ದಿನದ ಸುದ್ದಿ
ದಾವಣಗೆರೆ | ಇದ್ದೊಬ್ಬ ಮಗನ ಎರಡೂ ಕಿಡ್ನಿ ಫೇಲ್ ; ಧನ ಸಹಾಯಕ್ಕಾಗಿ ಕಣ್ಣೀರಿಟ್ಟ ತಾಯಿ : ದಯವಿಟ್ಟು ಸಹಕರಿಸಿ

ಸುದ್ದಿದಿನ, ದಾವಣಗೆರೆ : ಅವರದ್ದು ಕಡು ಬಡತನದ ಕುಟುಂಬ, ಇಬ್ಬರು ಮಕ್ಕಳಲ್ಲಿ ಒಬ್ಬನನ್ನು ಕಳೆದುಕೊಂಡಿದ್ದ ಆ ತಂದೆ ತಾಯಿ ಇನ್ನೊಬ್ಬ ಮಗನಾದ್ರು ಚೆನ್ನಾಗಿ ಓದಿ ಒಳ್ಳೆಯ ಕೆಲಸ ತಗೋಬೇಕು ಅಂತಾ ಕೂಲಿ ನಾಲಿ ಮಾಡಿ ಅವನನ್ನು ಎಂಎ, ಬಿಎಡ್ ಓದಿಸಿದ್ರು.
ಅವನು ಸಹ ಅತೀ ಹೆಚ್ಚು ಅಂಕ ಪಡೆದು ಸಿಇಟಿಗೆ ಓದುತ್ತಿದ್ದ ಜೊತೆಗೆ ಮನೆಲಿ ಕೂರುವುದು ಬೇಡ, ತಂದೆ ತಾಯಿಗೆ ಆಸರೆಯಾಗೋಣ ಅಂತ ಆತ ಕಾಂಪಿಟೇಟಿವ್ ಪರೀಕ್ಷೆಗೆ ಓದುತ್ತಲೇ ಕೊರಿಯರ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ, ಆದರೆ ದುರಾದೃಷ್ಟ ಆತನ ಎರಡು ಕಿಡ್ನಿ ಫೇಲ್ ಆಗಿದ್ದು, ಇತ್ತ ಇದ್ದ ಒಬ್ಬ ಮಗನನ್ನು ಉಳಿಸಿಕೊಳ್ಳಲು ಆ ತಂದೆ ತಾಯಿ ಕಣ್ಣಿರು ಇಡುತ್ತಿದ್ದಾರೆ.
ಇದನ್ನೂ ಓದಿ | ಸಿಡಿ ಪ್ರಕರಣ | ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ : ಸಿದ್ದರಾಮಯ್ಯ
ಊಟ ನೀರು ಸೇರದೇ ಹಾಸಿಗೆ ಹಿಡಿದಿರುವ ಯುವಕ, ಮಗನ ಪರಿಸ್ಥಿತಿ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಿರುವ ತಂದೆ ತಾಯಿ.. ಈ ಮನಕುಲ ದೃಶ್ಯ ಕಂಡು ಬಂದಿದ್ದು, ದಾವಣಗೆರೆ ತಾಲ್ಲೂಕಿನ ಮಾಳಗೊಂಡನಹಳ್ಳಿಯಲ್ಲಿ, ಹೌದು.. ಮಾಳಗೊಂಡನಹಳ್ಳಿಯ ಪರಶುರಾಮಪ್ಪ ಹಾಗೂ ಅನುಸೂಯಮ್ಮ ದಂಪತಿಯ ಪುತ್ರ 26 ವರ್ಷದ ಕಲ್ಲೇಶ್, ಓದಿನಲ್ಲಿ ತುಸು ಮುಂದು ಈಗಾಗಿಯೇ ಕಲ್ಲೇಶನನ್ನು ಹೇಗಾದರು ಮಾಡಿ ಓದಿಸಬೇಕು ಎಂದು ಕೂಲಿ ಮಾಡಿ ಹಣ ಕೂಡಿಟ್ಟು ಬಿಎಡ್, ಎಂಎ ಓದಿಸಿದ್ರು.
