Connect with us

ದಿನದ ಸುದ್ದಿ

ದಾವಣಗೆರೆ | ಜಿಲ್ಲೆಯ ಐತಿಹಾಸಿಕ ಸ್ಥಳಗಳ ಅಭಿವೃದ್ಧಿಗೆ ಕೇಂದ್ರಕ್ಕೆ ರೂ.100 ಕೋಟಿ ಪ್ರಸ್ತಾವನೆ ಸಲ್ಲಿಕೆ: ಸಚಿವ ಭೈರತಿ ಬಸವರಾಜ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯ ಹಲವು ಐತಿಹಾಸಿಕ ಸ್ಥಳಗಳನ್ನು ಹೊಂದಿದ್ದು, ಅವುಗಳ ಸಂರಕ್ಷಣೆ ಅಭಿವೃದ್ಧಿಗಾಗಿ ರೂ.100 ಕೋಟಿಗಳ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಡಿ ಸೋಮವಾರ ನೀರ್ಥಡಿ ಗ್ರಾಮದ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸಚಿವ ಬಿ.ಎ.ಬಸವರಾಜ ಇವರು ಕಾರ್ಯಕ್ರಮವನನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಲವಾರು ಐತಿಹಾಸಿಕ ಸ್ಥಳಗಳಲ್ಲಿ ನೀರ್ಥಡಿ ರಂಗನಾಥಸ್ವಾಮಿ ದೇವಸ್ಥಾನವು ಪುರಾತನ ಸಾಂಸ್ಕøತಿಕ ವೈಭವ ಹೊಂದಿರುವ ದೇವಾಲಯವಾಗಿದ್ದು, ಮಹರ್ಷಿಗಳು ತಪಸ್ಸು ಮಾಡುವಾಗ ಬಂದಂತಹ ನೀರನ್ನು ತಡೆದು ನಿಲ್ಲಿಸಿದ್ದರಿಂದ ನೀರ್ಥಡಿ ಎಂಬ ಹೆಸರು ಬಂದಿದೆ ಎಂದು ಇತಿಹಾಸ ಹೇಳುತ್ತದೆ. ಇಂತಹ ಐತಿಹಾಸಿಕ, ಸಾಂಸ್ಕøತಿಕ ದೇವಾಲಯವನ್ನು ಜೀರ್ಣೋದ್ಧಾರಗೊಳಿಸಿ ಪ್ರವಾಸಿ ತಾಣವನ್ನಾಗಿಸಿ ಮಾಡಲಾಗುವುದು ಎಂದರು.

ನೀರ್ಥಡಿಯ ಈ ದೇವಾಲಯವನ್ನು ಐತಿಹಾಸಿಕ ಸ್ಥಳವನ್ನಾಗಿ ಗುರುತಿಸಿ ಪ್ರವಾಸೋದ್ಯಮ ಸ್ಥಳಗಳ ಪಟ್ಟಿಗೆ ಸೇರಿಸಬೇಕು ಎಂದು ಗ್ರಾಮಸ್ಥರು ಮನವಿಸಲ್ಲಿಸಿದ್ದಾರೆ. ನಾನು ಕೂಡ ಪ್ರವಾಸೋದ್ಯಮ ಸಚಿವರೊಂದಿಗೆ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇನೆ. ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವುದರ ಜೊತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ನೂತನ ಮುಖ್ಯ ಮಂತ್ರಿಗಳು ಅಧಿಕಾರ ಸ್ವೀಕರಿಸಿದ ಅರ್ಧ ಗಂಟೆಯಲ್ಲಿಯೇ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ರೂ.30 ಲಕ್ಷ ಕುಟುಂಬಗಳಿಗೆ ಸ್ಕಾಲರ್‍ಶಿಪ್ ವ್ಯವಸ್ಥೆ ಮಾಡಿದ್ದು, ಹಾಗೂ ವೃದ್ದಾಪ್ಯ ವೇತನ, ವಿಧವಾ ವೇತನವನ್ನು ರೂ. 800 ರಿಂದ ರೂ 1000 ಕ್ಕೆ ಹೆಚ್ಚಳ ಮಾಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ರೈತರ ಬೆಳೆಗಳಾದ ಹೂ-ಹಣ್ಣು, ತರಕಾರಿ ಬೆಳೆಗಳು ಹಾನಿಯಾದರೆ ಸರ್ಕಾರದಿಂದ ನಿಗದಿಪಡಿಸಲಾದ ರೂ. 25 ಸಾವಿರವನ್ನು ಬೆಳೆ ಪರಿಹಾರವಾಗಿ ನೀಡಲಾಗುತ್ತಿದೆ ಎಂದರು.

ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಮಾತನಾಡಿ, ಜಿಲ್ಲೆಯ ಆನಗೋಡು ಗ್ರಾಮದ ನೀರ್ಥಡಿಯಲ್ಲಿರುವ ಶ್ರೀ ಲಕ್ಷ್ಮೀ ರಂಗನಾಥಸ್ವಾಮಿ ದೇವಸ್ಥಾನವು ಪ್ರಾಚೀನ ಕಾಲದಿಂದಲೂ ಐತಿಹಾಸಿಕ ಸ್ಥಳವಾಗಿದ್ದು, ಚಿತ್ರದುರ್ಗದ ಪಾಳೆಗಾರರು ಈ ದೇವಸ್ಥಾನವನ್ನು ನಿರ್ಮಿಸಿದ್ದರು. ಕಾಲ ಕಳೆದಂತೆ ದೇವಸ್ಥಾನದ ಬಹು ಭಾಗಗಳು ಶಿಥಿಲಗೊಂಡಿದ್ದು, ಅದರ ಜೀರ್ಣೋದ್ಧಾರದ ಕಾರ್ಯವಾಗಬೇಕಾಗಿದೆ.

ದೇವಸ್ಥಾನವು ಪಾರಂಪರಿಕ ಐತಿಹಾಸಿಕ ಹಿನ್ನೆಲೆ ಹೊಂದಿದ್ದು, ಪ್ರವಾಸೋದ್ಯಮ ಪ್ರದೇಶವಾಗಿ ಗುರುತಿಸಲು ಆಯ್ಕೆಯಾಗಿದ್ದು, ಜೀರ್ಣೋದ್ಧಾರಕ್ಕೆ ಈಗಾಗಲೇ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಸಚಿವರಾದ ಆನಂದ್ ಸಿಂಗ್ ಇವರೊಂದಿಗೆ ಮಾತನಾಡಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇನೆ. ಇದೊಂದು ಪ್ರೇಕ್ಷಣೀಯ ಸ್ಥಳವಾಗಿ ಮಾರ್ಪಾಡಾಗಬೇಕು ಎಂದು ಹೇಳಿದರು.

ಕೇಂದ್ರ ಸರ್ಕಾರದಿಂದ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಯನ್ನು ಇನ್ನೂ ಬಹಳಷ್ಟು ಜನರು ಮಾಡಿಸಿಕೊಂಡಿಲ್ಲ. ಕೇಂದ್ರÀ ಮತ್ತು ರಾಜ್ಯ ಸರ್ಕಾರ ನೀಡಿರುವ ಯೋಜನೆಗಳ ಸೌಲಭ್ಯಗಳನ್ನು ನಾಗರಿಕರು ಉತ್ತಮ ರೀತಿಯಲ್ಲಿ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕೋವಿಡ್ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದ 80 ಕೋಟಿ ಜನರಿಗೆ ಉಚಿತವಾಗಿ ಅಕ್ಕಿ, ಬೇಳೆ ಹಾಗೂ ಇತರೆ ಧಾನ್ಯ ಪದಾರ್ಥಗಳನ್ನು ವಿತರಿಸಲಾಗಿದೆ. ಹಾಗೆಯೇ ದೇಶದಾದ್ಯಂತ ಉಚಿತ ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿದ್ದರೂ ಕೂಡ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿಲ್ಲ. ಆದಷ್ಟು ಬೇಗ ಜನರು ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು. ಹಾಗೂ ಪ್ರಧಾನ ಮಂತ್ರಿ ಅವರ ಈ ಅಭಿಯಾನ ಯಶಸ್ವಿಗೊಳ್ಳಲು ಸಹಕಾರ ನೀಡಬೇಕು ಎಂದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ದೇವಸ್ಥಾನದ ಅಭಿವೃದ್ಧಿಗೆ ಬೇಕಾದ ಪೂರಕ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯ ಮಹಾಂತೇಶ ಬಿ.ದಾನಮ್ಮನವರ್, ದಾವಣಗೆರೆ ಜಿಲ್ಲೆ ತಹಶೀಲ್ದಾರ್ ಬಿ.ಎನ್.ಗಿರೀಶ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಪಾಲಾಕ್ಷಿ, ಗ್ರಾಮ ಪಂ. ಸದಸ್ಯರಾದ ಆರ್.ರೂಪಾ, ವನಜಾಕ್ಷಮ್ಮ, ಚನ್ನಬಸಮ್ಮ, ಎನ್.ಜಿ.ನಾಗರಾಜ, ಕಮಲಮ್ಮ ಹಾಗೂ ಸವಿತಾ ಮಲ್ಲೇಶ್ ಸೇರಿದಂತೆ ಇನ್ನಿತರ ಗ್ರಾ.ಪಂ.ಸದಸ್ಯರು ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ

Published

on

ಸುದ್ದಿದಿನ,ಬಳ್ಳಾರಿ:ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

2022-23 ಹಾಗೂ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ವಿವರ

ಮಹಿಳಾ ಆಯವ್ಯಯದಡಿ 10 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 10 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಒಟ್ಟು 24 ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಒದಗಿಸಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಶಿಪ್ ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೆöÊಫಂಡ್ ನೀಡಲಾಗುವುದು.

ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/UgNqDcFs1v6akyAD9 ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.

ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದ್ದು, ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಕ್ರೀಡಾ ಕಿಟ್‍ಗಳನ್ನು ಸರಬರಾಜು ಮಾಡಲು ಯುವಕ, ಯುವತಿಯರ ಸಂಘಗಳಿಂದ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ದಾವಣಗೆರೆ ದೂ.ಸಂ: 08192-237480 ನ್ನು ಸಂಪರ್ಕಿಸಲು ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ : ದೂರು ದಾಖಲು

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ನಗರದ ಡಿಸಿಎಂ ಲೇಔಟಿನ ಎಂಎಸ್‍ಎಂ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆನ್‍ಲೈನ್ ರಿಂಗ್ ವ್ಯವಹಾರ ನಡೆಸಲು ತೆರೆದಿರುವ ಎಂಪೈರ್ ಟ್ರೇಡಿಂಗ್ ಕಂಪನಿ ತೆರೆದುಕೊಂಡು ಸಾರ್ವಜನಿಕರಿಂದ ಹಣವನ್ನು ಆರೋಪಿತರಾದ ಗಜಾನನ ತಂದೆ ರಾಮಪೂಜಾರಪ್ಪ ಇವರು ತಮ್ಮ ಸ್ನೇಹಿತರೊಂದಿಗೆ ಪಡೆದುಕೊಂಡು ಪ್ರತಿ ತಿಂಗಳು ಶೇಕಡಾ 5 ರಷ್ಟು ಲಾಭಾಂಶವನ್ನು ಕೊಡುವುದಾಗಿ ಹೇಳಿ ಕೆಲವು ತಿಂಗಳು ಕೊಟ್ಟು ನಂತರದ ದಿನಗಳಲ್ಲಿ ಲಾಭಾಂಶವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಒಟ್ಟು ಸಾರ್ವಜನಿಕರಿಂದ 31.50,000/- ರೂಗಳನ್ನು ಕಟ್ಟಿಸಿಕೊಂಡು 61.62.800/- ರೂ ಲಾಭಾಂಶದ ಹಣವನ್ನು ಜಮಾ ಮಾಡಿದ್ದು ರೂ.37,33,500ಗಳನ್ನು 6 ತಿಂಗಳ ಲಾಭಾಂಶದ ಹಣವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಮೋಸ ಮಾಡಿರುತ್ತಾರೆ ಎಂದು ಹರೀಶ.ಕೆ ತಂದೆ ಉಮೇಶಪ್ಪ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತಾರೆ.

ಠೇವಣಿದಾರರು ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ ಹೋಗಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ದಾವಣಗೆರೆ ನಗರದ ಸಿಇಎನ್ ಪೊಲೀಸ್ ಠಾಣೆ, ಮೊದಲನೇ ಮಹಡಿ ವಿದ್ಯಾನಗರ ಪೊಲೀಸ್ ಇನ್ಸ್‍ಪೆಕ್ಟರ್ ರವರ ಬಳಿ ಹೋಗಿ ಮಾಹಿತಿ ನೀಡಬೇಕು. ದೂ.ಸಂ:08192-225119 ನ್ನು ಸಂಪರ್ಕಿಸಲು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending