ದಿನದ ಸುದ್ದಿ
ದಾವಣಗೆರೆ | ಗ್ರಾ.ಪಂ ಚುನಾವಣೆಯ ಸಂಪೂರ್ಣ ವಿವರ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/08/election_voters_suddidina.jpg&description=ದಾವಣಗೆರೆ | ಗ್ರಾ.ಪಂ ಚುನಾವಣೆಯ ಸಂಪೂರ್ಣ ವಿವರ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/08/election_voters_suddidina.jpg&description=ದಾವಣಗೆರೆ | ಗ್ರಾ.ಪಂ ಚುನಾವಣೆಯ ಸಂಪೂರ್ಣ ವಿವರ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ : ಮೊದಲ ಹಂತದ ಗ್ರಾ.ಪಂ ಸಾರ್ವತ್ರಿಕ ಚುನಾವಣೆಯು ಜಿಲ್ಲೆಯ ದಾವಣಗೆರೆ, ಹೊನ್ನಾಳಿ ಮತ್ತು ಜಗಳೂರು ತಾಲ್ಲೂಕಿನ ಗ್ರಾ.ಪಂಗಳಲ್ಲಿ ಡಿ.22 ರಂದು ನಡೆಯಲಿದ್ದು ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದ ವಿವರಗಳು ಈ ಕೆಳಕಂಡಂತೆ ಇದೆ.
ಮೊದಲನೇ ಹಂತ
ದಾವಣಗೆರೆ ತಾಲ್ಲೂಕಿನ 38 ಗ್ರಾ.ಪಂ ಗಳಿಗೆ ಚುನಾವಣೆ ನಡೆಯಲಿದ್ದು ಒಟ್ಟು 275 ಮತಗಟ್ಟೆಗಳ ಪೈಕಿ 260 ಮತಗಟ್ಟೆಗಳಲ್ಲಿ, ಹೊನ್ನಾಳಿ ತಾಲ್ಲೂಕಿನ 28 ಗ್ರಾ.ಪಂ ಗಳ ಒಟ್ಟು 153 ಮತಗಟ್ಟೆಗಳ ಪೈಕಿ 147 ಮತಗಟ್ಟೆಗಳಲ್ಲಿ ಹಾಗೂ ಜಗಳೂರು ತಾಲ್ಲೂಕಿನ 22 ಗ್ರಾ.ಪಂ ಗಳ ಒಟ್ಟು 219 ಮತಗಟ್ಟೆಗಳ ಪೈಕಿ 172 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಒಟ್ಟಾರೆ 88 ಗ್ರಾ.ಪಂ ಗಳ 647 ಮತಗಟ್ಟೆಗಳ ಪೈಕಿ 579 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.
ದಾವಣಗೆರೆ ತಾಲ್ಲೂಕಿನ 38 ಗ್ರಾ.ಪಂಗಳಲ್ಲಿ 281 ಸಾಮಾನ್ಯ 300 ಮಹಿಳೆ ಒಟ್ಟು 581 ಸ್ಥಾನಗಳಿವೆ. 80 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು 2 ಸ್ಥಾನಗಳು ನಾಮಪತ್ರ ಸಲ್ಲಿಸದೇ ಖಾಲಿ ಇದ್ದು ಒಟ್ಟು 499 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜಗಳೂರು ತಾಲ್ಲೂಕಿನ 22 ಗ್ರಾ.ಪಂ ಗಳಲ್ಲಿ 194 ಸಾಮಾನ್ಯ, 203 ಮಹಿಳೆ ಒಟ್ಟು 397 ಸ್ಥಾನಗಳಿದ್ದು 100 ಅವಿರೋಧ ಆಯ್ಕೆಯಾಗಿದ್ದು 297 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಹೊನ್ನಾಳಿ ತಾಲ್ಲೂಕಿನ 28 ಸ್ಥಾನಗಳಲ್ಲಿ 155 ಸಾಮಾನ್ಯ, 168 ಮಹಿಳೆ ಒಟ್ಟು 323 ಸ್ಥಾನಗಳಿದ್ದು 31 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು 1 ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಯಾಗಿಲ್ಲದೇ ಒಟ್ಟು 291 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟಾರೆ ಮೊದಲನೇ ಹಂತದಲ್ಲಿ 88 ಗ್ರಾ.ಪಂ 630 ಸಾಮಾನ್ಯ, 671 ಮಹಿಳೆ ಒಟ್ಟು 1301 ಸ್ಥಾನಗಳಲ್ಲಿ 211 ಅವಿರೋಧ ಆಯ್ಕೆ, 3 ಸ್ಥಾನಗಳಲ್ಲಿ ನಾಮಪತ್ರ ಸಲ್ಲಿಕೆ ಇಲ್ಲದೇ ಒಟ್ಟು 1087 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಎರಡನೇ ಹಂತ
ಹರಿಹರ ತಾಲ್ಲೂಕಿನ 23 ಗ್ರಾ.ಪಂ ಗಳಿಗೆ ಚುನಾವಣೆ ನಡೆಯಲಿದ್ದು 167 ಮತಗಟ್ಟೆ ಗಳ ಪೈಕಿ 152 ಮತಗಟ್ಟೆಗಳಲ್ಲಿ, ಚನ್ನಗಿರಿ ತಾಲ್ಲೂಕಿನ 61 ಗ್ರಾ.ಪಂ ಗಳ ಒಟ್ಟು 368 ಮತಗಟ್ಟೆಗಳ ಪೈಕಿ 343 ಮತಗಟ್ಟೆಗಳಲ್ಲಿ ಹಾಗೂ ನ್ಯಾಮತಿ ತಾಲ್ಲೂಕಿನ 17 ಗ್ರಾ.ಪಂ ಗಳ 97 ಮತಗಟ್ಟೆಗಳ ಪೈಕಿ 93 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಒಟ್ಟಾರೆ 101 ಗ್ರಾ.ಪಂ ಗಳ 632 ಮತಗಟ್ಟೆಗಳ ಪೈಕಿ 588 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.
ಹರಿಹರ ತಾಲ್ಲೂಕಿನ 23 ಗ್ರಾ.ಪಂ ಗಳಲ್ಲಿ 169 ಸಾಮಾನ್ಯ, 182 ಮಹಿಳೆ ಒಟ್ಟು 351 ಸ್ಥಾನಗಳ ಪೈಕಿ 55 ಅವಿರೋಧ ಆಯ್ಕೆ, 1 ನಾಮಪತ್ರ ಸಲ್ಲಿಕೆ ಇಲ್ಲ ಸೇರಿ ಒಟ್ಟು 295 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನ್ಯಾಮತಿಯಲ್ಲಿ 17 ಗ್ರಾ.ಪಂ ಗಳಲ್ಲಿ 94 ಸಾಮಾನ್ಯ 102 ಮಹಿಳೆ ಒಟ್ಟು 196 ಸ್ಥಾನಗಳ ಪೈಕಿ 15 ಅವಿರೋಧ ಆಯ್ಕೆ 5 ನಾಮಪತ್ರ ಸಲ್ಲಿಕೆ ಇಲ್ಲದೇ ಒಟ್ಟು 176 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 61 ಗ್ರಾ.ಪಂ ಗಳಲ್ಲಿ 354 ಸಾಮಾನ್ಯ, 381 ಮಹಿಳೆ ಒಟ್ಟು 735 ಸ್ಥಾನಗಳ ಪೈಕಿ 93 ಅವಿರೋಧ ಆಯ್ಕೆಯಾಗಿದ್ದು ಒಟ್ಟು 642 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ ಒಟ್ಟಾರೆ 101 ಗ್ರಾ.ಪಂ ಗಳ 617 ಸಾಮಾನ್ಯ, 665 ಮಹಿಳೆ ಸೇರಿ ಒಟ್ಟು 1285 ಸ್ಥಾನಗಳ ಪೈಕಿ 163 ಅಭ್ಯರ್ಥಿಗಳ ಅವಿರೋಧ ಆಯ್ಕೆ, 6 ಸ್ಥಾನಗಳಲ್ಲಿ ನಾಮಪತ್ರ ಸಲ್ಲಿಕೆಯಾಗದೇ ಒಟ್ಟು 1113 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಅಂತಿಮವಾಗಿ ಚುನಾವಣೆ ನಡೆಯುವ ಮತದಾರರ ವಿವರ
ದಾವಣಗೆರೆ ತಾಲ್ಲೂಕಿನಲ್ಲಿ ಮತದಾನ ಮಾಡುವ ಮತದಾರರ ಸಂಖ್ಯೆ ಪುರುಷ 85731, ಮಹಿಳೆ 85039, ಒಟ್ಟು 170770. ಹೊನ್ನಾಳಿ ತಾಲ್ಲೂಕು ಪುರುಷ ಸಂಖ್ಯೆ 49992, ಮಹಿಳೆ 49093, ಒಟ್ಟು 99085. ಜಗಳೂರು ಪುರುಷ 54729, ಮಹಿಳೆ 53506, ಒಟ್ಟು 108235. ಈ ಎಲ್ಲಾ ತಾಲ್ಲೂಕಿನ ಒಟ್ಟು ಪುರುಷರ ಸಂಖ್ಯೆ 190452, ಮಹಿಳೆಯ ಸಂಖ್ಯೆ 187638, ಒಟ್ಟು 378090 ಇರುತ್ತದೆ.
ನ್ಯಾಮತಿ ತಾಲ್ಲೂಕಿನ ಗುಡ್ಡಹಳ್ಳಿ ಗ್ರಾಮ ಪಂಚಾಯಿತಿಯ ಜೀನಹಳ್ಳಿ ಕ್ಷೇತ್ರದ 5 ಸ್ಥಾನಗಳಿಗೆ ಯಾವುದೇ ನಾಮಪತ್ರಗಳು ಸ್ವೀಕೃತವಾಗಿರುವುದಿಲ್ಲ. ಹರಿಹರ ತಾಲ್ಲೂಕಿನ ಎಳೆಹೊಳೆ ಗ್ರಾಮ ಪಂಚಾಯಿತಿ ಮಳಲಹಳ್ಳಿ 01 ಸ್ಥಾನಕ್ಕೆ ನಾಮಪತ್ರ ಸ್ವೀಕೃತವಾಗಿರುವುದಿಲ್ಲ.
ದಾವಣಗೆರೆ ತಾಲ್ಲೂಕಿನ ಪಿ.ಆರ್.ಓ ಸಂಖ್ಯೆ 330, ಎ.ಪಿ.ಆರ್.ಓ 330, ಪಿ.ಓ 660, ಒಟ್ಟು 1320. ಜಗಳೂರು ತಾಲ್ಲೂಕಿನ ಪಿ.ಆರ್.ಓ ಸಂಖ್ಯೆ 263, ಎ.ಪಿ.ಆರ್.ಓ 263, ಪಿ.ಓ 526, ಒಟ್ಟು 1052. ಹೊನ್ನಾಳಿ ತಾಲ್ಲೂಕಿನ ಪಿ.ಆರ್.ಓ ಸಂಖ್ಯೆ 184, ಎ.ಪಿ.ಆರ್.ಓ 184, ಪಿ.ಓ 368, ಒಟ್ಟು 736. ಇರುತ್ತದೆ.
ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ವಿವರ
ದಾವಣಗೆರೆ ತಾಲ್ಲೂಕಿಗೆ ಚುನಾವಣಾಧಿಕಾರಿ 38, ಸಹಾಯಕ ಚುನಾವಣಾಧಿಕಾರಿ 38, ಸೆಕ್ಟರ್ ಅಧಿಕಾರಿಗಳು 14. ಹರಿಹರ ತಾಲ್ಲೂಕಿಗೆ ಚುನಾವಣಾಧಿಕಾರಿ 24, ಸಹಾಯಕ ಚುನಾವಣಾಧಿಕಾರಿ 25, ಸೆಕ್ಟರ್ ಅಧಿಕಾರಿಗಳು 07. ಹೊನ್ನಾಳಿ ತಾಲ್ಲೂಕಿಗೆ ಚುನಾವಣಾಧಿಕಾರಿ 29, ಸಹಾಯಕ ಚುನಾವಣಾಧಿಕಾರಿ 29, ಸೆಕ್ಟರ್ ಅಧಿಕಾರಿಗಳು 10.
ನ್ಯಾಮತಿ ತಾಲ್ಲೂಕಿಗೆ ಚುನಾವಣಾಧಿಕಾರಿ 17, ಸಹಾಯಕ ಚುನಾವಣಾಧಿಕಾರಿ 17, ಸೆಕ್ಟರ್ ಅಧಿಕಾರಿಗಳು 08. ಚನ್ನಗಿರಿ ತಾಲ್ಲೂಕಿಗೆ ಚುನಾವಣಾಧಿಕಾರಿ 61, ಸಹಾಯಕ ಚುನಾವಣಾಧಿಕಾರಿ 64, ಸೆಕ್ಟರ್ ಅಧಿಕಾರಿಗಳು 16. ದಾವಣಗೆರೆ ತಾಲ್ಲೂಕಿಗೆ ಚುನಾವಣಾಧಿಕಾರಿ 38, ಸಹಾಯಕ ಚುನಾವಣಾಧಿಕಾರಿ 38, ಸೆಕ್ಟರ್ ಅಧಿಕಾರಿಗಳು 14. ಜಗಳೂರು ತಾಲ್ಲೂಕಿಗೆ ಚುನಾವಣಾಧಿಕಾರಿ 22, ಸಹಾಯಕ ಚುನಾವಣಾಧಿಕಾರಿ 23, ಸೆಕ್ಟರ್ ಅಧಿಕಾರಿಗಳು 08. ಈ ಎಲ್ಲಾ ತಾಲ್ಲೂಕಿನ ಒಟ್ಟು ಚುನಾವಣಾಧಿಕಾರಿ 191, ಸಹಾಯಕ ಚುನಾವಣಾಧಿಕಾರಿ 196, ಸೆಕ್ಟರ್ ಅಧಿಕಾರಿ 63.
ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್, ಭದ್ರತಾ ಕೊಠಡಿ ಮತ್ತು ಮತ ಎಣಿಕೆ ಕೇಂದ್ರ ವಿವರ
ದಾವಣಗೆರೆ ತಾಲ್ಲೂಕಿನಲ್ಲಿ ಮೋತಿ ವೀರಪ್ಪ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು, ದಾವಣಗೆರೆ. ಜಗಳೂರು ತಾಲ್ಲೂಕಿನಲ್ಲಿ ಸರ್ಕಾರಿ ಜ್ಯೂನಿಯರ್ ಕಾಲೇಜ್, ಜಗಳೂರು. ಹೊನ್ನಾಳಿ ತಾಲ್ಲೂಕಿನಲ್ಲಿ ಶ್ರೀಮತಿ ಗಂಗಮ್ಮ ಶ್ರೀ ವೀರಭದ್ರಶಾಸ್ತ್ರಿ ಕೈಗಾರಿಕಾ ತರಬೇತಿ ಕೇಂದ್ರ ಹಿರೇಕಲ್ಮಠ, ಹೊನ್ನಾಳಿ. ನ್ಯಾಮತಿ ತಾಲ್ಲೂಕಿನಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಶಿವಾನಂದಪ್ಪ ಬಡಾವಣೆ ರಸ್ತೆ, ನ್ಯಾಮತಿ. ಹರಿಹರ ತಾಲ್ಲೂಕಿನಲ್ಲಿ ಸೇಂಟ್ ಮೇರಿಸ್ ಕಾನ್ವೆಂಟ್ ಶಾಲೆ, ಹರಪನಹಳ್ಳಿ ರಸ್ತೆ, ಹರಿಹರ ತಾಲ್ಲೂಕು. ಚನ್ನಗಿರಿ ತಾಲ್ಲೂಕಿನ ಸರ್ಕಾರಿ ಪದವಿಪೂರ್ವ ಕಾಲೇಜು, ಚನ್ನಗಿರಿ ಇಲ್ಲಿ ಮತ ಎಣಿಕೆ ಕೇಂದ್ರ ಸ್ಥಾಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.
ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.
ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.
ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.
ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.
ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.
ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.
ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.
2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ3 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ3 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ6 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ5 hours agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