ಕಲ್ಲೇಶ್ ಓದಿನಲ್ಲಿಮುಂದೆ ಇದ್ದ ಕಾರಣ ಉತ್ತಮ ಅಂಕ ಪಡೆದಿದ್ದ, ಬಳಿಕ ಮನೆಯ ಪರಿಸ್ಥಿತಿ ಸರಿ ಇಲ್ಲದ ಹಿನ್ನಲೆ ಕಲ್ಲೇಶ್ ಸಿಇಟಿ, ಕಾಂಪಿಟೇಟಿವ್ ಪರೀಕ್ಷೆಗೆ ಓದುತ್ತಲೇ ಕೊರಿಯರ್ ಬಾಯ್ ಆಗಿ ಕೆಲಸ ಮಾಡುತ್ತಾ ಮನೆಗೆ ಆಸರೆಯಾಗಿದ್ದ, ಆದರೆ ಅದೊಂದು ದಿನ ಹೊಟ್ಟೆ ತಳ ಭಾಗ ನೋವ್ವ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ತೋರಿಸಿದಾಗ ಕುಟುಂಬಕ್ಕೆ ಬರಸಿಡಿಲು ಸುದ್ದಿ ಬಡಿದಿತ್ತು, ಅದುವೇ ಕಲ್ಲೇಶನಿಗೆ ಎರಡು ಕಿಡ್ನಿ ಫೇಲ್ ಎಂದು ವೈದ್ಯರು ಶಾಕಿಂಗ್ ನ್ಯೂಸ್ ಕೊಟ್ಟಿದ್ರು.
ಇನ್ನು ಕಲ್ಲೇಶ್, ಯಾವೂದೇ ಕುಡಿತ, ಗುಟ್ಕ ಮುಟ್ಟಿದವನಲ್ಲ, ಚಿಕ್ಕವನಿದಾಗ ಕಿಡ್ನಿಯಲ್ಲಿ ಕಲ್ಲು ಇತ್ತಂತೆ ಇದನ್ನ ಟ್ರಿಟ್ ಮೆಂಟ್ ಮೂಲಕವೇ ಕರಗಿಸುತ್ತೇವೆ ಎಂದು ವೈದ್ಯರು ಚಿಕಿತ್ಸೆ ನೀಡಿದ್ದರಂತೆ, ಅದಾದ ಬಳಿಕ ಹುಷಾರಾಯಿತು ಅಂತ ಸುಮ್ಮನಿದ್ದ ಕಲ್ಲೇಶ್ ಗೆ ಹಲವು ವರ್ಷಗಳ ಬಳಿಕ ಈಗ ಕಿಡ್ನಿ ಫೇಲ್ ಆಗಿರುವ ಸಂಗತಿ ತಿಳಿದಿದೆ, ಇನ್ನೂ ಇಬ್ಬರು ಮಕ್ಕಳಲ್ಲಿ ಒಬ್ಬ ಜಾಂಡಿಸ್ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪಿದ್ದಾನೆ.
ಈಗ ಇರುವುದು ಇವನೊಬ್ಬ, ಇವನಿಗೂ ಇದೇ ಪರಿಸ್ಥಿತಿ ಬಂದಿದೆ.. ನನ್ನ ಕಿಡ್ನಿ ಇವನಿಗೆ ಹೊಂದುತ್ತಂತೆ, ಆದರೆ ಬದಲಾಯಿಸಲು ೧೫ ರಿಂದ ೨೦ ಲಕ್ಷ ರೂಪಾಯಿ ಖರ್ಚಾಗುತ್ತೆ ಅಂತಾ ಡಾಕ್ಟರ್ ತಿಳಿಸಿದ್ದಾರೆ, ಇದ್ದ ಬದ್ದ ಹಣವನ್ನೆಲ್ಲ ಡಯಾಲಿಸಿಸ್ ಮಾಡಿಸಲು ಆಸ್ಪತ್ರೆಗೆ ಖರ್ಚಾಗಿದೆ, ಯಾರಾದ್ರು ಸಹಾಯ ಮಾಡಿ ಮಗನ ಉಳಿಸಿಕೊಡಿ ಅಂತಾ ತಾಯಿ ಅನುಸೂಯಮ್ಮ ಕಣ್ಣೀರಿಟ್ಟಿದ್ದಾರೆ.
