡುಗೆ ಹಾಗೂ ನೂತನ ಅಪರ ಜಿಲ್ಲಾಧಿಕಾರಿಗಳ ಸ್ವಾಗತ ಸಮಾರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಎಲ್ಲಾ ಇಲಾಖೆಯ ಜೊತೆಗೆ ನಿಕಟ ಸಂಪರ್ಕವನ್ನು ಹೊಂದಿ, ಜಿಲ್ಲೆಗೆ ಒಳ್ಳೆಯ ಹೆಸರನ್ನು ತರುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿ ಜಿಲ್ಲಾಡಳಿಕ್ಕೆ ಉತ್ತಮ ಹೆಸರು ಬರಲು ಪೂಜಾರ್ ವೀರಮಲ್ಲಪ್ಪ ಅವರು ಕಾರಣರಾಗಿದ್ದಾರೆ. ಕೋವಿಡ್ ಸಮಯದಲ್ಲಿ ಅವರಿಗೆ ಆರೋಗ್ಯದಲ್ಲಿ ಏರುಪೇರು ಆದರೂ ಸಹ ಅಧಿಕಾರಿಗಳ ಜೊತೆಗೆ ಬೇರೆತು ಜಿಲ್ಲೆಯಲ್ಲಿ ಕೊವೀಡ್ ನಿಯಂತ್ರಣಕ್ಕಾಗಿ ಉತ್ತಮ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದರು.

ನಿಕಟಪೂರ್ವ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಮಾತನಾಡಿ, ಜಿಲ್ಲೆಗೆ 2020 ರ ಜನವರಿಯಲ್ಲಿ ಮೊದಲು ಅಧಿಕಾರಕ್ಕೆ ಬಂದ ನಂತರ ಮಾನ್ಯ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಸಿಬ್ಬಂದಿಗಳ ಸಹಕಾರದಿಂದ ಜಿಲ್ಲೆಯಲ್ಲಿ ಉತ್ತಮವಾದ ಕೆಲಸ ನಿರ್ವಹಿಸಿರುವ ತೃಪ್ತಿ ನನಗಿದೆ ಎಂದರು.

ಜಿಲ್ಲೆಯ ಅಧಿಕಾರಿಗಳೆಲ್ಲರೂ ಕುಟುಂಬದವರ ರೀತಿಯಲ್ಲಿ ಇದ್ದೆವು ಇಲ್ಲಿ ಬಿಟ್ಟು ಹೋಗ್ತಾ ಇರುವುದು ದುಃಖವಾಗಿದೆ. ಕಚೇರಿಯ ಸಿಬ್ಬಂದಿಗಳು ತಾವು ತೋರಿದ ಪ್ರೀತಿಗೆ ನಾನು ಯಾವತ್ತೂ ಚಿರಋಣಿಯಾಗಿರುತ್ತೇನೆ. ಇಲ್ಲಿ ಬಹಳ ಅನುಭವಗಳನ್ನು ಪಡೆದು ನಿಮ್ಮೆಲ್ಲರ ಪ್ರೀತಿಗೆ ಆಭಾರಿಯಾಗಿದ್ದೇನೆ ಎಂದು ಭಾವುಕರಾದರು.

ನೂತನವಾಗಿ ಅಧಿಕಾರ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಮಾತನಾಡಿ, ಮುಂಚೆ ಇದ್ದ ಅಧಿಕಾರಿಗಳಿಗೆ ಹೇಗೆ ಸಹಕರಿಸಿದ್ದಿರೋ ಹಾಗೆಯೇ ಮುಂದೆ ನನ್ನ ಜೊತೆಗೂ ಕೂಡ ಒಡನಾಟ ಹೀಗೆ ಇರಲಿ, ಎಲ್ಲರೂ ಸೇರಿ ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಉತ್ತಮ ಹೆಸರು ತರುವ ಕೆಲಸವನ್ನು ಮಾಡೋಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಿಯುಡಿಸಿ ಅಧಿಕಾರಿ ನಜ್ಮಾ, ಹೊನ್ನಾಳಿ ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ, ಡಿಹೆಚ್‍ಒ ಡಾ. ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಹೊನ್ನಾಳಿ ತಹಶೀಲ್ದಾರ್ ರಶ್ಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಪಾಲಾಕ್ಷಿ ಅವರುಗಳು ತಮ್ಮ ಅಭಿಪ್ರಾಯ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ದೂಢಾ ಆಯುಕ್ತರಾದ ಕುಮಾರಸ್ವಾಮಿ ಸೇರಿದಂತೆ ವಿವಿಧ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending