Connect with us

ದಿನದ ಸುದ್ದಿ

ದಾವಣಗೆರೆ | ಗ್ರಾ.ಪಂ ಚುನಾವಣೆಯ ಸಂಪೂರ್ಣ ವಿವರ

Published

on

ಸುದ್ದಿದಿನ,ದಾವಣಗೆರೆ : ಮೊದಲ ಹಂತದ ಗ್ರಾ.ಪಂ ಸಾರ್ವತ್ರಿಕ ಚುನಾವಣೆಯು ಜಿಲ್ಲೆಯ ದಾವಣಗೆರೆ, ಹೊನ್ನಾಳಿ ಮತ್ತು ಜಗಳೂರು ತಾಲ್ಲೂಕಿನ ಗ್ರಾ.ಪಂಗಳಲ್ಲಿ ಡಿ.22 ರಂದು ನಡೆಯಲಿದ್ದು ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದ ವಿವರಗಳು ಈ ಕೆಳಕಂಡಂತೆ ಇದೆ.

ಮೊದಲನೇ ಹಂತ

ದಾವಣಗೆರೆ ತಾಲ್ಲೂಕಿನ 38 ಗ್ರಾ.ಪಂ ಗಳಿಗೆ ಚುನಾವಣೆ ನಡೆಯಲಿದ್ದು ಒಟ್ಟು 275 ಮತಗಟ್ಟೆಗಳ ಪೈಕಿ 260 ಮತಗಟ್ಟೆಗಳಲ್ಲಿ, ಹೊನ್ನಾಳಿ ತಾಲ್ಲೂಕಿನ 28 ಗ್ರಾ.ಪಂ ಗಳ ಒಟ್ಟು 153 ಮತಗಟ್ಟೆಗಳ ಪೈಕಿ 147 ಮತಗಟ್ಟೆಗಳಲ್ಲಿ ಹಾಗೂ ಜಗಳೂರು ತಾಲ್ಲೂಕಿನ 22 ಗ್ರಾ.ಪಂ ಗಳ ಒಟ್ಟು 219 ಮತಗಟ್ಟೆಗಳ ಪೈಕಿ 172 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಒಟ್ಟಾರೆ 88 ಗ್ರಾ.ಪಂ ಗಳ 647 ಮತಗಟ್ಟೆಗಳ ಪೈಕಿ 579 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.

ದಾವಣಗೆರೆ ತಾಲ್ಲೂಕಿನ 38 ಗ್ರಾ.ಪಂಗಳಲ್ಲಿ 281 ಸಾಮಾನ್ಯ 300 ಮಹಿಳೆ ಒಟ್ಟು 581 ಸ್ಥಾನಗಳಿವೆ. 80 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು 2 ಸ್ಥಾನಗಳು ನಾಮಪತ್ರ ಸಲ್ಲಿಸದೇ ಖಾಲಿ ಇದ್ದು ಒಟ್ಟು 499 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜಗಳೂರು ತಾಲ್ಲೂಕಿನ 22 ಗ್ರಾ.ಪಂ ಗಳಲ್ಲಿ 194 ಸಾಮಾನ್ಯ, 203 ಮಹಿಳೆ ಒಟ್ಟು 397 ಸ್ಥಾನಗಳಿದ್ದು 100 ಅವಿರೋಧ ಆಯ್ಕೆಯಾಗಿದ್ದು 297 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಹೊನ್ನಾಳಿ ತಾಲ್ಲೂಕಿನ 28 ಸ್ಥಾನಗಳಲ್ಲಿ 155 ಸಾಮಾನ್ಯ, 168 ಮಹಿಳೆ ಒಟ್ಟು 323 ಸ್ಥಾನಗಳಿದ್ದು 31 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು 1 ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಯಾಗಿಲ್ಲದೇ ಒಟ್ಟು 291 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟಾರೆ ಮೊದಲನೇ ಹಂತದಲ್ಲಿ 88 ಗ್ರಾ.ಪಂ 630 ಸಾಮಾನ್ಯ, 671 ಮಹಿಳೆ ಒಟ್ಟು 1301 ಸ್ಥಾನಗಳಲ್ಲಿ 211 ಅವಿರೋಧ ಆಯ್ಕೆ, 3 ಸ್ಥಾನಗಳಲ್ಲಿ ನಾಮಪತ್ರ ಸಲ್ಲಿಕೆ ಇಲ್ಲದೇ ಒಟ್ಟು 1087 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಎರಡನೇ ಹಂತ