ಒಟ್ಟಾರೆ ಇದ್ದ ಒಬ್ಬ ಮಗನನ್ನು ಉಳಿಸಿಕೊಳ್ಳಲು ಬಡ ದಂಪತಿಗಳು ಹರಸಾಹಸ ಪಡ್ತಾ ಇದ್ದಾರೆ, ಕಿಡ್ನಿ ಕೊಡಲು ರೆಡಿ ಇದ್ದರು ಬದಲಾಯಿಸಲು ಹಣವಿಲ್ಲ,,ಹೀಗಾಗಿ ಇವರಿಗೆ ಸಹಾಯ ಮಾಡುವವರು ಅಕೌಂಟ್ ನಂಬರ್ ಕೆಳಗಿನಂತೆ
NAME- KALLLESH. P
ACOUNT NOMBR-34869949662
IFSC- SBIN0005624
BRANCH CODE- 5624
G pay-phone pay
Mob: 9845601182 ಗೂ ಧನ ಸಹಾಯ ಮಾಡಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಸಪೇಟೆ | ಹಣ ದುರ್ಬಳಕೆ ; ನಿವೃತ್ತ ಪ್ರಾಂಶುಪಾಲ ಡಾ.ಬಿ.ಜಿ.ಕನಕೇಶಮೂರ್ತಿ ವಿರುದ್ಧ ದೂರು

ಸುದ್ದಿದಿನ,ಹೊಸಪೇಟೆ:ನಗರದ ಶ್ರೀ ಶಂಕರ್ ಆನಂದ್ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರೇ ಸರ್ಕಾರಿ ಖಾತೆ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿಕೊಂಡು ವಂಚಿಸಿರುವ ಪ್ರಕರಣವನ್ನು ತನಿಖೆಗೆ ಒಳಪಡಿಸಿ, ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಬಿ.ಜಿ.ಕನಕೇಶಮೂರ್ತಿ ಹಾಗೂ ಸಂಬಂಧಿಸಿದ ಲೆಕ್ಕಾಧಿಕಾರಿಗಳ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ಡಾ.ಕೆ.ಎ.ಓಬಳೇಶ್ ಅವರು ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದಾರೆ.
ಮಾಹಿತಿಹಕ್ಕು ಅಡಿಯಲ್ಲಿ ಕಾಲೇಜಿನಿಂದ ದಾಖಲೆಗಳನ್ನು ಪಡೆದು ಪರಿಶೀಲನೆ ಮಾಡಿದ ಸಂದರ್ಭದಲ್ಲಿ 2019-20 ರಿಂದ 30-04-2022 ರವರೆಗಿನ ಲೆಕ್ಕ ತಪಾಸಣಾ ವರದಿಯಲ್ಲಿ ಕಾಲೇಜಿನ ಅಂದಿನ ಪ್ರಾಂಶುಪಾಲರಾಗಿದ್ದ ಡಾ.ಬಿ.ಜಿ.ಕನಕೇಶಮೂರ್ತಿ ಅವರು ಕಂಡಿಕೆ ಸಂಖ್ಯೆ II-ಅ-2 ಮತ್ತು 8 ರಂತೆ ರೂ.8,39,288/- (ಎಂಟು ಲಕ್ಷದ ಮೂವತ್ತೊಂಬತ್ತು ಸಾವಿರದ ಎರಡು ನೂರಾ ಎಂಬತ್ತೆಂಟು ರೂಪಾಯಿ)ಗಳ ಅರೇ ಸರ್ಕಾರಿ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿಕೊಂಡಿರುವ ಬಗ್ಗೆ ಮುಖ್ಯ ಲೆಕ್ಕಾಧಿಕಾರಿಗಳು (ಆಡಿಟ್), ಕಾಲೇಜು ಶಿಕ್ಷಣ ಇಲಾಖೆ, ಬೆಂಗಳೂರು ಇವರು ಆಕ್ಷೇಪಣೆಯನ್ನು ವ್ಯಕ್ತಪಡಿಸಿರುವುದು ಕಂಡುಬಂದಿರುತ್ತದೆ.
ಈ ಅಂಶವನ್ನು ಆಧಾರವಾಗಿಟ್ಟುಕೊಂಡು ನಿವೃತ್ತ ಪ್ರಾಂಶುಪಾಲರಾದ ಡಾ.ಬಿ.ಜಿ.ಕನಕೇಶಮೂರ್ತಿ ಅವರು ಹಣ ದುರ್ಬಳಕೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಅನುಮಾನ ವ್ಯಕ್ತಪಡಿಸಿ, ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತ ಕಛೇರಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಡಾ.ಕೆ.ಎ.ಓಬಳೇಶ್ ಅವರು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಭ್ರಷ್ಟಾಚಾರದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು.!

ಸುದ್ದಿದಿನ,ದಾವಣಗೆರೆ:ಸಮಾನತೆ ಪಡೆದ ಮಹಿಳೆಯರು ಸದ್ಯ ಎಲ್ಲ ರಂಗಗಲ್ಲೂ ಪುರುಷರಿಗೆ ಸಮಾನವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ರ್ದುದೈವದ ಸಂಗತಿ ಎಂದರೆ ಪುರಷರನ್ನು ಮೀರಿ ಮಹಿಳಾ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಉಪಲೊಕಾಯಕ್ತನಾಗಿ ನಿಯುಕ್ತಿಯಾದ ಮೇಲೆ ಮಹಿಳಾ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿರುವ ಸಾಕಷ್ಟು ಪ್ರಕರಣಗಳು ನನ್ನ ಗಮನಕ್ಕೆ ಬಂದಿವೆ. ಇದು ಉತ್ತಮ ಬೆಳವಣಿಗೆಯಲ್ಲ ಎಂದು ನೋವಿನಿಂದ ನ್ಯಾ.ಬಿ.ವೀರಪ್ಪ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ, ಗುರುವಾರ ಕರ್ನಾಟಕ ಲೋಕಾಯುಕ್ತ ವತಿಯಿಂದ ಆಯೋಜಿಸಲಾದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಪ್ರಕರಣಗಳ ವಿಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ವೇಲಾ.ಡಿ.ಕೆ. ಮಾತನಾಡಿ, ಲೋಕಾಯುಕ್ತದಲ್ಲಿ ಅಪರ ನಿಬಂಧಕರಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಸಾಕಷ್ಟು ಪ್ರಕರಣಗಳಲ್ಲಿ ಅಧಿಕಾರಿಗಳು ಕೆಳ ಹಂತದ ಸಿಬ್ಬಂದಿ ನೀಡುವ ವರದಿಗಳಿಗೆ ಕಣ್ಣು ಮುಚ್ಚಿ ಸಹಿ ಮಾಡುತ್ತಾರೆ. ಒಂದು ಕುಟುಂಬಕ್ಕೆ ವಿವಿಧ ರೀತಿಯಲ್ಲಿ ಜೀವಂತ ಸದಸ್ಯರ ಪ್ರಮಾಣ ಪತ್ರ, ವಂಶವೃಕ್ಷದಂತಹ ಪ್ರಮಾಣ ಪತ್ರಗಳ ನೀಡಿರುವುದು ಸಹ ವಿಚಾರಣೆ ವೇಳೆ ಕಂಡುಬಂದಿದೆ. ಇಂತಹ ಪ್ರಮಾಣ ಪತ್ರಗಳ ದುರಪಯೋಗದಿಂದ ಅನರ್ಹರು ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಾರೆ. ಅಧಿಕಾರಿಗಳು ಪ್ರಮಾಣ ಪತ್ರಗಳನ್ನು ನೀಡುವಾಗ ಪರಿಶೀಲನೆ ಮಾಡಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ನೆರವೇರಿಸಿ, ಪ್ರಾಸ್ತಾವಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್, ಭ್ರಷ್ಟಾಚಾರ ಸೂಚ್ಯಂಕದಲ್ಲಿ 180 ರಾಷ್ಟ್ರಗಳ ಪೈಕಿ ಭಾರತ 85ನೇ ಸ್ಥಾನದಲ್ಲಿದೆ. ರಾಜಕೀಯ ಇಚ್ಚಾಶಕ್ತಿ ಕೊರತೆ, ನೀತಿ ನಿರೂಪಣೆಯಲ್ಲಿ ದೋಷವಿರುವ ಕಾರಣ ಇಂದಿಗೂ ಸಣ್ಣ ಹಾಗೂ ಬೃಹತ್ ಪ್ರಮಾಣದಲ್ಲಿ ಭ್ರಷ್ಟಾಚಾರಗಳು ನಡೆಯುತ್ತಿವೆ. ಕೆಲಸಕ್ಕೆ ಸೇರುವಾಗ ಸಂವಿಧಾನ ಬದ್ದವಾಗಿ ಕರ್ತವ್ಯ ನಿರ್ವಹಿಸುವ ಪ್ರಮಾಣ ಸ್ವೀಕರಿಸಿರುತ್ತೇವೆ. ಇದನ್ನು ಗಮನದಲ್ಲಿ ಇರಿಸಿಕೊಂಡು ಸಾರ್ವಜನಿಕರಿಗೆ ಪಾರದರ್ಶಕ ಹಾಗೂ ತ್ವರಿತವಾಗಿ ಸೇವೆಗಳ ಲಭಿಸುವಂತೆ ಕೆಲಸ ನಿರ್ವಹಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾತನಾಡಿ, ಬಹುತೇಕ ಅಧಿಕಾರಿ ಹಾಗೂ ಸಿಬ್ಬಂದಿ ಮಧ್ಯಮ ವರ್ಗ ಹಾಗೂ ಗ್ರಾಮೀಣ ಹಿನ್ನಲೆಯಿಂದ ಸರ್ಕಾರಿ ಕೆಲಸಕ್ಕೆ ಬಂದಿದ್ದೇವೆ. ಜನರು ನಮ್ಮಿಂದ ಉತ್ತಮ ಸೇವೆ ನಿರೀಕ್ಷಿಸುತ್ತಾರೆ. ತ್ವರಿತವಾಗಿ ಸ್ಪಂದಿಸಿ, ನಿಮ್ಮ ಹಂತದಲ್ಲಿಯೇ ಜನರ ಸಮಸ್ಯೆಗಳನ್ನು ಪರಿಹರಿಸುವುದು ಉತ್ತಮ. ಇದರ ಬದಲು ಸಾರ್ವಜನಿಕರು ಮೇಲಿನ ಹಂತಕ್ಕೆ ದೂರು ನೀಡಿ, ಮೇಲಿನವರಿಂದ ನಿರ್ದೇಶನ ಪಡೆದು ಕೆಲಸ ನಿರ್ವಹಿಸುಂತೆ ಆಗಬಾರದು. ಲೋಕಾಯುಕ್ತರ ಭೇಟಿಯನ್ನು ಧನಾತ್ಮಕವಾಗಿ ಸ್ವೀಕರಿಸಿ ಕೆಲಸ ಮಾಡುವಂತೆ ಹೇಳಿದರು.
ಕಾರ್ಯಕ್ರಮದಲ್ಲಿ ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಜರುಗಿದ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ನಾಗರಿಕರ ಗೌರವಾರ್ಥ ಒಂದು ನಿಮಿಷದ ಮೌನಾಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಕೆ.ಎಂ.ರಾಜಶೇಖರ್, ಅರವಿಂದ.ಎನ್.ವಿ., ಮಿಲನ.ವಿಎನ್., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ್, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಪೂರೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಧಿಕಾರಿಗಳ ಮೇಲೆ ಸುಳ್ಳು ಕೇಸು ದಾಖಲಿಸಿದರೆ 3 ವರ್ಷಗಳ ಜೈಲು ಶಿಕ್ಷೆ : ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ

ಸುದ್ದಿದಿನ,ದಾವಣಗೆರೆ:ಸ್ವಾರ್ಥಕ್ಕಾಗಿ ಕೆಲ ವ್ಯಕ್ತಿ ಹಾಗೂ ಸಂಘಟನೆಗಳು, ಅಧಿಕಾರಿಗಳ ಮೇಲೆ ಸುಳ್ಳು ಕೇಸು ದಾಖಲಿಸುತ್ತಿರುವುದು ಭ್ರಷ್ಟಾಚಾರ ಆರೋಪ ಪ್ರಕರಣಗಳ ವಿಚಾರಣೆ ವೇಳೆ ಲೋಕಾಯುಕ್ತ ಗಮನಕ್ಕೆ ಬರುತ್ತಿವೆ. ಲೋಕಾಯುಕ್ತ ಕಾಯ್ದೆ ಸೆಕ್ಷನ್ 20 ಅಡಿ ಅಧಿಕಾರಿಗಳ ಮೇಲೆ ಸುಳ್ಳು ಕೇಸು ದಾಖಲಿಸಿದರೆ 6 ತಿಂಗಳಿನಿಂದ 3 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ, ಗುರುವಾರ ಕರ್ನಾಟಕ ಲೋಕಾಯುಕ್ತ ವತಿಯಿಂದ ಆಯೋಜಿಸಲಾದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಪ್ರಕರಣಗಳ ವಿಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಅಧಿಕಾರಿಗಳು ಭಷ್ಟಾಚಾರದಲ್ಲಿ ತೊಡಗಿರುವ ಹಲವಾರು ಪ್ರಕರಣಗಳು ಸತ್ಯಾಂಶವೂ ಇದೆ. ಆದರೆ ಕೆಲ ವ್ಯಕ್ತಿಗಳು ಸ್ವಾರ್ಥಕ್ಕಾಗಿ ಅಧಿಕಾರಿಗಳ ಮೇಲೆ ಭ್ರಷ್ಟಾಚಾರದ ಆರೋಪ ಮಾಡುತ್ತಾರೆ. ಇದನ್ನು ಲೋಕಾಯುಕ್ತ ಸಹಿಸುವುದಿಲ್ಲ. ಅಧಿಕಾರಿಗಳನ್ನು ಬೆದರಿಸಲು ಮಾಹಿತಿ ಹಕ್ಕು ಹಾಗೂ ಲೋಕಾಯುಕ್ತ ಕಾಯ್ದೆಯ ದುರುಪಯೋಗ ಮಾಡಿಕೊಂಡ ಪ್ರಕರಣಗಳು ನಮ್ಮ ಮುಂದಿವೆ. ವೈಕ್ತಿಯೋರ್ವ 5 ಅಧಿಕಾರಿಗಳ ಮೇಲೆ ಸುಳ್ಳು ಆರೋಪ ಮಾಡಿರುವುದು ವಿಚಾರಣೆಯಲ್ಲಿ ಕಂಡುಬಂದಿತ್ತು. ಪ್ರಕರಣದ ತೀರ್ಪಿನಲ್ಲಿ ವ್ಯಕ್ತಿಗೆ ಕಠಿಣ ಎಚ್ಚರಿಕೆ ನೀಡಿ, ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳದಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ನ್ಯಾ.ಬಿ.ವೀರಪ್ಪ ತಿಳಿಸಿದರು.
ಭ್ರಷ್ಟರ ಸಂಹಾರಕ್ಕಾಗಿ ಲೋಕಾಯಕ್ತ
ಕರ್ನಾಟಕ ಲೋಕಾಯುಕ್ತ ಸ್ವಾಯತ್ತ ಸಂಸ್ಥೆಯಾಗಿದೆ. ರಾಜಕಾರಣಿಗಳು ಹಾಗೂ ಅಧಿಕಾರಿಗಳ ಮುಲಾಜಿಗೆ ಬಿದ್ದು ಕೆಲಸ ಮಾಡುತ್ತಿಲ್ಲ. ಭ್ರಷ್ಟರ ಸಂಹಾರಕ್ಕಾಗಿ ಲೋಕಾಯಕ್ತ ಸಂಸ್ಥೆ ಅವಿರತ ಪ್ರಯತ್ನ ಮಾಡುತ್ತಿದೆ. ಉಪಲೋಕಾಯುಕ್ತನಾಗಿ ನಿಯುಕ್ತಿಯಾದ ಮೇಲೆ ನನ್ನ ಸಂಪೂರ್ಣ ಆಸ್ತಿ ವಿವರವನ್ನು ಸಾರ್ವಜನಿಕವಾಗಿ ಘೋಷಿಸಿಕೊಂಡಿದ್ದೇನೆ. ಎಲ್ಲರೂ ತಮ್ಮ ಆಸ್ತಿ ವಿವರವನ್ನು ಪ್ರಕಟಿಸಬೇಕು. ಅಧಿಕಾರಿಗಳನ್ನು ಬೆಂಗಳೂರಿನ ಲೋಕಾಯಕ್ತ ಕಚೇರಿ ಕರೆಯಿಸಿ ವಿಚಾರಣೆ ನಡೆಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಈ ಹಿನ್ನಲೆಯಲ್ಲಿ ಇಬ್ಬರು ಉಪಲೋಕಾಯುಕ್ತರು ಸೇರಿ ಎಲ್ಲಾ ಜಿಲ್ಲೆಗಳನ್ನು ಹಂಚಿಕೊಂಡು, ಪ್ರತಿ ಜಿಲ್ಲೆಗೆ 3 ದಿನಗಳ ಪ್ರವಾಸ ಕೈಗೊಂಡು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆ ನಡೆಸಿ, ವಿಲೆ ಮಾಡಲು ಕ್ರಮ ವಹಿಸಲಾಗಿದೆ ಎಂದು ನ್ಯಾ.ಬಿ.ವೀರಪ್ಪ ಹೇಳಿದರು.
ಆತಿಥ್ಯ ಸ್ವೀಕರಿಸಲು ಜಿಲ್ಲೆಗೆ ಆಗಮಿಸಿಲ್ಲ
ಬೆಂಗಳೂರಿನಿಂದ ಲೋಕಾಯುಕ್ತ ಅಧಿಕಾರಿಗಳ ತಂಡವನ್ನು ಕರೆದುಕೊಂಡು ಸ್ವಂತ ವಾಹನದಲ್ಲಿ ದಾವಣಗೆರೆ ಜಿಲ್ಲೆಗೆ ಆಗಮಿಸಿದ್ದೇನೆ. ಅಧಿಕಾರಿಗಳು ನೀಡುವ ಆತಿಥ್ಯ ಸ್ವೀಕರಿಸಲು ಜಿಲ್ಲೆಗೆ ಆಗಮಿಸಿಲ್ಲ. ಶಿಷ್ಟಾಚಾರದ ಅನುಸಾರ ಅಧಿಕಾರಿಗಳು ಭದ್ರತೆ ನೀಡಿದ್ದಾರೆ. ಲೋಕಾಯುಕ್ತದಲ್ಲಿ ಕೆಲಸ ಮಾಡುವ ನಮಗೆ ಜೀವ ಬೆದರಿಕೆಯೂ ಇದೆ. ನಗರದ ವಿವಿಧ ಕಚೇರಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿ, ಜಿ.ಪಂ.ಸಿಇಓ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಭದ್ರತಾ ಸಿಬ್ಬಂದಿ, ಹಿರಿಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತಮ್ಮ ವಾಹನಗಳಲ್ಲಿ ಸಂಚರಿಸಿದ್ದಾರೆ.
64 ವರ್ಷದ ನಾನು ನಡೆದುಕೊಂಡು ಕಚೇರಿಗಳಿಗೆ ಭೇಟಿ ನೀಡುವುದು ಸಾಧ್ಯವಿಲ್ಲ. ಹಾಗಾಗಿ ವಾಹನ ಬಳಿಸಿ ಸಂಚರಿಸಿದ್ದೇನೆ. ಇದು ದುಂದುವೆಚ್ಚ ಆಡಂಬರದ ವಿಷಯವಲ್ಲ. ಯಾವುದೇ ಕಚೇರಿ ಭೇಟಿಯ ವೇಳೆ ಅಧಿಕಾರಿಗಳು ನೀಡುವ ನೀರನ್ನು ಸಹ ಕುಡಿಯದೇ, ಪರಿಶೀಲನೆ ನಡೆಸಿದ್ದೇನೆ. ಅಕ್ರಮಗಳನ್ನು ಕಂಡು ಬಂದಲ್ಲಿ ಮುಲಾಜು ಇಲ್ಲದೇ ಸ್ವಂ ಪ್ರೇರಿತ ಪ್ರಕರಣ ದಾಖಲಿಸಿದ್ದೇನೆ. ಸಾರ್ವಜನಿಕರಿಗೆ ಲೋಕಾಯುಕ್ತ ಸಂಸ್ಥೆಯ ಮೇಲಿನ ನಂಬಿಕೆ ಕಡಿಮೆಯಾಗದಂತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ನ್ಯಾ.ಬಿ.ವೀರಪ್ಪ ಹೇಳಿದರು.
ಶೇ.90 ರಷ್ಟು ವಿದ್ಯಾವಂತರಿಗೆ ಕಾನೂನು ಅರಿವಿಲ್ಲ
ದೇಶಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಸಾಕ್ಷರತೆ ಶೇ.18 ರಷ್ಟಿತ್ತು. ಇಂದು ಸಾಕ್ಷರತೆ ಪ್ರಮಾಣ ಶೇ.80 ರಷ್ಟಿದೆ, ಆದರೆ ಸಾಕ್ಷರರಾದ ಶೇ.90 ರಷ್ಟು ವಿದ್ಯಾವಂತರಿಗೆ ಕಾನೂನುಗಳ ಅರಿವಿಲ್ಲ ಎಂದು ನ್ಯಾ.ಬಿ.ವೀರಪ್ಪ ಹೇಳಿದರು. ಹೆಚ್ಚಿನ ಪ್ರಕರಣ, ತಂಟೆ ತಕರಾರುಗಳು ವಿದ್ಯಾವಂತರಿಂದ ಆಗುತ್ತಿವೆ. ಡಾ.ಡಿ.ವಿ.ಗುಂಡಪ್ಪನವರು ಮಂಕುತಿಮ್ಮನ ಕಗ್ಗದಲ್ಲಿ ಹೇಳಿರುವಂತೆ ಮುಂದೊಂದು ದಿನ ಈ ದೇಶ ವಿದ್ಯಾವಂತ ಮೋಸಗಾರರಿಂದಲೇ ಅಧೋಗತಿ ತಲುಪುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.
ಕೋವಿಡ್ ನಂತರ ಭ್ರಷ್ಟಾಚಾರ ಹೆಚ್ಚಳ
ಕೋವಿಡ್-19 ಬಂದ ಸಂದರ್ಭದಲ್ಲಿ ಇಡಿ ವಿಶ್ವವೇ ತಲ್ಲಿಣಿಸಿ ಹೋಗಿತ್ತು. ಜನರಿಗೆ ಜೀವ ಉಳಿಸಿಕೊಳ್ಳುವುದು ಮುಖ್ಯವಾಗಿತ್ತು. ದೇಶದಲ್ಲಿ ವಕೀಲರು,ಪೊಲೀಸರು, ವೈದ್ಯರು, ಸೇರಿದಂತೆ ಸಾವಿರಾರು ಜನರು ಕೋವಿಡ್ನಿಂದ ಮೃತ ಪಟ್ಟರು. ಕೋವಿಡ್ ವೈರಸ್ ಜನರಿಗೆ ನಿಜ ಬದುಕಿನ ಅನಾವರಣೆ ಮಾಡಿ, ಬುದ್ದಿ ಕಲಿಸಿದೆ, ಉತ್ತಮ ಮಾರ್ಗದಲ್ಲಿ ಜೀವಿಸಲು ಕಾರಣವಾಗಿದೆ ಎಂದು ಭಾವಿಸಿದ್ದಾಗಿ ನ್ಯಾ.ವಿ.ವೀರಪ್ಪ ಹೇಳಿದರು. ಆದರೆ, 2021ರ ನಂತರ ನಾಯಿ ಬಾಲ ಡೊಂಕು ಎಂಬಂತೆ ರಾಜ್ಯದಲ್ಲಿ ಭ್ರಷ್ಟಾಚಾರದಲ್ಲಿ ಹೆಚ್ಚಳವಾಗಿದೆ ಎಂದು ಅವರು ಹೇಳಿದರು.
