ದಿನದ ಸುದ್ದಿ
ದಾವಣಗೆರೆ | ಗ್ರಾ.ಪಂ ಚುನಾವಣೆಯ ಸಂಪೂರ್ಣ ವಿವರ
ಸುದ್ದಿದಿನ,ದಾವಣಗೆರೆ : ಮೊದಲ ಹಂತದ ಗ್ರಾ.ಪಂ ಸಾರ್ವತ್ರಿಕ ಚುನಾವಣೆಯು ಜಿಲ್ಲೆಯ ದಾವಣಗೆರೆ, ಹೊನ್ನಾಳಿ ಮತ್ತು ಜಗಳೂರು ತಾಲ್ಲೂಕಿನ ಗ್ರಾ.ಪಂಗಳಲ್ಲಿ ಡಿ.22 ರಂದು ನಡೆಯಲಿದ್ದು ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದ ವಿವರಗಳು ಈ ಕೆಳಕಂಡಂತೆ ಇದೆ.
ಮೊದಲನೇ ಹಂತ
ದಾವಣಗೆರೆ ತಾಲ್ಲೂಕಿನ 38 ಗ್ರಾ.ಪಂ ಗಳಿಗೆ ಚುನಾವಣೆ ನಡೆಯಲಿದ್ದು ಒಟ್ಟು 275 ಮತಗಟ್ಟೆಗಳ ಪೈಕಿ 260 ಮತಗಟ್ಟೆಗಳಲ್ಲಿ, ಹೊನ್ನಾಳಿ ತಾಲ್ಲೂಕಿನ 28 ಗ್ರಾ.ಪಂ ಗಳ ಒಟ್ಟು 153 ಮತಗಟ್ಟೆಗಳ ಪೈಕಿ 147 ಮತಗಟ್ಟೆಗಳಲ್ಲಿ ಹಾಗೂ ಜಗಳೂರು ತಾಲ್ಲೂಕಿನ 22 ಗ್ರಾ.ಪಂ ಗಳ ಒಟ್ಟು 219 ಮತಗಟ್ಟೆಗಳ ಪೈಕಿ 172 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಒಟ್ಟಾರೆ 88 ಗ್ರಾ.ಪಂ ಗಳ 647 ಮತಗಟ್ಟೆಗಳ ಪೈಕಿ 579 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.
ದಾವಣಗೆರೆ ತಾಲ್ಲೂಕಿನ 38 ಗ್ರಾ.ಪಂಗಳಲ್ಲಿ 281 ಸಾಮಾನ್ಯ 300 ಮಹಿಳೆ ಒಟ್ಟು 581 ಸ್ಥಾನಗಳಿವೆ. 80 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು 2 ಸ್ಥಾನಗಳು ನಾಮಪತ್ರ ಸಲ್ಲಿಸದೇ ಖಾಲಿ ಇದ್ದು ಒಟ್ಟು 499 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜಗಳೂರು ತಾಲ್ಲೂಕಿನ 22 ಗ್ರಾ.ಪಂ ಗಳಲ್ಲಿ 194 ಸಾಮಾನ್ಯ, 203 ಮಹಿಳೆ ಒಟ್ಟು 397 ಸ್ಥಾನಗಳಿದ್ದು 100 ಅವಿರೋಧ ಆಯ್ಕೆಯಾಗಿದ್ದು 297 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಹೊನ್ನಾಳಿ ತಾಲ್ಲೂಕಿನ 28 ಸ್ಥಾನಗಳಲ್ಲಿ 155 ಸಾಮಾನ್ಯ, 168 ಮಹಿಳೆ ಒಟ್ಟು 323 ಸ್ಥಾನಗಳಿದ್ದು 31 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು 1 ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಯಾಗಿಲ್ಲದೇ ಒಟ್ಟು 291 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟಾರೆ ಮೊದಲನೇ ಹಂತದಲ್ಲಿ 88 ಗ್ರಾ.ಪಂ 630 ಸಾಮಾನ್ಯ, 671 ಮಹಿಳೆ ಒಟ್ಟು 1301 ಸ್ಥಾನಗಳಲ್ಲಿ 211 ಅವಿರೋಧ ಆಯ್ಕೆ, 3 ಸ್ಥಾನಗಳಲ್ಲಿ ನಾಮಪತ್ರ ಸಲ್ಲಿಕೆ ಇಲ್ಲದೇ ಒಟ್ಟು 1087 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಎರಡನೇ ಹಂತ
ಹರಿಹರ ತಾಲ್ಲೂಕಿನ 23 ಗ್ರಾ.ಪಂ ಗಳಿಗೆ ಚುನಾವಣೆ ನಡೆಯಲಿದ್ದು 167 ಮತಗಟ್ಟೆ ಗಳ ಪೈಕಿ 152 ಮತಗಟ್ಟೆಗಳಲ್ಲಿ, ಚನ್ನಗಿರಿ ತಾಲ್ಲೂಕಿನ 61 ಗ್ರಾ.ಪಂ ಗಳ ಒಟ್ಟು 368 ಮತಗಟ್ಟೆಗಳ ಪೈಕಿ 343 ಮತಗಟ್ಟೆಗಳಲ್ಲಿ ಹಾಗೂ ನ್ಯಾಮತಿ ತಾಲ್ಲೂಕಿನ 17 ಗ್ರಾ.ಪಂ ಗಳ 97 ಮತಗಟ್ಟೆಗಳ ಪೈಕಿ 93 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಒಟ್ಟಾರೆ 101 ಗ್ರಾ.ಪಂ ಗಳ 632 ಮತಗಟ್ಟೆಗಳ ಪೈಕಿ 588 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.
ಹರಿಹರ ತಾಲ್ಲೂಕಿನ 23 ಗ್ರಾ.ಪಂ ಗಳಲ್ಲಿ 169 ಸಾಮಾನ್ಯ, 182 ಮಹಿಳೆ ಒಟ್ಟು 351 ಸ್ಥಾನಗಳ ಪೈಕಿ 55 ಅವಿರೋಧ ಆಯ್ಕೆ, 1 ನಾಮಪತ್ರ ಸಲ್ಲಿಕೆ ಇಲ್ಲ ಸೇರಿ ಒಟ್ಟು 295 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನ್ಯಾಮತಿಯಲ್ಲಿ 17 ಗ್ರಾ.ಪಂ ಗಳಲ್ಲಿ 94 ಸಾಮಾನ್ಯ 102 ಮಹಿಳೆ ಒಟ್ಟು 196 ಸ್ಥಾನಗಳ ಪೈಕಿ 15 ಅವಿರೋಧ ಆಯ್ಕೆ 5 ನಾಮಪತ್ರ ಸಲ್ಲಿಕೆ ಇಲ್ಲದೇ ಒಟ್ಟು 176 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 61 ಗ್ರಾ.ಪಂ ಗಳಲ್ಲಿ 354 ಸಾಮಾನ್ಯ, 381 ಮಹಿಳೆ ಒಟ್ಟು 735 ಸ್ಥಾನಗಳ ಪೈಕಿ 93 ಅವಿರೋಧ ಆಯ್ಕೆಯಾಗಿದ್ದು ಒಟ್ಟು 642 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ ಒಟ್ಟಾರೆ 101 ಗ್ರಾ.ಪಂ ಗಳ 617 ಸಾಮಾನ್ಯ, 665 ಮಹಿಳೆ ಸೇರಿ ಒಟ್ಟು 1285 ಸ್ಥಾನಗಳ ಪೈಕಿ 163 ಅಭ್ಯರ್ಥಿಗಳ ಅವಿರೋಧ ಆಯ್ಕೆ, 6 ಸ್ಥಾನಗಳಲ್ಲಿ ನಾಮಪತ್ರ ಸಲ್ಲಿಕೆಯಾಗದೇ ಒಟ್ಟು 1113 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಅಂತಿಮವಾಗಿ ಚುನಾವಣೆ ನಡೆಯುವ ಮತದಾರರ ವಿವರ
ದಾವಣಗೆರೆ ತಾಲ್ಲೂಕಿನಲ್ಲಿ ಮತದಾನ ಮಾಡುವ ಮತದಾರರ ಸಂಖ್ಯೆ ಪುರುಷ 85731, ಮಹಿಳೆ 85039, ಒಟ್ಟು 170770. ಹೊನ್ನಾಳಿ ತಾಲ್ಲೂಕು ಪುರುಷ ಸಂಖ್ಯೆ 49992, ಮಹಿಳೆ 49093, ಒಟ್ಟು 99085. ಜಗಳೂರು ಪುರುಷ 54729, ಮಹಿಳೆ 53506, ಒಟ್ಟು 108235. ಈ ಎಲ್ಲಾ ತಾಲ್ಲೂಕಿನ ಒಟ್ಟು ಪುರುಷರ ಸಂಖ್ಯೆ 190452, ಮಹಿಳೆಯ ಸಂಖ್ಯೆ 187638, ಒಟ್ಟು 378090 ಇರುತ್ತದೆ.
ನ್ಯಾಮತಿ ತಾಲ್ಲೂಕಿನ ಗುಡ್ಡಹಳ್ಳಿ ಗ್ರಾಮ ಪಂಚಾಯಿತಿಯ ಜೀನಹಳ್ಳಿ ಕ್ಷೇತ್ರದ 5 ಸ್ಥಾನಗಳಿಗೆ ಯಾವುದೇ ನಾಮಪತ್ರಗಳು ಸ್ವೀಕೃತವಾಗಿರುವುದಿಲ್ಲ. ಹರಿಹರ ತಾಲ್ಲೂಕಿನ ಎಳೆಹೊಳೆ ಗ್ರಾಮ ಪಂಚಾಯಿತಿ ಮಳಲಹಳ್ಳಿ 01 ಸ್ಥಾನಕ್ಕೆ ನಾಮಪತ್ರ ಸ್ವೀಕೃತವಾಗಿರುವುದಿಲ್ಲ.
ದಾವಣಗೆರೆ ತಾಲ್ಲೂಕಿನ ಪಿ.ಆರ್.ಓ ಸಂಖ್ಯೆ 330, ಎ.ಪಿ.ಆರ್.ಓ 330, ಪಿ.ಓ 660, ಒಟ್ಟು 1320. ಜಗಳೂರು ತಾಲ್ಲೂಕಿನ ಪಿ.ಆರ್.ಓ ಸಂಖ್ಯೆ 263, ಎ.ಪಿ.ಆರ್.ಓ 263, ಪಿ.ಓ 526, ಒಟ್ಟು 1052. ಹೊನ್ನಾಳಿ ತಾಲ್ಲೂಕಿನ ಪಿ.ಆರ್.ಓ ಸಂಖ್ಯೆ 184, ಎ.ಪಿ.ಆರ್.ಓ 184, ಪಿ.ಓ 368, ಒಟ್ಟು 736. ಇರುತ್ತದೆ.
ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ವಿವರ
ದಾವಣಗೆರೆ ತಾಲ್ಲೂಕಿಗೆ ಚುನಾವಣಾಧಿಕಾರಿ 38, ಸಹಾಯಕ ಚುನಾವಣಾಧಿಕಾರಿ 38, ಸೆಕ್ಟರ್ ಅಧಿಕಾರಿಗಳು 14. ಹರಿಹರ ತಾಲ್ಲೂಕಿಗೆ ಚುನಾವಣಾಧಿಕಾರಿ 24, ಸಹಾಯಕ ಚುನಾವಣಾಧಿಕಾರಿ 25, ಸೆಕ್ಟರ್ ಅಧಿಕಾರಿಗಳು 07. ಹೊನ್ನಾಳಿ ತಾಲ್ಲೂಕಿಗೆ ಚುನಾವಣಾಧಿಕಾರಿ 29, ಸಹಾಯಕ ಚುನಾವಣಾಧಿಕಾರಿ 29, ಸೆಕ್ಟರ್ ಅಧಿಕಾರಿಗಳು 10.