ಹರಿಹರ ತಾಲ್ಲೂಕಿನ 23 ಗ್ರಾ.ಪಂ ಗಳಿಗೆ ಚುನಾವಣೆ ನಡೆಯಲಿದ್ದು 167 ಮತಗಟ್ಟೆ ಗಳ ಪೈಕಿ 152 ಮತಗಟ್ಟೆಗಳಲ್ಲಿ, ಚನ್ನಗಿರಿ ತಾಲ್ಲೂಕಿನ 61 ಗ್ರಾ.ಪಂ ಗಳ ಒಟ್ಟು 368 ಮತಗಟ್ಟೆಗಳ ಪೈಕಿ 343 ಮತಗಟ್ಟೆಗಳಲ್ಲಿ ಹಾಗೂ ನ್ಯಾಮತಿ ತಾಲ್ಲೂಕಿನ 17 ಗ್ರಾ.ಪಂ ಗಳ 97 ಮತಗಟ್ಟೆಗಳ ಪೈಕಿ 93 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಒಟ್ಟಾರೆ 101 ಗ್ರಾ.ಪಂ ಗಳ 632 ಮತಗಟ್ಟೆಗಳ ಪೈಕಿ 588 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.

ಹರಿಹರ ತಾಲ್ಲೂಕಿನ 23 ಗ್ರಾ.ಪಂ ಗಳಲ್ಲಿ 169 ಸಾಮಾನ್ಯ, 182 ಮಹಿಳೆ ಒಟ್ಟು 351 ಸ್ಥಾನಗಳ ಪೈಕಿ 55 ಅವಿರೋಧ ಆಯ್ಕೆ, 1 ನಾಮಪತ್ರ ಸಲ್ಲಿಕೆ ಇಲ್ಲ ಸೇರಿ ಒಟ್ಟು 295 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನ್ಯಾಮತಿಯಲ್ಲಿ 17 ಗ್ರಾ.ಪಂ ಗಳಲ್ಲಿ 94 ಸಾಮಾನ್ಯ 102 ಮಹಿಳೆ ಒಟ್ಟು 196 ಸ್ಥಾನಗಳ ಪೈಕಿ 15 ಅವಿರೋಧ ಆಯ್ಕೆ 5 ನಾಮಪತ್ರ ಸಲ್ಲಿಕೆ ಇಲ್ಲದೇ ಒಟ್ಟು 176 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 61 ಗ್ರಾ.ಪಂ ಗಳಲ್ಲಿ 354 ಸಾಮಾನ್ಯ, 381 ಮಹಿಳೆ ಒಟ್ಟು 735 ಸ್ಥಾನಗಳ ಪೈಕಿ 93 ಅವಿರೋಧ ಆಯ್ಕೆಯಾಗಿದ್ದು ಒಟ್ಟು 642 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ ಒಟ್ಟಾರೆ 101 ಗ್ರಾ.ಪಂ ಗಳ 617 ಸಾಮಾನ್ಯ, 665 ಮಹಿಳೆ ಸೇರಿ ಒಟ್ಟು 1285 ಸ್ಥಾನಗಳ ಪೈಕಿ 163 ಅಭ್ಯರ್ಥಿಗಳ ಅವಿರೋಧ ಆಯ್ಕೆ, 6 ಸ್ಥಾನಗಳಲ್ಲಿ ನಾಮಪತ್ರ ಸಲ್ಲಿಕೆಯಾಗದೇ ಒಟ್ಟು 1113 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಅಂತಿಮವಾಗಿ ಚುನಾವಣೆ ನಡೆಯುವ ಮತದಾರರ ವಿವರ