ಸ್ವಾರ್ಥಿ ಮನುಷ್ಯನಿಂದ ಪ್ರಕೃತಿ ನಾಶ
ಸ್ವಾರ್ಥಿಯಾದ ಮನುಷ್ಯನಿಂದ ನಿಸ್ವಾರ್ಥಿಯಾದ ಗಿಡಮರಗಳು, ಪ್ರಾಣಿ ಪಕ್ಷಿಗಳು ಸೇರಿದಂತೆ ಪ್ರಕೃತಿಯ ನಾಶವಾಗುತ್ತಿದೆ. ಇದರಿಂದ ಪ್ರಾಕೃತಿಕ ಅವಘಡಗಳು ಸಂಭವಿಸುತ್ತಿವೆ. ಪ್ರಾಣಿ ಹಾಗೂ ಮನುಷ್ಯ ನಡುವೆ ಸಂಘರ್ಷ ಹೆಚ್ಚಾಗಿದೆ. ಜಿಲ್ಲೆಯ ಗಣಿ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಪರವಾನಿಗೆ ಪಡೆದ ಪ್ರದೇಶಕ್ಕಿಂತ ಹೆಚ್ಚಿನ ಜಾಗದಲ್ಲಿ ಗಣಿಗಾರಿಕೆ ನಡೆಸಲಾಗಿದೆ. ಇದಕ್ಕೆ ಇಲ್ಲಿನ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಈ ಬಗ್ಗೆ ಸ್ವಯಂ ಪ್ರೇರಿತ ಲೋಕಾಯುಕ್ತ ದೂರು ದಾಖಲಿಸಿಕೊಳ್ಳುವುದಾಗಿ ನ್ಯಾ.ಬಿ.ವೀರಪ್ಪ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಿ : ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ
-
ದಿನದ ಸುದ್ದಿ6 days ago
ಇ-ಸ್ವತ್ತು ಸಮಸ್ಯೆ ಪರಿಹಾರಕ್ಕಾಗಿ ಕಾರ್ಯನಿರ್ವಹಣಾ ಸಮಿತಿ ರಚನೆ
-
ದಿನದ ಸುದ್ದಿ7 days ago
‘ವಿದ್ಯಾಸಿರಿ’ ಯೋಜನೆಯಡಿ ವಿದ್ಯಾರ್ಥಿ ವೇತನ ಪರಿಷ್ಕರಣೆಗೆ ಒತ್ತು : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ6 days ago
ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆಯಾಗಿ 50 ವರ್ಷ; ನೆಹರು ತಾರಾಲಯದಲ್ಲಿ ವಿಶೇಷ ಕಾರ್ಯಕ್ರಮ
-
ಅಂಕಣ5 days ago
ಕವಿತೆ | ಅವಳೀಗ ಕಾಯುವುದಿಲ್ಲ
-
ದಿನದ ಸುದ್ದಿ6 days ago
ಜೆಇಇ ಮೇನ್ಸ್ ಫಲಿತಾಂಶ ಪ್ರಕಟ : 24 ವಿದ್ಯಾರ್ಥಿಗಳಿಗೆ ನೂರಕ್ಕೆ ನೂರು ಅಂಕ
-
ದಿನದ ಸುದ್ದಿ6 days ago
ಬಳ್ಳಾರಿ ಪೊಲೀಸ್ ಅಧಿಕಾರಿಗಳ ಪಡಿತರ ಅಕ್ಕಿ ಕಳ್ಳಾಟ : ಠಾಣೆ ಮುಂದೆ ಇದ್ದ ಲಾರಿ ಮಾಯ ; ಈ ಸ್ಟೋರಿ ಓದಿ..!
-
ದಿನದ ಸುದ್ದಿ4 days ago
ಆಸ್ತಿ ಕಲಹವೇ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆಗೆ ಕಾರಣವಾಯ್ತಾ..?