ನ್ಯಾಮತಿ ತಾಲ್ಲೂಕಿಗೆ ಚುನಾವಣಾಧಿಕಾರಿ 17, ಸಹಾಯಕ ಚುನಾವಣಾಧಿಕಾರಿ 17, ಸೆಕ್ಟರ್ ಅಧಿಕಾರಿಗಳು 08. ಚನ್ನಗಿರಿ ತಾಲ್ಲೂಕಿಗೆ ಚುನಾವಣಾಧಿಕಾರಿ 61, ಸಹಾಯಕ ಚುನಾವಣಾಧಿಕಾರಿ 64, ಸೆಕ್ಟರ್ ಅಧಿಕಾರಿಗಳು 16. ದಾವಣಗೆರೆ ತಾಲ್ಲೂಕಿಗೆ ಚುನಾವಣಾಧಿಕಾರಿ 38, ಸಹಾಯಕ ಚುನಾವಣಾಧಿಕಾರಿ 38, ಸೆಕ್ಟರ್ ಅಧಿಕಾರಿಗಳು 14. ಜಗಳೂರು ತಾಲ್ಲೂಕಿಗೆ ಚುನಾವಣಾಧಿಕಾರಿ 22, ಸಹಾಯಕ ಚುನಾವಣಾಧಿಕಾರಿ 23, ಸೆಕ್ಟರ್ ಅಧಿಕಾರಿಗಳು 08. ಈ ಎಲ್ಲಾ ತಾಲ್ಲೂಕಿನ ಒಟ್ಟು ಚುನಾವಣಾಧಿಕಾರಿ 191, ಸಹಾಯಕ ಚುನಾವಣಾಧಿಕಾರಿ 196, ಸೆಕ್ಟರ್ ಅಧಿಕಾರಿ 63.
ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್, ಭದ್ರತಾ ಕೊಠಡಿ ಮತ್ತು ಮತ ಎಣಿಕೆ ಕೇಂದ್ರ ವಿವರ
ದಾವಣಗೆರೆ ತಾಲ್ಲೂಕಿನಲ್ಲಿ ಮೋತಿ ವೀರಪ್ಪ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು, ದಾವಣಗೆರೆ. ಜಗಳೂರು ತಾಲ್ಲೂಕಿನಲ್ಲಿ ಸರ್ಕಾರಿ ಜ್ಯೂನಿಯರ್ ಕಾಲೇಜ್, ಜಗಳೂರು. ಹೊನ್ನಾಳಿ ತಾಲ್ಲೂಕಿನಲ್ಲಿ ಶ್ರೀಮತಿ ಗಂಗಮ್ಮ ಶ್ರೀ ವೀರಭದ್ರಶಾಸ್ತ್ರಿ ಕೈಗಾರಿಕಾ ತರಬೇತಿ ಕೇಂದ್ರ ಹಿರೇಕಲ್ಮಠ, ಹೊನ್ನಾಳಿ. ನ್ಯಾಮತಿ ತಾಲ್ಲೂಕಿನಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಶಿವಾನಂದಪ್ಪ ಬಡಾವಣೆ ರಸ್ತೆ, ನ್ಯಾಮತಿ. ಹರಿಹರ ತಾಲ್ಲೂಕಿನಲ್ಲಿ ಸೇಂಟ್ ಮೇರಿಸ್ ಕಾನ್ವೆಂಟ್ ಶಾಲೆ, ಹರಪನಹಳ್ಳಿ ರಸ್ತೆ, ಹರಿಹರ ತಾಲ್ಲೂಕು. ಚನ್ನಗಿರಿ ತಾಲ್ಲೂಕಿನ ಸರ್ಕಾರಿ ಪದವಿಪೂರ್ವ ಕಾಲೇಜು, ಚನ್ನಗಿರಿ ಇಲ್ಲಿ ಮತ ಎಣಿಕೆ ಕೇಂದ್ರ ಸ್ಥಾಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.
ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್ನ ‘ಯೂನಿವರ್ಸಿಟಿ ಆಫ್ ಸ್ಯಾಲ್ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.
ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ2 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ3 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ4 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