ದಾವಣಗೆರೆ ತಾಲ್ಲೂಕಿನಲ್ಲಿ ಮತದಾನ ಮಾಡುವ ಮತದಾರರ ಸಂಖ್ಯೆ ಪುರುಷ 85731, ಮಹಿಳೆ 85039, ಒಟ್ಟು 170770. ಹೊನ್ನಾಳಿ ತಾಲ್ಲೂಕು ಪುರುಷ ಸಂಖ್ಯೆ 49992, ಮಹಿಳೆ 49093, ಒಟ್ಟು 99085. ಜಗಳೂರು ಪುರುಷ 54729, ಮಹಿಳೆ 53506, ಒಟ್ಟು 108235. ಈ ಎಲ್ಲಾ ತಾಲ್ಲೂಕಿನ ಒಟ್ಟು ಪುರುಷರ ಸಂಖ್ಯೆ 190452, ಮಹಿಳೆಯ ಸಂಖ್ಯೆ 187638, ಒಟ್ಟು 378090 ಇರುತ್ತದೆ.

ನ್ಯಾಮತಿ ತಾಲ್ಲೂಕಿನ ಗುಡ್ಡಹಳ್ಳಿ ಗ್ರಾಮ ಪಂಚಾಯಿತಿಯ ಜೀನಹಳ್ಳಿ ಕ್ಷೇತ್ರದ 5 ಸ್ಥಾನಗಳಿಗೆ ಯಾವುದೇ ನಾಮಪತ್ರಗಳು ಸ್ವೀಕೃತವಾಗಿರುವುದಿಲ್ಲ. ಹರಿಹರ ತಾಲ್ಲೂಕಿನ ಎಳೆಹೊಳೆ ಗ್ರಾಮ ಪಂಚಾಯಿತಿ ಮಳಲಹಳ್ಳಿ 01 ಸ್ಥಾನಕ್ಕೆ ನಾಮಪತ್ರ ಸ್ವೀಕೃತವಾಗಿರುವುದಿಲ್ಲ.

 

ದಾವಣಗೆರೆ ತಾಲ್ಲೂಕಿನ ಪಿ.ಆರ್.ಓ ಸಂಖ್ಯೆ 330, ಎ.ಪಿ.ಆರ್.ಓ 330, ಪಿ.ಓ 660, ಒಟ್ಟು 1320. ಜಗಳೂರು ತಾಲ್ಲೂಕಿನ ಪಿ.ಆರ್.ಓ ಸಂಖ್ಯೆ 263, ಎ.ಪಿ.ಆರ್.ಓ 263, ಪಿ.ಓ 526, ಒಟ್ಟು 1052. ಹೊನ್ನಾಳಿ ತಾಲ್ಲೂಕಿನ ಪಿ.ಆರ್.ಓ ಸಂಖ್ಯೆ 184, ಎ.ಪಿ.ಆರ್.ಓ 184, ಪಿ.ಓ 368, ಒಟ್ಟು 736. ಇರುತ್ತದೆ.

ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ವಿವರ

ದಾವಣಗೆರೆ ತಾಲ್ಲೂಕಿಗೆ ಚುನಾವಣಾಧಿಕಾರಿ 38, ಸಹಾಯಕ ಚುನಾವಣಾಧಿಕಾರಿ 38, ಸೆಕ್ಟರ್ ಅಧಿಕಾರಿಗಳು 14. ಹರಿಹರ ತಾಲ್ಲೂಕಿಗೆ ಚುನಾವಣಾಧಿಕಾರಿ 24, ಸಹಾಯಕ ಚುನಾವಣಾಧಿಕಾರಿ 25, ಸೆಕ್ಟರ್ ಅಧಿಕಾರಿಗಳು 07. ಹೊನ್ನಾಳಿ ತಾಲ್ಲೂಕಿಗೆ ಚುನಾವಣಾಧಿಕಾರಿ 29, ಸಹಾಯಕ ಚುನಾವಣಾಧಿಕಾರಿ 29, ಸೆಕ್ಟರ್ ಅಧಿಕಾರಿಗಳು 10.

ನ್ಯಾಮತಿ ತಾಲ್ಲೂಕಿಗೆ ಚುನಾವಣಾಧಿಕಾರಿ 17, ಸಹಾಯಕ ಚುನಾವಣಾಧಿಕಾರಿ 17, ಸೆಕ್ಟರ್ ಅಧಿಕಾರಿಗಳು 08. ಚನ್ನಗಿರಿ ತಾಲ್ಲೂಕಿಗೆ ಚುನಾವಣಾಧಿಕಾರಿ 61, ಸಹಾಯಕ ಚುನಾವಣಾಧಿಕಾರಿ 64, ಸೆಕ್ಟರ್ ಅಧಿಕಾರಿಗಳು 16. ದಾವಣಗೆರೆ ತಾಲ್ಲೂಕಿಗೆ ಚುನಾವಣಾಧಿಕಾರಿ 38, ಸಹಾಯಕ ಚುನಾವಣಾಧಿಕಾರಿ 38, ಸೆಕ್ಟರ್ ಅಧಿಕಾರಿಗಳು 14. ಜಗಳೂರು ತಾಲ್ಲೂಕಿಗೆ ಚುನಾವಣಾಧಿಕಾರಿ 22, ಸಹಾಯಕ ಚುನಾವಣಾಧಿಕಾರಿ 23, ಸೆಕ್ಟರ್ ಅಧಿಕಾರಿಗಳು 08. ಈ ಎಲ್ಲಾ ತಾಲ್ಲೂಕಿನ ಒಟ್ಟು ಚುನಾವಣಾಧಿಕಾರಿ 191, ಸಹಾಯಕ ಚುನಾವಣಾಧಿಕಾರಿ 196, ಸೆಕ್ಟರ್ ಅಧಿಕಾರಿ 63.

ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್, ಭದ್ರತಾ ಕೊಠಡಿ ಮತ್ತು ಮತ ಎಣಿಕೆ ಕೇಂದ್ರ ವಿವರ

ದಾವಣಗೆರೆ ತಾಲ್ಲೂಕಿನಲ್ಲಿ ಮೋತಿ ವೀರಪ್ಪ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು, ದಾವಣಗೆರೆ. ಜಗಳೂರು ತಾಲ್ಲೂಕಿನಲ್ಲಿ ಸರ್ಕಾರಿ ಜ್ಯೂನಿಯರ್ ಕಾಲೇಜ್, ಜಗಳೂರು. ಹೊನ್ನಾಳಿ ತಾಲ್ಲೂಕಿನಲ್ಲಿ ಶ್ರೀಮತಿ ಗಂಗಮ್ಮ ಶ್ರೀ ವೀರಭದ್ರಶಾಸ್ತ್ರಿ ಕೈಗಾರಿಕಾ ತರಬೇತಿ ಕೇಂದ್ರ ಹಿರೇಕಲ್ಮಠ, ಹೊನ್ನಾಳಿ. ನ್ಯಾಮತಿ ತಾಲ್ಲೂಕಿನಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಶಿವಾನಂದಪ್ಪ ಬಡಾವಣೆ ರಸ್ತೆ, ನ್ಯಾಮತಿ. ಹರಿಹರ ತಾಲ್ಲೂಕಿನಲ್ಲಿ ಸೇಂಟ್ ಮೇರಿಸ್ ಕಾನ್ವೆಂಟ್ ಶಾಲೆ, ಹರಪನಹಳ್ಳಿ ರಸ್ತೆ, ಹರಿಹರ ತಾಲ್ಲೂಕು. ಚನ್ನಗಿರಿ ತಾಲ್ಲೂಕಿನ ಸರ್ಕಾರಿ ಪದವಿಪೂರ್ವ ಕಾಲೇಜು, ಚನ್ನಗಿರಿ ಇಲ್ಲಿ ಮತ ಎಣಿಕೆ ಕೇಂದ್ರ ಸ್ಥಾಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending