ದಿನದ ಸುದ್ದಿ
ದಾವಣಗೆರೆ – ಜಗಳೂರು ತಾಲ್ಲೂಕು | ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ ಪಟ್ಟಿ
ಸುದ್ದಿದಿನ,ದಾವಣಗೆರೆ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯ್ತಿಯ ಮೊದಲನೇ 30 ತಿಂಗಳ ಅವಧಿಗೆ ದಾವಣಗೆರೆ ಹಾಗೂ ಜಗಳೂರು ತಾಲ್ಲೂಕಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ತಂತ್ರಾಂಶದ ಮೂಲಕ ಕೆಳಕಂಡ ಪಟ್ಟಿಯನ್ವಯ ವರ್ಗವಾರು ಮೀಸಲಾತಿ ನಿಗದಿಪಡಿಸಲಾಗಯಿತು.
ಜಗಳೂರು ತಾಲ್ಲೂಕು
ಒಟ್ಟು ಸ್ಥಾನಗಳು ಅನುಸೂಚಿತ ಜಾತಿ ಅನುಸೂಚಿತ ಪಂಗಡ ಹಿಂದುಳಿದ ವರ್ಗ ‘ಅ’ ಹಿಂದುಳಿದ ವರ್ಗ ‘ಬ’ ಸಾಮಾನ್ಯ ವರ್ಗ22(11) 7(4) 6(3) 0(0) 0(0) 9(4)
ಸಂಖ್ಯೆ | ಗ್ರಾಮ ಪಂಚಾಯಿತಿ ಹೆಸರು | ಅಧ್ಯಕ್ಷ | ಉಪಾಧ್ಯಕ್ಷ
- ಗುರುಸಿದ್ದಾಪುರ, ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ದಿದ್ದಿಗೆ, ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ದೇವಿಕೆರೆ, ಸಾಮಾನ್ಯ, ಅನುಸೂಚಿತ ಪಂಗಡ
- ಗುತ್ತಿದುರ್ಗ, ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಬಿಸ್ತುವಳ್ಳಿ, ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಸೊಕ್ಕೆ, ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಅಸಗೋಡು, ಸಾಮಾನ್ಯ(ಮಹಿಳೆ), ಅನುಸೂಚಿತ ಪಂಗಡ
- ದೊಣ್ಣೆಹಳ್ಳಿ, ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಬಿದರಕೆರೆ, ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಹನುಮಂತಾಪುರ, ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
- ಬಿಳಿಚೋಡು, ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
- ಹಾಲೆಕಲ್ಲು, ಅನುಸೂಚಿತ ಜಾತಿ, ಸಾಮಾನ್ಯ
- ಅಣಬೇರು, ಅನುಸೂಚಿತ ಜಾತಿ(ಮಹಿಳೆ), ಅನುಸೂಚಿತ ಪಂಗಡ(ಮಹಿಳೆ)
- ಕೆಚ್ಚೇನಹಳ್ಳಿ, ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ಮುಸ್ಟೂರು, ಅನುಸೂಚಿತ ಜಾತಿ(ಮಹಿಳೆ) ಸಾಮಾನ್ಯ
- ತೋರಣಗಟ್ಟೆ, ಅನುಸೂಚಿತ ಜಾತಿ(ಮಹಿಳೆ), ಅನುಸೂಚಿತ ಪಂಗಡ
- ಬಸವನಕೋಟೆ, ಅನುಸೂಚಿತ ಪಂಗಡ, ಸಾಮಾನ್ಯ(ಮಹಿಳೆ)
- ಕ್ಯಾಸೇನಹಳ್ಳಿ, ಅನುಸೂಚಿತ ಪಂಗಡ, ಸಾಮಾನ್ಯ
- ಕಲ್ಲೆದೇವಪುರ, ಅನುಸೂಚಿತ ಪಂಗಡ, ಸಾಮಾನ್ಯ(ಮಹಿಳೆ)
- ಹೊಸಕೆರೆ, ಅನುಸೂಚಿತ ಪಂಗಡ(ಮಹಿಳೆ), ಅನುಸೂಚಿತ ಪಂಗಡ(ಮಹಿಳೆ)
- ಹಿರೇಮಲ್ಲನಹೊಳೆ, ಅನುಸೂಚಿತ ಪಂಗಡ(ಮಹಿಳೆ), ಸಾಮಾನ್ಯ
- ಪಲ್ಲಾಗಟ್ಟೆ, ಅನುಸೂಚಿತ ಪಂಗಡ(ಮಹಿಳೆ), ಅನುಸೂಚಿತ ಪಂಗಡ(ಮಹಿಳೆ)
ದಾವಣಗೆರೆ ತಾಲ್ಲೂಕು
ಒಟ್ಟು ಸ್ಥಾನಗಳು ಅನುಸೂಚಿತ ಜಾತಿ ಅನುಸೂಚಿತ ಪಂಗಡ ಹಿಂದುಳಿದ ವರ್ಗ ‘ಅ’ ಹಿಂದುಳಿದ ವರ್ಗ ‘ಬ’ ಸಾಮಾನ್ಯ ವರ್ಗ42(21) 10(5) 6(3) 4(2) 1(1) 21(10)
ಸಂಖ್ಯೆ | ಗ್ರಾಮ ಪಂಚಾಯಿತಿ ಹೆಸರು | ಅಧ್ಯಕ್ಷ | ಉಪಾಧ್ಯಕ್ಷ
- ಬೆಳವನೂರು : ಹಿಂದುಳಿದ ‘ಅ’ ವರ್ಗ, ಅನುಸೂಚಿತ ಜಾತಿ
- ಆನಗೋಡು : ಹಿಂದುಳಿದ ‘ಅ’ ವರ್ಗ, ಅನುಸೂಚಿತ ಜಾತಿ
ಆಲೂರು : ಹಿಂದುಳಿದ‘ಅ’ ವರ್ಗ(ಮಹಿಳೆ), ಸಾಮಾನ್ಯ - ಗೋಪಾನಾಳು : ಹಿಂದುಳಿದ‘ಅ’ ವರ್ಗ(ಮಹಿಳೆ), ಸಾಮಾನ್ಯ
- ಅತ್ತಿಗೆರೆ : ಹಿಂದುಳಿದ‘ಬ’ ವರ್ಗ(ಮಹಿಳೆ), ಅನುಸೂಚಿತ ಪಂಗಡ
- ಆವರಗೊಳ್ಳ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಶ್ರೀರಾಮನಗರ : ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಐಗೂರು : ಸಾಮಾನ್ಯ, ಅನುಸೂಚಿತ ಜಾತಿ
- ದೊಡ್ಡಬಾತಿ : ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಹಳೇಬಾತಿ : ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ತೋಳಹುಣಸೆ : ಸಾಮಾನ್ಯ, ಅನುಸೂಚಿತ ಪಂಗಡ(ಮಹಿಳೆ)
- ಹೆಬ್ಬಾಳು : ಸಾಮಾನ್ಯ, ಹಿಂದುಳಿದ ‘ಅ’ ವರ್ಗ
- ಕುರ್ಕಿ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಹುಚ್ಚವ್ವನಹಳ್ಳಿ: ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಬಾಡ : ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಶ್ಯಾಗಲೆ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಕಡ್ಲೇಬಾಳು : ಸಾಮಾನ್ಯ(ಮಹಿಳೆ), ಅನುಸೂಚಿತ ಪಂಗಡ
- ಅಣಜಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಹೆಮ್ಮನಬೇತೂರು : ಸಾಮಾನ್ಯ(ಮಹಿಳೆ), ಅನುಸೂಚಿತ ಪಂಗಡ
- ಹುಲಿಕಟ್ಟೆ : ಸಾಮಾನ್ಯ (ಮಹಿಳೆ), ಅನುಸೂಚಿತ ಪಂಗಡ(ಮಹಿಳೆ)
- ಗುಡಾಳು : ಸಾಮಾನ್ಯ(ಮಹಿಳೆ), ಸಾಮಾನ್ಯ
- ನೇರ್ಲಿಗೆ : ಸಾಮಾನ್ಯ (ಮಹಿಳೆ), ಸಾಮಾನ್ಯ
- ನರಗನಹಳ್ಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಅಣಬೇರು : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಬೇತೂರು : ಸಾಮಾನ್ಯ (ಮಹಿಳೆ), ಅನುಸೂಚಿತ ಜಾತಿ
- ಶಿರಮಗೊಂಡನಹಳ್ಳಿ : ಸಾಮಾನ್ಯ(ಮಹಿಳೆ), ಅನುಸೂಚಿತ ಪಂಗಡ(ಮಹಿಳೆ)
- ಕಕ್ಕರಗೊಳ್ಳ: ಅನುಸೂಚಿತ ಜಾತಿ , ಸಾಮಾನ್ಯ (ಮಹಿಳೆ)
- ಬಸವನಾಳು : ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
- ಮಳಲ್ಕೆರೆ : ಅನುಸೂಚಿತ ಜಾತಿ ಸಾಮಾನ್ಯ(ಮಹಿಳೆ)
- ಮುದಹದಡಿ : ಅನುಸೂಚಿತ ಜಾತಿ , ಸಾಮಾನ್ಯ(ಮಹಿಳೆ)
- ಕನಗೊಂಡನಹಳ್ಳಿ : ಅನುಸೂಚಿತ ಜಾತಿ, ಹಿಂದುಳಿದ’ಅ’ವರ್ಗ(ಮಹಿಳೆ)
- ಕಂದನಕೋವಿ : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ಕೈದಾಳೆ : ಅನುಸೂಚಿತ ಜಾತಿ(ಮಹಿಳೆ), ಹಿಂದುಳಿದ’ಬ’ವರ್ಗ(ಮಹಿಳೆ)
- ಕಂದಗಲ್ಲು: ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ಮತ್ತಿ : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ಮಾಯಕೊಂಡ : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ಹೊನ್ನೂರು : ಅನುಸೂಚಿತ ಪಂಗಡ, ಸಾಮಾನ್ಯ(ಮಹಿಳೆ)
- ಕೊಡಗನೂರು : ಅನುಸೂಚಿತ ಪಂಗಡ, ಸಾಮಾನ್ಯ(ಮಹಿಳೆ)
- ಕುಕ್ಕವಾಡ : ಅನುಸೂಚಿತ ಪಂಗಡ, ಹಿಂದುಳಿದ ‘ಅ’ವರ್ಗ(ಮಹಿಳೆ)
- ಕೊಂಡಜ್ಜಿ : ಅನುಸೂಚಿತ ಪಂಗಡ(ಮಹಿಳೆ), ಸಾಮಾನ್ಯ(ಮಹಿಳೆ)
- ಹದಡಿ : ಅನುಸೂಚಿತ ಪಂಗಡ(ಮಹಿಳೆ), ಸಾಮಾನ್ಯ
- ಲೋಕಿಕೆರೆ : ಅನುಸೂಚಿತ ಪಂಗಡ(ಮಹಿಳೆ), ಹಿಂದುಳಿದ ‘ಅ’ ವರ್ಗ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


